Homeಮುಖಪುಟಬಿಹಾರ ಸಂಪುಟ ವಿಸ್ತರಣೆಗೆ ಆಕ್ಷೇಪ: ಪಕ್ಷ ತೊರೆಯುವುದಾಗಿ ಎಚ್ಚರಿಸಿದ ಜೆಡಿಯು ಶಾಸಕಿ

ಬಿಹಾರ ಸಂಪುಟ ವಿಸ್ತರಣೆಗೆ ಆಕ್ಷೇಪ: ಪಕ್ಷ ತೊರೆಯುವುದಾಗಿ ಎಚ್ಚರಿಸಿದ ಜೆಡಿಯು ಶಾಸಕಿ

- Advertisement -
- Advertisement -

ಬಿಹಾರದಲ್ಲಿ ಹೊಸದಾಗಿ ರಚನೆಯಾಗಿರುವ ಮಹಾಘಟಬಂಧನ್ ಸರ್ಕಾರದ ಸಂಪುಟ ವಿಸ್ತರಣೆಗೆ ಆರಂಭದಲ್ಲಿಯೇ ಆಕ್ಷೇಪಣೆ ವ್ಯಕ್ತವಾಗಿದೆ. ಜೆಡಿಯು ಪಕ್ಷದ ಶಾಸಕಿ ಲೇಶಿ ಸಿಂಗ್‌ರವರಿಗೆ ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ನೀಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಪಕ್ಷದ ಮತ್ತೊಬ್ಬ ಶಾಸಕಿ ಭೀಮಾ ಭಾರ್ತಿ ರಾಜೀನಾಮೆ ನೀಡುವುದಾಗಿ ಎಚ್ಚರಿಸಿದ್ದಾರೆ.

ತನ್ನನ್ನು ಸಂಪುಟಕ್ಕೆ ಸೇರಿಸಿಕೊಳ್ಳದಿರುವುದರಿಂದ ಅಸಮಾಧಾನಗೊಂಡಿರುವ ಅವರು ಅದೇ ಸಮಯಲ್ಲಿ ಲೇಶಿ ಸಿಂಗ್‌ರವರನ್ನು ಮೂರನೇ ಬಾರಿ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾವು ಹಿಂದುಳಿದ ಸಮುದಾಯಗಳಿಗೆ ಸೇರಿದ್ದರಿಂದ ನಮಗೆ ಸಚಿವ ಸ್ಥಾನ ನೀಡುತ್ತಿಲ್ಲವೇ? ಆಗಾಗ್ಗೆ ಪಕ್ಷದ ವಿರುದ್ಧ ಹೇಳಿಕೆ ನೀಡುವು ಲೇಶಿ ಸಿಂಗ್‌ರವರನ್ನು ಏಕೆ ಸಂಪುಟಕ್ಕೆ ಸೇರಿಸಿಕೊಂಡಿದ್ದೀರಿ? ಅವರನ್ನು ತಕ್ಷಣವೇ ಕೈಬಿಡದಿದ್ದರೆ ನಾನು ಶಾಸಕಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಆರ್‌ಜೆಡಿ ಪಕ್ಷದ ಶಾಸಕ ಕಾರ್ತಿಕೇಯ ಸಿಂಗ್‌ರವರನ್ನು ಕಾನೂನು ಸಚಿವರನ್ನಾಗಿ ಮಾಡಿರುವುದಕ್ಕೂ ಕೂಡ ಆಕ್ಷೇಪ ವ್ಯಕ್ತವಾಗಿದ್ದು, ಅಪಹರಣ ಪ್ರಕರಣ ಎದುರಿಸುತ್ತಿರುವವರಿಗೆ ಆ ಸಚಿವ ಸ್ಥಾನ ಏಕೆ ನೀಡಲಾಗಿದೆ ಎಂದು ಪ್ರಶ್ನಿಸಲಾಗಿದೆ.

ಬಿಹಾರದಲ್ಲಿ ಡಾನ್ ಎಂದು ಕರೆಸಿಕೊಳ್ಳುವ ಅನಂತ್‌ ಸಿಂಗ್‌ರವರ ಬಲಗೈ ಬಂಟನಾಗಿ ಕಾರ್ತಿಕೇಯ ಸಿಂಗ್‌ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಕಿಡ್ನಾಪ್ ಪ್ರಕರಣದಲ್ಲಿ ಅವರ ವಿರುದ್ಧ ವಾರೆಂಟ್ ಇದ್ದಾಗ ತಲೆಮರೆಸಿಕೊಂಡಿದ್ದರು. ಅಂತವರಿಗೆ ಕಾನೂನು ಸಚಿವ ಸ್ಥಾನ ನೀಡಿರುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಆರ್‌.ಕೆ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಹಾರದ ಆರ್‌ಜೆಡಿ ಪಕ್ಷಕ್ಕೆ 16 ಸಚಿವ ಸ್ಥಾನ, ಜೆಡಿಯುಗೆ 11, ಕಾಂಗ್ರೆಸ್‌ಗೆ 02 ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ ಹಾಗೂ ಸ್ವತಂತ್ರ ಶಾಸಕನಿಗೆ ತಲಾ ಒಂದೊಂದು ಸಚಿವ ಸ್ಥಾನ ನೀಡಲಾಗಿದೆ. ಒಟ್ಟು 31 ಜನ ಸಚಿವರಾಗಿ ಪ್ರಮಾಣ ವಚನ ಸ್ಪೀಕರಿಸಿದ್ದು ಇನ್ನೂ 5 ಸ್ಥಾನಗಳನ್ನು ಖಾಲಿ ಇಡಲಾಗಿದೆ.

ಸಿಎಂ ನಿತೀಶ್ ಕುಮಾರ್ ಗೃಹ ಖಾತೆಯನ್ನು ತಮ್ಮ ಬಳಿ ಇಟ್ಟುಕೊಂಡರೆ, ಡಿಸಿಎಂ ತೇಜಸ್ವಿ ಯಾದವ್ ಆರೋಗ್ಯ ಖಾತೆ ವಹಿಸಿಕೊಂಡಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಸಚಿವನ ವಜಾಕ್ಕೆ ಆಗ್ರಹಿಸಿ 75 ಗಂಟೆಗಳ ಧರಣಿ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...