Homeಮುಖಪುಟ‘ಕೇರಳ ಸವಾರಿ’ - ದೇಶದ ಮೊದಲ ಸರ್ಕಾರಿ ಸ್ವಾಮ್ಯದ ಆನ್‌ಲೈನ್ ಟ್ಯಾಕ್ಸಿ ಸೇವೆ ಉದ್ಘಾಟಿಸಿದ ಸಿಎಂ...

‘ಕೇರಳ ಸವಾರಿ’ – ದೇಶದ ಮೊದಲ ಸರ್ಕಾರಿ ಸ್ವಾಮ್ಯದ ಆನ್‌ಲೈನ್ ಟ್ಯಾಕ್ಸಿ ಸೇವೆ ಉದ್ಘಾಟಿಸಿದ ಸಿಎಂ ಪಿಣರಾಯಿ ವಿಜಯನ್

- Advertisement -
- Advertisement -

ರಾಜ್ಯ ಸರ್ಕಾರದ ಒಡೆತನದ ದೇಶದ ಮೊದಲ ಆನ್‌ಲೈನ್ ಟ್ಯಾಕ್ಸಿ ಸೇವೆ ‘ಕೇರಳ ಸವಾರಿ’ಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಉದ್ಘಾಟಿಸಿದ್ದಾರೆ. ‘ಕೇರಳ ಸವಾರಿ’ ಪ್ರಯಾಣಿಕರಿಗೆ ನ್ಯಾಯಯುತ ಮತ್ತು ಯೋಗ್ಯ ಸೇವೆಯನ್ನು ಮತ್ತು ಆಟೋ ಟ್ಯಾಕ್ಸಿ ಕಾರ್ಮಿಕರಿಗೆ ನ್ಯಾಯಯುತ ಸಂಭಾವನೆಯನ್ನು ಖಾತ್ರಿಗೊಳಿಸುತ್ತದೆ ಎಂದು ಸರ್ಕಾರ ಹೇಳಿದೆ. ರಾಜ್ಯದ ಕಾರ್ಮಿಕ ಇಲಾಖೆಯ ನೇತೃತ್ವದಲ್ಲಿ ಮೋಟಾರು ಕಾರ್ಮಿಕರ ಕಲ್ಯಾಣ ಮಂಡಳಿಯು ಈ ಸೇವೆಯನ್ನು ಪ್ರಾರಂಭಿಸಿದೆ. ಕೇರಳ ಸವಾರಿ ಸಾರ್ವಜನಿಕರಿಗೆ ಸರ್ಕಾರಿ ಅನುಮೋದಿತ ದರದಲ್ಲಿ ಸುರಕ್ಷಿತ ಪ್ರಯಾಣವನ್ನು ಖಚಿತಪಡಿಸುತ್ತದೆ ಸರ್ಕಾರ ಹೇಳಿದೆ.

ಇತರ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಂತೆ ಕೇರಳ ಸವಾರಿ ದರಗಳಲ್ಲಿ ಯಾವುದೇ ಏರಿಳಿತ ಇರುವುದಿಲ್ಲ. ಇತರ ಆನ್‌ಲೈನ್ ಟ್ಯಾಕ್ಸಿ ಕಂಪೆನಿಗಳು ಜನರು ಹೆಚ್ಚಾಗಿ ಓಡಾಡುವ (ಪೀಕ್ ಅವರ್‌ನಲ್ಲಿ) ಸಮಯದಲ್ಲಿ ಸೇವೆಗಳ ಶುಲ್ಕವನ್ನು ಒಂದೂವರೆ ಪಟ್ಟು ಹೆಚ್ಚಿಸುತ್ತವೆ. ಆದರೆ ಇದರಿಂದ ಪ್ರಯಾಣಿಕರಿಗಾಗಲಿ, ಡ್ರೈವರ್‌ಗಳಿಗೆ ಯಾವುದೆ ಪ್ರಯೋಜನವಾಗುವುದಿಲ್ಲ. ಕೇರಳ ಸವಾರಿಯು ಸರ್ಕಾರ ನಿಗದಿಪಡಿಸಿದ ದರಕ್ಕಿಂತ 8% ಸೇವಾ ಶುಲ್ಕವನ್ನು ಮಾತ್ರ ವಿಧಿಸುತ್ತದೆ. ಇತರೆ ಆನ್‌ಲೈನ್ ಟ್ಯಾಕ್ಸಿ ಕಂಪೆನಿಗಳ ಸೇವೆಗಳಲ್ಲಿ ಇದು 20%ದಿಂದ 30ರಷ್ಟಿರುತ್ತದೆ. ಈ ಯೋಜನೆಯ ಅನುಷ್ಠಾನಕ್ಕೆ ಮತ್ತು ಪ್ರಯಾಣಿಕರಿಗೆ ಮತ್ತು ಚಾಲಕರಿಗೆ ಪ್ರಚಾರದ ಪ್ರೋತ್ಸಾಹಕ್ಕಾಗಿ ಸೇವಾ ಶುಲ್ಕವಾಗಿ ಸ್ವೀಕರಿಸಿದ ಮೊತ್ತವನ್ನು ಬಳಸಲು ನಿರ್ಧರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇರಳ ಸವಾರಿಯು ಮಹಿಳೆಯರು, ಮಕ್ಕಳು ಮತ್ತು ಹಿರಿಯ ನಾಗರಿಕರಿಗೆ ಸುರಕ್ಷಿತ ಮತ್ತು ವಿಶ್ವಾಸಾರ್ಹ ಆನ್‌ಲೈನ್ ಸೇವೆಯಾಗಲಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಅಪ್ಲಿಕೇಶನ್ ವಿನ್ಯಾಸ ಮತ್ತು ಚಾಲಕ ನೋಂದಣಿಯಲ್ಲಿ ಈ ಪರಿಗಣನೆಗೆ ಪ್ರಾಮುಖ್ಯತೆ ನೀಡಲಾಗಿದೆ. ಯೋಜನೆಗೆ ಸೇರುವ ಚಾಲಕರಿಗೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರ ಕಡ್ಡಾಯವಾಗಿದ್ದು, ಸೂಕ್ತ ತರಬೇತಿಯನ್ನೂ ನೀಡಲಾಗುತ್ತದೆ.

ಅಪ್ಲಿಕೇಶನ್‌ನಲ್ಲಿ ‘ಪ್ಯಾನಿಕ್ ಬಟನ್’ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಕಾರು ಅಪಘಾತದ ಸಂದರ್ಭದಲ್ಲಿ ಅಥವಾ ಯಾವುದೇ ಅಪಾಯದ ಸಂದರ್ಭದಲ್ಲಿ ಈ ಗುಂಡಿಯನ್ನು ಒತ್ತಬಹುದು. ಇದು ಸಂಪೂರ್ಣವಾಗಿ ಖಾಸಗಿಯಾಗಿ ಇರಲಿದ್ದು, ಚಾಲಕ ಪ್ಯಾನಿಕ್ ಬಟನ್ ಒತ್ತಿದರೆ ಪ್ರಯಾಣಿಕರಿಗೆ ತಿಳಿಯುವುದಿಲ್ಲ ಅಥವಾ ಪ್ರಯಾಣಿಕರು ಪ್ಯಾನಿಕ್ ಬಟನ್ ಒತ್ತಿದರೆ ಚಾಲಕನಿಗೆ ತಿಳಿಯುವುದಿಲ್ಲ. ಈ ಗುಂಡಿಯನ್ನು ಒತ್ತಿದಾಗ, ಪೊಲೀಸ್, ಅಗ್ನಿಶಾಮಕ ದಳ ಮತ್ತು ಮೋಟಾರು ವಾಹನ ಇಲಾಖೆಗಳನ್ನು ಆಯ್ಕೆ ಮಾಡಬಹುದಾಗಿದೆ. ಒಂದು ವೇಳೆ ಯಾವುದನ್ನೂ ಆಯ್ಕೆ ಮಾಡಲು ಸಾಧ್ಯವಾಗದಂತಹ ಅಪಾಯಕಾರಿ ಪರಿಸ್ಥಿತಿಯಲ್ಲಿದ್ದರೆ, ಬಟನ್ ಒತ್ತಿದರೆ ನೇರವಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಸಂಪರ್ಕ ಪಡೆಯುವಂತೆ ಅಪ್ಲಿಕೇಷನ್ ಅನ್ನು ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಕೇರಳದ ಎಡರಂಗ ಸರ್ಕಾರ ಉರುಳಿಸಲು ಕೇಂದ್ರ ಸರ್ಕಾರ ರಾಜ್ಯಪಾಲರನ್ನು ಬಳಸುತ್ತಿದೆ: ಕೊಡಿಯೇರಿ ಬಾಲಕೃಷ್ಣನ್ ಆರೋಪ

ಸಬ್ಸಿಡಿ ದರದಲ್ಲಿ ವಾಹನಗಳಿಗೂ ಜಿಪಿಎಸ್ ಅಳವಡಿಸಲು ನಿರ್ಧರಿಸಲಾಗಿದೆ. ಇದನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುವುದು ಎಂದು ಸರ್ಕಾರ ಹೇಳಿದೆ. ಸೇವೆಗಾಗಿ 24 ಗಂಟೆಗಳ ಕಾಲ್ ಸೆಂಟರ್ ಸಿದ್ಧಪಡಿಸಲಾಗಿದ್ದು, ಮೋಟಾರು ಕಾರ್ಮಿಕರ ಕಲ್ಯಾಣ ಮಂಡಳಿಯ ಜಿಲ್ಲಾ ಕಚೇರಿಯಲ್ಲಿ ಅತ್ಯಾಧುನಿಕ ಕಾಲ್ ಸೆಂಟರ್ ಕಾರ್ಯನಿರ್ವಹಿಸುತ್ತಿದೆ.

ಕಾಲ್ ಸೆಂಟರ್ ಸೇವೆಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸುವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಮೊದಲ ಹಂತದ ಯೋಜನೆಯನ್ನು ತಿರುವನಂತಪುರಂ ನಗರದಲ್ಲಿ ಜಾರಿಗೊಳಿಸಲಾಗಿದೆ. ಮೊದಲ ಹಂತದ ಮೌಲ್ಯಮಾಪನದ ನಂತರ ಯೋಜನೆಯನ್ನು ಸಂಪೂರ್ಣ ರಾಜ್ಯದಲ್ಲಿ ದೋಷರಹಿತ ರೀತಿಯಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಸರ್ಕಾರ ಹೇಳಿದೆ. ಮುಂದಿನ ಒಂದು ತಿಂಗಳೊಳಗೆ ಕೊಲ್ಲಂ, ಎರ್ನಾಕುಲಂ, ತ್ರಿಶೂರ್, ಕೋಝಿಕ್ಕೋಡ್ ಮತ್ತು ಕಣ್ಣೂರು ಪುರಸಭೆಯ ವ್ಯಾಪ್ತಿಯನ್ನು ತಲುಪಲಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...