Homeಮುಖಪುಟಕಂಬಾಳು ಸಿದ್ದಗಂಗಯ್ಯನವರ ಎರಡು ಪ್ರಶ್ನೆಗಳು!

ಕಂಬಾಳು ಸಿದ್ದಗಂಗಯ್ಯನವರ ಎರಡು ಪ್ರಶ್ನೆಗಳು!

- Advertisement -
- Advertisement -

ನಮ್ಮ ನೆಲ ಮೂಲದ ಪ್ರತಿಭೆ ಸಿದ್ದಗಂಗಯ್ಯ ಕಂಬಾಳು ನಿರ್ಗಮಿಸಿದ್ದಾರೆ. ನಿಸರ್ಗಪ್ರಿಯ ಎಂಬ ಹೆಸರಿನಿಂದ ಬರೆಯುತ್ತಿದ್ದ ಕಂಬಾಳು ತಮ್ಮ ವಿಶಿಷ್ಟ ಪ್ರತಿಭೆಯಿಂದ ಸಾಹಿತ್ಯಾಸಕ್ತರ ಗಮನ ಸೆಳೆದಿದ್ದರು. ಅವರು ಸಾಹಿತ್ಯ ಪ್ರಕಾರದ ಎಲ್ಲಾ ಕ್ಷೇತ್ರಗಳಲ್ಲೂ ಕೃಷಿ ಮಾಡಿದ್ದರು. ಅವರ ಕೃಷಿಯ ಹೂರಣವೇ ನೆಲ ಮೂಲವಾಗಿದ್ದರಿಂದ ನಿಸರ್ಗಪ್ರಿಯ ಎಂಬ ಗೌಪ್ಯನಾಮಕ್ಕೆ ಗೌರವ ತಂದಿದ್ದರು. ಕ್ರಮೇಣ ಈ ನಿಸರ್ಗಪ್ರಿಯ ಯಾರು ಅಲ್ಲ ನಮ್ಮ ನಡುವೆ ಬಡಬೇಸಾಯಗಾರನಂತೆ ಕಾಣುವ ಸಿದ್ದಗಂಗಯ್ಯ ಕಂಬಾಳು ಎಂಬುದು ನಮ್ಮೆಲ್ಲರ ಅರಿವಿಗೆ ಬಂತು. ಅದೇ ಹೆಸರಿನಲ್ಲವರು ’ಮೈಥಲಿ’ ಎಂಬ ರಾಮಾಯಣ ಧಾರಾವಾಹಿಯನ್ನು ಸುಧಾ ವಾರಪತ್ರಿಕೆಯಲ್ಲಿ ಆರಂಭಿಸಿದರು. ಆಗ ಸೀತೆಯ ಬಗ್ಗೆ ಕನಿಕರಗೊಂಡಿದ್ದ ಮನಸ್ಸುಗಳೆಲ್ಲಾ ದಂಗುಬಡಿದು ಹೋದವು. ನಮ್ಮ ಮಹಿಳಾ ಹೋರಾಟಗಾರ್ತಿಯರಿಗೆ ಸೀತೆಯ ಅಂತರಾಳದ ನೋವುಗಳು ಅರಿವಿಗೆ ಬಂದು ಯಾರೀ ಸಿದ್ದಗಂಗಯ್ಯ ಎನ್ನುವಂತಾಯ್ತು. ಅದಾದ ಮೇಲೆ ಸಿದ್ದಗಂಗಯ್ಯನವರ ಮೇಲೆ ಪೇಜಾವರ ಶ್ರೀಗಳ ಕಣ್ಣು ಬಿತ್ತು.

ಹಿಂದೂ ಧರ್ಮದ ಗರ್ಭಗುಡಿಯೊಳಗಿದ್ದ ಪೇಜಾವರಶ್ರೀಗಳು ತಾವು ಪೂಜಿಸುವ ಯಾವುದೇ ದೇವರ ಬಗ್ಗೆ ಸಣ್ಣ ಅಪಸ್ವರ ಟೀಕೆ ಬಂದರೂ ಅವರನ್ನು ವಿಚಾರಣೆಗೊಳಪಡಿಸುವ ಹಕ್ಕನ್ನು ತಮಗೆ ತಾವೇ ಆರೋಪಿಸಿಕೊಂಡಿದ್ದರು. ಆದ್ದರಿಂದ ಸಿದ್ದಗಂಗಯ್ಯನವರಿಗೆ ಪೇಜಾವರಶ್ರೀಗಳಿಂದ ಬುಲಾವ್ ಬಂತು. ಧರ್ಮನಿಂದನೆಯ ವಿಚಾರಣೆ ನಡೆಯುವ ಸ್ಥಳ ಯಾವುದೆಂದು ವಿಚಾರಿಸಿದರು. ಅದು ನಡೆಯುವುದು ವಿದ್ಯಾಪೀಠದಲ್ಲೆಂದು ತಿಳಿದು ಬಂತು. ಶ್ರೀನಿವಾಸನಗರದ ಬಸ್‌ಸ್ಟಾಪಿನಲ್ಲಿಳಿದು ಅಡ್ರೆಸ್ ಕೇಳಿಕೊಂಡು ವಿದ್ಯಾಪೀಠ ತಲುಪಿದರು. ಪೀಠದ ವರಾಂಡದಲ್ಲಿ ಅಡ್ಡಾಡುತ್ತಿದ್ದ ಮಾಣಿಗಳನ್ನು ವಿಚಾರಿಸಲಾಗಿ ಅವರು ಪೇಜಾವರ ಶ್ರೀ ಬಳಿ ಕರೆದುಕೊಂಡು ಹೋದರು. ಈಗಾಗಲೇ ಪುರುಷೋತ್ತಮರನ್ನ ಹೀಯಾಳಿಸಿದರು ಎಂಬ ಆರೋಪದ ಕಾರಣವಾಗಿ ಜೀವ ಬೆದರಿಕೆಗೆ ತುತ್ತಾಗಿರುವ ಭಗವಾನರ ಇನ್ನೊಂದು ಅವತಾರದಂತೆ ಕಾಣಬೇಕಿದ್ದ ಸಿದ್ದಗಂಗಯ್ಯ ತಪ್ಪಿಸಿಕೊಂಡ ಹಸು ಹುಡುಕುತ್ತ ಬಂದ ಬಡವನಂತೆ ಕಾಣುತ್ತಿದ್ದುದು ಮಠೋಪಜೀವಿಗಳಿಗೆ ಅಚ್ಚರಿಯುಂಟುಮಾಡಿತ್ತು. ಸಿದ್ದಗಂಗಯ್ಯನವರು ಪೇಜಾವರಶ್ರೀಗಳ ಪೀಠದೆದುರು ನಿಂತು ತಮ್ಮನ್ನು ಕರೆಸಿದ ಕಾರಣ ಕೇಳಿದರು.

“ನೋಡಿ ಸ್ವಾಮಿ ನಮ್ಮ ಆರಾಧ್ಯ ದೈವಗಳಾದ ರಾಮ ಕೃಷ್ಣರ ಬಗ್ಗೆ ಹಗುರವಾಗಿ ಮಾತನಾಡಿದ್ದೀರಿ, ಇದು ಕೂಡದು” ಎಂದರು.

“ನೋಡಿ ಸ್ವಾಮಿ ಕೃಷ್ಣ ನಮ್ಮವನು. ರಾಮ ಕ್ಷತ್ರಿಯ, ನೀವು ಬ್ರಾಹ್ಮಣರು, ನಿಮಗೂ ಅವರಿಗೂ ಏನು ಸಂಬಂಧ” ಎಂದರು. ಪೇಜಾವರಶ್ರೀ ಈ ಅನಿರೀಕ್ಷಿತ ಪ್ರಶ್ನೆಯಿಂದ ಗಲಿಬಿಲಿಯಾದರು.

“ಹಾಗಲ್ಲ ಅವರು ಸರ್ವಜನಾಂಗಕ್ಕೂ ಪೂಜನೀಯ ದೇವರುಗಳು. ಅವರ ಬಗ್ಗೆ ಹಗುರವಾಗಿ ಮಾತನಾಡುವುದು ಬರೆಯುವುದು ನಾವು ಸಹಿಸುವುದಿಲ್ಲ” ಎಂದರು.

“ಅಲ್ಲಾ ಸ್ವಾಮಿ ನಾನಂದ ಮಾತ ಪುನಃ ಅನ್ನಬೇಕಾಗುತ್ತೆ. ಕೃಷ್ಣ ಗೊಲ್ಲರವನು, ಅಂದ್ರೆ ನಮ್ಮವನು. ರಾಮ ಕ್ಷತ್ರಿಯ. ರಾಜನ ತಪ್ಪನ್ನ ಪ್ರಶ್ನೆ ಮಾಡೋ ಅಂತ ಹಕ್ಕನ್ನ ರಾಮನೆ ಕೊಟ್ಟಿದ್ದ. ಇನ್ನ ರಾಮಾಂಜನೇಯರಿಗೆ ಯುದ್ಧ ಆದಾಗ ರಾಮ ಎಷ್ಟೇ ಆಗಲಿ ನೀವು ಕಪಿಗಳು ಅಂತ ಮೂದಲಿಸಿದ. ಆಗ ಆಂಜನೇಯ ಆ ಕಪಿಗಳೇ ಅಲ್ಲವ ಯುದ್ಧ ಮಾಡಿ ಸೀತೆಯನ್ನು ತಂದು ನಿಮಗೊಪ್ಪಿಸಿದ್ದು ಪ್ರಭು ಅಂದ. ರಾಮ ಸತ್ಯಸಂಗತಿಗಳ ಒಪ್ಪಿಗತಿದ್ದ. ಅದಕೆ ಅಲವ ಅವನು ಪುರುಷೋತ್ತಮನಾಗಿದ್ದು. ಇವ್ಲೆಲ್ಲ ನಿಮಗೆ ಗೊತ್ತಿರಬೇಕು” ಅಂದರು. ಪೇಜಾವರ ವಿಚಾರಣಾ ಸಭೆ ದಂಗುಬಡಿದುಹೋಯ್ತು. ಕೃಷ್ಣ ನಮ್ಮವನು ಎಂದ ಈತ ಗೊಲ್ಲರವನಿರಬೇಕೆಂದು ಜಗದ್ಗುರುಗಳು ಗಲಿಬಿಲಿಗೊಳಗಾದರು.

“ನೋಡಿ ಹೀಗೆಲ್ಲ ಮಾತನಾಡುವುದು ಬೇಡ. ನೀವು ನಮ್ಮ ದೈವಗಳ ಬಗ್ಗೆ ಹಗುರವಾಗಿ ವಾದಿಸುವುದು ಬೇಡ, ಈಗ ಹೋಗಿ” ಎಂದುಬಿಟ್ಟರು. ಪೇಜಾವರರು ಹಾಗನ್ನಬೇಕಾದರೆ, ಈ ಮನುಷ್ಯ ಮತ್ತೆ ಕೆದಕುವಂತೆ ಕೃಷ್ಣ ರಾಮರ ಮತ್ತು ತಮ್ಮ ಸಂಬಂಧದ ವಿಷಯ ಹೇಳುವಂತೆ ಸವಾಲಾಕಲು ತಯಾರಾಗುವಂತೆ ಕಂಡರು. ಆದ್ದರಿಂದ ಬೇಗ ಸಾಗಹಾಕಲು ಪೇಜಾವರರು ಹವಣಿಸಿದರು. ತಾವಾಡಿದ ಮಾತು ಪೇಜಾವರರಿಗೆ ತಾಕಿದೆ ಇಷ್ಟು ಸಾಕು ಎಂದು ಗ್ರಹಿಸಿದ ಕಂಬಾಳರು ಅಲ್ಲಿಂದ ನಿರ್ಗಮಿಸಿದರು.

ನಾನು ಗಮನಿಸಿದಂತೆ ಕಂಬಾಳರು ಈ ಪ್ರಸಂಗವನ್ನು ಎಲ್ಲೂ ಹೇಳಿಕೊಳ್ಳಲಿಲ್ಲ. ಆ ರೂಪದ ಪ್ರಚಾರವೂ ಅವರಿಗೆ ಬೇಕಿರಲಿಲ್ಲ. ಆ ದಿನ ನಾಗತಿಹಳ್ಳಿ ಚಂದ್ರಶೇಖರನ ಆಫೀಸಿನಲ್ಲಿ ಕುಳಿತು ಅವಿದ್ಯಾವಂತರ ಅವಿವೇಕವನ್ನು ಹೇಳಿದಂತೆ ಸಹಜವಾಗಿ ಹೇಳಿದ್ದರು. ಅವತ್ತು ನಾಗತಿಹಳ್ಳಿ ಚಂದ್ರಶೇಖರನ ಕೋರಿಕೆಯಂತೆ ಕರಿಭಂಟ ಎನ್ನುವ ಜನಪದ ನಾಟಕ ಬರೆದುಕೊಟ್ಟರು. ಅದೊಂದು ಅದ್ಭುತ ನಾಟಕ; ನಾಗರಿಕ ಜಗತ್ತಿನ ನರರನ್ನು ಕಂಡರಾಗದ ಕಾಡಿನ ಜನರು ಅವರ ವಾಸನೆಗೂ ಕೆರಳುವಂತೆ ವ್ಯಗ್ರಗೊಳ್ಳುವ ಕಥಾವಸ್ತು. ಇವತ್ತಿಗೂ ನಮ್ಮ ಕಾಡೊಳಗಿನ ಅದಿವಾಸಿಗಳು ಹೆದರುವುದು ಕಾಡುಪ್ರಾಣಿಗಳಿಗಲ್ಲ ಬದಲಿಗೆ ಕಾಡಿನ ಇಲಾಖೆಯ ಜನರಿಗೆ. ಇಂತಹ ವಸ್ತುವಿದ್ದ ನಾಟಕವನ್ನು ನಾಗತಿಹಳ್ಳಿ ಹೆಣ್ಣುಮಕ್ಕಳು ಮನಮುಟ್ಟುವಂತೆ ಅಭಿನಯಿಸಿ ದೆಹಲಿಯವರೆಗೂ ಹೋಗಿಬಂದರು. ಮನೆಯ ಹೊಸಲಿಂದ ಈಚೆ ಬರದಂತಿದ್ದ ಹೆಣ್ಣುಮಕ್ಕಳೆಲ್ಲಾ ಮನಬಿಚ್ಚಿ ಅಭಿನಯಿಸಿದ್ದು ಒಂದು ದಾಖಲೆಯಾಗಿತ್ತು. ತಾನು ಬರೆದದ್ದನ್ನು ಈ ಲೋಕಕ್ಕೆ ಅರ್ಪಿಸಿದ ನಂತರ ಸಿದ್ದಗಂಗಯ್ಯ ಅತ್ತ ಸುಳಿಯುತ್ತಿರಲಿಲ್ಲ. ಅದೇನಿದ್ದರೂ ಈಗ ಆ ಲೋಕಕ್ಕೆ ಸೇರಿದ್ದು ಎನ್ನುವಂತಿದ್ದರು. ಈಗ ನಮ್ಮೆಲ್ಲಾ ಪ್ರತಿಭಾವಂತರನ್ನು, ದೇವರುಗಳನ್ನು ಮತ್ತು ಐತಿಹಾಸಿಕ ವ್ಯಕ್ತಿಗಳನ್ನ ಅಪಹರಿಸಿ ತಮ್ಮವರನ್ನಾಗಿಸಿಕೊಳ್ಳುತ್ತಿರುವವರ ವಿರುದ್ಧ ಕಂಬಾಳರಂತೆ ಪ್ರಶ್ನೆಮಾಡಿ ದಕ್ಕಿಸಿಕೊಳ್ಳಬೇಕಿದೆ. ಅದು ನಾವು ಸಿದ್ದಗಂಗಯ್ಯನವರಿಗೆ ಸಲ್ಲಿಸುವ ಗೌರವ.


ಇದನ್ನೂ ಓದಿ: ಮುರುಘಾ ಶರಣರ ಮರುಳು ಮಾತು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...