Homeಮುಖಪುಟಪಾವತಿ ವ್ಯವಸ್ಥೆಗಳ ಮೇಲಿನ ಶುಲ್ಕಕ್ಕೆ RBI ಪ್ರಸ್ತಾಪ; GPay, PhonePe ವಹಿವಾಟುಗಳ ಮೇಲೆ ಪರಿಣಾಮ ಬೀರುವ...

ಪಾವತಿ ವ್ಯವಸ್ಥೆಗಳ ಮೇಲಿನ ಶುಲ್ಕಕ್ಕೆ RBI ಪ್ರಸ್ತಾಪ; GPay, PhonePe ವಹಿವಾಟುಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ

- Advertisement -
- Advertisement -

ಭಾರತೀಯ ರಿಸರ್ವ್‌‌ ಬ್ಯಾಂಕ್‌‌‌(ಆರ್‌ಬಿಐ) ಪಾವತಿ ವ್ಯವಸ್ಥೆಗಳ ಮೇಲೆ ಶುಲ್ಕಗಳನ್ನು ಹೇರುವ ಬಗ್ಗೆ ಪ್ರಸ್ತಾಪಿಸಿದೆ. ಇದು ಗೂಗಲ್ ಪೇ, ಫೋನ್‌ ಪೇ ಮಾದರಿಯ ಏಕೀಕೃತ ಪಾವತಿಗಳ ಇಂಟರ್ಫೇಸ್ (UPI) ಆಧಾರಿತ ಹಣ ವರ್ಗಾವಣೆ ವಹಿವಾಟುಗಳ ಮೇಲೆ ಪರಿಣಾಮ ಬೀರಲಿದೆ. ಈ ಮೂಲಕ ಆರ್‌ಬಿಐ ತನ್ನ ದೊಡ್ಡ ಹೂಡಿಕೆ ಮತ್ತು ಪಾವತಿ ವ್ಯವಸ್ಥೆಗಳಲ್ಲಿನ ಕಾರ್ಯಾಚರಣೆಯ ವೆಚ್ಚವನ್ನು ಮರುಪಡೆಯುವ ಸಾಧ್ಯತೆಯನ್ನು ಪರಿಶೀಲಿಸುತ್ತಿದೆ.

ವಿನಿಮಯವನ್ನು ನಿಯಂತ್ರಿಸಿ ಡೆಬಿಟ್ ಕಾರ್ಡ್‌ ವಹಿವಾಟುಗಳಿಗೆ ಪ್ರತಿ ವಹಿವಾಟಿನ ಶುಲ್ಕವನ್ನು ಕಡ್ಡಾಯಗೊಳಿಸುವ ಬಗ್ಗೆ ಮತ್ತು UPI ಆಧಾರಿತ ಹಣ ವರ್ಗಾವಣೆ ವಹಿವಾಟುಗಳ ಮೇಲೆ ಶುಲ್ಕಗಳನ್ನು ಹೇರುವ ಬಗ್ಗೆ ಆರ್‌ಬಿಐ ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಕೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಕ್ಷಣದ ಪಾವತಿ ಸೇವೆ (IMPS), ರಾಷ್ಟ್ರೀಯ ಎಲೆಕ್ಟ್ರಾನಿಕ್ ನಿಧಿಗಳ ವರ್ಗಾವಣೆ (NEFT) ವ್ಯವಸ್ಥೆ, ರಿಯಲ್ ಟೈಮ್ ಗ್ರಾಸ್ ಸೆಟಲ್ಮೆಂಟ್ (RTGS) ವ್ಯವಸ್ಥೆ ಮತ್ತು ಏಕೀಕೃತ ಪಾವತಿಗಳ ಇಂಟರ್ಫೇಸ್ (UPI) ಗಳು ಈ ಪಾವತಿ ವ್ಯವಸ್ಥೆಗಳಲ್ಲಿ ಸೇರಿವೆ. ಡೆಬಿಟ್ ಕಾರ್ಡ್‌ಗಳು, ಕ್ರೆಡಿಟ್ ಕಾರ್ಡ್‌ಗಳು ಮತ್ತು ಪ್ರಿಪೇಯ್ಡ್ ಪಾವತಿ ಉಪಕರಣಗಳು (ಪಿಪಿಐಗಳು) ಕೂಡಾ ಇತರ ಪಾವತಿ ಸಾಧನಗಳಲ್ಲಿ ಸೇರಿವೆ.

ಪಾವತಿ ವ್ಯವಸ್ಥೆಗಳಲ್ಲಿ ಆರ್‌ಬಿಐನ ಈ ಉಪಕ್ರಮಗಳ ಗಮನವು ವ್ಯವಸ್ಥಿತ ಕಾರ್ಯವಿಧಾನ ಅಥವಾ ಆದಾಯ-ಸಂಬಂಧಿತ ಸಮಸ್ಯೆಗಳಿಂದ ಉಂಟಾಗಬಹುದಾದ ಘರ್ಷಣೆಗಳನ್ನು ಸರಾಗಗೊಳಿಸುವುದಾಗಿದೆ ಎಂದು ‘ಪಾವತಿ ವ್ಯವಸ್ಥೆಗಳಲ್ಲಿನ ಶುಲ್ಕಗಳು’ ಕುರಿತು ಚರ್ಚಾ ಪ್ರಬಂಧವನ್ನು ಬಿಡುಗಡೆ ಮಾಡುವಾಗ ಬ್ಯಾಂಕ್ ಹೇಳಿ ಕೊಂಡಿದೆ.

ಆರ್‌ಬಿಐ ಅಕ್ಟೋಬರ್ 3 ರೊಳಗೆ ಪಾವತಿ ವ್ಯವಸ್ಥೆಗಳಲ್ಲಿನ ಶುಲ್ಕಗಳು ಮತ್ತು ಲೆವಿಗಳಿಗೆ ಸಂಬಂಧಿಸಿದಂತೆ 40 ನಿರ್ದಿಷ್ಟ ಪ್ರಶ್ನೆಗಳಿಗೆ ಸಾರ್ವಜನಿಕ ಅಭಿಪ್ರಾಯಗಳನ್ನು ಕೇಳಿದೆ.

ಇದನ್ನೂ ಓದಿ: ಸಾಲ ನೀಡುವ ಅನಧೀಕೃತ ಡಿಜಿಟಲ್ ಫ್ಲಾಟ್‌ಫಾರ್ಮ್‌ಗಳ ಬಗ್ಗೆ ಎಚ್ಚರಿಕೆ ನೀಡಿದ ಆರ್‌‌ಬಿಐ

ಪಾವತಿಗಳ ವಹಿವಾಟು ಸರಣಿಯಲ್ಲಿ ಅನೇಕ ಮಧ್ಯವರ್ತಿಗಳಿದ್ದರೂ ಗ್ರಾಹಕರ ದೂರುಗಳು ಸಾಮಾನ್ಯವಾಗಿ ಹೆಚ್ಚಿನ ಮತ್ತು ಪಾರದರ್ಶಕವಲ್ಲದ ಶುಲ್ಕಗಳ ಬಗ್ಗೆ ಇರುತ್ತದೆ. ಪಾವತಿ ಸೇವೆಗಳಿಗೆ ಶುಲ್ಕಗಳು ಸಮಂಜಸವಾಗಿರಬೇಕು ಮತ್ತು ಬಳಕೆದಾರರಿಗೆ ಸ್ಪರ್ಧಾತ್ಮಕವಾಗಿ ನಿರ್ಧರಿಸಬೇಕು ಹಾಗೂ ಮಧ್ಯವರ್ತಿಗಳಿಗೆ ಸೂಕ್ತವಾದ ಆದಾಯವನ್ನು ಒದಗಿಸಬೇಕು ಎಂದು ಆರ್‌ಬಿಐ ಒತ್ತಿಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...