Homeಮುಖಪುಟಅತ್ಯಾಚಾರಿಗಳಿಗೆ ಸ್ವಾಗತ ನೀಡುವುದನ್ನು ನೋಡಿದರೆ ರಕ್ತ ಕುದಿಯುತ್ತೆ: ನಿರ್ಭಯಾ ತಾಯಿ ಆಕ್ರೋಶ

ಅತ್ಯಾಚಾರಿಗಳಿಗೆ ಸ್ವಾಗತ ನೀಡುವುದನ್ನು ನೋಡಿದರೆ ರಕ್ತ ಕುದಿಯುತ್ತೆ: ನಿರ್ಭಯಾ ತಾಯಿ ಆಕ್ರೋಶ

ಬಿಲ್ಕಿಸ್ ಬಾನೊ ಅತ್ಯಾಚಾರಿಗಳಿಗೆ ಹೂಮಾಲೆ ಹಾಕಿ, ಸಿಹಿ ಹಂಚಿ ಸ್ವಾಗತಿಸಿದವರನ್ನು ನಿರ್ಭಯಾ ತಾಯಿ ಆಶಾದೇವಿ ಕಟುವಾಗಿ ಟೀಕಿಸಿದ್ದಾರೆ.

- Advertisement -
- Advertisement -

ಬಿಲ್ಕಿಸ್ ಬಾನೊ ಅವರ ಮೇಲೆ ಅತ್ಯಾಚಾರವೆಸಗಿ, ಅವರ ಕುಟುಂಬದ ಏಳು ಜನರನ್ನು ಹತ್ಯೆ ಮಾಡಿದ ಹನ್ನೊಂದು ಮಂದಿ ಅತ್ಯಾಚಾರಿಗಳನ್ನು ಗುಜರಾತ್ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿದ್ದು, 2012ರ ದೆಹಲಿ ಗ್ಯಾಂಗ್‌ರೇಪ್ ಸಂತ್ರಸ್ತೆ ನಿರ್ಭಯಾ ಅವರ ತಾಯಿ ಆಕ್ರೋಶವನ್ನು ಹೊರಹಾಕಿದ್ದಾರೆ.

‘ಇಂಡಿಯಾ ಟುಡೇ’ ಚಾನೆಲ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಿರ್ಭಯಾ ಅವರ ತಾಯಿ ಆಶಾ ದೇವಿ, “ಅತ್ಯಾಚಾರಿಗಳಿಗೆ ಆತ್ಮೀಯ ಸ್ವಾಗತ ನೀಡುವುದನ್ನು ನೋಡಿದಾಗ ರಕ್ತ ಕುದಿಯುತ್ತದೆ” ಎಂದಿದ್ದಾರೆ.

ಬಿಲ್ಕಿಸ್ ಬಾನೊ ಅತ್ಯಾಚಾರಿಗಳಿಗೆ ಹೂಮಾಲೆ ಮತ್ತು ಸಿಹಿತಿಂಡಿಗಳೊಂದಿಗೆ ಸ್ವಾಗತಿಸಿದವರನ್ನು ನಿರ್ಭಯಾ ತಾಯಿ ಆಶಾದೇವಿ ಕಟುವಾಗಿ ಟೀಕಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅತ್ಯಾಚಾರಿಗಳ ಪರ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದವರನ್ನು ಉದ್ದೇಶಿಸಿ ಮಾತನಾಡಿರುವ ಅವರು, “ಸಮಾಜ ಪ್ರತಿಷ್ಟಿತ ವ್ಯಕ್ತಿಯಾಗಿರುವ ನೀವು ನಡೆದುಕೊಳ್ಳುತ್ತಿರುವ ರೀತಿ ಬೇಸರ ತಂದಿದೆ. ಹತ್ತು ವರ್ಷಗಳ ಬಳಿಕ ಅತ್ಯಾಚಾರವೆಸಗಿದ ಅಪರಾಧಿ ಹೊರಗಡೆ ಬಂದಾಗ ಮನೆಯವರು ಬರಮಾಡಿಕೊಳ್ಳುವುದು ಸರಿ. ಆದರೆ ಸಮಾಜದ ಹೊರಗಿನ ವ್ಯಕ್ತಿಯೊಬ್ಬರು ಸ್ವಾಗತಿಸುತ್ತಿರುವುದು ಏಕೆ? ಇದು ನಾಚಿಕೆಗೇಡಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಅತ್ಯಾಚಾರಿಗಳ ಬಗ್ಗೆ ಕೆಲವು ಜನರು ತೋರುತ್ತಿರುವ ಇಂತಹ ವರ್ತನೆಗಳೇ ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯಲು ಕಾರಣವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿರ್ಭಯಾ ಅವರ ತಾಯಿ ಆಶಾದೇವಿಯವರು ಹೇಳಿದ್ದಿಷ್ಟು:

“ನಮ್ಮ ಮನಸ್ಸಿಗೆ ನೋವಾಗಿದೆ ಅಂತ ನಾವು ಕೊರಗುತ್ತಿದ್ದೇವೆ. ನೋವಾಗಿರುವುದು, ಕೊರಗಿರುವುದು ನಮ್ಮ ಸಮಾಜಕ್ಕೆ ಬೇಕಾಗಿಲ್ಲ. ಆದರೆ ನನಗಂತೂ ರಕ್ತ ಕುದಿಯುತ್ತಿದೆ. ನಮ್ಮ ಸಮಾಜದಲ್ಲಿ ಇದ್ಯಾವ ರೀತಿಯಲ್ಲಿ ಅತ್ಯಾಚಾರಿಗಳನ್ನು ಸನ್ಮಾನಿಸುವ ಉತ್ಸಾಹ ಬಂದುಬಿಟ್ಟಿದೆ?”

“ಒಂದು ಮಗುವಿನ ಪ್ರಕರಣದಲ್ಲಿ (ನಿರ್ಭಯಾ ಪ್ರಕರಣದಲ್ಲಿ) ನ್ಯಾಯವೇನೋ ಸಿಕ್ಕಿತು ಅಷ್ಟೇ. ಆದರೆ ಅದೇ ರೀತಿಯ ಅತ್ಯಾಚಾರ ಘಟನೆಗಳು ಹೆಚ್ಚುತ್ತಿವೆ. ಈಗ ಹನ್ನೊಂದು ಅತ್ಯಾಚಾರಿಗಳು ಬಿಡುಗಡೆಯಾಗಿದ್ದಾರೆ. ಯಾವ ಹೆಣ್ಣಿನ ಮೇಲೂ ಅತ್ಯಾಚಾರ ಆಗುವುದಿಲ್ಲ ಎಂಬ ಭರವಸೆ ಇಡಬೇಕೆ?”

“ಸಮಾಜ ಪ್ರತಿಷ್ಟಿತ ವ್ಯಕ್ತಿಯಾಗಿರುವ ನೀವು ನಡೆದುಕೊಳ್ಳುತ್ತಿರುವ ರೀತಿ ಬೇಸರ ತಂದಿದೆ. ಹತ್ತು ವರ್ಷಗಳ ಬಳಿಕ ಅತ್ಯಾಚಾರವೆಸಗಿದ ಅಪರಾಧಿ ಹೊರಗಡೆ ಬಂದಾಗ ಮನೆಯವರು ಬರಮಾಡಿಕೊಳ್ಳುವುದು ಸರಿ. ಆದರೆ ಸಮಾಜದ ಹೊರಗಿನ ವ್ಯಕ್ತಿಯೊಬ್ಬರು ಸ್ವಾಗತಿಸುತ್ತಿರುವುದು ಏಕೆ? ಇದು ನಾಚಿಕೆಗೇಡಿನ ಸಂಗತಿ.”

“ಅತ್ಯಾಚಾರಗಳಿಗೆ ಹಾರ ಹಾಕಿ, ಸಹಿ ಹಂಚುತ್ತಿರುವುದು ನೋಡಿದರೆ ಏನನಿಸುತ್ತದೆ? ಇವು ಒಪ್ಪಲಾಗದ ಸಂಗತಿ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವಾಗ ರೇಪಿಸ್ಟ್‌ಗಳಿಗೆ ಈ ರೀತಿ ಬೆಂಬಲಿಸಲಾಗುತ್ತಿದೆ. ಬೆಂಬಲಕ್ಕೆ ಉತ್ಸುಕರಾಗಿ ನಿಂತಿದ್ದಾರೆ. ಸಮಾಜದ ಪ್ರತಿಷ್ಟಿತ ವ್ಯಕ್ತಿಯಾಗಿರುವವರು ಈ ರೀತಿಯ ನಡೆಯಿಂದ ಯಾವ ಸಂದೇಶವನ್ನು ನೀಡಲು ಹೊರಟಿದ್ದಿರಿ?”

“ನಿರ್ಭಯ ಪ್ರಕರಣದಲ್ಲಿ ಶಿಕ್ಷೆಯಾದ ಮೇಲೂ ಅತ್ಯಾಚಾರ ಪ್ರಕರಣಗಳು ನಡೆದವು. ಈಗ ಅತ್ಯಾಚಾರಿಗಳು ಬಿಡುಗಡೆಯಾಗಿದ್ದಾರೆ. ಮುಂದೆ ಅತ್ಯಾಚಾರ ಪ್ರಕರಣಗಳು  ನಡೆಯುವುದಿಲ್ಲವೇ? ನ್ಯಾಯ ಸಿಗುವುದೇ? ಸಮಾಜದ ಮಾನಸಿಕ ಸ್ವಾಸ್ಥ್ಯ ಹದಗೆಟ್ಟಿದೆ. ಹಾಗಾಗಿ ನ್ಯಾಯ ಸಿಗದು”

“ಕಾನೂನು ಕೆಲಸ ಮಾಡುತ್ತಿಲ್ಲ ಎನ್ನುತ್ತಾರೆ. ಆದರೆ ಕಾನೂನು ಕೆಲಸ ಮಾಡಲು ಬಿಡುತ್ತಿಲ್ಲ. ಇತ್ತೀಚೆಗೆ ಬಿಹಾರದಲ್ಲಿ ಒದು ಹೆಣ್ಣುಮಗುವಿನ ಹತ್ಯೆಯಾಯಿತು. ನ್ಯಾಯಾಧೀಶರು ಬಹುಶಃ ಒಂದು ವಾರದಲ್ಲಿ ತೀರ್ಪು ನೀಡಲಿದರು. ಗಲ್ಲು ಶಿಕ್ಷೆ ನೀಡುತ್ತಾರೆಂದು ಆ ನ್ಯಾಯಾಧೀಶರನ್ನೇ ವರ್ಗ ಮಾಡಿಸುವ ಪ್ರಯತ್ನ ನಡೆಯಿತು ಎಂಬ ಸುದ್ದಿಯನ್ನು ಓದಿದೆ.”

“ಹನ್ನೊಂದು ಅತ್ಯಾಚಾರಿಗಳನ್ನು ಸ್ವಾಗತಿಸಿ ಮಹಿಳೆಯೊಬ್ಬರು ಸಹಿತಿನಿಸು ನೀಡಿದ್ದನ್ನೂ ನೋಡಿದೆ. ಅವರು ಹೆಣ್ಣುಕುಲಕ್ಕೆ ಕಳಂಕ. ಒಂದು ವೇಳೆ ಅತ್ಯಾಚಾರ ಮಾಡಿದ ವ್ಯಕ್ತಿ ಮನೆಗೆ ಬಂದರೆ ಅವರ ಅಮ್ಮನಾಗಲಿ, ಸಹೋದರಿಯಾಗಲಿ ಆತನನ್ನು ಸ್ವಾಗತಿಸಿದರೆ ಅಂಥವರಿಗೆ ನನ್ನ ಧಿಕ್ಕಾರವಿದೆ.”

ಇದನ್ನೂ ಓದಿರಿ: ಅವರು ಬ್ರಾಹ್ಮಣರು..: ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ

ಮೋದಿ ಭಾಷಣದ ಬಳಿಕ ಬಿಡುಗಡೆ

ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಹಿಳಾ ಸಬಲೀಕರಣದ ಕುರಿತು ಮಾತನಾಡಿದ ಕೆಲವೇ ಗಂಟೆಗಳ ನಂತರ, ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳನ್ನು ಗುಜರಾತ್‌ ಸರ್ಕಾರ ಬಿಡುಗಡೆ ಮಾಡಿತ್ತು.

2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಅವರ 3 ವರ್ಷದ ಮಗಳು ಸೇರಿದಂತೆ ಅವರ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಲಾಗಿತ್ತು. ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬಿಡುಗಡೆಯಾಗಿರುವ ಹನ್ನೊಂದು ವ್ಯಕ್ತಿಗಳು ಶಿಕ್ಷೆಗೊಳಗಾಗಿದ್ದರು. ಇವರಿಗೆ ಸರ್ಕಾರ ಕ್ಷಮಾದಾನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕನಿಷ್ಟ ನೀವಾದರು ಜಾತಿ ಮತ ಭೇದವಿಲ್ಲದೆ ಅ ದರಿದ್ರ ಮಾನಾಮರ್ಯಾದೆ ಇಲ್ಲದ ಪಶುಗಳು ಆಳುತ್ತಿರುವ ಬಿಜೆಪಿ ಸರ್ಕಾರಗಳಿಗೆ ಕ್ಯಾಕರಿಸಿ ಉಗಿದಿದ್ದಿರಾ, ಈ ಘಟನೆಗಳನ್ನು ಸೋಕಾಲ್ಡ್ ಕುಲೀನ ? ಜಾತಿ ಸಮುದಾಯಗಳ ಹೆಂಗಸರ ಬಾಯಿಯಿಂದ ಇದು ಹೆಣ್ಣು ಕುಲಕ್ಕೆ ಮುಖ್ಯ ವಾಗಿ ನಮ್ಮ ಮಹಾನ್ ಸಮಾಜಕ್ಕೆ ಅಮಾನುಷ ಎಂದು ಹೇಳಲು ಸದ್ದೆ ಆಗಲಿಲ್ಲ.

  2. ಅತ್ಯಾಚಾರದ ಅಪರಾಧಿಗಳನ್ನು ಸ್ವಾಗತಿಸುವುದು ಎಂದರೆ, ಅತ್ಯಾಚಾರವನ್ನು ಬೆಂಬಲಿಸಿದಂತೆ. ಆದ್ದರಿಂದ ಯಾರು ಈ ಅತ್ಯಾಚಾರಿಗಳನ್ನು ಸ್ವಾಗತಿಸಿದ್ದಾರೋ, ಮತ್ತು ಅವರನ್ನು ಸನ್ಮಾನಿಸಿದ್ದಾರೋ, ಅವರಿಗೂ ಸಹ ಕಾನೂನಿನ ಪ್ರಕಾರ ಶಿಕ್ಷೆ ಆಗಬೇಕು. ಇವರನ್ನು ಶಿಕ್ಷಿಸಲು ಈಗ ಇರುವ ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೆ, ಹೊಸದಾಗಿ ಕಾನೂನನ್ನು ರೂಪಿಸಬೇಕು, ಇಂತಹ ಕಾನೂನಿಗಾಗಿ ಪ್ರಜ್ಞಾವಂತರು ದನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...