Homeಮುಖಪುಟ‘ತಿರುಚಿತ್ರಂಬಲಂ’: ಧನುಷ್‌- ನಿತ್ಯಾ ಮೆನನ್‌ ನಟನೆಯ ನವಿರು ಪ್ರೇಮಕಥೆ

‘ತಿರುಚಿತ್ರಂಬಲಂ’: ಧನುಷ್‌- ನಿತ್ಯಾ ಮೆನನ್‌ ನಟನೆಯ ನವಿರು ಪ್ರೇಮಕಥೆ

- Advertisement -
- Advertisement -

ಅದೊಂದು ಸುಂದರ ಕುಟುಂಬ. ಆಕಸ್ಮಿಕವಾಗಿ ಘಟಿಸುವ ಅಪಘಾತ. ತಂದೆ- ಮಗನ ನಡುವೆ ಬಗೆಹರಿಯದ ಮನಸ್ತಾಪ. ಅಜ್ಜ ಮತ್ತು ಮೊಮ್ಮಗನ ಆತ್ಮೀಯತೆ. ಚಿಕ್ಕನಿಂದಲೂ ಕಥಾನಾಯಕನ ಜೊತೆಗಿರುವ ಗೆಳತಿ, ಆತನ ಏಳು ಬೀಳುಗಳ ಜೊತೆಯಲ್ಲಿ ಸಾಗುತ್ತಾಳೆ. ಕೊನೆಯಲ್ಲೊಂದು ಟ್ವಿಸ್ಟ್‌. ಪ್ರೀತಿ, ಸ್ನೇಹ, ಕೋಪದೊಳಗೆ ಅವಿತಿರುವ ವಾತ್ಸಲ್ಯ- ಇತ್ಯಾದಿಗಳನ್ನು ಹದವಾಗಿ ಬೆರೆಸಿದ ಸಿನಿಮಾ ತಮಿಳಿನ ‘ತಿರುಚಿತ್ರಂಬಲಂ’

ಮಿತ್ರನ್ ಆರ್ ಜವಾಹರ್ ನಿರ್ದೇಶನದ ‘ತಿರುಚಿತ್ರಂಬಲಂ’- ಎಲ್ಲಿಯೂ ಭಾರವೆನಿಸದೆ, ಮೊದಲಿನಿಂದ ಕೊನೆಯವರೆಗೂ ನವಿರು ಹಾಸ್ಯ ಹಾಗೂ ನವಿರು ಸಂಭಾಷಣೆ ಮೂಲಕ, ಖುಷಿ, ಕೋಪ, ದುಃಖ, ಪ್ರೀತಿ, ಸ್ನೇಹ, ಸಂಬಂಧಗಳ ಏರಿಳಿತದೊಂದಿಗೆ ಸಾಗುತ್ತದೆ. ಮನಸ್ಸನ್ನು ಮುದಗೊಳಿಸುತ್ತದೆ.

ಧನುಷ್‌, ನಿತ್ಯಾ ಮೆನನ್‌, ಪ್ರಕಾಶ್ ರಾಜ್‌, ಭಾರತೀರಾಜ ಮೊದಲಾದ ಕಲಾವಿದರು ಹಠಕ್ಕೆ ಬಿದ್ದಂತೆ ನಟಿಸಿರುವ ‘ತಿರುಚಿತ್ರಂಬಲಂ’- ಲವ್‌ಸ್ಟೋರಿ ಆಧಾರಿತ ಸಿನಿಮಾಗಳನ್ನು ಇಷ್ಟಪಡುವ ಪ್ರೇಕ್ಷಕ ವರ್ಗಕ್ಕೆ ಭರಪೂರ ಮನರಂಜನೆ ನೀಡಬಲ್ಲದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಥೆ ಸರಳವಾದರೂ ಚಿತ್ರಕಥೆಯ ನಿರೂಪಣಾ ಶೈಲಿ ಹೊಸ ಅನುಭವವನ್ನು ನೀಡುತ್ತದೆ. ಅನುರುದ್ಧ್ ಅವರ ಸಂಗೀತ- ಹಿತವೆನಿಸುತ್ತದೆ. ಕಥೆಯ ತೂಕವನ್ನು ಹೆಚ್ಚಿಸಿದೆ. ಪ್ರೀತಿಗಾಗಿ ಹಂಬಲಿಸುತ್ತಿರುವ ಪಡಮ್‌ (ತಿರುಚಿತ್ರಂಬಲಂ), ಸೋತು ಗೆಲ್ಲುತ್ತಾನೋ, ಪ್ರೀತಿಯನ್ನು ಧಕ್ಕಿಸಿಕೊಳ್ಳುತ್ತಾನೋ ಎಂಬುದು ಕಥೆ.

ಮಧ್ಯಮ ವರ್ಗದ ಕುಟುಂಬಗಳ ಸುತ್ತ ನಡೆಯುವ ಈ ಸಿನಿಮಾದಲ್ಲಿ ಧನುಷ್‌ (ಪಡಂ) ಒಬ್ಬ ಡೆಲಿವರಿ ಬಾಯ್‌. ಅಪ್ಪ (ಪ್ರಕಾಶ್ ರಾಜ್‌) ಪೊಲೀಸ್‌ ಅಧಿಕಾರಿ. ತಾತ (ಭಾರತೀರಾಜ) ಜನರೇಷನ್‌ ಗ್ಯಾಪ್ ದಾಟಿ ಮೊಮ್ಮಗನೊಂದಿಗೆ ಜಾಲಿಯಾಗಿರುವ ವ್ಯಕ್ತಿ. ಜೊತೆಯಲ್ಲೇ ಕೂತು ಬಿಯರ್‌ ಹೀರುವ ಪ್ರೀತಿ. ಚಿಕ್ಕಂದಿನಿಂದಲೂ ಜೊತೆಯಲ್ಲೇ ಬೆಳೆದಿರುವ ಗೆಳತಿ ಶೋಭನಾ (ನಿತ್ಯಾ ಮೆನನ್‌), ಪಡಂನ ಎಲ್ಲ ಸುಖ, ದುಃಖ, ನೋವು, ನಲಿವು, ಇಷ್ಟ-ಕಷ್ಟಗಳ ಭಾಗ.

ಈ ಸಿನಿಮಾ ಕೇವಲ ಪ್ರೀತಿಯ ಹುಡುಕಾಟದ ಕಥೆಯಾಗಿಯಷ್ಟೇ ಉಳಿಯದೆ ಜನರೇಷನ್‌ಗಳ ನಡುವೆ ಇರುವ ಗೋಡೆಗಳನ್ನು ಕೆಡವುತ್ತ ಹೋಗುತ್ತದೆ. ಚಿತ್ರಕತೆಯ ಜೊತೆಗೆ ಕಥೆಗೆ ಪೂರಕವಾದ ಸಂಭಾಷಣೆ ಇಲ್ಲಿನ ಮತ್ತೊಂದು ಹೈಲೈಟ್‌. ಒಳ್ಳೆಯ ಕಥೆಗೆ ದೊಡ್ಡ ಬಜೆಟ್ ಬೇಕಿಲ್ಲ ಎಂಬುದನ್ನು ತಿರುಚಿತ್ರಂಬಲಂ ಮತ್ತೊಮ್ಮೆ ಸಾಬೀತು ಮಾಡಿದೆ.

ಇದನ್ನೂ ಓದಿರಿ: ಗಾಳಿಪಟ-2: ಯೋಗರಾಜ ಭಟ್ರ ಕಥೆಯಲ್ಲಿ ಲಾಜಿಕ್ಕೂ ಇಲ್ಲ ಮ್ಯಾಜಿಕ್ಕೂ ಇಲ್ಲ!

ವಿವಾದಿತ ಆಧಾತ್ಮಿಕ ಗುರುವೆನಿಸಿದ ಓಶೋ ರಜನೀಶ್‌, “ಪ್ರೀತಿ ಕೊಟ್ಟು ಸಂತೋಷ ಪಡುತ್ತದೆ. ಅಹಂಕಾರ ಕಿತ್ತುಕೊಂಡು ಸಂತೋಷಪಡುತ್ತದೆ (Love is happy when it is able to give something. The ego is happy when it is able to take something)” ಎಂದಿದ್ದರು. ಇಲ್ಲಿಯೂ ಅಷ್ಟೇ- ಕೊಟ್ಟು ಸಂತೋಷಪಡುವ ತಾತ್ವಿಕತೆಯೇ ಮೇಲುಗೈ ಸಾಧಿಸುತ್ತದೆ.

ಪಡಂನ ಮೂರು ಪ್ರೇಮ ಕಥೆಗಳು ಇಲ್ಲಿವೆ. ಸಿದ್ಧಮಾದರಿಗಳನ್ನು ಒಪ್ಪಿಕೊಂಡಿರುವ ವ್ಯವಸ್ಥೆಯಲ್ಲಿ ಮೂರನೇ ಪ್ರೇಮಕಥೆ- ತುಸು ಅವಸರವಾಯಿತೇನೋ ಎಂಬ ಅಳುಕು ಪ್ರೇಕ್ಷಕನನ್ನು ಕಾಡುವ ಹೊತ್ತಿಗೆ ಅದನ್ನು ಭಾವುಕ ಸನ್ನಿವೇಶಗಳ ಮೂಲಕ ಭಾರವೆನಿಸದಂತೆ ಕಟ್ಟಿಕೊಟ್ಟಿರುವುದು ಮಿತ್ರನ್‌ ಅವರ ನಿರೂಪಣಾ ಜಾಣ್ಮೆಗೆ ಕನ್ನಡಿ ಹಿಡಿದಿದೆ. ಕ್ಲೈಮ್ಯಾಕ್ಸ್‌ ನಿರೀಕ್ಷಿತವೆನಿಸಿದರೂ ಅದು ಪ್ರೇಕ್ಷಕನಿಗೆ ಒಪ್ಪಿತವಾಗುವುದು ಹೆಚ್ಚುಗಾರಿಕೆ. ಮನೆಮಂದಿಯೆಲ್ಲ ಒಟ್ಟಿಗೆ ಕೂತು ನೋಡಬಹುದಾದ ನವಿರು ಪ್ರೇಮಕಥೆ- ‘ತಿರುಚಿತ್ರಂಬಲಂ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...