Homeಮುಖಪುಟಸಿಸೋಡಿಯಾ ಮೇಲೆ ಸಿಬಿಐ ರೈಡ್‌| 12 ಐಎಎಸ್‌ ಅಧಿಕಾರಿಗಳ ವರ್ಗಾವಣೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಆದೇಶ

ಸಿಸೋಡಿಯಾ ಮೇಲೆ ಸಿಬಿಐ ರೈಡ್‌| 12 ಐಎಎಸ್‌ ಅಧಿಕಾರಿಗಳ ವರ್ಗಾವಣೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಆದೇಶ

- Advertisement -
- Advertisement -

ಮದ್ಯ ನೀತಿಯಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಬಳಿಕ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮೇಲೆ ರೈಡ್‌ ಮಾಡಲಾಗಿದ್ದು, ಇದರ ಬೆನ್ನಲ್ಲೇ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಶುಕ್ರವಾರ ಸಂಜೆ 12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಅಬಕಾರಿ ಇಲಾಖೆಯ ಉಸ್ತುವಾರಿಯನ್ನು ಮನೀಶ್ ಸಿಸೋಡಿಯಾ ಅವರೇ ನೋಡಿಕೊಳ್ಳುತ್ತಿದ್ದು ಸಿಬಿಐ ದಾಳಿ ನಡೆಸಿದೆ. ಮದ್ಯದ ನೀತಿ ಉಲ್ಲಂಘನೆಗಳ ಕುರಿತು ಎಫ್‌ಐಆರ್‌ ದಾಖಲಾಗಿದೆ. ಆರೋಪಿಗಳ ಹೆಸರುಗಳು ಹೊರಬಿದ್ದ ಕೆಲವೇ ಗಂಟೆಗಳಲ್ಲಿ ವರ್ಗಾವಣೆ ಆದೇಶ ಹೊರಡಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಿಬಿಐ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಹೆಸರಿಸಲಾದ 15 ಆರೋಪಿಗಳ ಪಟ್ಟಿಯಲ್ಲಿ ಸಿಸೋಡಿಯಾ ಅವರ ಹೆಸರು ಮೊದಲ ಸ್ಥಾನದಲ್ಲಿದೆ. ಭ್ರಷ್ಟಾಚಾರ, ಕ್ರಿಮಿನಲ್ ಪಿತೂರಿ ಮತ್ತು ನಕಲಿ ಖಾತೆ ಆರೋಪಗಳನ್ನು ಹೊರಿಸಲಾಗಿದೆ.

ದೆಹಲಿಯಲ್ಲಿರುವ ಸಿಸೋಡಿಯಾ ಅವರ ಮನೆಯ ಜೊತೆಗೆ, ಏಳು ರಾಜ್ಯಗಳಾದ್ಯಂತ 31 ಇತರ ಸ್ಥಳಗಳಲ್ಲಿ ಸಿಬಿಐ ಶೋಧ ಕಾರ್ಯ ನಡೆಸಿದೆ. 14 ಗಂಟೆಗಳ ದಾಳಿಯ ನಂತರ ಮನೀಶ್ ಸಿಸೋಡಿಯಾ ಅವರ ಕಂಪ್ಯೂಟರ್ ಮತ್ತು ಫೋನ್ ಅನ್ನು ತನಿಖಾ ಸಂಸ್ಥೆ ವಶಪಡಿಸಿಕೊಂಡಿದೆ.

ನವೆಂಬರ್‌ನಲ್ಲಿ ಜಾರಿಗೆ ತಂದ ನೀತಿಯಡಿ ಮದ್ಯದಂಗಡಿ ಪರವಾನಗಿಯನ್ನು ಖಾಸಗಿಯವರಿಗೆ ಹಸ್ತಾಂತರಿಸಲಾಗಿದೆ. ದೆಹಲಿ ಪೊಲೀಸ್‌ನ ಆರ್ಥಿಕ ಅಪರಾಧಗಳ ವಿಭಾಗದಿಂದ ತನಿಖೆಯನ್ನು ಪ್ರಾರಂಭಿಸಿದ ನಂತರ ಜುಲೈ 30 ರಂದು ಸಿಸೋಡಿಯಾ ಅವರು ಪರವಾನಗಿಯನ್ನು ಹಿಂದಕ್ಕೆ ಪಡೆದರು.

ದೆಹಲಿಯಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿರುವ ಲೆಫ್ಟಿನೆಂಟ್ ಗವರ್ನರ್ ಅವರ ಅನುಮತಿಯಿಲ್ಲದೆ ದೆಹಲಿಯಲ್ಲಿ ಮದ್ಯ ಮಾರಾಟ ಮಾಡಲು ಯಾರಿಗೆ ಅವಕಾಶ ನೀಡಬಹುದು ಎಂಬ ಹೊಸ ನೀತಿಯನ್ನು ಸಿಸೋಡಿಯಾ ಪರಿಚಯಿಸಿದ್ದಾರೆ ಎಂದು ಸಿಬಿಐ ಆರೋಪಿಸಿದೆ.

ಸಿಸೋಡಿಯಾ ಅವರ ಸಹವರ್ತಿ ನಿರ್ವಹಿಸುತ್ತಿರುವ ಕಂಪನಿಗೆ ಮದ್ಯದ ವ್ಯಾಪಾರಿಯೊಬ್ಬರು ₹ 1 ಕೋಟಿ ಪಾವತಿಸಿದ್ದಾರೆ ಎಂದು ಸಿಬಿಐ ತನ್ನ ಎಫ್‌ಐಆರ್‌ನಲ್ಲಿ ಪ್ರಸ್ತಾಪಿಸಿದೆ. ಅಬಕಾರಿ ನೀತಿಯ ರಚನೆ, ಅನುಷ್ಠಾನದಲ್ಲಿನ ಅಕ್ರಮಗಳಲ್ಲಿ ಮದ್ಯದ ಕಂಪನಿಗಳು ಮತ್ತು ಮಧ್ಯವರ್ತಿಗಳು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.

ಇದನ್ನೂ ಓದಿರಿ: ‘ಪೆಯ್ಡ್‌ ನ್ಯೂಸ್ ಅಲ್ಲ’: ದೆಹಲಿ ಶಾಲೆಗಳ ವರದಿ ಬಗ್ಗೆ ಬಿಜೆಪಿ ಆರೋಪ ತಳ್ಳಿಹಾಕಿದ ನ್ಯೂಯಾರ್ಕ್ ಟೈಮ್ಸ್

ಹೊಸ ಮದ್ಯ ನೀತಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಮುಖ್ಯ ಕಾರ್ಯದರ್ಶಿಯವರು ವರದಿ ನೀಡಿದ ನಂತರ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಕಳೆದ ತಿಂಗಳು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು.

ಎಎಪಿಯು ಅಬಕಾರಿ ನೀತಿಯನ್ನು ಏಕೈಕ ಗುರಿ ಸಾಧನೆಗೆ ತಂದಿದೆ. ಖಾಸಗಿ ಮದ್ಯದ ಬ್ಯಾರನ್‌ಗಳಿಗೆ ಆರ್ಥಿಕ ಲಾಭ ತಂದುಕೊಡುವುದಕ್ಕಾಗಿ ನೀತಿಯನ್ನು ಜಾರಿಗೆ ತರಲಾಗಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮನೀಶ್‌ ಸಿಸೋಡಿಯಾ ಆರೋಪಗಳನ್ನು ಅಲ್ಲಗಳೆದಿದ್ದಾರೆ. “ನಾನು ಯಾವುದೇ ತಪ್ಪನ್ನು ಮಾಡಿಲ್ಲ. ಬಿಜೆಪಿಯು ರಾಜಕೀಯ ಉದ್ದೇಶಗಳಿಗಾಗಿ ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ” ಎಂದಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಿಸೋಡಿಯಾ ಅವರನ್ನು ಬೆಂಬಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೇಂದ್ರೀಯ ಸಂಸ್ಥೆಗಳು ಸಂವಿಧಾನಕ್ಕೆ ಬದ್ದವೋ ಇಲ್ಲವೇ ಯಾವುದೋ ರಾಜಕೀಯ ಪಕ್ಷಗಳ ಗುಲಾಮರೇ,ಯಾವುದು ಶಾಶ್ವತವಲ್ಲ, ಇಲ್ಲಿ ಕಾರ್ಯವಹಿಸುವ ಎಲ್ಲರೂ ಆನ್ನಾ ತಿನ್ನೋದು ಸಾರ್ವಜನಿಕರ ತೆರಿಗೆ ಹಣದ ಬಿಕ್ಷೆಯಿಂದ ಅನ್ನೋದು ಈ ಸಂಸ್ಥೆಗಳು ,ಗವರ್ನರ್ ಜನರಲ್ ಅನ್ನಿಸಿಕೊಳ್ಳೋ ಕೇಂದ್ರ ಸರ್ಕಾರದ ಗುಲಾಮ,ಕೇಂದ್ರ ಸರ್ಕಾರದ ಪ್ರಧಾನಿಯಿಂದ ಹಿಡಿದು ಎಲ್ಲಾ ಮಂತ್ರಿಗಳಿಗೂ ಅನ್ವಹಿಸತ್ತೆ.

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...