Homeಮುಖಪುಟಅವರು ಬ್ರಾಹ್ಮಣರು..: ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ

ಅವರು ಬ್ರಾಹ್ಮಣರು..: ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ

ಎಲ್ಲದಕ್ಕಿಂತ ಹೆಚ್ಚಾಗಿ ಅವರು ಬ್ರಾಹ್ಮಣರು. ಒಳ್ಳೆಯ ಸಂಸ್ಕಾರವುಳ್ಳವರು. ಹಾಗಾಗಿ ಅವರನ್ನು ಬಿಡುಗಡೆ ಮಾಡಬಹುದು ಎಂದು ಬಿಜೆಪಿ ಶಾಸಕ ಹೇಳಿದ್ದಾರೆ

- Advertisement -
- Advertisement -

“ಅವರು (11 ಜನ ಅತ್ಯಾಚಾರಿಗಳು) ಅಪರಾಧವೆಸಗಿದ್ದಾರೋ ಇಲ್ಲೋ ನಮಗೆ ಗೊತ್ತಿಲ್ಲ. ಆದರೆ ಅವರು ಜೈಲಿನಲ್ಲಿ ಉತ್ತಮವಾಗಿ ನಡೆದುಕೊಂಡರು. ಎಲ್ಲದಕ್ಕಿಂತ ಹೆಚ್ಚಾಗಿ ಅವರು ಬ್ರಾಹ್ಮಣರು. ಒಳ್ಳೆಯ ಸಂಸ್ಕಾರವುಳ್ಳವರು. ಹಾಗಾಗಿ ಅವರನ್ನು ಬಿಡುಗಡೆ ಮಾಡಬಹುದು” ಹೀಗೆ ಹೇಳುವ ಮೂಲಕ ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡಿದ್ದಾರೆ ಗುಜರಾತ್‌ನ ಬಿಜೆಪಿ ಶಾಸಕ ಸಿಕೆ ರೌಲ್ಜಿ.

ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗಳ ಬಿಡುಗಡೆ ಕುರಿತು ರಚಿಸಲಾದ ಸಮಿತಿಯಲ್ಲಿದ್ದ ಗೋದ್ರಾ ಕ್ಷೇತ್ರದ ಶಾಸಕ ಅತ್ಯಾಚಾರಿಗಳು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಅಪರಾಧಿಗಳ ಪರ ನಿಂತು ಮಾತನಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಮೊಜೊ ಸ್ಟೋರಿ ಚಾನೆಲ್ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, “ಈ 11 ಜನರ ಕುರಿತು ಅಭಿಪ್ರಾಯಕ್ಕೆ ಬರುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಅದರ ಭಾಗವಾಗಿ ಗುಜರಾತ್ ಸರ್ಕಾರ ರಚಿಸಿದ ಸಮಿತಿಯಲ್ಲಿ ನಾನಿದ್ದೆ. 2002ರಲ್ಲಿ ಏನು ನಡೆಯಿತು ಅದು ನನಗೆ ಗೊತ್ತಿಲ್ಲ. ಆದರೆ ಅವರಿಗೆ ಶಿಕ್ಷೆಯಾದ ನಂತರ ಅವರ ವರ್ತನೆ ಹೇಗಿದೆ? ಜೈಲಿನಲ್ಲಿ ಹೇಗೆ ನಡೆದುಕೊಳ್ಳುತ್ತಿದ್ದಾರೆ ಎಂಬುದರ ಕುರಿತು ಜೈಲರ್‌ಗಳ ಬಳಿ ವಿಚಾರಿಸಿದೆವು. ಅವರು ಜೈಲಿನಲ್ಲಿ ಯಾವುದೇ ಗಲಾಟೆ ಮಾಡಿಲ್ಲ ಎಂದು ತಿಳಿದುಬಂತು” ಎಂದು ಹೇಳಿದ್ದಾರೆ.

ಅತ್ಯಾಚಾರ ಮತ್ತು ಭಯೋತ್ಪಾದನಾ ಕೃತ್ಯಗಳಲ್ಲಿ ಪಾಲ್ಗೊಂಡವರಿಗೆ ಕ್ಷಮಾದಾನ ನೀಡಬಾರದು ಎಂದು ಗೃಹ ಸಚಿವಾಲಯ ಹೇಳಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕ “ಅದು ನಮಗೆ ಗೊತ್ತಿಲ್ಲ. ಅವರ ವರ್ತನೆ ಜೈಲಿಗೆ ಹೋಗುವ ಮುಂಚೆ ಹೇಗಿತ್ತು, ಜೈಲಿನಲ್ಲಿ ಹೇಗಿದೆ ಎಂಬುದನ್ನು ಗಮನಿಸಬೇಕು. ಅವರ ಕುಟುಂಬ ಸದಸ್ಯರು ಸಹ ಉತ್ತಮವಾಗಿ ನಡೆದುಕೊಳ್ಳುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಈ ಪ್ರಕರಣದಲ್ಲಿ ಕೆಲವು ಅಮಾಯಕರು ಸಹ ಸೇರಿಕೊಂಡಿದ್ದಾರೆ. ಕೆಲವರು ಮೊದಲಿಂದಲೂ ಉತ್ತಮವಾಗಿ ನಡೆದುಕೊಳ್ಳುತ್ತಿದ್ದರು. ಇದು ಆಕಸ್ಮಿಕವಾಗಿ ಘಟಿಸಿದಾಗ ಎಲ್ಲರೂ ಸಿಕ್ಕಿಕೊಂಡಿದ್ದಾರೆ. ಅವರನ್ನು ಇನ್ನೂ ಹೆಚ್ಚು ದಿನ ಜೈಲಿನಲ್ಲಿ ಇಡುವ ಅಗತ್ಯವಿಲ್ಲ. ಎಲ್ಲದಕ್ಕಿಂತ ಹೆಚ್ಚಾಗಿ ಅವರು ಬ್ರಾಹ್ಮಣರು. ಒಳ್ಳೆಯ ಸಂಸ್ಕಾರವುಳ್ಳವರು. ಅವರನ್ನು ಮೂಲೆಗುಂಪು ಮಾಡುವುದು ಮತ್ತು ಶಿಕ್ಷಿಸುವುದು ಕೆಲವರ ದುರುದ್ದೇಶವೂ ಆಗಿರಬಹುದು,” ಎಂದಿದ್ದಾರೆ.

ಅವರು ಬಿಡುಗಡೆಗೊಂಡಾಗ ಸಿಹಿ ಹಂಚಿ ಸಂಭ್ರಮಿಸಿದ್ದು ಸರಿಯೇ ಎಂಬ ಪ್ರಶ್ನೆಗೆ, “ಪ್ರತಿಯೊಬ್ಬರೂ ಒಂದೊಂದು ರೀತಿಯಲ್ಲಿ ನೋಡುತ್ತಾರೆ. ನ್ಯಾಯಾಲವೇ  ಅವರನ್ನು ಬಿಡುಗಡೆ ಮಾಡಿ ಎಂದು ಹೇಳಿರುವಾಗ ಸಿಹಿ ಹಂಚುವುದರಲ್ಲಿ ತಪ್ಪೇನಿದೆ? ಆದರೆ ಹೂಹಾರ ಹಾಕಿದವರು ನಮ್ಮ ಸಮಿತಿಯವರಲ್ಲ. ಈ ಕುರಿತು ನಾನು ಹೆಚ್ಚು ಹೇಳುವುದಿಲ್ಲ.” ಎಂದು ಉತ್ತರಿಸಿದ್ದಾರೆ.

ಬಿಜೆಪಿ ಸರ್ಕಾರವು ಈ ವಿಷಯದ ಕುರಿತು ರಚಿಸಿದ್ದ ಸಮಿತಿಯಲ್ಲಿ ಬಿಜೆಪಿ ಪಕ್ಷದ ಇಬ್ಬರು ಶಾಸಕರಿದ್ದರು ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಪ್ರಶ್ನಿಸಿದ್ದರು. ಬಿಜೆಪಿಯಿಂದ ಸಿ ಕೆ ರಾಲ್ಜಿ ಮತ್ತು ಸುಮನ್ ಚೌಹಾಣ್ ಇದ್ದರೆ ಗೋಧ್ರಾ ರೈಲು ದಹನ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಪ್ರಮುಖ ಸಾಕ್ಷಿಗಳಲ್ಲಿ ಒಬ್ಬರಾಗಿರುವ ಮುರಳಿ ಮುಲ್ಚಂದಾನಿ ಅವರು ಸಹ ಸಮಿತಿಯ ಭಾಗವಾಗಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದುದ್ದನ್ನು ಖಂಡಿಸಿದ ಮಾಜಿ ಸಿಎಂ ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅತ್ಯಾಚಾರ ಮಾಡುವವರು ಒಳ್ಳೆಯ ಸಂಸ್ಕಾರ ವಂತರು ಹೇಗಾಗುತ್ತಾರೆ ಎಂ ಎಲ್ ಎ

LEAVE A REPLY

Please enter your comment!
Please enter your name here

- Advertisment -

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...