Homeಮುಖಪುಟಅವರು ಬ್ರಾಹ್ಮಣರು..: ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ

ಅವರು ಬ್ರಾಹ್ಮಣರು..: ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ

ಎಲ್ಲದಕ್ಕಿಂತ ಹೆಚ್ಚಾಗಿ ಅವರು ಬ್ರಾಹ್ಮಣರು. ಒಳ್ಳೆಯ ಸಂಸ್ಕಾರವುಳ್ಳವರು. ಹಾಗಾಗಿ ಅವರನ್ನು ಬಿಡುಗಡೆ ಮಾಡಬಹುದು ಎಂದು ಬಿಜೆಪಿ ಶಾಸಕ ಹೇಳಿದ್ದಾರೆ

- Advertisement -
- Advertisement -

“ಅವರು (11 ಜನ ಅತ್ಯಾಚಾರಿಗಳು) ಅಪರಾಧವೆಸಗಿದ್ದಾರೋ ಇಲ್ಲೋ ನಮಗೆ ಗೊತ್ತಿಲ್ಲ. ಆದರೆ ಅವರು ಜೈಲಿನಲ್ಲಿ ಉತ್ತಮವಾಗಿ ನಡೆದುಕೊಂಡರು. ಎಲ್ಲದಕ್ಕಿಂತ ಹೆಚ್ಚಾಗಿ ಅವರು ಬ್ರಾಹ್ಮಣರು. ಒಳ್ಳೆಯ ಸಂಸ್ಕಾರವುಳ್ಳವರು. ಹಾಗಾಗಿ ಅವರನ್ನು ಬಿಡುಗಡೆ ಮಾಡಬಹುದು” ಹೀಗೆ ಹೇಳುವ ಮೂಲಕ ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡಿದ್ದಾರೆ ಗುಜರಾತ್‌ನ ಬಿಜೆಪಿ ಶಾಸಕ ಸಿಕೆ ರೌಲ್ಜಿ.

ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗಳ ಬಿಡುಗಡೆ ಕುರಿತು ರಚಿಸಲಾದ ಸಮಿತಿಯಲ್ಲಿದ್ದ ಗೋದ್ರಾ ಕ್ಷೇತ್ರದ ಶಾಸಕ ಅತ್ಯಾಚಾರಿಗಳು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಅಪರಾಧಿಗಳ ಪರ ನಿಂತು ಮಾತನಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಮೊಜೊ ಸ್ಟೋರಿ ಚಾನೆಲ್ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, “ಈ 11 ಜನರ ಕುರಿತು ಅಭಿಪ್ರಾಯಕ್ಕೆ ಬರುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಅದರ ಭಾಗವಾಗಿ ಗುಜರಾತ್ ಸರ್ಕಾರ ರಚಿಸಿದ ಸಮಿತಿಯಲ್ಲಿ ನಾನಿದ್ದೆ. 2002ರಲ್ಲಿ ಏನು ನಡೆಯಿತು ಅದು ನನಗೆ ಗೊತ್ತಿಲ್ಲ. ಆದರೆ ಅವರಿಗೆ ಶಿಕ್ಷೆಯಾದ ನಂತರ ಅವರ ವರ್ತನೆ ಹೇಗಿದೆ? ಜೈಲಿನಲ್ಲಿ ಹೇಗೆ ನಡೆದುಕೊಳ್ಳುತ್ತಿದ್ದಾರೆ ಎಂಬುದರ ಕುರಿತು ಜೈಲರ್‌ಗಳ ಬಳಿ ವಿಚಾರಿಸಿದೆವು. ಅವರು ಜೈಲಿನಲ್ಲಿ ಯಾವುದೇ ಗಲಾಟೆ ಮಾಡಿಲ್ಲ ಎಂದು ತಿಳಿದುಬಂತು” ಎಂದು ಹೇಳಿದ್ದಾರೆ.

ಅತ್ಯಾಚಾರ ಮತ್ತು ಭಯೋತ್ಪಾದನಾ ಕೃತ್ಯಗಳಲ್ಲಿ ಪಾಲ್ಗೊಂಡವರಿಗೆ ಕ್ಷಮಾದಾನ ನೀಡಬಾರದು ಎಂದು ಗೃಹ ಸಚಿವಾಲಯ ಹೇಳಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕ “ಅದು ನಮಗೆ ಗೊತ್ತಿಲ್ಲ. ಅವರ ವರ್ತನೆ ಜೈಲಿಗೆ ಹೋಗುವ ಮುಂಚೆ ಹೇಗಿತ್ತು, ಜೈಲಿನಲ್ಲಿ ಹೇಗಿದೆ ಎಂಬುದನ್ನು ಗಮನಿಸಬೇಕು. ಅವರ ಕುಟುಂಬ ಸದಸ್ಯರು ಸಹ ಉತ್ತಮವಾಗಿ ನಡೆದುಕೊಳ್ಳುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಈ ಪ್ರಕರಣದಲ್ಲಿ ಕೆಲವು ಅಮಾಯಕರು ಸಹ ಸೇರಿಕೊಂಡಿದ್ದಾರೆ. ಕೆಲವರು ಮೊದಲಿಂದಲೂ ಉತ್ತಮವಾಗಿ ನಡೆದುಕೊಳ್ಳುತ್ತಿದ್ದರು. ಇದು ಆಕಸ್ಮಿಕವಾಗಿ ಘಟಿಸಿದಾಗ ಎಲ್ಲರೂ ಸಿಕ್ಕಿಕೊಂಡಿದ್ದಾರೆ. ಅವರನ್ನು ಇನ್ನೂ ಹೆಚ್ಚು ದಿನ ಜೈಲಿನಲ್ಲಿ ಇಡುವ ಅಗತ್ಯವಿಲ್ಲ. ಎಲ್ಲದಕ್ಕಿಂತ ಹೆಚ್ಚಾಗಿ ಅವರು ಬ್ರಾಹ್ಮಣರು. ಒಳ್ಳೆಯ ಸಂಸ್ಕಾರವುಳ್ಳವರು. ಅವರನ್ನು ಮೂಲೆಗುಂಪು ಮಾಡುವುದು ಮತ್ತು ಶಿಕ್ಷಿಸುವುದು ಕೆಲವರ ದುರುದ್ದೇಶವೂ ಆಗಿರಬಹುದು,” ಎಂದಿದ್ದಾರೆ.

ಅವರು ಬಿಡುಗಡೆಗೊಂಡಾಗ ಸಿಹಿ ಹಂಚಿ ಸಂಭ್ರಮಿಸಿದ್ದು ಸರಿಯೇ ಎಂಬ ಪ್ರಶ್ನೆಗೆ, “ಪ್ರತಿಯೊಬ್ಬರೂ ಒಂದೊಂದು ರೀತಿಯಲ್ಲಿ ನೋಡುತ್ತಾರೆ. ನ್ಯಾಯಾಲವೇ  ಅವರನ್ನು ಬಿಡುಗಡೆ ಮಾಡಿ ಎಂದು ಹೇಳಿರುವಾಗ ಸಿಹಿ ಹಂಚುವುದರಲ್ಲಿ ತಪ್ಪೇನಿದೆ? ಆದರೆ ಹೂಹಾರ ಹಾಕಿದವರು ನಮ್ಮ ಸಮಿತಿಯವರಲ್ಲ. ಈ ಕುರಿತು ನಾನು ಹೆಚ್ಚು ಹೇಳುವುದಿಲ್ಲ.” ಎಂದು ಉತ್ತರಿಸಿದ್ದಾರೆ.

ಬಿಜೆಪಿ ಸರ್ಕಾರವು ಈ ವಿಷಯದ ಕುರಿತು ರಚಿಸಿದ್ದ ಸಮಿತಿಯಲ್ಲಿ ಬಿಜೆಪಿ ಪಕ್ಷದ ಇಬ್ಬರು ಶಾಸಕರಿದ್ದರು ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಪ್ರಶ್ನಿಸಿದ್ದರು. ಬಿಜೆಪಿಯಿಂದ ಸಿ ಕೆ ರಾಲ್ಜಿ ಮತ್ತು ಸುಮನ್ ಚೌಹಾಣ್ ಇದ್ದರೆ ಗೋಧ್ರಾ ರೈಲು ದಹನ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಪ್ರಮುಖ ಸಾಕ್ಷಿಗಳಲ್ಲಿ ಒಬ್ಬರಾಗಿರುವ ಮುರಳಿ ಮುಲ್ಚಂದಾನಿ ಅವರು ಸಹ ಸಮಿತಿಯ ಭಾಗವಾಗಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದುದ್ದನ್ನು ಖಂಡಿಸಿದ ಮಾಜಿ ಸಿಎಂ ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅತ್ಯಾಚಾರ ಮಾಡುವವರು ಒಳ್ಳೆಯ ಸಂಸ್ಕಾರ ವಂತರು ಹೇಗಾಗುತ್ತಾರೆ ಎಂ ಎಲ್ ಎ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...