Homeಮುಖಪುಟ‘ಕೇರಳ ಸವಾರಿ’ - ದೇಶದ ಮೊದಲ ಸರ್ಕಾರಿ ಸ್ವಾಮ್ಯದ ಆನ್‌ಲೈನ್ ಟ್ಯಾಕ್ಸಿ ಸೇವೆ ಉದ್ಘಾಟಿಸಿದ ಸಿಎಂ...

‘ಕೇರಳ ಸವಾರಿ’ – ದೇಶದ ಮೊದಲ ಸರ್ಕಾರಿ ಸ್ವಾಮ್ಯದ ಆನ್‌ಲೈನ್ ಟ್ಯಾಕ್ಸಿ ಸೇವೆ ಉದ್ಘಾಟಿಸಿದ ಸಿಎಂ ಪಿಣರಾಯಿ ವಿಜಯನ್

- Advertisement -
- Advertisement -

ರಾಜ್ಯ ಸರ್ಕಾರದ ಒಡೆತನದ ದೇಶದ ಮೊದಲ ಆನ್‌ಲೈನ್ ಟ್ಯಾಕ್ಸಿ ಸೇವೆ ‘ಕೇರಳ ಸವಾರಿ’ಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಉದ್ಘಾಟಿಸಿದ್ದಾರೆ. ‘ಕೇರಳ ಸವಾರಿ’ ಪ್ರಯಾಣಿಕರಿಗೆ ನ್ಯಾಯಯುತ ಮತ್ತು ಯೋಗ್ಯ ಸೇವೆಯನ್ನು ಮತ್ತು ಆಟೋ ಟ್ಯಾಕ್ಸಿ ಕಾರ್ಮಿಕರಿಗೆ ನ್ಯಾಯಯುತ ಸಂಭಾವನೆಯನ್ನು ಖಾತ್ರಿಗೊಳಿಸುತ್ತದೆ ಎಂದು ಸರ್ಕಾರ ಹೇಳಿದೆ. ರಾಜ್ಯದ ಕಾರ್ಮಿಕ ಇಲಾಖೆಯ ನೇತೃತ್ವದಲ್ಲಿ ಮೋಟಾರು ಕಾರ್ಮಿಕರ ಕಲ್ಯಾಣ ಮಂಡಳಿಯು ಈ ಸೇವೆಯನ್ನು ಪ್ರಾರಂಭಿಸಿದೆ. ಕೇರಳ ಸವಾರಿ ಸಾರ್ವಜನಿಕರಿಗೆ ಸರ್ಕಾರಿ ಅನುಮೋದಿತ ದರದಲ್ಲಿ ಸುರಕ್ಷಿತ ಪ್ರಯಾಣವನ್ನು ಖಚಿತಪಡಿಸುತ್ತದೆ ಸರ್ಕಾರ ಹೇಳಿದೆ.

ಇತರ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಂತೆ ಕೇರಳ ಸವಾರಿ ದರಗಳಲ್ಲಿ ಯಾವುದೇ ಏರಿಳಿತ ಇರುವುದಿಲ್ಲ. ಇತರ ಆನ್‌ಲೈನ್ ಟ್ಯಾಕ್ಸಿ ಕಂಪೆನಿಗಳು ಜನರು ಹೆಚ್ಚಾಗಿ ಓಡಾಡುವ (ಪೀಕ್ ಅವರ್‌ನಲ್ಲಿ) ಸಮಯದಲ್ಲಿ ಸೇವೆಗಳ ಶುಲ್ಕವನ್ನು ಒಂದೂವರೆ ಪಟ್ಟು ಹೆಚ್ಚಿಸುತ್ತವೆ. ಆದರೆ ಇದರಿಂದ ಪ್ರಯಾಣಿಕರಿಗಾಗಲಿ, ಡ್ರೈವರ್‌ಗಳಿಗೆ ಯಾವುದೆ ಪ್ರಯೋಜನವಾಗುವುದಿಲ್ಲ. ಕೇರಳ ಸವಾರಿಯು ಸರ್ಕಾರ ನಿಗದಿಪಡಿಸಿದ ದರಕ್ಕಿಂತ 8% ಸೇವಾ ಶುಲ್ಕವನ್ನು ಮಾತ್ರ ವಿಧಿಸುತ್ತದೆ. ಇತರೆ ಆನ್‌ಲೈನ್ ಟ್ಯಾಕ್ಸಿ ಕಂಪೆನಿಗಳ ಸೇವೆಗಳಲ್ಲಿ ಇದು 20%ದಿಂದ 30ರಷ್ಟಿರುತ್ತದೆ. ಈ ಯೋಜನೆಯ ಅನುಷ್ಠಾನಕ್ಕೆ ಮತ್ತು ಪ್ರಯಾಣಿಕರಿಗೆ ಮತ್ತು ಚಾಲಕರಿಗೆ ಪ್ರಚಾರದ ಪ್ರೋತ್ಸಾಹಕ್ಕಾಗಿ ಸೇವಾ ಶುಲ್ಕವಾಗಿ ಸ್ವೀಕರಿಸಿದ ಮೊತ್ತವನ್ನು ಬಳಸಲು ನಿರ್ಧರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇರಳ ಸವಾರಿಯು ಮಹಿಳೆಯರು, ಮಕ್ಕಳು ಮತ್ತು ಹಿರಿಯ ನಾಗರಿಕರಿಗೆ ಸುರಕ್ಷಿತ ಮತ್ತು ವಿಶ್ವಾಸಾರ್ಹ ಆನ್‌ಲೈನ್ ಸೇವೆಯಾಗಲಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಅಪ್ಲಿಕೇಶನ್ ವಿನ್ಯಾಸ ಮತ್ತು ಚಾಲಕ ನೋಂದಣಿಯಲ್ಲಿ ಈ ಪರಿಗಣನೆಗೆ ಪ್ರಾಮುಖ್ಯತೆ ನೀಡಲಾಗಿದೆ. ಯೋಜನೆಗೆ ಸೇರುವ ಚಾಲಕರಿಗೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರ ಕಡ್ಡಾಯವಾಗಿದ್ದು, ಸೂಕ್ತ ತರಬೇತಿಯನ್ನೂ ನೀಡಲಾಗುತ್ತದೆ.

ಅಪ್ಲಿಕೇಶನ್‌ನಲ್ಲಿ ‘ಪ್ಯಾನಿಕ್ ಬಟನ್’ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಕಾರು ಅಪಘಾತದ ಸಂದರ್ಭದಲ್ಲಿ ಅಥವಾ ಯಾವುದೇ ಅಪಾಯದ ಸಂದರ್ಭದಲ್ಲಿ ಈ ಗುಂಡಿಯನ್ನು ಒತ್ತಬಹುದು. ಇದು ಸಂಪೂರ್ಣವಾಗಿ ಖಾಸಗಿಯಾಗಿ ಇರಲಿದ್ದು, ಚಾಲಕ ಪ್ಯಾನಿಕ್ ಬಟನ್ ಒತ್ತಿದರೆ ಪ್ರಯಾಣಿಕರಿಗೆ ತಿಳಿಯುವುದಿಲ್ಲ ಅಥವಾ ಪ್ರಯಾಣಿಕರು ಪ್ಯಾನಿಕ್ ಬಟನ್ ಒತ್ತಿದರೆ ಚಾಲಕನಿಗೆ ತಿಳಿಯುವುದಿಲ್ಲ. ಈ ಗುಂಡಿಯನ್ನು ಒತ್ತಿದಾಗ, ಪೊಲೀಸ್, ಅಗ್ನಿಶಾಮಕ ದಳ ಮತ್ತು ಮೋಟಾರು ವಾಹನ ಇಲಾಖೆಗಳನ್ನು ಆಯ್ಕೆ ಮಾಡಬಹುದಾಗಿದೆ. ಒಂದು ವೇಳೆ ಯಾವುದನ್ನೂ ಆಯ್ಕೆ ಮಾಡಲು ಸಾಧ್ಯವಾಗದಂತಹ ಅಪಾಯಕಾರಿ ಪರಿಸ್ಥಿತಿಯಲ್ಲಿದ್ದರೆ, ಬಟನ್ ಒತ್ತಿದರೆ ನೇರವಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಸಂಪರ್ಕ ಪಡೆಯುವಂತೆ ಅಪ್ಲಿಕೇಷನ್ ಅನ್ನು ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಕೇರಳದ ಎಡರಂಗ ಸರ್ಕಾರ ಉರುಳಿಸಲು ಕೇಂದ್ರ ಸರ್ಕಾರ ರಾಜ್ಯಪಾಲರನ್ನು ಬಳಸುತ್ತಿದೆ: ಕೊಡಿಯೇರಿ ಬಾಲಕೃಷ್ಣನ್ ಆರೋಪ

ಸಬ್ಸಿಡಿ ದರದಲ್ಲಿ ವಾಹನಗಳಿಗೂ ಜಿಪಿಎಸ್ ಅಳವಡಿಸಲು ನಿರ್ಧರಿಸಲಾಗಿದೆ. ಇದನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುವುದು ಎಂದು ಸರ್ಕಾರ ಹೇಳಿದೆ. ಸೇವೆಗಾಗಿ 24 ಗಂಟೆಗಳ ಕಾಲ್ ಸೆಂಟರ್ ಸಿದ್ಧಪಡಿಸಲಾಗಿದ್ದು, ಮೋಟಾರು ಕಾರ್ಮಿಕರ ಕಲ್ಯಾಣ ಮಂಡಳಿಯ ಜಿಲ್ಲಾ ಕಚೇರಿಯಲ್ಲಿ ಅತ್ಯಾಧುನಿಕ ಕಾಲ್ ಸೆಂಟರ್ ಕಾರ್ಯನಿರ್ವಹಿಸುತ್ತಿದೆ.

ಕಾಲ್ ಸೆಂಟರ್ ಸೇವೆಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸುವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಮೊದಲ ಹಂತದ ಯೋಜನೆಯನ್ನು ತಿರುವನಂತಪುರಂ ನಗರದಲ್ಲಿ ಜಾರಿಗೊಳಿಸಲಾಗಿದೆ. ಮೊದಲ ಹಂತದ ಮೌಲ್ಯಮಾಪನದ ನಂತರ ಯೋಜನೆಯನ್ನು ಸಂಪೂರ್ಣ ರಾಜ್ಯದಲ್ಲಿ ದೋಷರಹಿತ ರೀತಿಯಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಸರ್ಕಾರ ಹೇಳಿದೆ. ಮುಂದಿನ ಒಂದು ತಿಂಗಳೊಳಗೆ ಕೊಲ್ಲಂ, ಎರ್ನಾಕುಲಂ, ತ್ರಿಶೂರ್, ಕೋಝಿಕ್ಕೋಡ್ ಮತ್ತು ಕಣ್ಣೂರು ಪುರಸಭೆಯ ವ್ಯಾಪ್ತಿಯನ್ನು ತಲುಪಲಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...