Homeಮುಖಪುಟಅತ್ಯಾಚಾರಿಗಳಿಗೆ ಸ್ವಾಗತ ನೀಡುವುದನ್ನು ನೋಡಿದರೆ ರಕ್ತ ಕುದಿಯುತ್ತೆ: ನಿರ್ಭಯಾ ತಾಯಿ ಆಕ್ರೋಶ

ಅತ್ಯಾಚಾರಿಗಳಿಗೆ ಸ್ವಾಗತ ನೀಡುವುದನ್ನು ನೋಡಿದರೆ ರಕ್ತ ಕುದಿಯುತ್ತೆ: ನಿರ್ಭಯಾ ತಾಯಿ ಆಕ್ರೋಶ

ಬಿಲ್ಕಿಸ್ ಬಾನೊ ಅತ್ಯಾಚಾರಿಗಳಿಗೆ ಹೂಮಾಲೆ ಹಾಕಿ, ಸಿಹಿ ಹಂಚಿ ಸ್ವಾಗತಿಸಿದವರನ್ನು ನಿರ್ಭಯಾ ತಾಯಿ ಆಶಾದೇವಿ ಕಟುವಾಗಿ ಟೀಕಿಸಿದ್ದಾರೆ.

- Advertisement -
- Advertisement -

ಬಿಲ್ಕಿಸ್ ಬಾನೊ ಅವರ ಮೇಲೆ ಅತ್ಯಾಚಾರವೆಸಗಿ, ಅವರ ಕುಟುಂಬದ ಏಳು ಜನರನ್ನು ಹತ್ಯೆ ಮಾಡಿದ ಹನ್ನೊಂದು ಮಂದಿ ಅತ್ಯಾಚಾರಿಗಳನ್ನು ಗುಜರಾತ್ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿದ್ದು, 2012ರ ದೆಹಲಿ ಗ್ಯಾಂಗ್‌ರೇಪ್ ಸಂತ್ರಸ್ತೆ ನಿರ್ಭಯಾ ಅವರ ತಾಯಿ ಆಕ್ರೋಶವನ್ನು ಹೊರಹಾಕಿದ್ದಾರೆ.

‘ಇಂಡಿಯಾ ಟುಡೇ’ ಚಾನೆಲ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಿರ್ಭಯಾ ಅವರ ತಾಯಿ ಆಶಾ ದೇವಿ, “ಅತ್ಯಾಚಾರಿಗಳಿಗೆ ಆತ್ಮೀಯ ಸ್ವಾಗತ ನೀಡುವುದನ್ನು ನೋಡಿದಾಗ ರಕ್ತ ಕುದಿಯುತ್ತದೆ” ಎಂದಿದ್ದಾರೆ.

ಬಿಲ್ಕಿಸ್ ಬಾನೊ ಅತ್ಯಾಚಾರಿಗಳಿಗೆ ಹೂಮಾಲೆ ಮತ್ತು ಸಿಹಿತಿಂಡಿಗಳೊಂದಿಗೆ ಸ್ವಾಗತಿಸಿದವರನ್ನು ನಿರ್ಭಯಾ ತಾಯಿ ಆಶಾದೇವಿ ಕಟುವಾಗಿ ಟೀಕಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅತ್ಯಾಚಾರಿಗಳ ಪರ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದವರನ್ನು ಉದ್ದೇಶಿಸಿ ಮಾತನಾಡಿರುವ ಅವರು, “ಸಮಾಜ ಪ್ರತಿಷ್ಟಿತ ವ್ಯಕ್ತಿಯಾಗಿರುವ ನೀವು ನಡೆದುಕೊಳ್ಳುತ್ತಿರುವ ರೀತಿ ಬೇಸರ ತಂದಿದೆ. ಹತ್ತು ವರ್ಷಗಳ ಬಳಿಕ ಅತ್ಯಾಚಾರವೆಸಗಿದ ಅಪರಾಧಿ ಹೊರಗಡೆ ಬಂದಾಗ ಮನೆಯವರು ಬರಮಾಡಿಕೊಳ್ಳುವುದು ಸರಿ. ಆದರೆ ಸಮಾಜದ ಹೊರಗಿನ ವ್ಯಕ್ತಿಯೊಬ್ಬರು ಸ್ವಾಗತಿಸುತ್ತಿರುವುದು ಏಕೆ? ಇದು ನಾಚಿಕೆಗೇಡಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಅತ್ಯಾಚಾರಿಗಳ ಬಗ್ಗೆ ಕೆಲವು ಜನರು ತೋರುತ್ತಿರುವ ಇಂತಹ ವರ್ತನೆಗಳೇ ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯಲು ಕಾರಣವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿರ್ಭಯಾ ಅವರ ತಾಯಿ ಆಶಾದೇವಿಯವರು ಹೇಳಿದ್ದಿಷ್ಟು:

“ನಮ್ಮ ಮನಸ್ಸಿಗೆ ನೋವಾಗಿದೆ ಅಂತ ನಾವು ಕೊರಗುತ್ತಿದ್ದೇವೆ. ನೋವಾಗಿರುವುದು, ಕೊರಗಿರುವುದು ನಮ್ಮ ಸಮಾಜಕ್ಕೆ ಬೇಕಾಗಿಲ್ಲ. ಆದರೆ ನನಗಂತೂ ರಕ್ತ ಕುದಿಯುತ್ತಿದೆ. ನಮ್ಮ ಸಮಾಜದಲ್ಲಿ ಇದ್ಯಾವ ರೀತಿಯಲ್ಲಿ ಅತ್ಯಾಚಾರಿಗಳನ್ನು ಸನ್ಮಾನಿಸುವ ಉತ್ಸಾಹ ಬಂದುಬಿಟ್ಟಿದೆ?”

“ಒಂದು ಮಗುವಿನ ಪ್ರಕರಣದಲ್ಲಿ (ನಿರ್ಭಯಾ ಪ್ರಕರಣದಲ್ಲಿ) ನ್ಯಾಯವೇನೋ ಸಿಕ್ಕಿತು ಅಷ್ಟೇ. ಆದರೆ ಅದೇ ರೀತಿಯ ಅತ್ಯಾಚಾರ ಘಟನೆಗಳು ಹೆಚ್ಚುತ್ತಿವೆ. ಈಗ ಹನ್ನೊಂದು ಅತ್ಯಾಚಾರಿಗಳು ಬಿಡುಗಡೆಯಾಗಿದ್ದಾರೆ. ಯಾವ ಹೆಣ್ಣಿನ ಮೇಲೂ ಅತ್ಯಾಚಾರ ಆಗುವುದಿಲ್ಲ ಎಂಬ ಭರವಸೆ ಇಡಬೇಕೆ?”

“ಸಮಾಜ ಪ್ರತಿಷ್ಟಿತ ವ್ಯಕ್ತಿಯಾಗಿರುವ ನೀವು ನಡೆದುಕೊಳ್ಳುತ್ತಿರುವ ರೀತಿ ಬೇಸರ ತಂದಿದೆ. ಹತ್ತು ವರ್ಷಗಳ ಬಳಿಕ ಅತ್ಯಾಚಾರವೆಸಗಿದ ಅಪರಾಧಿ ಹೊರಗಡೆ ಬಂದಾಗ ಮನೆಯವರು ಬರಮಾಡಿಕೊಳ್ಳುವುದು ಸರಿ. ಆದರೆ ಸಮಾಜದ ಹೊರಗಿನ ವ್ಯಕ್ತಿಯೊಬ್ಬರು ಸ್ವಾಗತಿಸುತ್ತಿರುವುದು ಏಕೆ? ಇದು ನಾಚಿಕೆಗೇಡಿನ ಸಂಗತಿ.”

“ಅತ್ಯಾಚಾರಗಳಿಗೆ ಹಾರ ಹಾಕಿ, ಸಹಿ ಹಂಚುತ್ತಿರುವುದು ನೋಡಿದರೆ ಏನನಿಸುತ್ತದೆ? ಇವು ಒಪ್ಪಲಾಗದ ಸಂಗತಿ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವಾಗ ರೇಪಿಸ್ಟ್‌ಗಳಿಗೆ ಈ ರೀತಿ ಬೆಂಬಲಿಸಲಾಗುತ್ತಿದೆ. ಬೆಂಬಲಕ್ಕೆ ಉತ್ಸುಕರಾಗಿ ನಿಂತಿದ್ದಾರೆ. ಸಮಾಜದ ಪ್ರತಿಷ್ಟಿತ ವ್ಯಕ್ತಿಯಾಗಿರುವವರು ಈ ರೀತಿಯ ನಡೆಯಿಂದ ಯಾವ ಸಂದೇಶವನ್ನು ನೀಡಲು ಹೊರಟಿದ್ದಿರಿ?”

“ನಿರ್ಭಯ ಪ್ರಕರಣದಲ್ಲಿ ಶಿಕ್ಷೆಯಾದ ಮೇಲೂ ಅತ್ಯಾಚಾರ ಪ್ರಕರಣಗಳು ನಡೆದವು. ಈಗ ಅತ್ಯಾಚಾರಿಗಳು ಬಿಡುಗಡೆಯಾಗಿದ್ದಾರೆ. ಮುಂದೆ ಅತ್ಯಾಚಾರ ಪ್ರಕರಣಗಳು  ನಡೆಯುವುದಿಲ್ಲವೇ? ನ್ಯಾಯ ಸಿಗುವುದೇ? ಸಮಾಜದ ಮಾನಸಿಕ ಸ್ವಾಸ್ಥ್ಯ ಹದಗೆಟ್ಟಿದೆ. ಹಾಗಾಗಿ ನ್ಯಾಯ ಸಿಗದು”

“ಕಾನೂನು ಕೆಲಸ ಮಾಡುತ್ತಿಲ್ಲ ಎನ್ನುತ್ತಾರೆ. ಆದರೆ ಕಾನೂನು ಕೆಲಸ ಮಾಡಲು ಬಿಡುತ್ತಿಲ್ಲ. ಇತ್ತೀಚೆಗೆ ಬಿಹಾರದಲ್ಲಿ ಒದು ಹೆಣ್ಣುಮಗುವಿನ ಹತ್ಯೆಯಾಯಿತು. ನ್ಯಾಯಾಧೀಶರು ಬಹುಶಃ ಒಂದು ವಾರದಲ್ಲಿ ತೀರ್ಪು ನೀಡಲಿದರು. ಗಲ್ಲು ಶಿಕ್ಷೆ ನೀಡುತ್ತಾರೆಂದು ಆ ನ್ಯಾಯಾಧೀಶರನ್ನೇ ವರ್ಗ ಮಾಡಿಸುವ ಪ್ರಯತ್ನ ನಡೆಯಿತು ಎಂಬ ಸುದ್ದಿಯನ್ನು ಓದಿದೆ.”

“ಹನ್ನೊಂದು ಅತ್ಯಾಚಾರಿಗಳನ್ನು ಸ್ವಾಗತಿಸಿ ಮಹಿಳೆಯೊಬ್ಬರು ಸಹಿತಿನಿಸು ನೀಡಿದ್ದನ್ನೂ ನೋಡಿದೆ. ಅವರು ಹೆಣ್ಣುಕುಲಕ್ಕೆ ಕಳಂಕ. ಒಂದು ವೇಳೆ ಅತ್ಯಾಚಾರ ಮಾಡಿದ ವ್ಯಕ್ತಿ ಮನೆಗೆ ಬಂದರೆ ಅವರ ಅಮ್ಮನಾಗಲಿ, ಸಹೋದರಿಯಾಗಲಿ ಆತನನ್ನು ಸ್ವಾಗತಿಸಿದರೆ ಅಂಥವರಿಗೆ ನನ್ನ ಧಿಕ್ಕಾರವಿದೆ.”

ಇದನ್ನೂ ಓದಿರಿ: ಅವರು ಬ್ರಾಹ್ಮಣರು..: ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ

ಮೋದಿ ಭಾಷಣದ ಬಳಿಕ ಬಿಡುಗಡೆ

ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಹಿಳಾ ಸಬಲೀಕರಣದ ಕುರಿತು ಮಾತನಾಡಿದ ಕೆಲವೇ ಗಂಟೆಗಳ ನಂತರ, ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳನ್ನು ಗುಜರಾತ್‌ ಸರ್ಕಾರ ಬಿಡುಗಡೆ ಮಾಡಿತ್ತು.

2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಅವರ 3 ವರ್ಷದ ಮಗಳು ಸೇರಿದಂತೆ ಅವರ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಲಾಗಿತ್ತು. ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬಿಡುಗಡೆಯಾಗಿರುವ ಹನ್ನೊಂದು ವ್ಯಕ್ತಿಗಳು ಶಿಕ್ಷೆಗೊಳಗಾಗಿದ್ದರು. ಇವರಿಗೆ ಸರ್ಕಾರ ಕ್ಷಮಾದಾನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕನಿಷ್ಟ ನೀವಾದರು ಜಾತಿ ಮತ ಭೇದವಿಲ್ಲದೆ ಅ ದರಿದ್ರ ಮಾನಾಮರ್ಯಾದೆ ಇಲ್ಲದ ಪಶುಗಳು ಆಳುತ್ತಿರುವ ಬಿಜೆಪಿ ಸರ್ಕಾರಗಳಿಗೆ ಕ್ಯಾಕರಿಸಿ ಉಗಿದಿದ್ದಿರಾ, ಈ ಘಟನೆಗಳನ್ನು ಸೋಕಾಲ್ಡ್ ಕುಲೀನ ? ಜಾತಿ ಸಮುದಾಯಗಳ ಹೆಂಗಸರ ಬಾಯಿಯಿಂದ ಇದು ಹೆಣ್ಣು ಕುಲಕ್ಕೆ ಮುಖ್ಯ ವಾಗಿ ನಮ್ಮ ಮಹಾನ್ ಸಮಾಜಕ್ಕೆ ಅಮಾನುಷ ಎಂದು ಹೇಳಲು ಸದ್ದೆ ಆಗಲಿಲ್ಲ.

  2. ಅತ್ಯಾಚಾರದ ಅಪರಾಧಿಗಳನ್ನು ಸ್ವಾಗತಿಸುವುದು ಎಂದರೆ, ಅತ್ಯಾಚಾರವನ್ನು ಬೆಂಬಲಿಸಿದಂತೆ. ಆದ್ದರಿಂದ ಯಾರು ಈ ಅತ್ಯಾಚಾರಿಗಳನ್ನು ಸ್ವಾಗತಿಸಿದ್ದಾರೋ, ಮತ್ತು ಅವರನ್ನು ಸನ್ಮಾನಿಸಿದ್ದಾರೋ, ಅವರಿಗೂ ಸಹ ಕಾನೂನಿನ ಪ್ರಕಾರ ಶಿಕ್ಷೆ ಆಗಬೇಕು. ಇವರನ್ನು ಶಿಕ್ಷಿಸಲು ಈಗ ಇರುವ ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೆ, ಹೊಸದಾಗಿ ಕಾನೂನನ್ನು ರೂಪಿಸಬೇಕು, ಇಂತಹ ಕಾನೂನಿಗಾಗಿ ಪ್ರಜ್ಞಾವಂತರು ದನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...