Homeಮುಖಪುಟ‘ಪೆಯ್ಡ್‌ ನ್ಯೂಸ್ ಅಲ್ಲ’: ದೆಹಲಿ ಶಾಲೆಗಳ ವರದಿ ಬಗ್ಗೆ ಬಿಜೆಪಿ ಆರೋಪ ತಳ್ಳಿಹಾಕಿದ ನ್ಯೂಯಾರ್ಕ್ ಟೈಮ್ಸ್

‘ಪೆಯ್ಡ್‌ ನ್ಯೂಸ್ ಅಲ್ಲ’: ದೆಹಲಿ ಶಾಲೆಗಳ ವರದಿ ಬಗ್ಗೆ ಬಿಜೆಪಿ ಆರೋಪ ತಳ್ಳಿಹಾಕಿದ ನ್ಯೂಯಾರ್ಕ್ ಟೈಮ್ಸ್

- Advertisement -
- Advertisement -

ದೆಹಲಿಯ ಶಿಕ್ಷಣ ವ್ಯವಸ್ಥೆಯ ಕುರಿತು ಅಮೆರಿಕದ ಖ್ಯಾತ ಪತ್ರಿಕೆ ‘ನ್ಯೂಯಾರ್ಕ್ ಟೈಮ್ಸ್‌’ ಮುಖಪುಟದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಾಗಿರುವ ಮನೀಶ್ ಸಿಸೋಡಿಯಾ ಅವರ ಚಿತ್ರ ಸಮೇತ ವರದಿಯೊಂದನ್ನು ಪ್ರಕಟಿಸಿತ್ತು. ಆದರೆ ಈ ವರದಿಯನ್ನು ಆಮ್‌ ಆದ್ಮಿ ಪಕ್ಷವೂ ಪತ್ರಿಕೆಗೆ ಹಣ ನೀಡಿ ಸುದ್ದಿ (ಪೆಯ್ಡ್‌ ನ್ಯೂಸ್ ನ್ಯೂಸ್) ಮಾಡಿಸಿದೆ ಎಂದು ಬಿಜೆಪಿ ಆರೋಪಿಸಿತ್ತು. ಬಿಜೆಪಿಯ ಈ ಆರೋಪವನ್ನು ಪತ್ರಿಕೆ ನಿರಾಕರಿಸಿದ್ದು, ‘ವರದಿಯನ್ನು ಯಾವುದೆ ಪಕ್ಷಪಾತವಿಲ್ಲದೆ ಗ್ರೌಂಡ್‌ ರಿಪೋರ್ಟ್ ಆಧಾರದಲ್ಲಿ ಮಾಡಲಾಗಿದೆ’ ಎಂದು ಹೇಳಿದೆ.

ನ್ಯೂಯಾರ್ಕ್ ಟೈಮ್ಸ್‌ನ ಸಂವಹನ ನಿರ್ದೇಶಕ ನಿಕೋಲ್ ಟೈಲರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ದೆಹಲಿಯ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವ ಪ್ರಯತ್ನಗಳ ಕುರಿತ ನಮ್ಮ ವರದಿಯು ನಿಷ್ಪಕ್ಷಪಾತ, ಗೌಂಡ್‌ ರಿಪೋರ್ಟ್‌ ಅನ್ನು ಆಧರಿಸಿ ಬರೆಯಲಾಗಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶಿಕ್ಷಣದ ಬಗ್ಗೆ ನ್ಯೂಯಾರ್ಕ್‌ ಟೈಮ್ಸ್‌‌ ಹಲವು ವರ್ಷಗಳಿಂದ ವರದಿ ಮಾಡಲುತ್ತಲೆ ಬಂದಿದೆ. ನಮ್ಮ ಪತ್ರಿಕೋದ್ಯಮ ಯಾವಾಗಲೂ ಸ್ವತಂತ್ರವಾಗಿದ್ದು, ರಾಜಕೀಯ ಅಥವಾ ಜಾಹೀರಾತುದಾರರ ಪ್ರಭಾವದಿಂದ ಮುಕ್ತವಾಗಿದೆ” ಎಂದು ನಿಕೋಲ್ ಟೈಲರ್ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ದೆಹಲಿ ಶಿಕ್ಷಣ ಮಾದರಿಯ ಬಗ್ಗೆ ನ್ಯೂಯಾರ್ಕ್ ಟೈಮ್ಸ್ ತನ್ನ ವರದಿಯನ್ನು ಮೊದಲು ಆನ್‌ಲೈನ್‌ನಲ್ಲಿ ಆಗಸ್ಟ್ 16 ರಂದು ಮತ್ತು ಅದರ ಅಂತರ್‌‌ರಾಷ್ಟ್ರೀಯ ಆವೃತ್ತಿಯ ಮೊದಲ ಪುಟದಲ್ಲಿ ಆಗಸ್ಟ್ 18 ರಂದು ಪ್ರಕಟಿಸಿತ್ತು. ಶಿಕ್ಷಣದ ಸುಧಾರಣೆಗಾಗಿ ಆಡಳಿತಾರೂಢ ಆಮ್ ಆದ್ಮಿ ಪಕ್ಷವನ್ನು ವರದಿಯು ಶ್ಲಾಘಿಸಿತ್ತು. ವಿಶೇಷವಾಗಿ 2015 ರಿಂದ ಸರ್ಕಾರಿ ಶಾಲೆಗಳನ್ನು ಅಮೂಲಾಗ್ರವಾಗಿ ಪರಿವರ್ತಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಉಲ್ಲೇಖಿಸಿತ್ತು.

ಈ ನಡುವೆ ಶುಕ್ರವಾರದಂದು ಹೊಸ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ(ಸಿಬಿಐ)ವು ಸಿಸೋಡಿಯಾ ಅವರ ಮನೆ ಮತ್ತು ಇತರ 20 ಸ್ಥಳಗಳನ್ನು ಶೋಧಿಸಿದೆ.

ದಿ ನ್ಯೂಯಾರ್ಕ್ ಟೈಮ್ಸ್ ಲೇಖನವನ್ನು ಪ್ರಕಟಿಸಿದ ಕೆಲವು ದಿನಗಳ ನಂತರ ಈ ದಾಳಿ ನಡೆದಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. “ದೊಡ್ಡ ಪತ್ರಿಕೆಯೊಂದು ದೆಹಲಿಯ ಶಿಕ್ಷಣ ಕ್ರಾಂತಿಯ ಬಗ್ಗೆ ಬರೆದಿದ್ದು, ಸಿಸೋಡಿಯಾ ಅವರ ಫೋಟೋಗಳನ್ನು ಕೂಡಾ ಪ್ರಕಟಿಸಿದೆ” ಎಂದು ಕೇಜ್ರಿವಾಲ್ ಅವರು ಆನ್‌ಲೈನ್‌ ಭಾಷಣವೊಂದರಲ್ಲಿ ಹೇಳಿದ್ದರು.

ಇದನ್ನೂ ಓದಿ: ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

ಆದಾಗ್ಯೂ, ಈ ಲೇಖನವು ಆಮ್‌ ಆದ್ಮಿ ಪಕ್ಷ ಹಣ ಪಾವತಿಸಿ ಬರೆಸಿದ ವರದಿ ಎಂದು ಬಿಜೆಪಿ ಹೇಳಿಕೊಂಡಿದೆ.

“ದೆಹಲಿಯಲ್ಲಿ ಅಸ್ತಿತ್ವದಲ್ಲಿಲ್ಲದ ಶಿಕ್ಷಣ ಮಾದರಿಯ ಒಂದೇ ರೀತಿಯ ಲೇಖನವನ್ನು ನ್ಯೂಯಾರ್ಕ್ ಟೈಮ್ಸ್ ಮತ್ತು ಖಲೀಜ್ ಟೈಮ್ಸ್ ಪ್ರಕಟಿಸಿದೆ. ಅದರ ಎಲ್ಲಾ ಪದಗಳೂ ಒಂದೇ ರೀತಿ ಇದ್ದು, ಒಂದೇ ವ್ಯಕ್ತಿ ಬರೆದಿದ್ದಾರೆ. ಒಂದೇ ರೀತಿಯ ಅದರಲ್ಲೂ ಒಂದು ಖಾಸಗಿ ಶಾಲೆಯ ಚಿತ್ರವನ್ನು ಬಳಸಲಾಗಿದೆ. ಇದು ಹೇಗೆ ಸಾಧ್ಯ” ಎಂದು ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. “ಅರವಿಂದ್ ಕೇಜ್ರಿವಾಲ್ ಅವರು ಹಣ ನೀಡಿ ಪ್ರಚಾರ ಮಾಡುತ್ತಾರೆಯೆ ವಿನಃ ಬೇರೇನು ಅಲ್ಲ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಮುಖಂಡ ಪರ್ವೇಶ್ ವರ್ಮಾ ಅವರು ಎರಡೂ ಪತ್ರಿಕೆಗಳಲ್ಲಿ ಪ್ರಕಟವಾದ ಲೇಖನದ ಪ್ರತಿಗಳನ್ನು ತೋರಿಸಿದ್ದಾರೆ. “ಇದು ಎರಡೂ ಪತ್ರಿಕೆಗಳ ಫೋಟೋ. ಎರಡೂ ಪತ್ರಿಕೆಗಳಲ್ಲಿ ಒಬ್ಬರೇ ವರದಿಗಾರ, ಒಂದೇ ರೀತಿಯ ಲೇಖನ, ಪದಗಳೂ ಒಂದೇ ರೀತಿಯಿದೆ, ಒಂದೇ ರೀತಿಯ ಆರು ಚಿತ್ರಗಳು ಎರಡರಲ್ಲೂ ಇವೆ. ಈ ರೀತಿ ಎಂದಾದರೂ ಸಂಭವಿಸುತ್ತದೆಯೇ?” ಎಂದು ಪ್ರಶ್ನಿಸಿದ್ದರು.

ಆದರೆ ಬಿಜೆಪಿಯ ಈ ಆರೋಪಕ್ಕೆ ನ್ಯೂಯಾರ್ಕ್‌ ಟೈಮ್ಸ್‌ ಪ್ರತಿಕ್ರಿಯಿಸಿದೆ. ಇತರ ಪತ್ರಿಕೆಗಳು ವಾಡಿಕೆಯಂತೆ ನಮ್ಮ ಬರಹಗಳನ್ನು ಮರುಪ್ರಕಟನೆ ಮಾಡುವ ಪರವಾನಿಗೆಯನ್ನು ನ್ಯೂಯಾರ್ಕ್ ಟೈಮ್ಸ್ ನೀಡಿದೆ ಎಂದು ನಿಕೋಲ್ ಟೈಲರ್ ಹೇಳಿದ್ದಾರೆ.

ಇದನ್ನೂ ಓದಿ: ‘ಮಿಸ್ಟರ್ ಮೋದಿ ಮೌನ ಮುರಿಯಬೇಕಿದೆ’ – ನ್ಯೂಯಾರ್ಕ್ ಟೈಮ್ಸ್

ಖಲೀಜ್ ಟೈಮ್ಸ್ ಲೇಖನವು ಸಿಂಡಿಕೇಟೆಡ್ ಆಗಿದ್ದು ಅದರ ಬರಹವು ನ್ಯೂಯಾರ್ಕ್ ಟೈಮ್ಸ್‌ಗೆ ಸಲ್ಲುತ್ತದೆ ಎಂದು ಆಮ್ ಆದ್ಮಿ ಪಕ್ಷವೂ ಸ್ಪಷ್ಟಪಡಿಸಿದೆ. ಸುದ್ದಿ ಸಿಂಡಿಕೇಶನ್ ಸೇವೆಗಳ ಅಡಿಯಲ್ಲಿ ಪತ್ರಿಕೆಗಳು ತಮ್ಮ ಚಂದಾದಾರಿಕೆಯ ಮೂಲಕ ಮತ್ತೊಂದು ಪತ್ರಿಕೆಯ ಬರಹಗಳನ್ನು ಮರುಬಳಕೆ ಮಾಡುವುದು ಸಾಮಾನ್ಯವಾಗಿದೆ.

ಲೇಖನವನ್ನು ಹಣ ನೀಡಿ ಬರೆಸಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ, “ಬಿಜೆಪಿ ನಗೆಪಾಟಲಿಗೀಡಾಗಿದೆ. ಪತ್ರಿಕೆಯಲ್ಲಿ ಯಾವುದೇ ಬಿಜೆಪಿ ನಾಯಕರ ಸುದ್ದಿಯನ್ನು ಮುದ್ರಿಸಲಾಗಿಲ್ಲ. ಬಿಜೆಪಿ ಜಗತ್ತಿನ ಅತಿ ದೊಡ್ಡ ಪಕ್ಷ ಎಂದು ಕರೆದುಕೊಳ್ಳುತ್ತಿದ್ದು, ಅತ್ಯಂತ ಶ್ರೀಮಂತ ರಾಜಕೀಯ ಪಕ್ಷ. ಯಾರಾದರೂ ಪತ್ರಿಕೆಯನ್ನು ಖರೀದಿಸಲು ಸಾಧ್ಯವಾದರೆ ಅವರು ಪ್ರತಿದಿನ ನ್ಯೂಯಾರ್ಕ್ ಟೈಮ್ಸ್‌ನ ಮೊದಲ ಪುಟದಲ್ಲಿ ಕಾಣಿಸಿಕೊಳ್ಳಬೇಕು” ಎಂದು ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ನಾಯಕ ಸೌರಭ್ ಭಾರದ್ವಾಜ್ ಅವರು ನ್ಯೂಯಾರ್ಕ್ ಟೈಮ್ಸ್‌ನಲ್ಲಿ ಲೇಖನ ಪ್ರಕಟಿಸುವಂತೆ ಬಿಜೆಪಿಗೆ ಸವಾಲು ಹಾಕಿದ್ದಾರೆ. “ನಾನು ಅವರಿಗೆ ಸವಾಲು ಹಾಕುತ್ತೇನೆ, ನಿಮ್ಮ ಬಳಿ ಇರುವ ಹಣ, ನಿಮ್ಮ ಬಳಿ ಇರುವ ಅಧಿಕಾರವನ್ನು ಬಳಸಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?

ಆಮ್ ಆದ್ಮಿ ಪಕ್ಷದ ಶಾಸಕಿ ಅತಿಶಿ ಅವರು “ಸುಳ್ಳು ಆರೋಪಗಳನ್ನು ಮಾಡುವ ಮೊದಲು ಸ್ವಲ್ಪ ಹೋಂವರ್ಕ್‌ ಮಾಡಿಕೊಳ್ಳಿ” ಎಂದು ಹೇಳಿದ್ದಾರೆ.

ಇಷ್ಟೆ ಅಲ್ಲದೆ ಹಲವು ಪತ್ರಕರ್ತರು ಕೂಡ ಟ್ವಿಟ್ಟರ್ ಮೂಲಕ ಬಿಜೆಪಿಗೆ ಸಿಂಡಿಕೇಶನ್ ಎಂದರೆ ಏನು ಎಂದು ತಿಳಿಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...