Homeಮುಖಪುಟಅತ್ಯಾಚಾರಿಗಳಿಗೆ ಸ್ವಾಗತ ನೀಡುವುದನ್ನು ನೋಡಿದರೆ ರಕ್ತ ಕುದಿಯುತ್ತೆ: ನಿರ್ಭಯಾ ತಾಯಿ ಆಕ್ರೋಶ

ಅತ್ಯಾಚಾರಿಗಳಿಗೆ ಸ್ವಾಗತ ನೀಡುವುದನ್ನು ನೋಡಿದರೆ ರಕ್ತ ಕುದಿಯುತ್ತೆ: ನಿರ್ಭಯಾ ತಾಯಿ ಆಕ್ರೋಶ

ಬಿಲ್ಕಿಸ್ ಬಾನೊ ಅತ್ಯಾಚಾರಿಗಳಿಗೆ ಹೂಮಾಲೆ ಹಾಕಿ, ಸಿಹಿ ಹಂಚಿ ಸ್ವಾಗತಿಸಿದವರನ್ನು ನಿರ್ಭಯಾ ತಾಯಿ ಆಶಾದೇವಿ ಕಟುವಾಗಿ ಟೀಕಿಸಿದ್ದಾರೆ.

- Advertisement -
- Advertisement -

ಬಿಲ್ಕಿಸ್ ಬಾನೊ ಅವರ ಮೇಲೆ ಅತ್ಯಾಚಾರವೆಸಗಿ, ಅವರ ಕುಟುಂಬದ ಏಳು ಜನರನ್ನು ಹತ್ಯೆ ಮಾಡಿದ ಹನ್ನೊಂದು ಮಂದಿ ಅತ್ಯಾಚಾರಿಗಳನ್ನು ಗುಜರಾತ್ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿದ್ದು, 2012ರ ದೆಹಲಿ ಗ್ಯಾಂಗ್‌ರೇಪ್ ಸಂತ್ರಸ್ತೆ ನಿರ್ಭಯಾ ಅವರ ತಾಯಿ ಆಕ್ರೋಶವನ್ನು ಹೊರಹಾಕಿದ್ದಾರೆ.

‘ಇಂಡಿಯಾ ಟುಡೇ’ ಚಾನೆಲ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಿರ್ಭಯಾ ಅವರ ತಾಯಿ ಆಶಾ ದೇವಿ, “ಅತ್ಯಾಚಾರಿಗಳಿಗೆ ಆತ್ಮೀಯ ಸ್ವಾಗತ ನೀಡುವುದನ್ನು ನೋಡಿದಾಗ ರಕ್ತ ಕುದಿಯುತ್ತದೆ” ಎಂದಿದ್ದಾರೆ.

ಬಿಲ್ಕಿಸ್ ಬಾನೊ ಅತ್ಯಾಚಾರಿಗಳಿಗೆ ಹೂಮಾಲೆ ಮತ್ತು ಸಿಹಿತಿಂಡಿಗಳೊಂದಿಗೆ ಸ್ವಾಗತಿಸಿದವರನ್ನು ನಿರ್ಭಯಾ ತಾಯಿ ಆಶಾದೇವಿ ಕಟುವಾಗಿ ಟೀಕಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅತ್ಯಾಚಾರಿಗಳ ಪರ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದವರನ್ನು ಉದ್ದೇಶಿಸಿ ಮಾತನಾಡಿರುವ ಅವರು, “ಸಮಾಜ ಪ್ರತಿಷ್ಟಿತ ವ್ಯಕ್ತಿಯಾಗಿರುವ ನೀವು ನಡೆದುಕೊಳ್ಳುತ್ತಿರುವ ರೀತಿ ಬೇಸರ ತಂದಿದೆ. ಹತ್ತು ವರ್ಷಗಳ ಬಳಿಕ ಅತ್ಯಾಚಾರವೆಸಗಿದ ಅಪರಾಧಿ ಹೊರಗಡೆ ಬಂದಾಗ ಮನೆಯವರು ಬರಮಾಡಿಕೊಳ್ಳುವುದು ಸರಿ. ಆದರೆ ಸಮಾಜದ ಹೊರಗಿನ ವ್ಯಕ್ತಿಯೊಬ್ಬರು ಸ್ವಾಗತಿಸುತ್ತಿರುವುದು ಏಕೆ? ಇದು ನಾಚಿಕೆಗೇಡಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಅತ್ಯಾಚಾರಿಗಳ ಬಗ್ಗೆ ಕೆಲವು ಜನರು ತೋರುತ್ತಿರುವ ಇಂತಹ ವರ್ತನೆಗಳೇ ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯಲು ಕಾರಣವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿರ್ಭಯಾ ಅವರ ತಾಯಿ ಆಶಾದೇವಿಯವರು ಹೇಳಿದ್ದಿಷ್ಟು:

“ನಮ್ಮ ಮನಸ್ಸಿಗೆ ನೋವಾಗಿದೆ ಅಂತ ನಾವು ಕೊರಗುತ್ತಿದ್ದೇವೆ. ನೋವಾಗಿರುವುದು, ಕೊರಗಿರುವುದು ನಮ್ಮ ಸಮಾಜಕ್ಕೆ ಬೇಕಾಗಿಲ್ಲ. ಆದರೆ ನನಗಂತೂ ರಕ್ತ ಕುದಿಯುತ್ತಿದೆ. ನಮ್ಮ ಸಮಾಜದಲ್ಲಿ ಇದ್ಯಾವ ರೀತಿಯಲ್ಲಿ ಅತ್ಯಾಚಾರಿಗಳನ್ನು ಸನ್ಮಾನಿಸುವ ಉತ್ಸಾಹ ಬಂದುಬಿಟ್ಟಿದೆ?”

“ಒಂದು ಮಗುವಿನ ಪ್ರಕರಣದಲ್ಲಿ (ನಿರ್ಭಯಾ ಪ್ರಕರಣದಲ್ಲಿ) ನ್ಯಾಯವೇನೋ ಸಿಕ್ಕಿತು ಅಷ್ಟೇ. ಆದರೆ ಅದೇ ರೀತಿಯ ಅತ್ಯಾಚಾರ ಘಟನೆಗಳು ಹೆಚ್ಚುತ್ತಿವೆ. ಈಗ ಹನ್ನೊಂದು ಅತ್ಯಾಚಾರಿಗಳು ಬಿಡುಗಡೆಯಾಗಿದ್ದಾರೆ. ಯಾವ ಹೆಣ್ಣಿನ ಮೇಲೂ ಅತ್ಯಾಚಾರ ಆಗುವುದಿಲ್ಲ ಎಂಬ ಭರವಸೆ ಇಡಬೇಕೆ?”

“ಸಮಾಜ ಪ್ರತಿಷ್ಟಿತ ವ್ಯಕ್ತಿಯಾಗಿರುವ ನೀವು ನಡೆದುಕೊಳ್ಳುತ್ತಿರುವ ರೀತಿ ಬೇಸರ ತಂದಿದೆ. ಹತ್ತು ವರ್ಷಗಳ ಬಳಿಕ ಅತ್ಯಾಚಾರವೆಸಗಿದ ಅಪರಾಧಿ ಹೊರಗಡೆ ಬಂದಾಗ ಮನೆಯವರು ಬರಮಾಡಿಕೊಳ್ಳುವುದು ಸರಿ. ಆದರೆ ಸಮಾಜದ ಹೊರಗಿನ ವ್ಯಕ್ತಿಯೊಬ್ಬರು ಸ್ವಾಗತಿಸುತ್ತಿರುವುದು ಏಕೆ? ಇದು ನಾಚಿಕೆಗೇಡಿನ ಸಂಗತಿ.”

“ಅತ್ಯಾಚಾರಗಳಿಗೆ ಹಾರ ಹಾಕಿ, ಸಹಿ ಹಂಚುತ್ತಿರುವುದು ನೋಡಿದರೆ ಏನನಿಸುತ್ತದೆ? ಇವು ಒಪ್ಪಲಾಗದ ಸಂಗತಿ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವಾಗ ರೇಪಿಸ್ಟ್‌ಗಳಿಗೆ ಈ ರೀತಿ ಬೆಂಬಲಿಸಲಾಗುತ್ತಿದೆ. ಬೆಂಬಲಕ್ಕೆ ಉತ್ಸುಕರಾಗಿ ನಿಂತಿದ್ದಾರೆ. ಸಮಾಜದ ಪ್ರತಿಷ್ಟಿತ ವ್ಯಕ್ತಿಯಾಗಿರುವವರು ಈ ರೀತಿಯ ನಡೆಯಿಂದ ಯಾವ ಸಂದೇಶವನ್ನು ನೀಡಲು ಹೊರಟಿದ್ದಿರಿ?”

“ನಿರ್ಭಯ ಪ್ರಕರಣದಲ್ಲಿ ಶಿಕ್ಷೆಯಾದ ಮೇಲೂ ಅತ್ಯಾಚಾರ ಪ್ರಕರಣಗಳು ನಡೆದವು. ಈಗ ಅತ್ಯಾಚಾರಿಗಳು ಬಿಡುಗಡೆಯಾಗಿದ್ದಾರೆ. ಮುಂದೆ ಅತ್ಯಾಚಾರ ಪ್ರಕರಣಗಳು  ನಡೆಯುವುದಿಲ್ಲವೇ? ನ್ಯಾಯ ಸಿಗುವುದೇ? ಸಮಾಜದ ಮಾನಸಿಕ ಸ್ವಾಸ್ಥ್ಯ ಹದಗೆಟ್ಟಿದೆ. ಹಾಗಾಗಿ ನ್ಯಾಯ ಸಿಗದು”

“ಕಾನೂನು ಕೆಲಸ ಮಾಡುತ್ತಿಲ್ಲ ಎನ್ನುತ್ತಾರೆ. ಆದರೆ ಕಾನೂನು ಕೆಲಸ ಮಾಡಲು ಬಿಡುತ್ತಿಲ್ಲ. ಇತ್ತೀಚೆಗೆ ಬಿಹಾರದಲ್ಲಿ ಒದು ಹೆಣ್ಣುಮಗುವಿನ ಹತ್ಯೆಯಾಯಿತು. ನ್ಯಾಯಾಧೀಶರು ಬಹುಶಃ ಒಂದು ವಾರದಲ್ಲಿ ತೀರ್ಪು ನೀಡಲಿದರು. ಗಲ್ಲು ಶಿಕ್ಷೆ ನೀಡುತ್ತಾರೆಂದು ಆ ನ್ಯಾಯಾಧೀಶರನ್ನೇ ವರ್ಗ ಮಾಡಿಸುವ ಪ್ರಯತ್ನ ನಡೆಯಿತು ಎಂಬ ಸುದ್ದಿಯನ್ನು ಓದಿದೆ.”

“ಹನ್ನೊಂದು ಅತ್ಯಾಚಾರಿಗಳನ್ನು ಸ್ವಾಗತಿಸಿ ಮಹಿಳೆಯೊಬ್ಬರು ಸಹಿತಿನಿಸು ನೀಡಿದ್ದನ್ನೂ ನೋಡಿದೆ. ಅವರು ಹೆಣ್ಣುಕುಲಕ್ಕೆ ಕಳಂಕ. ಒಂದು ವೇಳೆ ಅತ್ಯಾಚಾರ ಮಾಡಿದ ವ್ಯಕ್ತಿ ಮನೆಗೆ ಬಂದರೆ ಅವರ ಅಮ್ಮನಾಗಲಿ, ಸಹೋದರಿಯಾಗಲಿ ಆತನನ್ನು ಸ್ವಾಗತಿಸಿದರೆ ಅಂಥವರಿಗೆ ನನ್ನ ಧಿಕ್ಕಾರವಿದೆ.”

ಇದನ್ನೂ ಓದಿರಿ: ಅವರು ಬ್ರಾಹ್ಮಣರು..: ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ

ಮೋದಿ ಭಾಷಣದ ಬಳಿಕ ಬಿಡುಗಡೆ

ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಹಿಳಾ ಸಬಲೀಕರಣದ ಕುರಿತು ಮಾತನಾಡಿದ ಕೆಲವೇ ಗಂಟೆಗಳ ನಂತರ, ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳನ್ನು ಗುಜರಾತ್‌ ಸರ್ಕಾರ ಬಿಡುಗಡೆ ಮಾಡಿತ್ತು.

2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಅವರ 3 ವರ್ಷದ ಮಗಳು ಸೇರಿದಂತೆ ಅವರ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಲಾಗಿತ್ತು. ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬಿಡುಗಡೆಯಾಗಿರುವ ಹನ್ನೊಂದು ವ್ಯಕ್ತಿಗಳು ಶಿಕ್ಷೆಗೊಳಗಾಗಿದ್ದರು. ಇವರಿಗೆ ಸರ್ಕಾರ ಕ್ಷಮಾದಾನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕನಿಷ್ಟ ನೀವಾದರು ಜಾತಿ ಮತ ಭೇದವಿಲ್ಲದೆ ಅ ದರಿದ್ರ ಮಾನಾಮರ್ಯಾದೆ ಇಲ್ಲದ ಪಶುಗಳು ಆಳುತ್ತಿರುವ ಬಿಜೆಪಿ ಸರ್ಕಾರಗಳಿಗೆ ಕ್ಯಾಕರಿಸಿ ಉಗಿದಿದ್ದಿರಾ, ಈ ಘಟನೆಗಳನ್ನು ಸೋಕಾಲ್ಡ್ ಕುಲೀನ ? ಜಾತಿ ಸಮುದಾಯಗಳ ಹೆಂಗಸರ ಬಾಯಿಯಿಂದ ಇದು ಹೆಣ್ಣು ಕುಲಕ್ಕೆ ಮುಖ್ಯ ವಾಗಿ ನಮ್ಮ ಮಹಾನ್ ಸಮಾಜಕ್ಕೆ ಅಮಾನುಷ ಎಂದು ಹೇಳಲು ಸದ್ದೆ ಆಗಲಿಲ್ಲ.

  2. ಅತ್ಯಾಚಾರದ ಅಪರಾಧಿಗಳನ್ನು ಸ್ವಾಗತಿಸುವುದು ಎಂದರೆ, ಅತ್ಯಾಚಾರವನ್ನು ಬೆಂಬಲಿಸಿದಂತೆ. ಆದ್ದರಿಂದ ಯಾರು ಈ ಅತ್ಯಾಚಾರಿಗಳನ್ನು ಸ್ವಾಗತಿಸಿದ್ದಾರೋ, ಮತ್ತು ಅವರನ್ನು ಸನ್ಮಾನಿಸಿದ್ದಾರೋ, ಅವರಿಗೂ ಸಹ ಕಾನೂನಿನ ಪ್ರಕಾರ ಶಿಕ್ಷೆ ಆಗಬೇಕು. ಇವರನ್ನು ಶಿಕ್ಷಿಸಲು ಈಗ ಇರುವ ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೆ, ಹೊಸದಾಗಿ ಕಾನೂನನ್ನು ರೂಪಿಸಬೇಕು, ಇಂತಹ ಕಾನೂನಿಗಾಗಿ ಪ್ರಜ್ಞಾವಂತರು ದನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...