Homeಮುಖಪುಟಸ್ಟೆರ್ಲೈಟ್ ಗೋಲಿಬಾರ್‌: ಪೊಲೀಸ್ ದುಷ್ಕೃತ್ಯ ಎತ್ತಿಹಿಡಿದ ತನಿಖಾ ಆಯೋಗ

ಸ್ಟೆರ್ಲೈಟ್ ಗೋಲಿಬಾರ್‌: ಪೊಲೀಸ್ ದುಷ್ಕೃತ್ಯ ಎತ್ತಿಹಿಡಿದ ತನಿಖಾ ಆಯೋಗ

- Advertisement -
- Advertisement -

2018ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಸ್ಟೆರ್ಲೈಟ್ ತಾಮ್ರ ಘಟಕದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ನಾಗರಿಕರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಕ್ಕೆ ಯಾವುದೇ ಪ್ರಚೋದನೆ ಕಾರಣವಾಗಿರಲಿಲ್ಲ. ಇದೊಂದು ವಿವೇಚನಾರಹಿತ ಕೃತ್ಯ ಎಂದು ಘಟನೆಯ ತನಿಖೆ ನಡೆಸುತ್ತಿರುವ ಆಯೋಗವು ತನ್ನ ಅಂತಿಮ ವರದಿಯಲ್ಲಿ ತಿಳಿಸಿದೆ.

2018ರ ಮೇ 22ರಂದು 13 ಪ್ರತಿಭಟನಾಕಾರರು ಪೋಲಿಸ್ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದರು ಇದು ದೇಶದ್ಯಾಂತ ಆಕ್ರೋಶಕ್ಕೆ ಕಾರಣವಾಯಿತು. ನಂತರ ಸ್ಥಾವರವನ್ನು ಮುಚ್ಚಲಾಯಿತು. ಸ್ಟೆರ್ಲೈಟ್ ತಾಮ್ರ ಸ್ಥಾವರವು ಸದರಿ ಪ್ರದೇಶದ ವಾಯು ಮತ್ತು ಜಲ ಸಂಪನ್ಮೂಲಗಳನ್ನು ಕಲುಷಿತಗೊಳಿಸಿದೆ ಎಂದು ಪ್ರತಿಭಟನಾಕಾರರು ಹೋರಾಟಕ್ಕಿಳಿದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ತಮ್ಮಿಂದ ದೂರದಲ್ಲಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ತಮ್ಮ ಅಡಗುತಾಣದಿಂದ ಗುಂಡು ಹಾರಿಸಿದ್ದಾರೆ” ಎಂದು ಆಯೋಗವು ತನ್ನ ವರದಿಯಲ್ಲಿ ತಿಳಿಸಿದೆ. “ಪ್ರತಿಭಟನಾಕಾರರ ನಡುವೆ ಇದ್ದ ತೀವ್ರವಾದಿಗಳ ಮೇಲೆ ಮಾತ್ರ ದಾಳಿ ಮಾಡಲಾಯಿತು ಎಂದು ಹೇಳಲು ಇಲ್ಲಿ ಯಾವುದೇ ದಾಖಲೆಗಳಿಲ್ಲ” ಎಂದು ತಿಳಿಸಿದೆ.

ಈ ಆಯೋಗದ ನೇತೃತ್ವವನ್ನು ಮದ್ರಾಸ್ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಅರುಣಾ ಜಗದೀಶನ್ ವಹಿಸಿದ್ದರು. ಆಯೋಗದ ವರದಿಯ ಸಾರವನ್ನು ‘ಫ್ರಂಟ್‌ಲೈನ್’ ಪ್ರಕಟಿಸಿದೆ. ಮೇ ತಿಂಗಳಲ್ಲಿ ತನ್ನ ವರದಿಯನ್ನು ತಮಿಳುನಾಡು ಸರ್ಕಾರಕ್ಕೆ ಆಯೋಗ ಸಲ್ಲಿಸಿದೆ.

ಆಗಿನ ಪೊಲೀಸ್ ಮಹಾನಿರೀಕ್ಷಕ (ದಕ್ಷಿಣ ವಲಯ) ಶೈಲೇಶ್ ಕುಮಾರ್ ಯಾದವ್, ಉಪ ಪೊಲೀಸ್ ಮಹಾನಿರೀಕ್ಷಕ (ತಿರುನೆಲ್ವೇಲಿ ರೇಂಜ್) ಕಪಿಲ್ ಕುಮಾರ್ ಸಿ ಸರತ್ಕರ್, ಪೊಲೀಸ್ ಅಧೀಕ್ಷಕ (ತೂತುಕುಡಿ) ಪಿ.ಮಹೇಂದ್ರನ್ ಮತ್ತು ಉಪ ಅಧೀಕ್ಷಕ ಲಿಂಗತಿರುಮಾರನ್ ಸೇರಿದಂತೆ ಉನ್ನತ ಅಧಿಕಾರಿಗಳನ್ನು ಆಯೋಗವು ತನ್ನ ವರದಿಯಲ್ಲಿ ಹೆಸರಿಸಿದೆ. ಇವರೇ ಫೈರಿಂಗ್‌ಗೆ ಹೊಣೆಗಾರರು ಎಂದಿದೆ.

“ಅಧಿಕಾರಿಗಳು ನಿಸ್ಸಂಶಯವಾಗಿ ಮಿತಿಯನ್ನು ಮೀರಿದ್ದಾರೆ” ಎಂಬ ಅಂಶವನ್ನು ಒತ್ತಿ ಹೇಳಿರುವ ಆಯೋಗವು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಮಿಳುನಾಡು ಸರ್ಕಾರವನ್ನು ಒತ್ತಾಯಿಸಿದೆ.

ಘಟನೆಯ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದ್ದು, ಶಾರ್ಪ್-ಶೂಟರ್‌ಗಳು ಶಾಮೀಲಾಗಿರುವುದನ್ನು ಆಯೋಗ ಗಮನಿಸಿರುವುದಾಗಿ ವರದಿಗಳಾಗಿವೆ.

ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದರೂ, ಅವರು ನಿರಾಯುಧರಾಗಿದ್ದರು. ಅಧಿಕಾರಿಗಳಿಗೆ ಯಾವುದೇ ಬೆದರಿಕೆಯನ್ನು ಅವರು ಒಡ್ಡಿರಲಿಲ್ಲ ಎಂದು ತನಿಖೆಯಲ್ಲಿ ಉಲ್ಲೇಖಿಸಲಾಗಿದೆ.

“ತೀವ್ರ ಗಾಯಕ್ಕೆ ಒಳಗಾದ ಮಣಿಕಂದನ್ ಅವರನ್ನು ಹೊರತುಪಡಿಸಿ ಯಾವುದೇ ಪೋಲೀಸ್‌ಗೆ ಮಾರಣಾಂತಿಕ ಗಾಯಗಳಾಗಿಲ್ಲ” ಎಂದು ಆಯೋಗ ಹೇಳಿದೆ. “ಪೊಲೀಸರು ಗಾಯಗೊಂಡಿದ್ದಾರೆಂದು ಹೇಳಿಕೊಳ್ಳುವ ಎಲ್ಲಾ ಪ್ರಕರಣಗಳಲ್ಲಿ, ಗಾಯಗಳು ತುಂಬಾ ಚಿಕ್ಕದಾಗಿರುತ್ತವೆ” ಎಂದು ವರದಿ ಹೇಳಿದೆ.

“ಪೊಲೀಸರು ತತ್‌ಕ್ಷಣಕ್ಕೆ ಗುಂಡು ಹಾರಿಸುವ ಬದಲು ಜನಸಂದಣಿಯನ್ನು ನಿಯಂತ್ರಿಸಲು ಮಾರಕವಲ್ಲದ ಆಯುಧಗಳನ್ನು ಮತ್ತು ವಿಧಾನಗಳನ್ನು ಬಳಸಬೇಕಿತ್ತು” ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿರಿ: ಸಂತ ಸೇವಾಲಾಲ್‌ರ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್‌ ಶಿಬಿರ ಆಯೋಜನೆ: ಬಂಜಾರ ಮುಖಂಡರ ಆಕ್ರೋಶ

ತಜ್ಞರ ವರದಿಗೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಸಂಘಟನೆ ಪೀಪಲ್ಸ್ ವಾಚ್‌ನ ಕಾರ್ಯನಿರ್ವಾಹಕ ನಿರ್ದೇಶಕ ಹೆನ್ರಿ ಟಿಫಾಗ್ನೆ ಪ್ರತಿಕ್ರಿಯಿಸಿ, “ಗುಂಡಿನ ದಾಳಿಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸುವುದಾಗಿ ದ್ರಾವಿಡ ಮುನ್ನೇತ್ರ ಕಳಗಂ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ ಯಾವುದೇ ಕ್ರಮ ಜರುಗಿಸಿಲ್ಲ” ಎಂದಿದ್ದಾರೆ.

“ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಮೂರು ತಿಂಗಳಾಗಿದೆ. ಆದರೆ ಅದನ್ನು ಇದುವರೆಗೆ ಅಸೆಂಬ್ಲಿಯಲ್ಲಿ ಚರ್ಚೆಗೆ ಇರಿಸಿಲ್ಲ. ಇದು ನಿಜಕ್ಕೂ ಬೇಸರ ತರಿಸಿದೆ” ಎಂದಿದ್ದಾರೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನಾಯಕ ಕೆ.ಬಾಲಕೃಷ್ಣನ್ ಪ್ರತಿಕ್ರಿಯಿಸಿ, “ತನಿಖಾ ವರದಿ ಹೊರಬಂದಿರುವುದು ಸಂತಸ ತಂದಿದೆ. ಆದರೆ ಆ ಸಮಯದಲ್ಲಿ ರಾಜ್ಯ ಸರ್ಕಾರಕ್ಕೆ ತಿಳಿಯದೆ ಬೆರಳೆಣಿಕೆಯಷ್ಟು ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ಮಾತ್ರ ಇಂತಹ ದೊಡ್ಡ ಗೋಲಿಬಾರ್‌ ನಡೆಸಿದ್ದಾರೆ ಎಂದು ನಂಬುವುದು ಕಷ್ಟ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...