Homeಮುಖಪುಟಅತ್ಯಾಚಾರಿಗಳಿಗೆ ಸ್ವಾಗತ ನೀಡುವುದನ್ನು ನೋಡಿದರೆ ರಕ್ತ ಕುದಿಯುತ್ತೆ: ನಿರ್ಭಯಾ ತಾಯಿ ಆಕ್ರೋಶ

ಅತ್ಯಾಚಾರಿಗಳಿಗೆ ಸ್ವಾಗತ ನೀಡುವುದನ್ನು ನೋಡಿದರೆ ರಕ್ತ ಕುದಿಯುತ್ತೆ: ನಿರ್ಭಯಾ ತಾಯಿ ಆಕ್ರೋಶ

ಬಿಲ್ಕಿಸ್ ಬಾನೊ ಅತ್ಯಾಚಾರಿಗಳಿಗೆ ಹೂಮಾಲೆ ಹಾಕಿ, ಸಿಹಿ ಹಂಚಿ ಸ್ವಾಗತಿಸಿದವರನ್ನು ನಿರ್ಭಯಾ ತಾಯಿ ಆಶಾದೇವಿ ಕಟುವಾಗಿ ಟೀಕಿಸಿದ್ದಾರೆ.

- Advertisement -
- Advertisement -

ಬಿಲ್ಕಿಸ್ ಬಾನೊ ಅವರ ಮೇಲೆ ಅತ್ಯಾಚಾರವೆಸಗಿ, ಅವರ ಕುಟುಂಬದ ಏಳು ಜನರನ್ನು ಹತ್ಯೆ ಮಾಡಿದ ಹನ್ನೊಂದು ಮಂದಿ ಅತ್ಯಾಚಾರಿಗಳನ್ನು ಗುಜರಾತ್ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿದ್ದು, 2012ರ ದೆಹಲಿ ಗ್ಯಾಂಗ್‌ರೇಪ್ ಸಂತ್ರಸ್ತೆ ನಿರ್ಭಯಾ ಅವರ ತಾಯಿ ಆಕ್ರೋಶವನ್ನು ಹೊರಹಾಕಿದ್ದಾರೆ.

‘ಇಂಡಿಯಾ ಟುಡೇ’ ಚಾನೆಲ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಿರ್ಭಯಾ ಅವರ ತಾಯಿ ಆಶಾ ದೇವಿ, “ಅತ್ಯಾಚಾರಿಗಳಿಗೆ ಆತ್ಮೀಯ ಸ್ವಾಗತ ನೀಡುವುದನ್ನು ನೋಡಿದಾಗ ರಕ್ತ ಕುದಿಯುತ್ತದೆ” ಎಂದಿದ್ದಾರೆ.

ಬಿಲ್ಕಿಸ್ ಬಾನೊ ಅತ್ಯಾಚಾರಿಗಳಿಗೆ ಹೂಮಾಲೆ ಮತ್ತು ಸಿಹಿತಿಂಡಿಗಳೊಂದಿಗೆ ಸ್ವಾಗತಿಸಿದವರನ್ನು ನಿರ್ಭಯಾ ತಾಯಿ ಆಶಾದೇವಿ ಕಟುವಾಗಿ ಟೀಕಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅತ್ಯಾಚಾರಿಗಳ ಪರ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದವರನ್ನು ಉದ್ದೇಶಿಸಿ ಮಾತನಾಡಿರುವ ಅವರು, “ಸಮಾಜ ಪ್ರತಿಷ್ಟಿತ ವ್ಯಕ್ತಿಯಾಗಿರುವ ನೀವು ನಡೆದುಕೊಳ್ಳುತ್ತಿರುವ ರೀತಿ ಬೇಸರ ತಂದಿದೆ. ಹತ್ತು ವರ್ಷಗಳ ಬಳಿಕ ಅತ್ಯಾಚಾರವೆಸಗಿದ ಅಪರಾಧಿ ಹೊರಗಡೆ ಬಂದಾಗ ಮನೆಯವರು ಬರಮಾಡಿಕೊಳ್ಳುವುದು ಸರಿ. ಆದರೆ ಸಮಾಜದ ಹೊರಗಿನ ವ್ಯಕ್ತಿಯೊಬ್ಬರು ಸ್ವಾಗತಿಸುತ್ತಿರುವುದು ಏಕೆ? ಇದು ನಾಚಿಕೆಗೇಡಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಅತ್ಯಾಚಾರಿಗಳ ಬಗ್ಗೆ ಕೆಲವು ಜನರು ತೋರುತ್ತಿರುವ ಇಂತಹ ವರ್ತನೆಗಳೇ ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯಲು ಕಾರಣವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿರ್ಭಯಾ ಅವರ ತಾಯಿ ಆಶಾದೇವಿಯವರು ಹೇಳಿದ್ದಿಷ್ಟು:

“ನಮ್ಮ ಮನಸ್ಸಿಗೆ ನೋವಾಗಿದೆ ಅಂತ ನಾವು ಕೊರಗುತ್ತಿದ್ದೇವೆ. ನೋವಾಗಿರುವುದು, ಕೊರಗಿರುವುದು ನಮ್ಮ ಸಮಾಜಕ್ಕೆ ಬೇಕಾಗಿಲ್ಲ. ಆದರೆ ನನಗಂತೂ ರಕ್ತ ಕುದಿಯುತ್ತಿದೆ. ನಮ್ಮ ಸಮಾಜದಲ್ಲಿ ಇದ್ಯಾವ ರೀತಿಯಲ್ಲಿ ಅತ್ಯಾಚಾರಿಗಳನ್ನು ಸನ್ಮಾನಿಸುವ ಉತ್ಸಾಹ ಬಂದುಬಿಟ್ಟಿದೆ?”

“ಒಂದು ಮಗುವಿನ ಪ್ರಕರಣದಲ್ಲಿ (ನಿರ್ಭಯಾ ಪ್ರಕರಣದಲ್ಲಿ) ನ್ಯಾಯವೇನೋ ಸಿಕ್ಕಿತು ಅಷ್ಟೇ. ಆದರೆ ಅದೇ ರೀತಿಯ ಅತ್ಯಾಚಾರ ಘಟನೆಗಳು ಹೆಚ್ಚುತ್ತಿವೆ. ಈಗ ಹನ್ನೊಂದು ಅತ್ಯಾಚಾರಿಗಳು ಬಿಡುಗಡೆಯಾಗಿದ್ದಾರೆ. ಯಾವ ಹೆಣ್ಣಿನ ಮೇಲೂ ಅತ್ಯಾಚಾರ ಆಗುವುದಿಲ್ಲ ಎಂಬ ಭರವಸೆ ಇಡಬೇಕೆ?”

“ಸಮಾಜ ಪ್ರತಿಷ್ಟಿತ ವ್ಯಕ್ತಿಯಾಗಿರುವ ನೀವು ನಡೆದುಕೊಳ್ಳುತ್ತಿರುವ ರೀತಿ ಬೇಸರ ತಂದಿದೆ. ಹತ್ತು ವರ್ಷಗಳ ಬಳಿಕ ಅತ್ಯಾಚಾರವೆಸಗಿದ ಅಪರಾಧಿ ಹೊರಗಡೆ ಬಂದಾಗ ಮನೆಯವರು ಬರಮಾಡಿಕೊಳ್ಳುವುದು ಸರಿ. ಆದರೆ ಸಮಾಜದ ಹೊರಗಿನ ವ್ಯಕ್ತಿಯೊಬ್ಬರು ಸ್ವಾಗತಿಸುತ್ತಿರುವುದು ಏಕೆ? ಇದು ನಾಚಿಕೆಗೇಡಿನ ಸಂಗತಿ.”

“ಅತ್ಯಾಚಾರಗಳಿಗೆ ಹಾರ ಹಾಕಿ, ಸಹಿ ಹಂಚುತ್ತಿರುವುದು ನೋಡಿದರೆ ಏನನಿಸುತ್ತದೆ? ಇವು ಒಪ್ಪಲಾಗದ ಸಂಗತಿ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವಾಗ ರೇಪಿಸ್ಟ್‌ಗಳಿಗೆ ಈ ರೀತಿ ಬೆಂಬಲಿಸಲಾಗುತ್ತಿದೆ. ಬೆಂಬಲಕ್ಕೆ ಉತ್ಸುಕರಾಗಿ ನಿಂತಿದ್ದಾರೆ. ಸಮಾಜದ ಪ್ರತಿಷ್ಟಿತ ವ್ಯಕ್ತಿಯಾಗಿರುವವರು ಈ ರೀತಿಯ ನಡೆಯಿಂದ ಯಾವ ಸಂದೇಶವನ್ನು ನೀಡಲು ಹೊರಟಿದ್ದಿರಿ?”

“ನಿರ್ಭಯ ಪ್ರಕರಣದಲ್ಲಿ ಶಿಕ್ಷೆಯಾದ ಮೇಲೂ ಅತ್ಯಾಚಾರ ಪ್ರಕರಣಗಳು ನಡೆದವು. ಈಗ ಅತ್ಯಾಚಾರಿಗಳು ಬಿಡುಗಡೆಯಾಗಿದ್ದಾರೆ. ಮುಂದೆ ಅತ್ಯಾಚಾರ ಪ್ರಕರಣಗಳು  ನಡೆಯುವುದಿಲ್ಲವೇ? ನ್ಯಾಯ ಸಿಗುವುದೇ? ಸಮಾಜದ ಮಾನಸಿಕ ಸ್ವಾಸ್ಥ್ಯ ಹದಗೆಟ್ಟಿದೆ. ಹಾಗಾಗಿ ನ್ಯಾಯ ಸಿಗದು”

“ಕಾನೂನು ಕೆಲಸ ಮಾಡುತ್ತಿಲ್ಲ ಎನ್ನುತ್ತಾರೆ. ಆದರೆ ಕಾನೂನು ಕೆಲಸ ಮಾಡಲು ಬಿಡುತ್ತಿಲ್ಲ. ಇತ್ತೀಚೆಗೆ ಬಿಹಾರದಲ್ಲಿ ಒದು ಹೆಣ್ಣುಮಗುವಿನ ಹತ್ಯೆಯಾಯಿತು. ನ್ಯಾಯಾಧೀಶರು ಬಹುಶಃ ಒಂದು ವಾರದಲ್ಲಿ ತೀರ್ಪು ನೀಡಲಿದರು. ಗಲ್ಲು ಶಿಕ್ಷೆ ನೀಡುತ್ತಾರೆಂದು ಆ ನ್ಯಾಯಾಧೀಶರನ್ನೇ ವರ್ಗ ಮಾಡಿಸುವ ಪ್ರಯತ್ನ ನಡೆಯಿತು ಎಂಬ ಸುದ್ದಿಯನ್ನು ಓದಿದೆ.”

“ಹನ್ನೊಂದು ಅತ್ಯಾಚಾರಿಗಳನ್ನು ಸ್ವಾಗತಿಸಿ ಮಹಿಳೆಯೊಬ್ಬರು ಸಹಿತಿನಿಸು ನೀಡಿದ್ದನ್ನೂ ನೋಡಿದೆ. ಅವರು ಹೆಣ್ಣುಕುಲಕ್ಕೆ ಕಳಂಕ. ಒಂದು ವೇಳೆ ಅತ್ಯಾಚಾರ ಮಾಡಿದ ವ್ಯಕ್ತಿ ಮನೆಗೆ ಬಂದರೆ ಅವರ ಅಮ್ಮನಾಗಲಿ, ಸಹೋದರಿಯಾಗಲಿ ಆತನನ್ನು ಸ್ವಾಗತಿಸಿದರೆ ಅಂಥವರಿಗೆ ನನ್ನ ಧಿಕ್ಕಾರವಿದೆ.”

ಇದನ್ನೂ ಓದಿರಿ: ಅವರು ಬ್ರಾಹ್ಮಣರು..: ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ

ಮೋದಿ ಭಾಷಣದ ಬಳಿಕ ಬಿಡುಗಡೆ

ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಹಿಳಾ ಸಬಲೀಕರಣದ ಕುರಿತು ಮಾತನಾಡಿದ ಕೆಲವೇ ಗಂಟೆಗಳ ನಂತರ, ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳನ್ನು ಗುಜರಾತ್‌ ಸರ್ಕಾರ ಬಿಡುಗಡೆ ಮಾಡಿತ್ತು.

2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಅವರ 3 ವರ್ಷದ ಮಗಳು ಸೇರಿದಂತೆ ಅವರ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಲಾಗಿತ್ತು. ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬಿಡುಗಡೆಯಾಗಿರುವ ಹನ್ನೊಂದು ವ್ಯಕ್ತಿಗಳು ಶಿಕ್ಷೆಗೊಳಗಾಗಿದ್ದರು. ಇವರಿಗೆ ಸರ್ಕಾರ ಕ್ಷಮಾದಾನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕನಿಷ್ಟ ನೀವಾದರು ಜಾತಿ ಮತ ಭೇದವಿಲ್ಲದೆ ಅ ದರಿದ್ರ ಮಾನಾಮರ್ಯಾದೆ ಇಲ್ಲದ ಪಶುಗಳು ಆಳುತ್ತಿರುವ ಬಿಜೆಪಿ ಸರ್ಕಾರಗಳಿಗೆ ಕ್ಯಾಕರಿಸಿ ಉಗಿದಿದ್ದಿರಾ, ಈ ಘಟನೆಗಳನ್ನು ಸೋಕಾಲ್ಡ್ ಕುಲೀನ ? ಜಾತಿ ಸಮುದಾಯಗಳ ಹೆಂಗಸರ ಬಾಯಿಯಿಂದ ಇದು ಹೆಣ್ಣು ಕುಲಕ್ಕೆ ಮುಖ್ಯ ವಾಗಿ ನಮ್ಮ ಮಹಾನ್ ಸಮಾಜಕ್ಕೆ ಅಮಾನುಷ ಎಂದು ಹೇಳಲು ಸದ್ದೆ ಆಗಲಿಲ್ಲ.

  2. ಅತ್ಯಾಚಾರದ ಅಪರಾಧಿಗಳನ್ನು ಸ್ವಾಗತಿಸುವುದು ಎಂದರೆ, ಅತ್ಯಾಚಾರವನ್ನು ಬೆಂಬಲಿಸಿದಂತೆ. ಆದ್ದರಿಂದ ಯಾರು ಈ ಅತ್ಯಾಚಾರಿಗಳನ್ನು ಸ್ವಾಗತಿಸಿದ್ದಾರೋ, ಮತ್ತು ಅವರನ್ನು ಸನ್ಮಾನಿಸಿದ್ದಾರೋ, ಅವರಿಗೂ ಸಹ ಕಾನೂನಿನ ಪ್ರಕಾರ ಶಿಕ್ಷೆ ಆಗಬೇಕು. ಇವರನ್ನು ಶಿಕ್ಷಿಸಲು ಈಗ ಇರುವ ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೆ, ಹೊಸದಾಗಿ ಕಾನೂನನ್ನು ರೂಪಿಸಬೇಕು, ಇಂತಹ ಕಾನೂನಿಗಾಗಿ ಪ್ರಜ್ಞಾವಂತರು ದನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...