Homeದಲಿತ್ ಫೈಲ್ಸ್ಮೊದಲ ಬೆಂಚ್‌ನಲ್ಲಿ ಕುಳಿತ ಕಾರಣ ದಲಿತ ಬಾಲಕಿಗೆ ಶಿಕ್ಷಕಿಯಿಂದ ಥಳಿತ; ಎಫ್‌ಐಆರ್‌

ಮೊದಲ ಬೆಂಚ್‌ನಲ್ಲಿ ಕುಳಿತ ಕಾರಣ ದಲಿತ ಬಾಲಕಿಗೆ ಶಿಕ್ಷಕಿಯಿಂದ ಥಳಿತ; ಎಫ್‌ಐಆರ್‌

ಮಧ್ಯಪ್ರದೇಶ: ದಲಿತ ಬಾಲಕಿ ಮೊದಲ ಸಾಲಿನಲ್ಲಿ ಕುಳಿತ್ತಿದ್ದಕ್ಕೆ ಪ್ರಜ್ಞೆ ತಪ್ಪುವಂತೆ ಹೊಡೆದು, ಜಾತಿ ನಿಂದನೆ ಮಾಡಿರುವ ಶಿಕ್ಷಕಿ

- Advertisement -
- Advertisement -

16 ವರ್ಷದ ದಲಿತ ಬಾಲಕಿಯು ತರಗತಿ ವೇಳೆ ಮುಂದಿನ ಸಾಲಿನಲ್ಲಿ ಕುಳಿತಿದ್ದಕ್ಕಾಗಿ ಥಳಿಸಿದ್ದಲ್ಲದೆ ಜಾತಿ ನಿಂದನೆ ಮಾಡಿರುವ ಸರ್ಕಾರಿ ಶಿಕ್ಷಕಿಯೊಬ್ಬರ ಮೇಲೆ ಮಧ್ಯಪ್ರದೇಶ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಆಗಸ್ಟ್ 2ರಂದು ರಾಜ್ಯ ರಾಜಧಾನಿಯಿಂದ 700 ಕಿಮೀ ದೂರದಲ್ಲಿರುವ ಸಿಂಗ್ರೌಲಿ ಜಿಲ್ಲೆಯ ಬೈಧಾನ್‌ನ ಸರ್ಕಾರಿ ಹೈಯರ್ ಸೆಕೆಂಡರಿ ಬಾಲಕಿಯರ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಂದು 12ನೇ ತರಗತಿಯ ವಿದ್ಯಾರ್ಥಿನಿ ಅಂಜನಾ ಸಾಕೇತ್ (ಹೆಸರು ಬದಲಾಯಿಸಲಾಗಿದೆ), ಶಿಕ್ಷಕಿ ಜಾಗೃತಿ ಸಿಂಗ್ ತರಗತಿಗೆ ಪ್ರವೇಶಿಸಿದಾಗ ತರಗತಿಯ ಮುಂಭಾಗದ ಬೆಂಚ್‌ನಲ್ಲಿ ಕುಳಿತ್ತಿದ್ದರು. ಇದನ್ನು ನೋಡಿದ ಶಿಕ್ಷಕಿ ಕೋಪಗೊಂಡಳು. ತರುವಾಯ ವಿದ್ಯಾರ್ಥಿನಿಯ ಜಾತಿ ನಿಂದನೆ ಮಾಡಿದಳು. ವಿದ್ಯಾರ್ಥಿನಿ ಅಂಜನಾ ತಲೆಗೆ ಪುಸ್ತಕದಿಂದ ಹಲವು ಬಾರಿ ಹೊಡೆದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ಶಿಕ್ಷಕಿ ನನ್ನ ತಲೆಯ ಮೇಲೆ ಪುಸ್ತಕದಿಂದ ಹೊಡೆದ ನಂತರ ನಾನು ಕೆಲವು ಸಮಯ ಪ್ರಜ್ಞೆ ತಪ್ಪಿದೆ” ಎಂದು ವಿದ್ಯಾರ್ಥಿನಿ ಹೇಳಿರುವುದನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ಶಿಕ್ಷಕಿ ಜಾಗೃತಿ ಸಿಂಗ್ ವಿರುದ್ಧ ಆಗಸ್ಟ್ 17ರಂದು ಸಿಂಗ್ರೌಲಿಯ ಬೈರಾನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

“ದಲಿತ ಬಾಲಕಿಯ ದೂರಿನ ಮೇರೆಗೆ ಪೊಲೀಸರು ಶಿಕ್ಷಕಿ ಜಾಗೃತಿ ಸಿಂಗ್ ವಿರುದ್ಧ ಐಪಿಸಿ ಸೆಕ್ಷನ್ 294, 323, 506 ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ಎರಡು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆ ಮುಂದುವರಿದಿದೆ” ಎಂದು ಬೈರಾನ್ ಪೊಲೀಸ್ ಪಟ್ಟಣ ನಿರೀಕ್ಷಕ ಅರುಣ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಜಿಲ್ಲಾ ಶಿಕ್ಷಣಾಧಿಕಾರಿ (ಡಿಇಒ) ರೋಹಿಣಿ ಪ್ರಸಾದ್ ಪಾಂಡೆ ಅವರು ಶಿಕ್ಷಕಿಯ ವಿರುದ್ಧ ಕ್ರಮ ಜರುಗಿಸಿದ್ದಾರೆ ಎಂದು ಎಫ್‌ಐಆರ್‌ ದಾಖಲಾದ ಒಂದು ದಿನದ ನಂತರ ಜಿಲ್ಲಾಧಿಕಾರಿಗಳು ಹೊರಡಿಸಿರುವ ಅಧಿಕೃತ ಪ್ರಕಟಣೆ ತಿಳಿಸಿದೆ. ರಾಜೀವ್ ರಂಜನ್ ಮೀನಾ ಅವರು ಪ್ರಕರಣದ ತನಿಖೆ ನಡೆಸಲಿದ್ದಾರೆ.

ಘಟನೆ ನಡೆದ ಒಂದು ದಿನದ ನಂತರ ಸಂತ್ರಸ್ತ ವಿದ್ಯಾರ್ಥಿನಿ ತನ್ನ ಪೋಷಕರೊಂದಿಗೆ ಶಿಕ್ಷಕರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿದ್ದರು.

ಹಲ್ಲೆ ಹಾಗೂ ತಾರತಮ್ಯ ಎಸಗಿರುವ ಬಗ್ಗೆ ತನಿಖೆಯ ವೇಳೆ ಸಾಕ್ಷ್ಯ ಸಿಕ್ಕಿದ್ದು, ಜಿಲ್ಲಾಧಿಕಾರಿಯವರಿಗೆ ಡಿಇಒ ಬುಧವಾರ ವರದಿ ಸಲ್ಲಿಸಿದ್ದಾರೆ. ವರದಿಯ ಮೇರೆಗೆ ಶಿಕ್ಷಕಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆಗಸ್ಟ್ 18ರಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ದಲಿತ ಬಾಲಕನನ್ನು ಥಳಿಸಿ ಕೊಂದ ಶಿಕ್ಷಕನ ಪರ ಪ್ರತಿಭಟನೆಯಲ್ಲಿ ಚಪ್ಪಾಳೆ ತಟ್ಟಿದ ಜಲೋರ್ ಜಿಲ್ಲಾಧಿಕಾರಿ, ಎಸ್‌ಪಿ?

ಸದರಿ ಶಿಕ್ಷಕಿಯ ವಿರುದ್ಧ ಬಂದಿರುವ ಆರೋಪಗಳು ನಿಜವೆಂದು ಅನೇಕ ವಿದ್ಯಾರ್ಥಿಗಳು, ಸಹ ಶಿಕ್ಷಕರು ಹೇಳುತ್ತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಧ್ಯಪ್ರದೇಶ ಸಿವಿಲ್ ಸರ್ವಿಸ್ (ನಡತೆ) 1995ರ ಸೆಕ್ಷನ್‌ಗಳನ್ನು ಉಲ್ಲಂಘಿಸಿರುವುದರಿಂದ ಶಿಕ್ಷಕಿಯ ವಿರುದ್ಧ ಇಲಾಖಾ ತನಿಖೆಯನ್ನು ಪ್ರಾರಂಭಿಸುವಂತೆ ಸೂಚಿಸಿ ಜಿಲ್ಲಾಧಿಕಾರಿಯವರು ರೇವಾ ಆಯುಕ್ತರಿಗೆ ಪತ್ರವನ್ನು ಬರೆದಿದ್ದಾರೆ.

ಅಮಾನತು ಪ್ರಕ್ರಿಯೆಯನ್ನು ಪ್ರಾರಂಭಿಸಲು ನಾವು ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆದಿದ್ದೇವೆ ಎಂದು ರಾಜೀವ್ ರಂಜನ್ ಮೀನಾ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರತಿ ವರ್ಷ, ಕನಿಷ್ಠ 6-12 ಪ್ರಮುಖ ಅಪರಾಧಗಳಾದ ದಲಿತರ ಮನೆಗಳನ್ನು ಸುಡುವುದು, ಅತ್ಯಾಚಾರ, ಮುಸ್ಲಿಮರಿಂದ ದಲಿತರ ಹತ್ಯೆಗಳು ನಮ್ಮ ಕರ್ನಾಟಕ ಸೇರಿದಂತೆ ಭಾರತದಾದ್ಯಂತ ನಿಯಮಿತವಾಗಿ ನಡೆಯುತ್ತಿವೆ! ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ದಲಿತರ ವಿರುದ್ಧದ ಪ್ರಮುಖ ಅಪರಾಧಗಳ ವಿರುದ್ಧ ನಿಮ್ಮ ಮಾಧ್ಯಮವು ಹೇಗೆ ದೊಡ್ಡ ವಿಷಯವಾಗಿದೆ ಆದರೆ ನಿಶ್ಚೇಷ್ಟಿತವಾಗಿದೆ ಮತ್ತು ಮೂಕರಾಗುತ್ತಿದೆ ಎಂದು ನನಗೆ ಆಶ್ಚರ್ಯವಾಗುತ್ತದೆ !!!

  2. After completion of 75 years still this is persist. Where this country heading.
    We talk about gandhi and ambedkar all big things.
    Teacher should hanged without any mercy.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...