Homeಮುಖಪುಟಅತ್ಯಾಚಾರಿಗಳಿಗೆ ಸ್ವಾಗತ ನೀಡುವುದನ್ನು ನೋಡಿದರೆ ರಕ್ತ ಕುದಿಯುತ್ತೆ: ನಿರ್ಭಯಾ ತಾಯಿ ಆಕ್ರೋಶ

ಅತ್ಯಾಚಾರಿಗಳಿಗೆ ಸ್ವಾಗತ ನೀಡುವುದನ್ನು ನೋಡಿದರೆ ರಕ್ತ ಕುದಿಯುತ್ತೆ: ನಿರ್ಭಯಾ ತಾಯಿ ಆಕ್ರೋಶ

ಬಿಲ್ಕಿಸ್ ಬಾನೊ ಅತ್ಯಾಚಾರಿಗಳಿಗೆ ಹೂಮಾಲೆ ಹಾಕಿ, ಸಿಹಿ ಹಂಚಿ ಸ್ವಾಗತಿಸಿದವರನ್ನು ನಿರ್ಭಯಾ ತಾಯಿ ಆಶಾದೇವಿ ಕಟುವಾಗಿ ಟೀಕಿಸಿದ್ದಾರೆ.

- Advertisement -
- Advertisement -

ಬಿಲ್ಕಿಸ್ ಬಾನೊ ಅವರ ಮೇಲೆ ಅತ್ಯಾಚಾರವೆಸಗಿ, ಅವರ ಕುಟುಂಬದ ಏಳು ಜನರನ್ನು ಹತ್ಯೆ ಮಾಡಿದ ಹನ್ನೊಂದು ಮಂದಿ ಅತ್ಯಾಚಾರಿಗಳನ್ನು ಗುಜರಾತ್ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿದ್ದು, 2012ರ ದೆಹಲಿ ಗ್ಯಾಂಗ್‌ರೇಪ್ ಸಂತ್ರಸ್ತೆ ನಿರ್ಭಯಾ ಅವರ ತಾಯಿ ಆಕ್ರೋಶವನ್ನು ಹೊರಹಾಕಿದ್ದಾರೆ.

‘ಇಂಡಿಯಾ ಟುಡೇ’ ಚಾನೆಲ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಿರ್ಭಯಾ ಅವರ ತಾಯಿ ಆಶಾ ದೇವಿ, “ಅತ್ಯಾಚಾರಿಗಳಿಗೆ ಆತ್ಮೀಯ ಸ್ವಾಗತ ನೀಡುವುದನ್ನು ನೋಡಿದಾಗ ರಕ್ತ ಕುದಿಯುತ್ತದೆ” ಎಂದಿದ್ದಾರೆ.

ಬಿಲ್ಕಿಸ್ ಬಾನೊ ಅತ್ಯಾಚಾರಿಗಳಿಗೆ ಹೂಮಾಲೆ ಮತ್ತು ಸಿಹಿತಿಂಡಿಗಳೊಂದಿಗೆ ಸ್ವಾಗತಿಸಿದವರನ್ನು ನಿರ್ಭಯಾ ತಾಯಿ ಆಶಾದೇವಿ ಕಟುವಾಗಿ ಟೀಕಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅತ್ಯಾಚಾರಿಗಳ ಪರ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದವರನ್ನು ಉದ್ದೇಶಿಸಿ ಮಾತನಾಡಿರುವ ಅವರು, “ಸಮಾಜ ಪ್ರತಿಷ್ಟಿತ ವ್ಯಕ್ತಿಯಾಗಿರುವ ನೀವು ನಡೆದುಕೊಳ್ಳುತ್ತಿರುವ ರೀತಿ ಬೇಸರ ತಂದಿದೆ. ಹತ್ತು ವರ್ಷಗಳ ಬಳಿಕ ಅತ್ಯಾಚಾರವೆಸಗಿದ ಅಪರಾಧಿ ಹೊರಗಡೆ ಬಂದಾಗ ಮನೆಯವರು ಬರಮಾಡಿಕೊಳ್ಳುವುದು ಸರಿ. ಆದರೆ ಸಮಾಜದ ಹೊರಗಿನ ವ್ಯಕ್ತಿಯೊಬ್ಬರು ಸ್ವಾಗತಿಸುತ್ತಿರುವುದು ಏಕೆ? ಇದು ನಾಚಿಕೆಗೇಡಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಅತ್ಯಾಚಾರಿಗಳ ಬಗ್ಗೆ ಕೆಲವು ಜನರು ತೋರುತ್ತಿರುವ ಇಂತಹ ವರ್ತನೆಗಳೇ ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯಲು ಕಾರಣವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿರ್ಭಯಾ ಅವರ ತಾಯಿ ಆಶಾದೇವಿಯವರು ಹೇಳಿದ್ದಿಷ್ಟು:

“ನಮ್ಮ ಮನಸ್ಸಿಗೆ ನೋವಾಗಿದೆ ಅಂತ ನಾವು ಕೊರಗುತ್ತಿದ್ದೇವೆ. ನೋವಾಗಿರುವುದು, ಕೊರಗಿರುವುದು ನಮ್ಮ ಸಮಾಜಕ್ಕೆ ಬೇಕಾಗಿಲ್ಲ. ಆದರೆ ನನಗಂತೂ ರಕ್ತ ಕುದಿಯುತ್ತಿದೆ. ನಮ್ಮ ಸಮಾಜದಲ್ಲಿ ಇದ್ಯಾವ ರೀತಿಯಲ್ಲಿ ಅತ್ಯಾಚಾರಿಗಳನ್ನು ಸನ್ಮಾನಿಸುವ ಉತ್ಸಾಹ ಬಂದುಬಿಟ್ಟಿದೆ?”

“ಒಂದು ಮಗುವಿನ ಪ್ರಕರಣದಲ್ಲಿ (ನಿರ್ಭಯಾ ಪ್ರಕರಣದಲ್ಲಿ) ನ್ಯಾಯವೇನೋ ಸಿಕ್ಕಿತು ಅಷ್ಟೇ. ಆದರೆ ಅದೇ ರೀತಿಯ ಅತ್ಯಾಚಾರ ಘಟನೆಗಳು ಹೆಚ್ಚುತ್ತಿವೆ. ಈಗ ಹನ್ನೊಂದು ಅತ್ಯಾಚಾರಿಗಳು ಬಿಡುಗಡೆಯಾಗಿದ್ದಾರೆ. ಯಾವ ಹೆಣ್ಣಿನ ಮೇಲೂ ಅತ್ಯಾಚಾರ ಆಗುವುದಿಲ್ಲ ಎಂಬ ಭರವಸೆ ಇಡಬೇಕೆ?”

“ಸಮಾಜ ಪ್ರತಿಷ್ಟಿತ ವ್ಯಕ್ತಿಯಾಗಿರುವ ನೀವು ನಡೆದುಕೊಳ್ಳುತ್ತಿರುವ ರೀತಿ ಬೇಸರ ತಂದಿದೆ. ಹತ್ತು ವರ್ಷಗಳ ಬಳಿಕ ಅತ್ಯಾಚಾರವೆಸಗಿದ ಅಪರಾಧಿ ಹೊರಗಡೆ ಬಂದಾಗ ಮನೆಯವರು ಬರಮಾಡಿಕೊಳ್ಳುವುದು ಸರಿ. ಆದರೆ ಸಮಾಜದ ಹೊರಗಿನ ವ್ಯಕ್ತಿಯೊಬ್ಬರು ಸ್ವಾಗತಿಸುತ್ತಿರುವುದು ಏಕೆ? ಇದು ನಾಚಿಕೆಗೇಡಿನ ಸಂಗತಿ.”

“ಅತ್ಯಾಚಾರಗಳಿಗೆ ಹಾರ ಹಾಕಿ, ಸಹಿ ಹಂಚುತ್ತಿರುವುದು ನೋಡಿದರೆ ಏನನಿಸುತ್ತದೆ? ಇವು ಒಪ್ಪಲಾಗದ ಸಂಗತಿ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವಾಗ ರೇಪಿಸ್ಟ್‌ಗಳಿಗೆ ಈ ರೀತಿ ಬೆಂಬಲಿಸಲಾಗುತ್ತಿದೆ. ಬೆಂಬಲಕ್ಕೆ ಉತ್ಸುಕರಾಗಿ ನಿಂತಿದ್ದಾರೆ. ಸಮಾಜದ ಪ್ರತಿಷ್ಟಿತ ವ್ಯಕ್ತಿಯಾಗಿರುವವರು ಈ ರೀತಿಯ ನಡೆಯಿಂದ ಯಾವ ಸಂದೇಶವನ್ನು ನೀಡಲು ಹೊರಟಿದ್ದಿರಿ?”

“ನಿರ್ಭಯ ಪ್ರಕರಣದಲ್ಲಿ ಶಿಕ್ಷೆಯಾದ ಮೇಲೂ ಅತ್ಯಾಚಾರ ಪ್ರಕರಣಗಳು ನಡೆದವು. ಈಗ ಅತ್ಯಾಚಾರಿಗಳು ಬಿಡುಗಡೆಯಾಗಿದ್ದಾರೆ. ಮುಂದೆ ಅತ್ಯಾಚಾರ ಪ್ರಕರಣಗಳು  ನಡೆಯುವುದಿಲ್ಲವೇ? ನ್ಯಾಯ ಸಿಗುವುದೇ? ಸಮಾಜದ ಮಾನಸಿಕ ಸ್ವಾಸ್ಥ್ಯ ಹದಗೆಟ್ಟಿದೆ. ಹಾಗಾಗಿ ನ್ಯಾಯ ಸಿಗದು”

“ಕಾನೂನು ಕೆಲಸ ಮಾಡುತ್ತಿಲ್ಲ ಎನ್ನುತ್ತಾರೆ. ಆದರೆ ಕಾನೂನು ಕೆಲಸ ಮಾಡಲು ಬಿಡುತ್ತಿಲ್ಲ. ಇತ್ತೀಚೆಗೆ ಬಿಹಾರದಲ್ಲಿ ಒದು ಹೆಣ್ಣುಮಗುವಿನ ಹತ್ಯೆಯಾಯಿತು. ನ್ಯಾಯಾಧೀಶರು ಬಹುಶಃ ಒಂದು ವಾರದಲ್ಲಿ ತೀರ್ಪು ನೀಡಲಿದರು. ಗಲ್ಲು ಶಿಕ್ಷೆ ನೀಡುತ್ತಾರೆಂದು ಆ ನ್ಯಾಯಾಧೀಶರನ್ನೇ ವರ್ಗ ಮಾಡಿಸುವ ಪ್ರಯತ್ನ ನಡೆಯಿತು ಎಂಬ ಸುದ್ದಿಯನ್ನು ಓದಿದೆ.”

“ಹನ್ನೊಂದು ಅತ್ಯಾಚಾರಿಗಳನ್ನು ಸ್ವಾಗತಿಸಿ ಮಹಿಳೆಯೊಬ್ಬರು ಸಹಿತಿನಿಸು ನೀಡಿದ್ದನ್ನೂ ನೋಡಿದೆ. ಅವರು ಹೆಣ್ಣುಕುಲಕ್ಕೆ ಕಳಂಕ. ಒಂದು ವೇಳೆ ಅತ್ಯಾಚಾರ ಮಾಡಿದ ವ್ಯಕ್ತಿ ಮನೆಗೆ ಬಂದರೆ ಅವರ ಅಮ್ಮನಾಗಲಿ, ಸಹೋದರಿಯಾಗಲಿ ಆತನನ್ನು ಸ್ವಾಗತಿಸಿದರೆ ಅಂಥವರಿಗೆ ನನ್ನ ಧಿಕ್ಕಾರವಿದೆ.”

ಇದನ್ನೂ ಓದಿರಿ: ಅವರು ಬ್ರಾಹ್ಮಣರು..: ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ

ಮೋದಿ ಭಾಷಣದ ಬಳಿಕ ಬಿಡುಗಡೆ

ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಹಿಳಾ ಸಬಲೀಕರಣದ ಕುರಿತು ಮಾತನಾಡಿದ ಕೆಲವೇ ಗಂಟೆಗಳ ನಂತರ, ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳನ್ನು ಗುಜರಾತ್‌ ಸರ್ಕಾರ ಬಿಡುಗಡೆ ಮಾಡಿತ್ತು.

2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಅವರ 3 ವರ್ಷದ ಮಗಳು ಸೇರಿದಂತೆ ಅವರ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಲಾಗಿತ್ತು. ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬಿಡುಗಡೆಯಾಗಿರುವ ಹನ್ನೊಂದು ವ್ಯಕ್ತಿಗಳು ಶಿಕ್ಷೆಗೊಳಗಾಗಿದ್ದರು. ಇವರಿಗೆ ಸರ್ಕಾರ ಕ್ಷಮಾದಾನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕನಿಷ್ಟ ನೀವಾದರು ಜಾತಿ ಮತ ಭೇದವಿಲ್ಲದೆ ಅ ದರಿದ್ರ ಮಾನಾಮರ್ಯಾದೆ ಇಲ್ಲದ ಪಶುಗಳು ಆಳುತ್ತಿರುವ ಬಿಜೆಪಿ ಸರ್ಕಾರಗಳಿಗೆ ಕ್ಯಾಕರಿಸಿ ಉಗಿದಿದ್ದಿರಾ, ಈ ಘಟನೆಗಳನ್ನು ಸೋಕಾಲ್ಡ್ ಕುಲೀನ ? ಜಾತಿ ಸಮುದಾಯಗಳ ಹೆಂಗಸರ ಬಾಯಿಯಿಂದ ಇದು ಹೆಣ್ಣು ಕುಲಕ್ಕೆ ಮುಖ್ಯ ವಾಗಿ ನಮ್ಮ ಮಹಾನ್ ಸಮಾಜಕ್ಕೆ ಅಮಾನುಷ ಎಂದು ಹೇಳಲು ಸದ್ದೆ ಆಗಲಿಲ್ಲ.

  2. ಅತ್ಯಾಚಾರದ ಅಪರಾಧಿಗಳನ್ನು ಸ್ವಾಗತಿಸುವುದು ಎಂದರೆ, ಅತ್ಯಾಚಾರವನ್ನು ಬೆಂಬಲಿಸಿದಂತೆ. ಆದ್ದರಿಂದ ಯಾರು ಈ ಅತ್ಯಾಚಾರಿಗಳನ್ನು ಸ್ವಾಗತಿಸಿದ್ದಾರೋ, ಮತ್ತು ಅವರನ್ನು ಸನ್ಮಾನಿಸಿದ್ದಾರೋ, ಅವರಿಗೂ ಸಹ ಕಾನೂನಿನ ಪ್ರಕಾರ ಶಿಕ್ಷೆ ಆಗಬೇಕು. ಇವರನ್ನು ಶಿಕ್ಷಿಸಲು ಈಗ ಇರುವ ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೆ, ಹೊಸದಾಗಿ ಕಾನೂನನ್ನು ರೂಪಿಸಬೇಕು, ಇಂತಹ ಕಾನೂನಿಗಾಗಿ ಪ್ರಜ್ಞಾವಂತರು ದನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...