Homeಮುಖಪುಟ‘ತಿರುಚಿತ್ರಂಬಲಂ’: ಧನುಷ್‌- ನಿತ್ಯಾ ಮೆನನ್‌ ನಟನೆಯ ನವಿರು ಪ್ರೇಮಕಥೆ

‘ತಿರುಚಿತ್ರಂಬಲಂ’: ಧನುಷ್‌- ನಿತ್ಯಾ ಮೆನನ್‌ ನಟನೆಯ ನವಿರು ಪ್ರೇಮಕಥೆ

- Advertisement -
- Advertisement -

ಅದೊಂದು ಸುಂದರ ಕುಟುಂಬ. ಆಕಸ್ಮಿಕವಾಗಿ ಘಟಿಸುವ ಅಪಘಾತ. ತಂದೆ- ಮಗನ ನಡುವೆ ಬಗೆಹರಿಯದ ಮನಸ್ತಾಪ. ಅಜ್ಜ ಮತ್ತು ಮೊಮ್ಮಗನ ಆತ್ಮೀಯತೆ. ಚಿಕ್ಕನಿಂದಲೂ ಕಥಾನಾಯಕನ ಜೊತೆಗಿರುವ ಗೆಳತಿ, ಆತನ ಏಳು ಬೀಳುಗಳ ಜೊತೆಯಲ್ಲಿ ಸಾಗುತ್ತಾಳೆ. ಕೊನೆಯಲ್ಲೊಂದು ಟ್ವಿಸ್ಟ್‌. ಪ್ರೀತಿ, ಸ್ನೇಹ, ಕೋಪದೊಳಗೆ ಅವಿತಿರುವ ವಾತ್ಸಲ್ಯ- ಇತ್ಯಾದಿಗಳನ್ನು ಹದವಾಗಿ ಬೆರೆಸಿದ ಸಿನಿಮಾ ತಮಿಳಿನ ‘ತಿರುಚಿತ್ರಂಬಲಂ’

ಮಿತ್ರನ್ ಆರ್ ಜವಾಹರ್ ನಿರ್ದೇಶನದ ‘ತಿರುಚಿತ್ರಂಬಲಂ’- ಎಲ್ಲಿಯೂ ಭಾರವೆನಿಸದೆ, ಮೊದಲಿನಿಂದ ಕೊನೆಯವರೆಗೂ ನವಿರು ಹಾಸ್ಯ ಹಾಗೂ ನವಿರು ಸಂಭಾಷಣೆ ಮೂಲಕ, ಖುಷಿ, ಕೋಪ, ದುಃಖ, ಪ್ರೀತಿ, ಸ್ನೇಹ, ಸಂಬಂಧಗಳ ಏರಿಳಿತದೊಂದಿಗೆ ಸಾಗುತ್ತದೆ. ಮನಸ್ಸನ್ನು ಮುದಗೊಳಿಸುತ್ತದೆ.

ಧನುಷ್‌, ನಿತ್ಯಾ ಮೆನನ್‌, ಪ್ರಕಾಶ್ ರಾಜ್‌, ಭಾರತೀರಾಜ ಮೊದಲಾದ ಕಲಾವಿದರು ಹಠಕ್ಕೆ ಬಿದ್ದಂತೆ ನಟಿಸಿರುವ ‘ತಿರುಚಿತ್ರಂಬಲಂ’- ಲವ್‌ಸ್ಟೋರಿ ಆಧಾರಿತ ಸಿನಿಮಾಗಳನ್ನು ಇಷ್ಟಪಡುವ ಪ್ರೇಕ್ಷಕ ವರ್ಗಕ್ಕೆ ಭರಪೂರ ಮನರಂಜನೆ ನೀಡಬಲ್ಲದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಥೆ ಸರಳವಾದರೂ ಚಿತ್ರಕಥೆಯ ನಿರೂಪಣಾ ಶೈಲಿ ಹೊಸ ಅನುಭವವನ್ನು ನೀಡುತ್ತದೆ. ಅನುರುದ್ಧ್ ಅವರ ಸಂಗೀತ- ಹಿತವೆನಿಸುತ್ತದೆ. ಕಥೆಯ ತೂಕವನ್ನು ಹೆಚ್ಚಿಸಿದೆ. ಪ್ರೀತಿಗಾಗಿ ಹಂಬಲಿಸುತ್ತಿರುವ ಪಡಮ್‌ (ತಿರುಚಿತ್ರಂಬಲಂ), ಸೋತು ಗೆಲ್ಲುತ್ತಾನೋ, ಪ್ರೀತಿಯನ್ನು ಧಕ್ಕಿಸಿಕೊಳ್ಳುತ್ತಾನೋ ಎಂಬುದು ಕಥೆ.

ಮಧ್ಯಮ ವರ್ಗದ ಕುಟುಂಬಗಳ ಸುತ್ತ ನಡೆಯುವ ಈ ಸಿನಿಮಾದಲ್ಲಿ ಧನುಷ್‌ (ಪಡಂ) ಒಬ್ಬ ಡೆಲಿವರಿ ಬಾಯ್‌. ಅಪ್ಪ (ಪ್ರಕಾಶ್ ರಾಜ್‌) ಪೊಲೀಸ್‌ ಅಧಿಕಾರಿ. ತಾತ (ಭಾರತೀರಾಜ) ಜನರೇಷನ್‌ ಗ್ಯಾಪ್ ದಾಟಿ ಮೊಮ್ಮಗನೊಂದಿಗೆ ಜಾಲಿಯಾಗಿರುವ ವ್ಯಕ್ತಿ. ಜೊತೆಯಲ್ಲೇ ಕೂತು ಬಿಯರ್‌ ಹೀರುವ ಪ್ರೀತಿ. ಚಿಕ್ಕಂದಿನಿಂದಲೂ ಜೊತೆಯಲ್ಲೇ ಬೆಳೆದಿರುವ ಗೆಳತಿ ಶೋಭನಾ (ನಿತ್ಯಾ ಮೆನನ್‌), ಪಡಂನ ಎಲ್ಲ ಸುಖ, ದುಃಖ, ನೋವು, ನಲಿವು, ಇಷ್ಟ-ಕಷ್ಟಗಳ ಭಾಗ.

ಈ ಸಿನಿಮಾ ಕೇವಲ ಪ್ರೀತಿಯ ಹುಡುಕಾಟದ ಕಥೆಯಾಗಿಯಷ್ಟೇ ಉಳಿಯದೆ ಜನರೇಷನ್‌ಗಳ ನಡುವೆ ಇರುವ ಗೋಡೆಗಳನ್ನು ಕೆಡವುತ್ತ ಹೋಗುತ್ತದೆ. ಚಿತ್ರಕತೆಯ ಜೊತೆಗೆ ಕಥೆಗೆ ಪೂರಕವಾದ ಸಂಭಾಷಣೆ ಇಲ್ಲಿನ ಮತ್ತೊಂದು ಹೈಲೈಟ್‌. ಒಳ್ಳೆಯ ಕಥೆಗೆ ದೊಡ್ಡ ಬಜೆಟ್ ಬೇಕಿಲ್ಲ ಎಂಬುದನ್ನು ತಿರುಚಿತ್ರಂಬಲಂ ಮತ್ತೊಮ್ಮೆ ಸಾಬೀತು ಮಾಡಿದೆ.

ಇದನ್ನೂ ಓದಿರಿ: ಗಾಳಿಪಟ-2: ಯೋಗರಾಜ ಭಟ್ರ ಕಥೆಯಲ್ಲಿ ಲಾಜಿಕ್ಕೂ ಇಲ್ಲ ಮ್ಯಾಜಿಕ್ಕೂ ಇಲ್ಲ!

ವಿವಾದಿತ ಆಧಾತ್ಮಿಕ ಗುರುವೆನಿಸಿದ ಓಶೋ ರಜನೀಶ್‌, “ಪ್ರೀತಿ ಕೊಟ್ಟು ಸಂತೋಷ ಪಡುತ್ತದೆ. ಅಹಂಕಾರ ಕಿತ್ತುಕೊಂಡು ಸಂತೋಷಪಡುತ್ತದೆ (Love is happy when it is able to give something. The ego is happy when it is able to take something)” ಎಂದಿದ್ದರು. ಇಲ್ಲಿಯೂ ಅಷ್ಟೇ- ಕೊಟ್ಟು ಸಂತೋಷಪಡುವ ತಾತ್ವಿಕತೆಯೇ ಮೇಲುಗೈ ಸಾಧಿಸುತ್ತದೆ.

ಪಡಂನ ಮೂರು ಪ್ರೇಮ ಕಥೆಗಳು ಇಲ್ಲಿವೆ. ಸಿದ್ಧಮಾದರಿಗಳನ್ನು ಒಪ್ಪಿಕೊಂಡಿರುವ ವ್ಯವಸ್ಥೆಯಲ್ಲಿ ಮೂರನೇ ಪ್ರೇಮಕಥೆ- ತುಸು ಅವಸರವಾಯಿತೇನೋ ಎಂಬ ಅಳುಕು ಪ್ರೇಕ್ಷಕನನ್ನು ಕಾಡುವ ಹೊತ್ತಿಗೆ ಅದನ್ನು ಭಾವುಕ ಸನ್ನಿವೇಶಗಳ ಮೂಲಕ ಭಾರವೆನಿಸದಂತೆ ಕಟ್ಟಿಕೊಟ್ಟಿರುವುದು ಮಿತ್ರನ್‌ ಅವರ ನಿರೂಪಣಾ ಜಾಣ್ಮೆಗೆ ಕನ್ನಡಿ ಹಿಡಿದಿದೆ. ಕ್ಲೈಮ್ಯಾಕ್ಸ್‌ ನಿರೀಕ್ಷಿತವೆನಿಸಿದರೂ ಅದು ಪ್ರೇಕ್ಷಕನಿಗೆ ಒಪ್ಪಿತವಾಗುವುದು ಹೆಚ್ಚುಗಾರಿಕೆ. ಮನೆಮಂದಿಯೆಲ್ಲ ಒಟ್ಟಿಗೆ ಕೂತು ನೋಡಬಹುದಾದ ನವಿರು ಪ್ರೇಮಕಥೆ- ‘ತಿರುಚಿತ್ರಂಬಲಂ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...