Homeಮುಖಪುಟಪಾವತಿ ವ್ಯವಸ್ಥೆಗಳ ಮೇಲಿನ ಶುಲ್ಕಕ್ಕೆ RBI ಪ್ರಸ್ತಾಪ; GPay, PhonePe ವಹಿವಾಟುಗಳ ಮೇಲೆ ಪರಿಣಾಮ ಬೀರುವ...

ಪಾವತಿ ವ್ಯವಸ್ಥೆಗಳ ಮೇಲಿನ ಶುಲ್ಕಕ್ಕೆ RBI ಪ್ರಸ್ತಾಪ; GPay, PhonePe ವಹಿವಾಟುಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ

- Advertisement -
- Advertisement -

ಭಾರತೀಯ ರಿಸರ್ವ್‌‌ ಬ್ಯಾಂಕ್‌‌‌(ಆರ್‌ಬಿಐ) ಪಾವತಿ ವ್ಯವಸ್ಥೆಗಳ ಮೇಲೆ ಶುಲ್ಕಗಳನ್ನು ಹೇರುವ ಬಗ್ಗೆ ಪ್ರಸ್ತಾಪಿಸಿದೆ. ಇದು ಗೂಗಲ್ ಪೇ, ಫೋನ್‌ ಪೇ ಮಾದರಿಯ ಏಕೀಕೃತ ಪಾವತಿಗಳ ಇಂಟರ್ಫೇಸ್ (UPI) ಆಧಾರಿತ ಹಣ ವರ್ಗಾವಣೆ ವಹಿವಾಟುಗಳ ಮೇಲೆ ಪರಿಣಾಮ ಬೀರಲಿದೆ. ಈ ಮೂಲಕ ಆರ್‌ಬಿಐ ತನ್ನ ದೊಡ್ಡ ಹೂಡಿಕೆ ಮತ್ತು ಪಾವತಿ ವ್ಯವಸ್ಥೆಗಳಲ್ಲಿನ ಕಾರ್ಯಾಚರಣೆಯ ವೆಚ್ಚವನ್ನು ಮರುಪಡೆಯುವ ಸಾಧ್ಯತೆಯನ್ನು ಪರಿಶೀಲಿಸುತ್ತಿದೆ.

ವಿನಿಮಯವನ್ನು ನಿಯಂತ್ರಿಸಿ ಡೆಬಿಟ್ ಕಾರ್ಡ್‌ ವಹಿವಾಟುಗಳಿಗೆ ಪ್ರತಿ ವಹಿವಾಟಿನ ಶುಲ್ಕವನ್ನು ಕಡ್ಡಾಯಗೊಳಿಸುವ ಬಗ್ಗೆ ಮತ್ತು UPI ಆಧಾರಿತ ಹಣ ವರ್ಗಾವಣೆ ವಹಿವಾಟುಗಳ ಮೇಲೆ ಶುಲ್ಕಗಳನ್ನು ಹೇರುವ ಬಗ್ಗೆ ಆರ್‌ಬಿಐ ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಕೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಕ್ಷಣದ ಪಾವತಿ ಸೇವೆ (IMPS), ರಾಷ್ಟ್ರೀಯ ಎಲೆಕ್ಟ್ರಾನಿಕ್ ನಿಧಿಗಳ ವರ್ಗಾವಣೆ (NEFT) ವ್ಯವಸ್ಥೆ, ರಿಯಲ್ ಟೈಮ್ ಗ್ರಾಸ್ ಸೆಟಲ್ಮೆಂಟ್ (RTGS) ವ್ಯವಸ್ಥೆ ಮತ್ತು ಏಕೀಕೃತ ಪಾವತಿಗಳ ಇಂಟರ್ಫೇಸ್ (UPI) ಗಳು ಈ ಪಾವತಿ ವ್ಯವಸ್ಥೆಗಳಲ್ಲಿ ಸೇರಿವೆ. ಡೆಬಿಟ್ ಕಾರ್ಡ್‌ಗಳು, ಕ್ರೆಡಿಟ್ ಕಾರ್ಡ್‌ಗಳು ಮತ್ತು ಪ್ರಿಪೇಯ್ಡ್ ಪಾವತಿ ಉಪಕರಣಗಳು (ಪಿಪಿಐಗಳು) ಕೂಡಾ ಇತರ ಪಾವತಿ ಸಾಧನಗಳಲ್ಲಿ ಸೇರಿವೆ.

ಪಾವತಿ ವ್ಯವಸ್ಥೆಗಳಲ್ಲಿ ಆರ್‌ಬಿಐನ ಈ ಉಪಕ್ರಮಗಳ ಗಮನವು ವ್ಯವಸ್ಥಿತ ಕಾರ್ಯವಿಧಾನ ಅಥವಾ ಆದಾಯ-ಸಂಬಂಧಿತ ಸಮಸ್ಯೆಗಳಿಂದ ಉಂಟಾಗಬಹುದಾದ ಘರ್ಷಣೆಗಳನ್ನು ಸರಾಗಗೊಳಿಸುವುದಾಗಿದೆ ಎಂದು ‘ಪಾವತಿ ವ್ಯವಸ್ಥೆಗಳಲ್ಲಿನ ಶುಲ್ಕಗಳು’ ಕುರಿತು ಚರ್ಚಾ ಪ್ರಬಂಧವನ್ನು ಬಿಡುಗಡೆ ಮಾಡುವಾಗ ಬ್ಯಾಂಕ್ ಹೇಳಿ ಕೊಂಡಿದೆ.

ಆರ್‌ಬಿಐ ಅಕ್ಟೋಬರ್ 3 ರೊಳಗೆ ಪಾವತಿ ವ್ಯವಸ್ಥೆಗಳಲ್ಲಿನ ಶುಲ್ಕಗಳು ಮತ್ತು ಲೆವಿಗಳಿಗೆ ಸಂಬಂಧಿಸಿದಂತೆ 40 ನಿರ್ದಿಷ್ಟ ಪ್ರಶ್ನೆಗಳಿಗೆ ಸಾರ್ವಜನಿಕ ಅಭಿಪ್ರಾಯಗಳನ್ನು ಕೇಳಿದೆ.

ಇದನ್ನೂ ಓದಿ: ಸಾಲ ನೀಡುವ ಅನಧೀಕೃತ ಡಿಜಿಟಲ್ ಫ್ಲಾಟ್‌ಫಾರ್ಮ್‌ಗಳ ಬಗ್ಗೆ ಎಚ್ಚರಿಕೆ ನೀಡಿದ ಆರ್‌‌ಬಿಐ

ಪಾವತಿಗಳ ವಹಿವಾಟು ಸರಣಿಯಲ್ಲಿ ಅನೇಕ ಮಧ್ಯವರ್ತಿಗಳಿದ್ದರೂ ಗ್ರಾಹಕರ ದೂರುಗಳು ಸಾಮಾನ್ಯವಾಗಿ ಹೆಚ್ಚಿನ ಮತ್ತು ಪಾರದರ್ಶಕವಲ್ಲದ ಶುಲ್ಕಗಳ ಬಗ್ಗೆ ಇರುತ್ತದೆ. ಪಾವತಿ ಸೇವೆಗಳಿಗೆ ಶುಲ್ಕಗಳು ಸಮಂಜಸವಾಗಿರಬೇಕು ಮತ್ತು ಬಳಕೆದಾರರಿಗೆ ಸ್ಪರ್ಧಾತ್ಮಕವಾಗಿ ನಿರ್ಧರಿಸಬೇಕು ಹಾಗೂ ಮಧ್ಯವರ್ತಿಗಳಿಗೆ ಸೂಕ್ತವಾದ ಆದಾಯವನ್ನು ಒದಗಿಸಬೇಕು ಎಂದು ಆರ್‌ಬಿಐ ಒತ್ತಿಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...