Homeಮುಖಪುಟಕಂಬಾಳು ಸಿದ್ದಗಂಗಯ್ಯನವರ ಎರಡು ಪ್ರಶ್ನೆಗಳು!

ಕಂಬಾಳು ಸಿದ್ದಗಂಗಯ್ಯನವರ ಎರಡು ಪ್ರಶ್ನೆಗಳು!

- Advertisement -
- Advertisement -

ನಮ್ಮ ನೆಲ ಮೂಲದ ಪ್ರತಿಭೆ ಸಿದ್ದಗಂಗಯ್ಯ ಕಂಬಾಳು ನಿರ್ಗಮಿಸಿದ್ದಾರೆ. ನಿಸರ್ಗಪ್ರಿಯ ಎಂಬ ಹೆಸರಿನಿಂದ ಬರೆಯುತ್ತಿದ್ದ ಕಂಬಾಳು ತಮ್ಮ ವಿಶಿಷ್ಟ ಪ್ರತಿಭೆಯಿಂದ ಸಾಹಿತ್ಯಾಸಕ್ತರ ಗಮನ ಸೆಳೆದಿದ್ದರು. ಅವರು ಸಾಹಿತ್ಯ ಪ್ರಕಾರದ ಎಲ್ಲಾ ಕ್ಷೇತ್ರಗಳಲ್ಲೂ ಕೃಷಿ ಮಾಡಿದ್ದರು. ಅವರ ಕೃಷಿಯ ಹೂರಣವೇ ನೆಲ ಮೂಲವಾಗಿದ್ದರಿಂದ ನಿಸರ್ಗಪ್ರಿಯ ಎಂಬ ಗೌಪ್ಯನಾಮಕ್ಕೆ ಗೌರವ ತಂದಿದ್ದರು. ಕ್ರಮೇಣ ಈ ನಿಸರ್ಗಪ್ರಿಯ ಯಾರು ಅಲ್ಲ ನಮ್ಮ ನಡುವೆ ಬಡಬೇಸಾಯಗಾರನಂತೆ ಕಾಣುವ ಸಿದ್ದಗಂಗಯ್ಯ ಕಂಬಾಳು ಎಂಬುದು ನಮ್ಮೆಲ್ಲರ ಅರಿವಿಗೆ ಬಂತು. ಅದೇ ಹೆಸರಿನಲ್ಲವರು ’ಮೈಥಲಿ’ ಎಂಬ ರಾಮಾಯಣ ಧಾರಾವಾಹಿಯನ್ನು ಸುಧಾ ವಾರಪತ್ರಿಕೆಯಲ್ಲಿ ಆರಂಭಿಸಿದರು. ಆಗ ಸೀತೆಯ ಬಗ್ಗೆ ಕನಿಕರಗೊಂಡಿದ್ದ ಮನಸ್ಸುಗಳೆಲ್ಲಾ ದಂಗುಬಡಿದು ಹೋದವು. ನಮ್ಮ ಮಹಿಳಾ ಹೋರಾಟಗಾರ್ತಿಯರಿಗೆ ಸೀತೆಯ ಅಂತರಾಳದ ನೋವುಗಳು ಅರಿವಿಗೆ ಬಂದು ಯಾರೀ ಸಿದ್ದಗಂಗಯ್ಯ ಎನ್ನುವಂತಾಯ್ತು. ಅದಾದ ಮೇಲೆ ಸಿದ್ದಗಂಗಯ್ಯನವರ ಮೇಲೆ ಪೇಜಾವರ ಶ್ರೀಗಳ ಕಣ್ಣು ಬಿತ್ತು.

ಹಿಂದೂ ಧರ್ಮದ ಗರ್ಭಗುಡಿಯೊಳಗಿದ್ದ ಪೇಜಾವರಶ್ರೀಗಳು ತಾವು ಪೂಜಿಸುವ ಯಾವುದೇ ದೇವರ ಬಗ್ಗೆ ಸಣ್ಣ ಅಪಸ್ವರ ಟೀಕೆ ಬಂದರೂ ಅವರನ್ನು ವಿಚಾರಣೆಗೊಳಪಡಿಸುವ ಹಕ್ಕನ್ನು ತಮಗೆ ತಾವೇ ಆರೋಪಿಸಿಕೊಂಡಿದ್ದರು. ಆದ್ದರಿಂದ ಸಿದ್ದಗಂಗಯ್ಯನವರಿಗೆ ಪೇಜಾವರಶ್ರೀಗಳಿಂದ ಬುಲಾವ್ ಬಂತು. ಧರ್ಮನಿಂದನೆಯ ವಿಚಾರಣೆ ನಡೆಯುವ ಸ್ಥಳ ಯಾವುದೆಂದು ವಿಚಾರಿಸಿದರು. ಅದು ನಡೆಯುವುದು ವಿದ್ಯಾಪೀಠದಲ್ಲೆಂದು ತಿಳಿದು ಬಂತು. ಶ್ರೀನಿವಾಸನಗರದ ಬಸ್‌ಸ್ಟಾಪಿನಲ್ಲಿಳಿದು ಅಡ್ರೆಸ್ ಕೇಳಿಕೊಂಡು ವಿದ್ಯಾಪೀಠ ತಲುಪಿದರು. ಪೀಠದ ವರಾಂಡದಲ್ಲಿ ಅಡ್ಡಾಡುತ್ತಿದ್ದ ಮಾಣಿಗಳನ್ನು ವಿಚಾರಿಸಲಾಗಿ ಅವರು ಪೇಜಾವರ ಶ್ರೀ ಬಳಿ ಕರೆದುಕೊಂಡು ಹೋದರು. ಈಗಾಗಲೇ ಪುರುಷೋತ್ತಮರನ್ನ ಹೀಯಾಳಿಸಿದರು ಎಂಬ ಆರೋಪದ ಕಾರಣವಾಗಿ ಜೀವ ಬೆದರಿಕೆಗೆ ತುತ್ತಾಗಿರುವ ಭಗವಾನರ ಇನ್ನೊಂದು ಅವತಾರದಂತೆ ಕಾಣಬೇಕಿದ್ದ ಸಿದ್ದಗಂಗಯ್ಯ ತಪ್ಪಿಸಿಕೊಂಡ ಹಸು ಹುಡುಕುತ್ತ ಬಂದ ಬಡವನಂತೆ ಕಾಣುತ್ತಿದ್ದುದು ಮಠೋಪಜೀವಿಗಳಿಗೆ ಅಚ್ಚರಿಯುಂಟುಮಾಡಿತ್ತು. ಸಿದ್ದಗಂಗಯ್ಯನವರು ಪೇಜಾವರಶ್ರೀಗಳ ಪೀಠದೆದುರು ನಿಂತು ತಮ್ಮನ್ನು ಕರೆಸಿದ ಕಾರಣ ಕೇಳಿದರು.

“ನೋಡಿ ಸ್ವಾಮಿ ನಮ್ಮ ಆರಾಧ್ಯ ದೈವಗಳಾದ ರಾಮ ಕೃಷ್ಣರ ಬಗ್ಗೆ ಹಗುರವಾಗಿ ಮಾತನಾಡಿದ್ದೀರಿ, ಇದು ಕೂಡದು” ಎಂದರು.

“ನೋಡಿ ಸ್ವಾಮಿ ಕೃಷ್ಣ ನಮ್ಮವನು. ರಾಮ ಕ್ಷತ್ರಿಯ, ನೀವು ಬ್ರಾಹ್ಮಣರು, ನಿಮಗೂ ಅವರಿಗೂ ಏನು ಸಂಬಂಧ” ಎಂದರು. ಪೇಜಾವರಶ್ರೀ ಈ ಅನಿರೀಕ್ಷಿತ ಪ್ರಶ್ನೆಯಿಂದ ಗಲಿಬಿಲಿಯಾದರು.

“ಹಾಗಲ್ಲ ಅವರು ಸರ್ವಜನಾಂಗಕ್ಕೂ ಪೂಜನೀಯ ದೇವರುಗಳು. ಅವರ ಬಗ್ಗೆ ಹಗುರವಾಗಿ ಮಾತನಾಡುವುದು ಬರೆಯುವುದು ನಾವು ಸಹಿಸುವುದಿಲ್ಲ” ಎಂದರು.

“ಅಲ್ಲಾ ಸ್ವಾಮಿ ನಾನಂದ ಮಾತ ಪುನಃ ಅನ್ನಬೇಕಾಗುತ್ತೆ. ಕೃಷ್ಣ ಗೊಲ್ಲರವನು, ಅಂದ್ರೆ ನಮ್ಮವನು. ರಾಮ ಕ್ಷತ್ರಿಯ. ರಾಜನ ತಪ್ಪನ್ನ ಪ್ರಶ್ನೆ ಮಾಡೋ ಅಂತ ಹಕ್ಕನ್ನ ರಾಮನೆ ಕೊಟ್ಟಿದ್ದ. ಇನ್ನ ರಾಮಾಂಜನೇಯರಿಗೆ ಯುದ್ಧ ಆದಾಗ ರಾಮ ಎಷ್ಟೇ ಆಗಲಿ ನೀವು ಕಪಿಗಳು ಅಂತ ಮೂದಲಿಸಿದ. ಆಗ ಆಂಜನೇಯ ಆ ಕಪಿಗಳೇ ಅಲ್ಲವ ಯುದ್ಧ ಮಾಡಿ ಸೀತೆಯನ್ನು ತಂದು ನಿಮಗೊಪ್ಪಿಸಿದ್ದು ಪ್ರಭು ಅಂದ. ರಾಮ ಸತ್ಯಸಂಗತಿಗಳ ಒಪ್ಪಿಗತಿದ್ದ. ಅದಕೆ ಅಲವ ಅವನು ಪುರುಷೋತ್ತಮನಾಗಿದ್ದು. ಇವ್ಲೆಲ್ಲ ನಿಮಗೆ ಗೊತ್ತಿರಬೇಕು” ಅಂದರು. ಪೇಜಾವರ ವಿಚಾರಣಾ ಸಭೆ ದಂಗುಬಡಿದುಹೋಯ್ತು. ಕೃಷ್ಣ ನಮ್ಮವನು ಎಂದ ಈತ ಗೊಲ್ಲರವನಿರಬೇಕೆಂದು ಜಗದ್ಗುರುಗಳು ಗಲಿಬಿಲಿಗೊಳಗಾದರು.

“ನೋಡಿ ಹೀಗೆಲ್ಲ ಮಾತನಾಡುವುದು ಬೇಡ. ನೀವು ನಮ್ಮ ದೈವಗಳ ಬಗ್ಗೆ ಹಗುರವಾಗಿ ವಾದಿಸುವುದು ಬೇಡ, ಈಗ ಹೋಗಿ” ಎಂದುಬಿಟ್ಟರು. ಪೇಜಾವರರು ಹಾಗನ್ನಬೇಕಾದರೆ, ಈ ಮನುಷ್ಯ ಮತ್ತೆ ಕೆದಕುವಂತೆ ಕೃಷ್ಣ ರಾಮರ ಮತ್ತು ತಮ್ಮ ಸಂಬಂಧದ ವಿಷಯ ಹೇಳುವಂತೆ ಸವಾಲಾಕಲು ತಯಾರಾಗುವಂತೆ ಕಂಡರು. ಆದ್ದರಿಂದ ಬೇಗ ಸಾಗಹಾಕಲು ಪೇಜಾವರರು ಹವಣಿಸಿದರು. ತಾವಾಡಿದ ಮಾತು ಪೇಜಾವರರಿಗೆ ತಾಕಿದೆ ಇಷ್ಟು ಸಾಕು ಎಂದು ಗ್ರಹಿಸಿದ ಕಂಬಾಳರು ಅಲ್ಲಿಂದ ನಿರ್ಗಮಿಸಿದರು.

ನಾನು ಗಮನಿಸಿದಂತೆ ಕಂಬಾಳರು ಈ ಪ್ರಸಂಗವನ್ನು ಎಲ್ಲೂ ಹೇಳಿಕೊಳ್ಳಲಿಲ್ಲ. ಆ ರೂಪದ ಪ್ರಚಾರವೂ ಅವರಿಗೆ ಬೇಕಿರಲಿಲ್ಲ. ಆ ದಿನ ನಾಗತಿಹಳ್ಳಿ ಚಂದ್ರಶೇಖರನ ಆಫೀಸಿನಲ್ಲಿ ಕುಳಿತು ಅವಿದ್ಯಾವಂತರ ಅವಿವೇಕವನ್ನು ಹೇಳಿದಂತೆ ಸಹಜವಾಗಿ ಹೇಳಿದ್ದರು. ಅವತ್ತು ನಾಗತಿಹಳ್ಳಿ ಚಂದ್ರಶೇಖರನ ಕೋರಿಕೆಯಂತೆ ಕರಿಭಂಟ ಎನ್ನುವ ಜನಪದ ನಾಟಕ ಬರೆದುಕೊಟ್ಟರು. ಅದೊಂದು ಅದ್ಭುತ ನಾಟಕ; ನಾಗರಿಕ ಜಗತ್ತಿನ ನರರನ್ನು ಕಂಡರಾಗದ ಕಾಡಿನ ಜನರು ಅವರ ವಾಸನೆಗೂ ಕೆರಳುವಂತೆ ವ್ಯಗ್ರಗೊಳ್ಳುವ ಕಥಾವಸ್ತು. ಇವತ್ತಿಗೂ ನಮ್ಮ ಕಾಡೊಳಗಿನ ಅದಿವಾಸಿಗಳು ಹೆದರುವುದು ಕಾಡುಪ್ರಾಣಿಗಳಿಗಲ್ಲ ಬದಲಿಗೆ ಕಾಡಿನ ಇಲಾಖೆಯ ಜನರಿಗೆ. ಇಂತಹ ವಸ್ತುವಿದ್ದ ನಾಟಕವನ್ನು ನಾಗತಿಹಳ್ಳಿ ಹೆಣ್ಣುಮಕ್ಕಳು ಮನಮುಟ್ಟುವಂತೆ ಅಭಿನಯಿಸಿ ದೆಹಲಿಯವರೆಗೂ ಹೋಗಿಬಂದರು. ಮನೆಯ ಹೊಸಲಿಂದ ಈಚೆ ಬರದಂತಿದ್ದ ಹೆಣ್ಣುಮಕ್ಕಳೆಲ್ಲಾ ಮನಬಿಚ್ಚಿ ಅಭಿನಯಿಸಿದ್ದು ಒಂದು ದಾಖಲೆಯಾಗಿತ್ತು. ತಾನು ಬರೆದದ್ದನ್ನು ಈ ಲೋಕಕ್ಕೆ ಅರ್ಪಿಸಿದ ನಂತರ ಸಿದ್ದಗಂಗಯ್ಯ ಅತ್ತ ಸುಳಿಯುತ್ತಿರಲಿಲ್ಲ. ಅದೇನಿದ್ದರೂ ಈಗ ಆ ಲೋಕಕ್ಕೆ ಸೇರಿದ್ದು ಎನ್ನುವಂತಿದ್ದರು. ಈಗ ನಮ್ಮೆಲ್ಲಾ ಪ್ರತಿಭಾವಂತರನ್ನು, ದೇವರುಗಳನ್ನು ಮತ್ತು ಐತಿಹಾಸಿಕ ವ್ಯಕ್ತಿಗಳನ್ನ ಅಪಹರಿಸಿ ತಮ್ಮವರನ್ನಾಗಿಸಿಕೊಳ್ಳುತ್ತಿರುವವರ ವಿರುದ್ಧ ಕಂಬಾಳರಂತೆ ಪ್ರಶ್ನೆಮಾಡಿ ದಕ್ಕಿಸಿಕೊಳ್ಳಬೇಕಿದೆ. ಅದು ನಾವು ಸಿದ್ದಗಂಗಯ್ಯನವರಿಗೆ ಸಲ್ಲಿಸುವ ಗೌರವ.


ಇದನ್ನೂ ಓದಿ: ಮುರುಘಾ ಶರಣರ ಮರುಳು ಮಾತು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...