Homeಕರ್ನಾಟಕರಾಮದೇವ್‌ರ ಪತಂಜಲಿ ಸಂಸ್ಥೆ ಹರಿದ್ವಾರದಲ್ಲಿ ದಲಿತರ ಭೂಮಿ ಕಬಳಿಸುತ್ತಿದೆ: ವರದಿ

ರಾಮದೇವ್‌ರ ಪತಂಜಲಿ ಸಂಸ್ಥೆ ಹರಿದ್ವಾರದಲ್ಲಿ ದಲಿತರ ಭೂಮಿ ಕಬಳಿಸುತ್ತಿದೆ: ವರದಿ

- Advertisement -
- Advertisement -

ಬಾಬಾ ರಾಮ್‌ದೇವ್‌ ಅವರ ಪತಂಜಲಿ ಸಂಸ್ಥೆಯು ದಲಿತರ ಭೂಮಿಯನ್ನು ಕಬಳಿಸುತ್ತಿದೆ. ಪರೋಕ್ಷವಾಗಿ ದಲಿತರನ್ನು ವಂಚಿಸುತ್ತಿದೆ ಎಂದು ‘ನ್ಯೂಸ್‌ಲಾಂಡ್ರಿ’ ಜಾಲತಾಣ ವರದಿ ಮಾಡಿದೆ.

ಸುಮಾರು ಐದು ದಶಕಗಳ ಹಿಂದೆ ಭೂಸುಧಾರಣೆಯ ಭಾಗವಾಗಿ ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ತೆಲಿವಾಲಾ ಗ್ರಾಮದ ಪ್ರತಿ ದಲಿತ ಕುಟುಂಬಕ್ಕೆ ಆರು ಬಿಘಾ ಜಮೀನುಗಳನ್ನು ನೀಡಲಾಯಿತು. ಆದರೆ ಆ ಭೂಮಿಯ ಬಹುಪಾಲು ಈಗ ಪತಂಜಲಿಯ ನಿಯಂತ್ರಣದಲ್ಲಿದೆ. ದಲಿತರು ಹೆಚ್ಚಾಗಿ ಭೂರಹಿತರಾಗಿದ್ದು- ಒಂದೋ ರಾಮ್‌ದೇವ್ ಅವರ ಕಾರ್ಪೊರೇಟ್ ಸಂಸ್ಥೆಗಾಗಿ ಕೆಲಸ ಮಾಡುತ್ತಿದ್ದಾರೆ ಅಥವಾ ಜೀವನೋಪಾಯಕ್ಕಾಗಿ ವಲಸೆ ಹೋಗುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪತಂಜಲಿ ಸಂಸ್ಥೆ ತಾಂತ್ರಿಕವಾಗಿ ಭೂಮಿಯನ್ನು ಖರೀದಿಸಿಲ್ಲ. ಅವಿಭಜಿತ ಉತ್ತರ ಪ್ರದೇಶದಲ್ಲಿ ಜಮೀನ್ದಾರಿ ಪದ್ಧತಿಯನ್ನು ರದ್ದುಪಡಿಸಿದ ನಂತರ ಜಾರಿಗೊಳಿಸಲಾದ ಕಟ್ಟುನಿಟ್ಟಾದ ಭೂ ಕಾನೂನುಗಳಿಂದಾಗಿ ಇಲ್ಲಿ ಭೂಮಿಯನ್ನು ಖರೀದಿಸಲು ಸಾಧ್ಯವಿಲ್ಲ. ಹರಿದ್ವಾರದಿಂದ 20 ಕಿಮೀ ದೂರದಲ್ಲಿರುವ, 1,500 ದಲಿತ ಮತದಾರರಿರುವ ತೆಲಿವಾಲಾ ಗ್ರಾಮದಲ್ಲಿ ಕಾನೂನು ಬದ್ಧವಾಗಿ ಭೂಮಿ ಖರೀದಿಸಲು ಪತಂಜಲಿ ಸಂಸ್ಥೆಗೆ ಅವಕಾಶವಿಲ್ಲ.

18 ಬಿಘಾಗಳಿಗಿಂತ ಹೆಚ್ಚಿನ ನಿವೇಶನಗಳನ್ನು ಹೊಂದಿರುವವರಿಗೆ ವಿನಾಯಿತಿಯನ್ನು ನೀಡಿ ಮಾರಬಹುದು. ಆದರೆ ದಲಿತರು ತಮ್ಮ ಭೂಮಿಯನ್ನು ಇತರ ದಲಿತರಿಗೆ ಮಾತ್ರ ವರ್ಗಾಯಿಸಬಹುದು ಎಂದು ಕಾನೂನು ಹೇಳುತ್ತದೆ. ಹೀಗೆ ಮಾರಾಟ ಮಾಡುವಾಗ ಜಿಲ್ಲೆ ಅಥವಾ ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ರಿಂದ ವಿಶೇಷ ಅನುಮತಿ ಅಗತ್ಯವಿದೆ.

ಆದರೆ ಪತಂಜಲಿ ಸಂಸ್ಥೆ ಮತ್ತು ಅದರ ಸಹಚರರು ಈ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. ತನ್ನ ಪ್ರಭಾವ ಮತ್ತು ಬಂಡವಾಳವನ್ನು ಬಳಸಿಕೊಂಡು 2005 ಮತ್ತು 2010ರ ನಡುವೆ ದಲಿತ ಗ್ರಾಮಸ್ಥರ ಹೆಸರಿನಲ್ಲಿ ‘ದೇಣಿಗೆ ಪತ್ರಗಳು’ ಮತ್ತು ನೋಂದಣಿಗಳ ಮೂಲಕ ಸುಮಾರು 600 ಬಿಘಾ ಭೂಮಿಯನ್ನು ಪತಂಜಲಿ ಪಡೆದುಕೊಂಡಿದೆ. ಈ ಭೂಮಿಯನ್ನು ಔಷಧೀಯ ಗಿಡಮೂಲಿಕೆಗಳಿಗೆ, ಕಬ್ಬು ಕೃಷಿಗೆ ಮತ್ತು ಗೋಶಾಲೆಗಳನ್ನು ನಿರ್ವಹಿಸಲು ಬಳಸಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಕುರಿತು ‘ನ್ಯೂಸ್‌ಲಾಂಡ್ರಿ’ ಜಾಲತಾಣಕ್ಕೆ ಗ್ರಾಮಸ್ಥರು ಪ್ರತಿಕ್ರಿಯೆ ನೀಡಿದ್ದಾರೆ. “ಮಾಲಿಕತ್ವ ನಿಮ್ಮ ಬಳಿಯೇ ಇರಲಿದ್ದು, ಭೂಮಿಯನ್ನಷ್ಟೇ ಬಳಸಲು ಅವಕಾಶ ನೀಡುವಂತೆ ಅನೇಕ ದಲಿತ ಕುಟುಂಬಗಳಿಗೆ ಪತಂಜಲಿಯ ಸಹವರ್ತಿಗಳು ಕೋರಿದರು. ನಿರಾಕರಿಸಿದವರಿಗೆ ಒತ್ತಡ ಹೇರಲಾಯಿತು” ಎನ್ನಲಾಗಿದೆ.

“ಗ್ರಾಮ ಪಂಚಾಯತ್‌ನ ನೂರಾರು ಬಿಘಾಸ್ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ ಔರಂಗಾಬಾದ್ ಮತ್ತು ತೇಲಿವಾಲಾ ಮುಂತಾದ ಸ್ಥಳಗಳಲ್ಲಿ ಗ್ರಾಮಸ್ಥರು ವಿರೋಧಿಸಿದ್ದರಿಂದಾಗಿ ಇದು ಯಶಸ್ವಿಯಾಗಲಿಲ್ಲ.”

ಮುಖಂಡರಾದ ಗುಲಾಬ್ ಸಿಂಗ್, ಕುರಾಡಿ ಸಿಂಗ್ ಅವರು ಪತಂಜಲಿ ಸಂಸ್ಥೆ ಜೊತೆ ಮಾತುಕತೆಗೆ ಸಹಾಯ ಮಾಡಿದರು. ತೆಲಿವಾಲಾದಂತಹ ಸ್ಥಳಗಳಲ್ಲಿ ವೈಯಕ್ತಿಕ ಭೂಮಿ ವರ್ಗಾವಣೆಗಳು ಸುಗಮವಾದವು ಎನ್ನಲಾಗಿದೆ.

ಇದನ್ನೂ ಓದಿರಿ: ಮೊದಲ ಬೆಂಚ್‌ನಲ್ಲಿ ಕುಳಿತ ಕಾರಣ ದಲಿತ ಬಾಲಕಿಗೆ ಶಿಕ್ಷಕಿಯಿಂದ ಥಳಿತ; ಎಫ್‌ಐಆರ್‌

52 ವರ್ಷದ ಮಹೇಂದ್ರ ಸಿಂಗ್ ಪ್ರತಿಕ್ರಿಯೆ ನೀಡಿ, “ಪತಂಜಲಿ ಸಂಸ್ಥೆಗಾಗಿ ಇತರ ದಲಿತ ಕುಟುಂಬಗಳಿಂದ ಪರೋಕ್ಷವಾಗಿ 100 ಬಿಘಾಗಳನ್ನು ಖರೀದಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಪತಂಜಲಿಯ ಹಿರಿಯ ಕಾರ್ಯಕರ್ತ ದೇವೇಂದ್ರ ಚೌಧರಿ ನನ್ನ ಬಳಿ ಬಂದಿದ್ದರು. ನಿಮ್ಮ ಹೆಸರಿಗೆ ಸ್ವಲ್ಪ ಜಮೀನು ವರ್ಗಾವಣೆ ಮಾಡಿಕೊಳ್ಳಿ. ಹಣ ನೀಡುತ್ತೇವೆ, ಹೆಸರೇ ನಿಮ್ಮದೇ ಆಗಿರುತ್ತದೆ ಎಂದ ಚೌಧರಿಯವರು ಜಮೀನು ಮಾರಾಟ ಮಾಡಿದವರಿಗೆ ಹಣ ನೀಡುತ್ತಿದ್ದರು’’ ಎಂದು ಮಹೇಂದ್ರ ಆರೋಪಿಸಿದ್ದಾರೆ.

ಭೂ ದಾಖಲೆಗಳ ಪ್ರಕಾರ, ಮಹೇಂದ್ರ ಮತ್ತು ಅವರ ಕುಟುಂಬವು 2008ರಲ್ಲಿ 18 ಬಾರಿ, 2007ರಲ್ಲಿ ಏಳು ಬಾರಿ ಮತ್ತು 2009ರಲ್ಲಿ 21 ಬಾರಿ ಪ್ಲಾಟ್‌ಗಳನ್ನು ಖರೀದಿಸಿ ಮಾರಾಟ ಮಾಡಿದೆ ಮತ್ತು ಒಪ್ಪಂದಗಳಿಗೆ ಸಹಿ ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...