Homeಮುಖಪುಟಸ್ಟೆರ್ಲೈಟ್ ಗೋಲಿಬಾರ್‌: ಪೊಲೀಸ್ ದುಷ್ಕೃತ್ಯ ಎತ್ತಿಹಿಡಿದ ತನಿಖಾ ಆಯೋಗ

ಸ್ಟೆರ್ಲೈಟ್ ಗೋಲಿಬಾರ್‌: ಪೊಲೀಸ್ ದುಷ್ಕೃತ್ಯ ಎತ್ತಿಹಿಡಿದ ತನಿಖಾ ಆಯೋಗ

- Advertisement -
- Advertisement -

2018ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಸ್ಟೆರ್ಲೈಟ್ ತಾಮ್ರ ಘಟಕದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ನಾಗರಿಕರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಕ್ಕೆ ಯಾವುದೇ ಪ್ರಚೋದನೆ ಕಾರಣವಾಗಿರಲಿಲ್ಲ. ಇದೊಂದು ವಿವೇಚನಾರಹಿತ ಕೃತ್ಯ ಎಂದು ಘಟನೆಯ ತನಿಖೆ ನಡೆಸುತ್ತಿರುವ ಆಯೋಗವು ತನ್ನ ಅಂತಿಮ ವರದಿಯಲ್ಲಿ ತಿಳಿಸಿದೆ.

2018ರ ಮೇ 22ರಂದು 13 ಪ್ರತಿಭಟನಾಕಾರರು ಪೋಲಿಸ್ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದರು ಇದು ದೇಶದ್ಯಾಂತ ಆಕ್ರೋಶಕ್ಕೆ ಕಾರಣವಾಯಿತು. ನಂತರ ಸ್ಥಾವರವನ್ನು ಮುಚ್ಚಲಾಯಿತು. ಸ್ಟೆರ್ಲೈಟ್ ತಾಮ್ರ ಸ್ಥಾವರವು ಸದರಿ ಪ್ರದೇಶದ ವಾಯು ಮತ್ತು ಜಲ ಸಂಪನ್ಮೂಲಗಳನ್ನು ಕಲುಷಿತಗೊಳಿಸಿದೆ ಎಂದು ಪ್ರತಿಭಟನಾಕಾರರು ಹೋರಾಟಕ್ಕಿಳಿದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ತಮ್ಮಿಂದ ದೂರದಲ್ಲಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ತಮ್ಮ ಅಡಗುತಾಣದಿಂದ ಗುಂಡು ಹಾರಿಸಿದ್ದಾರೆ” ಎಂದು ಆಯೋಗವು ತನ್ನ ವರದಿಯಲ್ಲಿ ತಿಳಿಸಿದೆ. “ಪ್ರತಿಭಟನಾಕಾರರ ನಡುವೆ ಇದ್ದ ತೀವ್ರವಾದಿಗಳ ಮೇಲೆ ಮಾತ್ರ ದಾಳಿ ಮಾಡಲಾಯಿತು ಎಂದು ಹೇಳಲು ಇಲ್ಲಿ ಯಾವುದೇ ದಾಖಲೆಗಳಿಲ್ಲ” ಎಂದು ತಿಳಿಸಿದೆ.

ಈ ಆಯೋಗದ ನೇತೃತ್ವವನ್ನು ಮದ್ರಾಸ್ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಅರುಣಾ ಜಗದೀಶನ್ ವಹಿಸಿದ್ದರು. ಆಯೋಗದ ವರದಿಯ ಸಾರವನ್ನು ‘ಫ್ರಂಟ್‌ಲೈನ್’ ಪ್ರಕಟಿಸಿದೆ. ಮೇ ತಿಂಗಳಲ್ಲಿ ತನ್ನ ವರದಿಯನ್ನು ತಮಿಳುನಾಡು ಸರ್ಕಾರಕ್ಕೆ ಆಯೋಗ ಸಲ್ಲಿಸಿದೆ.

ಆಗಿನ ಪೊಲೀಸ್ ಮಹಾನಿರೀಕ್ಷಕ (ದಕ್ಷಿಣ ವಲಯ) ಶೈಲೇಶ್ ಕುಮಾರ್ ಯಾದವ್, ಉಪ ಪೊಲೀಸ್ ಮಹಾನಿರೀಕ್ಷಕ (ತಿರುನೆಲ್ವೇಲಿ ರೇಂಜ್) ಕಪಿಲ್ ಕುಮಾರ್ ಸಿ ಸರತ್ಕರ್, ಪೊಲೀಸ್ ಅಧೀಕ್ಷಕ (ತೂತುಕುಡಿ) ಪಿ.ಮಹೇಂದ್ರನ್ ಮತ್ತು ಉಪ ಅಧೀಕ್ಷಕ ಲಿಂಗತಿರುಮಾರನ್ ಸೇರಿದಂತೆ ಉನ್ನತ ಅಧಿಕಾರಿಗಳನ್ನು ಆಯೋಗವು ತನ್ನ ವರದಿಯಲ್ಲಿ ಹೆಸರಿಸಿದೆ. ಇವರೇ ಫೈರಿಂಗ್‌ಗೆ ಹೊಣೆಗಾರರು ಎಂದಿದೆ.

“ಅಧಿಕಾರಿಗಳು ನಿಸ್ಸಂಶಯವಾಗಿ ಮಿತಿಯನ್ನು ಮೀರಿದ್ದಾರೆ” ಎಂಬ ಅಂಶವನ್ನು ಒತ್ತಿ ಹೇಳಿರುವ ಆಯೋಗವು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಮಿಳುನಾಡು ಸರ್ಕಾರವನ್ನು ಒತ್ತಾಯಿಸಿದೆ.

ಘಟನೆಯ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದ್ದು, ಶಾರ್ಪ್-ಶೂಟರ್‌ಗಳು ಶಾಮೀಲಾಗಿರುವುದನ್ನು ಆಯೋಗ ಗಮನಿಸಿರುವುದಾಗಿ ವರದಿಗಳಾಗಿವೆ.

ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದರೂ, ಅವರು ನಿರಾಯುಧರಾಗಿದ್ದರು. ಅಧಿಕಾರಿಗಳಿಗೆ ಯಾವುದೇ ಬೆದರಿಕೆಯನ್ನು ಅವರು ಒಡ್ಡಿರಲಿಲ್ಲ ಎಂದು ತನಿಖೆಯಲ್ಲಿ ಉಲ್ಲೇಖಿಸಲಾಗಿದೆ.

“ತೀವ್ರ ಗಾಯಕ್ಕೆ ಒಳಗಾದ ಮಣಿಕಂದನ್ ಅವರನ್ನು ಹೊರತುಪಡಿಸಿ ಯಾವುದೇ ಪೋಲೀಸ್‌ಗೆ ಮಾರಣಾಂತಿಕ ಗಾಯಗಳಾಗಿಲ್ಲ” ಎಂದು ಆಯೋಗ ಹೇಳಿದೆ. “ಪೊಲೀಸರು ಗಾಯಗೊಂಡಿದ್ದಾರೆಂದು ಹೇಳಿಕೊಳ್ಳುವ ಎಲ್ಲಾ ಪ್ರಕರಣಗಳಲ್ಲಿ, ಗಾಯಗಳು ತುಂಬಾ ಚಿಕ್ಕದಾಗಿರುತ್ತವೆ” ಎಂದು ವರದಿ ಹೇಳಿದೆ.

“ಪೊಲೀಸರು ತತ್‌ಕ್ಷಣಕ್ಕೆ ಗುಂಡು ಹಾರಿಸುವ ಬದಲು ಜನಸಂದಣಿಯನ್ನು ನಿಯಂತ್ರಿಸಲು ಮಾರಕವಲ್ಲದ ಆಯುಧಗಳನ್ನು ಮತ್ತು ವಿಧಾನಗಳನ್ನು ಬಳಸಬೇಕಿತ್ತು” ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿರಿ: ಸಂತ ಸೇವಾಲಾಲ್‌ರ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್‌ ಶಿಬಿರ ಆಯೋಜನೆ: ಬಂಜಾರ ಮುಖಂಡರ ಆಕ್ರೋಶ

ತಜ್ಞರ ವರದಿಗೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಸಂಘಟನೆ ಪೀಪಲ್ಸ್ ವಾಚ್‌ನ ಕಾರ್ಯನಿರ್ವಾಹಕ ನಿರ್ದೇಶಕ ಹೆನ್ರಿ ಟಿಫಾಗ್ನೆ ಪ್ರತಿಕ್ರಿಯಿಸಿ, “ಗುಂಡಿನ ದಾಳಿಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸುವುದಾಗಿ ದ್ರಾವಿಡ ಮುನ್ನೇತ್ರ ಕಳಗಂ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ ಯಾವುದೇ ಕ್ರಮ ಜರುಗಿಸಿಲ್ಲ” ಎಂದಿದ್ದಾರೆ.

“ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಮೂರು ತಿಂಗಳಾಗಿದೆ. ಆದರೆ ಅದನ್ನು ಇದುವರೆಗೆ ಅಸೆಂಬ್ಲಿಯಲ್ಲಿ ಚರ್ಚೆಗೆ ಇರಿಸಿಲ್ಲ. ಇದು ನಿಜಕ್ಕೂ ಬೇಸರ ತರಿಸಿದೆ” ಎಂದಿದ್ದಾರೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನಾಯಕ ಕೆ.ಬಾಲಕೃಷ್ಣನ್ ಪ್ರತಿಕ್ರಿಯಿಸಿ, “ತನಿಖಾ ವರದಿ ಹೊರಬಂದಿರುವುದು ಸಂತಸ ತಂದಿದೆ. ಆದರೆ ಆ ಸಮಯದಲ್ಲಿ ರಾಜ್ಯ ಸರ್ಕಾರಕ್ಕೆ ತಿಳಿಯದೆ ಬೆರಳೆಣಿಕೆಯಷ್ಟು ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ಮಾತ್ರ ಇಂತಹ ದೊಡ್ಡ ಗೋಲಿಬಾರ್‌ ನಡೆಸಿದ್ದಾರೆ ಎಂದು ನಂಬುವುದು ಕಷ್ಟ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...