Homeಮುಖಪುಟದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮೇಲೆ ಸಿಬಿಐ ದಾಳಿ

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮೇಲೆ ಸಿಬಿಐ ದಾಳಿ

ಅಮೆರಿಕದ ಅತಿದೊಡ್ಡ ಪತ್ರಿಕೆ NYT ದೆಹಲಿ ಶಿಕ್ಷಣ ಮಾದರಿಯನ್ನು ಹೊಗಳಿ ಮುಖಪುಟದಲ್ಲಿ ಮನೀಶ್ ಸಿಸೋಡಿಯಾ ಅವರ ಚಿತ್ರವನ್ನು ಮುದ್ರಿಸಿದ ದಿನವೇ ಸಿಬಿಐ ಅವರ ಮನೆ ಬಾಗಿಲಿಗೆ ಬಂದಿಳಿದಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ

- Advertisement -
- Advertisement -

ದೆಹಲಿ ಮದ್ಯ ನೀತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಗಳ ಮೇಲೆ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮೇಲೆ ಸಿಬಿಐ ಶುಕ್ರವಾರ ದಾಳಿ ನಡೆಸಿತು. ಆದರೆ ಈ ಆರೋಪಗಳನ್ನು ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ತೀವ್ರವಾಗಿ ನಿರಾಕರಿಸಿದೆ. ದೆಹಲಿಯಲ್ಲಿರುವ ಮನೀಶ್ ಸಿಸೋಡಿಯಾ ಅವರ ಮನೆ ಅಲ್ಲದೆ, ಏಳು ರಾಜ್ಯಗಳ 20 ಸ್ಥಳಗಳಲ್ಲಿ ಸಿಬಿಐ ಶೋಧ ನಡೆಸಿದೆ. ದೆಹಲಿಯ ಮಾಜಿ ಅಬಕಾರಿ ಕಮಿಷನರ್ ಎ.ಗೋಪಿಕೃಷ್ಣ ಅವರ ದಮನ್ ಮತ್ತು ದಿಯುವಿನ ಮನೆಯಲ್ಲೂ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವೆಂಬರ್‌ನಲ್ಲಿ ಎಎಪಿ ಸರ್ಕಾರವು ಪ್ರಾರಂಭಿಸಿದ ಹೊಸ ದೆಹಲಿ ಅಬಕಾರಿ ನೀತಿಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಹೊಸ ನೀತಿಯ ಅಡಿಯಲ್ಲಿ ಮದ್ಯದ ಅಂಗಡಿ ಪರವಾನಗಿಗಳನ್ನು ಖಾಸಗಿಯವರಿಗೆ ಹಸ್ತಾಂತರಿಸಲಾಗಿದೆ ಎಂದು ಆರೋಪಿಸಿರುವ ತನಿಖಾ ಸಂಸ್ಥೆಯು ಎಫ್‌ಐಆರ್ ದಾಖಲಿಸಿದ್ದು ತನಿಖೆ ನಡೆಸುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಿಬಿಐ ದಾಳಿಯ ಬಗ್ಗೆ ಇಂದು ಬೆಳಿಗ್ಗೆ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದು, “ಸಿಬಿಐ ಇಲ್ಲಿ ನನ್ನ ನಿವಾಸದಲ್ಲಿದೆ. ನಾನು ತನಿಖಾ ಸಂಸ್ಥೆಗೆ ಸಹಕರಿಸುತ್ತೇನೆ, ನನ್ನ ವಿರುದ್ಧ ಅವರಿಗೆ ಏನೂ ಸಿಗುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿಬಿಜೆಪಿ ಮುಖಂಡನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವಂತೆ ದೆಹಲಿ ಹೈಕೋರ್ಟ್ ತಾಕೀತು

“ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ದೆಹಲಿ ಸರ್ಕಾರ ಮಾಡಿದ ಅತ್ಯುತ್ತಮ ಕೆಲಸದಿಂದ ಒಕ್ಕೂಟ ಸರ್ಕಾರಕ್ಕೆ ತೊಂದರೆಯಾಗಿದೆ. ಅದಕ್ಕಾಗಿಯೇ ಎರಡೂ ಇಲಾಖೆಗಳ ಮಂತ್ರಿಗಳನ್ನು ಗುರಿಯಾಗಿಸಲಾಗಿದೆ” ಎಂದು ಸಿಸೋಡಿಯಾ ಹೇಳಿದ್ದಾರೆ. ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಮೇ ತಿಂಗಳಿನಿಂದ ಜೈಲಿನಲ್ಲಿದ್ದಾರೆ.

ದೆಹಲಿಯಲ್ಲಿ ನಡೆದ ಶಿಕ್ಷಣ ಕ್ರಾಂತಿಯ ಬಗ್ಗೆ ಅಮೆರಿಕದ ಪತ್ರಿಕೆ ನ್ಯೂಯಾರ್ಕ್‌ ಟೈಮ್ಸ್‌‌ ಮುಖಪುಟದ ಸುದ್ದಿಯನ್ನು ಮಾಡಿದ್ದು ಉಪಮುಖ್ಯಮಂತ್ರಿ ಸಿಸೋಡಿಯಾ ಅವರ ಚಿತ್ರವನ್ನು ಅದರಲ್ಲಿ ಪ್ರಕಟಿಸಿದೆ. ದೆಹಲಿ ಮುಖ್ಯಮಂತ್ರಿ ಅದಕ್ಕೆ ಶುಭಕೋರಿದ್ದು, ದೆಹಲಿ ಭಾರತವೇ ಹೆಮ್ಮೆಪಡುವಂತೆ ಮಾಡಿದೆ ಎಂದು ಹೇಳಿದ್ದಾರೆ. ಅದೇ ದಿನ ಸಿಸೊಡಿಯಾ ಮನೆಯ ಮೇಲೆ ಸಿಬಿಐ ದಾಳಿ ಮಾಡಿದೆ.

ಇದನ್ನೂ ಓದಿ: ದೆಹಲಿ ರೈಲ್ವೆ ಫ್ಲಾಟ್‌ಫಾರ್ಮ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ರೈಲ್ವೆ ಸಿಬ್ಬಂದಿ ಬಂಧನ

ಸಿಸೋಡಿಯಾ ಅವರನ್ನು ತನಿಖಾ ಸಂಸ್ಥೆಗಳು ಗುರಿಯಾಗಿಸುತ್ತವೆ ಎಂದು ಭವಿಷ್ಯ ನುಡಿದಿದ್ದ ದೆಹಲಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, “ಸಿಬಿಐಗೆ ಸ್ವಾಗತ. ಸಂಪೂರ್ಣವಾಗಿ ಸಹಕರಿಸುತ್ತೇನೆ. ಈ ಹಿಂದೆಯೂ ಹಲವು ಪರೀಕ್ಷೆಗಳು ಹಾಗೂ ದಾಳಿಗಳು ನಡೆದಿವೆ. ಏನೂ ಹೊರಬರಲಿಲ್ಲ. ಇನ್ನೂ ಏನೂ ಹೊರಬರುವುದಿಲ್ಲ” ಎಂದು ಹೇಳಿದ್ದಾರೆ.

ಪ್ರತಿಸ್ಪರ್ಧಿಗಳನ್ನು ಹತ್ತಿಕ್ಕುವ ತನ್ನ ರಾಜಕೀಯ ಯೋಜನೆಯ ಭಾಗವಾಗಿ ಬಿಜೆಪಿ ತನ್ನ ಸಚಿವರನ್ನು ಪಟ್ಟುಬಿಡದೆ ಗುರಿಯಾಗಿಸಿಕೊಂಡಿದೆ ಎಂದು ಎಎಪಿ ಆರೋಪಿಸಿದೆ. “ಅಮೆರಿಕದ ಅತಿದೊಡ್ಡ ಪತ್ರಿಕೆಯಾದ ನ್ಯೂಯಾರ್ಕ್‌‌ ಟೈಮ್ಸ್‌ ದೆಹಲಿ ಶಿಕ್ಷಣ ಮಾದರಿಯನ್ನು ಹೊಗಳಿ, ಮುಖಪುಟದಲ್ಲಿ ಮನೀಶ್ ಸಿಸೋಡಿಯಾ ಅವರ ಚಿತ್ರವನ್ನು ಮುದ್ರಿಸಿದ ದಿನವೇ ಸಿಬಿಐ ಸಿಸೋಡಿಯಾ ಅವರ ಮನೆ ಬಾಗಿಲಿಗೆ ಬಂದಿಳಿದಿದೆ” ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ತನ್ನ ಆಜ್ಞೆ ಉಲ್ಲಂಘಿಸಿದ ಕೇಜ್ರಿವಾಲ್ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದ ದೆಹಲಿ ಲೆಫ್ಟಿನೆಂಟ್ ಗವರ್ನರ್‌

ಜುಲೈನಲ್ಲಿ ದೆಹಲಿ ಮುಖ್ಯ ಕಾರ್ಯದರ್ಶಿ ಅವರು ನಿಯಮಗಳ ಉಲ್ಲಂಘನೆ ಮತ್ತು ಉದ್ದೇಶಪೂರ್ವಕ ಸಂಪೂರ್ಣ ಕಾರ್ಯವಿಧಾನದ ಲೋಪ ಎಂದು ಆರೋಪಿಸಿ ವರದಿಯನ್ನು ಸಲ್ಲಿಸಿದ ನಂತರ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಅಬಕಾರಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು.

ಎಎಪಿ ಸರ್ಕಾರದ ಅಬಕಾರಿ ನೀತಿಯನ್ನು ಮನೀಷ್ ಸಿಸೋಡಿಯಾ ಅವರಂತಹ ಸರ್ಕಾರದ ಉನ್ನತ ಮಟ್ಟದ ವ್ಯಕ್ತಿಗಳಿಗೆ ಹಾಗೂ ಖಾಸಗಿ ಮದ್ಯದ ಉದ್ಯಮಿಗಳಿಗೆ ಆರ್ಥಿಕ ಲಾಭದ ಏಕೈಕ ಗುರಿಯೊಂದಿಗೆ ಜಾರಿಗೊಳಿಸಲಾಗಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಕಳೆದ ತಿಂಗಳು ಆರೋಪಿಸಿದ್ದರು.

“ಅಬಕಾರಿ ಇಲಾಖೆಯ ಉಸ್ತುವಾರಿ ಸಚಿವ ಮನೀಶ್ ಸಿಸೋಡಿಯಾ ಅವರು ಕಾನೂನುಬದ್ಧ ನಿಬಂಧನೆಗಳು ಮತ್ತು ಅಧಿಸೂಚಿತ ಅಬಕಾರಿ ನೀತಿಯನ್ನು ಉಲ್ಲಂಘಿಸುವ ಪ್ರಮುಖ ನಿರ್ಧಾರಗಳು ಹಾಗೂ ಕ್ರಮಗಳನ್ನು ತೆಗೆದುಕೊಂಡು ಕಾರ್ಯಗತಗೊಳಿಸಿದ್ದಾ. ಇದು ಭಾರಿ ಆರ್ಥಿಕ ಪರಿಣಾಮಗಳನ್ನು ಹೊಂದಿದೆ” ಎಂದು ಲೆಫ್ಟಿನೆಂಟ್ ಗವರ್ನರ್‌ ಸಕ್ಸೇನಾ ಹೇಳಿಕೆಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ಜಹಾಂಗೀರ್‌‌‌ಪುರಿ ಗಲಭೆ: 45 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ದೆಹಲಿ ಪೊಲೀಸ್‌‌

ಖಾಸಗಿ ಉದ್ಯಮಿಗಳಿಗೆ ಮದ್ಯ ಮಾರಾಟದ ಪರವಾನಗಿಗಳನ್ನು ಹಸ್ತಾಂತರಿಸಿ, ಸರ್ಕಾರಿ ಮಳಿಗೆಗಳನ್ನು ಮುಚ್ಚುವ ನೀತಿಯನ್ನು ಜುಲೈ 30 ರಂದು ಸಿಸೋಡಿಯಾ ಅವರು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...