Homeಕರ್ನಾಟಕರಾಮದೇವ್‌ರ ಪತಂಜಲಿ ಸಂಸ್ಥೆ ಹರಿದ್ವಾರದಲ್ಲಿ ದಲಿತರ ಭೂಮಿ ಕಬಳಿಸುತ್ತಿದೆ: ವರದಿ

ರಾಮದೇವ್‌ರ ಪತಂಜಲಿ ಸಂಸ್ಥೆ ಹರಿದ್ವಾರದಲ್ಲಿ ದಲಿತರ ಭೂಮಿ ಕಬಳಿಸುತ್ತಿದೆ: ವರದಿ

- Advertisement -
- Advertisement -

ಬಾಬಾ ರಾಮ್‌ದೇವ್‌ ಅವರ ಪತಂಜಲಿ ಸಂಸ್ಥೆಯು ದಲಿತರ ಭೂಮಿಯನ್ನು ಕಬಳಿಸುತ್ತಿದೆ. ಪರೋಕ್ಷವಾಗಿ ದಲಿತರನ್ನು ವಂಚಿಸುತ್ತಿದೆ ಎಂದು ‘ನ್ಯೂಸ್‌ಲಾಂಡ್ರಿ’ ಜಾಲತಾಣ ವರದಿ ಮಾಡಿದೆ.

ಸುಮಾರು ಐದು ದಶಕಗಳ ಹಿಂದೆ ಭೂಸುಧಾರಣೆಯ ಭಾಗವಾಗಿ ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ತೆಲಿವಾಲಾ ಗ್ರಾಮದ ಪ್ರತಿ ದಲಿತ ಕುಟುಂಬಕ್ಕೆ ಆರು ಬಿಘಾ ಜಮೀನುಗಳನ್ನು ನೀಡಲಾಯಿತು. ಆದರೆ ಆ ಭೂಮಿಯ ಬಹುಪಾಲು ಈಗ ಪತಂಜಲಿಯ ನಿಯಂತ್ರಣದಲ್ಲಿದೆ. ದಲಿತರು ಹೆಚ್ಚಾಗಿ ಭೂರಹಿತರಾಗಿದ್ದು- ಒಂದೋ ರಾಮ್‌ದೇವ್ ಅವರ ಕಾರ್ಪೊರೇಟ್ ಸಂಸ್ಥೆಗಾಗಿ ಕೆಲಸ ಮಾಡುತ್ತಿದ್ದಾರೆ ಅಥವಾ ಜೀವನೋಪಾಯಕ್ಕಾಗಿ ವಲಸೆ ಹೋಗುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪತಂಜಲಿ ಸಂಸ್ಥೆ ತಾಂತ್ರಿಕವಾಗಿ ಭೂಮಿಯನ್ನು ಖರೀದಿಸಿಲ್ಲ. ಅವಿಭಜಿತ ಉತ್ತರ ಪ್ರದೇಶದಲ್ಲಿ ಜಮೀನ್ದಾರಿ ಪದ್ಧತಿಯನ್ನು ರದ್ದುಪಡಿಸಿದ ನಂತರ ಜಾರಿಗೊಳಿಸಲಾದ ಕಟ್ಟುನಿಟ್ಟಾದ ಭೂ ಕಾನೂನುಗಳಿಂದಾಗಿ ಇಲ್ಲಿ ಭೂಮಿಯನ್ನು ಖರೀದಿಸಲು ಸಾಧ್ಯವಿಲ್ಲ. ಹರಿದ್ವಾರದಿಂದ 20 ಕಿಮೀ ದೂರದಲ್ಲಿರುವ, 1,500 ದಲಿತ ಮತದಾರರಿರುವ ತೆಲಿವಾಲಾ ಗ್ರಾಮದಲ್ಲಿ ಕಾನೂನು ಬದ್ಧವಾಗಿ ಭೂಮಿ ಖರೀದಿಸಲು ಪತಂಜಲಿ ಸಂಸ್ಥೆಗೆ ಅವಕಾಶವಿಲ್ಲ.

18 ಬಿಘಾಗಳಿಗಿಂತ ಹೆಚ್ಚಿನ ನಿವೇಶನಗಳನ್ನು ಹೊಂದಿರುವವರಿಗೆ ವಿನಾಯಿತಿಯನ್ನು ನೀಡಿ ಮಾರಬಹುದು. ಆದರೆ ದಲಿತರು ತಮ್ಮ ಭೂಮಿಯನ್ನು ಇತರ ದಲಿತರಿಗೆ ಮಾತ್ರ ವರ್ಗಾಯಿಸಬಹುದು ಎಂದು ಕಾನೂನು ಹೇಳುತ್ತದೆ. ಹೀಗೆ ಮಾರಾಟ ಮಾಡುವಾಗ ಜಿಲ್ಲೆ ಅಥವಾ ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ರಿಂದ ವಿಶೇಷ ಅನುಮತಿ ಅಗತ್ಯವಿದೆ.

ಆದರೆ ಪತಂಜಲಿ ಸಂಸ್ಥೆ ಮತ್ತು ಅದರ ಸಹಚರರು ಈ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. ತನ್ನ ಪ್ರಭಾವ ಮತ್ತು ಬಂಡವಾಳವನ್ನು ಬಳಸಿಕೊಂಡು 2005 ಮತ್ತು 2010ರ ನಡುವೆ ದಲಿತ ಗ್ರಾಮಸ್ಥರ ಹೆಸರಿನಲ್ಲಿ ‘ದೇಣಿಗೆ ಪತ್ರಗಳು’ ಮತ್ತು ನೋಂದಣಿಗಳ ಮೂಲಕ ಸುಮಾರು 600 ಬಿಘಾ ಭೂಮಿಯನ್ನು ಪತಂಜಲಿ ಪಡೆದುಕೊಂಡಿದೆ. ಈ ಭೂಮಿಯನ್ನು ಔಷಧೀಯ ಗಿಡಮೂಲಿಕೆಗಳಿಗೆ, ಕಬ್ಬು ಕೃಷಿಗೆ ಮತ್ತು ಗೋಶಾಲೆಗಳನ್ನು ನಿರ್ವಹಿಸಲು ಬಳಸಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಕುರಿತು ‘ನ್ಯೂಸ್‌ಲಾಂಡ್ರಿ’ ಜಾಲತಾಣಕ್ಕೆ ಗ್ರಾಮಸ್ಥರು ಪ್ರತಿಕ್ರಿಯೆ ನೀಡಿದ್ದಾರೆ. “ಮಾಲಿಕತ್ವ ನಿಮ್ಮ ಬಳಿಯೇ ಇರಲಿದ್ದು, ಭೂಮಿಯನ್ನಷ್ಟೇ ಬಳಸಲು ಅವಕಾಶ ನೀಡುವಂತೆ ಅನೇಕ ದಲಿತ ಕುಟುಂಬಗಳಿಗೆ ಪತಂಜಲಿಯ ಸಹವರ್ತಿಗಳು ಕೋರಿದರು. ನಿರಾಕರಿಸಿದವರಿಗೆ ಒತ್ತಡ ಹೇರಲಾಯಿತು” ಎನ್ನಲಾಗಿದೆ.

“ಗ್ರಾಮ ಪಂಚಾಯತ್‌ನ ನೂರಾರು ಬಿಘಾಸ್ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ ಔರಂಗಾಬಾದ್ ಮತ್ತು ತೇಲಿವಾಲಾ ಮುಂತಾದ ಸ್ಥಳಗಳಲ್ಲಿ ಗ್ರಾಮಸ್ಥರು ವಿರೋಧಿಸಿದ್ದರಿಂದಾಗಿ ಇದು ಯಶಸ್ವಿಯಾಗಲಿಲ್ಲ.”

ಮುಖಂಡರಾದ ಗುಲಾಬ್ ಸಿಂಗ್, ಕುರಾಡಿ ಸಿಂಗ್ ಅವರು ಪತಂಜಲಿ ಸಂಸ್ಥೆ ಜೊತೆ ಮಾತುಕತೆಗೆ ಸಹಾಯ ಮಾಡಿದರು. ತೆಲಿವಾಲಾದಂತಹ ಸ್ಥಳಗಳಲ್ಲಿ ವೈಯಕ್ತಿಕ ಭೂಮಿ ವರ್ಗಾವಣೆಗಳು ಸುಗಮವಾದವು ಎನ್ನಲಾಗಿದೆ.

ಇದನ್ನೂ ಓದಿರಿ: ಮೊದಲ ಬೆಂಚ್‌ನಲ್ಲಿ ಕುಳಿತ ಕಾರಣ ದಲಿತ ಬಾಲಕಿಗೆ ಶಿಕ್ಷಕಿಯಿಂದ ಥಳಿತ; ಎಫ್‌ಐಆರ್‌

52 ವರ್ಷದ ಮಹೇಂದ್ರ ಸಿಂಗ್ ಪ್ರತಿಕ್ರಿಯೆ ನೀಡಿ, “ಪತಂಜಲಿ ಸಂಸ್ಥೆಗಾಗಿ ಇತರ ದಲಿತ ಕುಟುಂಬಗಳಿಂದ ಪರೋಕ್ಷವಾಗಿ 100 ಬಿಘಾಗಳನ್ನು ಖರೀದಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಪತಂಜಲಿಯ ಹಿರಿಯ ಕಾರ್ಯಕರ್ತ ದೇವೇಂದ್ರ ಚೌಧರಿ ನನ್ನ ಬಳಿ ಬಂದಿದ್ದರು. ನಿಮ್ಮ ಹೆಸರಿಗೆ ಸ್ವಲ್ಪ ಜಮೀನು ವರ್ಗಾವಣೆ ಮಾಡಿಕೊಳ್ಳಿ. ಹಣ ನೀಡುತ್ತೇವೆ, ಹೆಸರೇ ನಿಮ್ಮದೇ ಆಗಿರುತ್ತದೆ ಎಂದ ಚೌಧರಿಯವರು ಜಮೀನು ಮಾರಾಟ ಮಾಡಿದವರಿಗೆ ಹಣ ನೀಡುತ್ತಿದ್ದರು’’ ಎಂದು ಮಹೇಂದ್ರ ಆರೋಪಿಸಿದ್ದಾರೆ.

ಭೂ ದಾಖಲೆಗಳ ಪ್ರಕಾರ, ಮಹೇಂದ್ರ ಮತ್ತು ಅವರ ಕುಟುಂಬವು 2008ರಲ್ಲಿ 18 ಬಾರಿ, 2007ರಲ್ಲಿ ಏಳು ಬಾರಿ ಮತ್ತು 2009ರಲ್ಲಿ 21 ಬಾರಿ ಪ್ಲಾಟ್‌ಗಳನ್ನು ಖರೀದಿಸಿ ಮಾರಾಟ ಮಾಡಿದೆ ಮತ್ತು ಒಪ್ಪಂದಗಳಿಗೆ ಸಹಿ ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...