Homeಕರ್ನಾಟಕಬೆಂಗಳೂರು: ಖಾಸಗಿ ವಿವಿಗೆ ನೀಡಿರುವ ಭೂಮಿ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು: ಖಾಸಗಿ ವಿವಿಗೆ ನೀಡಿರುವ ಭೂಮಿ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

- Advertisement -
- Advertisement -

ಖಾಸಗಿ ವಿದ್ಯಾಸಂಸ್ಥೆಯಾದ ಚಾಣಕ್ಯ ವಿವಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನಲ್ಲಿ 116 ಎಕರೆ ಭೂಮಿ ನೀಡಿರುವುದನ್ನು ಸರ್ಕಾರ ಈ ಕೂಡಲೇ ರದ್ದು ಮಾಡಬೇಕು ಎಂದು ಸಿಪಿಐಎಂನ ರಾಜ್ಯ ಸಮಿತಿ ಸದಸ್ಯ ಜಿ.ಸಿ.ಬೈಯ್ಯಾರೆಡ್ಡಿ ಒತ್ತಾಯಿಸಿದರು.

ಚಾಣಕ್ಯ ಖಾಸಗಿ ವಿವಿಗೆ ಅಕ್ರಮವಾಗಿ ನೀಡಿರುವ ಭೂಮಿ ರದ್ದತಿಗಾಗಿ ಕಾನೂನು ಉಲ್ಲಂಘನೆ ಮಾಡಿರುವ ಅಧಿಕಾರಿಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮಾರ್ಕ್ಸ್‌ ವಾದಿ ಕಮ್ಯುನಿಸ್ಟ್ ಪಕ್ಷದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ಬಳಿ 2019ರಲ್ಲಿ ಕೆಐಎಡಿಬಿ ರೈತರ ಫಲವತ್ತಾದ 1300 ಎಕರೆ ಕೃಷಿ ಭೂಮಿಯನ್ನು ಸ್ವಾಧೀನ ಮಾಡಿಕೊಂಡಿದೆ. ಅದರಲ್ಲಿ 116 ಎಕರೆ ಭೂಮಿಯನ್ನು ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಅಂದಿನ ಸರ್ಕಾರ ಚಾಣಕ್ಯ ವಿಶ್ವವಿದ್ಯಾಲಯ ಎಂಬ ಖಾಸಗಿ ಸಂಸ್ಥೆಗೆ ಅತೀ ಕಡಿಮೆ ದರದಲ್ಲಿ ನೀಡಿದೆ. ಇದರಿಂದ ಸರ್ಕಾರಕ್ಕೆ ₹250 ಕೋಟಿ ನಷ್ಟ ಉಂಟಾಗಿದೆ ಎಂದು ಆರೋಪಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೊಂದು ದೊಡ್ಡ ಹಗರಣವಾಗಿದ್ದು, ಇದನ್ನು ಇಲ್ಲಿಗೆ ಬಿಡುವ ಪ್ರಶ್ನೆಯೇ ಇಲ್ಲ. ರಾಜ್ಯಾದಾದ್ಯಂತ ಈ ರೀತಿಯ ಪ್ರಕರಣಗಳು ಹಲವಾರು ಬೆಳಕಿಗೆ ಬಂದಿದ್ದು ಈ ಹೋರಾಟವನ್ನು ರಾಜ್ಯವ್ಯಾಪಿ ವಿಸ್ತರಣೆ ಮಾಡುತ್ತೇವೆ ಎಂದು ಗುಡುಗಿದರು.

ದೇಶ ಸ್ವಾತಂತ್ರ್ಯ ಪಡೆದ ನಂತರ 70% ಜನರಿಗೆ ರಾಜಕೀಯ ಸ್ವಾತಂತ್ರ್ಯ ಮಾತ್ರ ಲಭಿಸಿದ್ದು, ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಇನ್ನೂ ಸಿಗಲಿಲ್ಲ. ತೊಂಬತ್ತರ ದಶಕದ ನಂತರ ಜಾಗತೀಕರಣದ ಪ್ರಭಾವದಿಂದ ದೇಶದಲ್ಲಿ ಏಳು ಲಕ್ಷ ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದುಡಿಯುವ ಕೈಗಳಿಗೆ ಕೆಲಸ ಸಿಗುತ್ತಿಲ್ಲ, ವ್ಯವಸಾಯ ಮಾಡಿ ಬದುಕಲು ಸರ್ಕಾರ ಭೂಮಿ ನೀಡುವುದಿಲ್ಲ. ರಾಜ್ಯದ ನಲವತ್ತು ಲಕ್ಷ ಎಕರೆ ಭೂಮಿಗೆ ದಲಿತರು, ಬಡ ರೈತರು ತುಂಡು ಭೂಮಿ ಪಡೆಯಲು ಅರ್ಜಿ ಹಾಕಿಕೊಂಡು ನಲವತ್ತು ವರ್ಷದಿಂದ ಕಾಯುತ್ತಿದ್ದಾರೆ. ಆದರೆ ಸರ್ಕಾರ ಅವರಿಗೆ ಭೂಮಿ‌ ನೀಡಲು ನಿರಾಕರಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರೈತರಿಗೆ ಇನ್ಮುಂದೆ ಸಾಗುವಳಿ ಚೀಟಿ ಕೊಡಲ್ಲ, ಸರ್ಕಾರಿ ಭೂಮಿಯನ್ನು ಲೀಸ್ಗೆ ಕೊಡ್ತೇವೆ ಎಂದು ಕಂದಾಯ ಸಚಿವ ಅಶೋಕ್ ಹೇಳಿದ್ದಾರೆ. ಸರ್ಕಾರ ಭೂಮಿಯನ್ನು ಬಹುರಾಷ್ಟ್ರೀಯ ಕಂಪನಿಗಳಿಗೆ‌ ಕೊಟ್ಟು ರೈತರನ್ನು ಒಕ್ಕಲೆಬ್ಬಿಸಿ ಕಂಪನಿ ಕೃಷಿಗೆ ಪ್ರೊತ್ಸಾಹ ನೀಡುತ್ತಿದೆ ಎಂದು ಎಚ್ಚರಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರ ಬಳಿ ಜಮೀನುಗಳು ಇಲ್ಲ. ಅದರಲ್ಲೂ ದೇವನಹಳ್ಳಿ ತಾಲ್ಲೂಕಿನ 70% ಭೂಮಿ ರೈತರ ಬಳಿ ಇಲ್ಲ. ಮುವ್ವತ್ತು, ಐವತ್ತು ಮತ್ತು ನೂರು ಎಕರೆ ಭೂಮಿಯನ್ನು ನಗರದ ಬಂಡವಾಳಶಾಹಿಗಳು ಖರೀದಿಸಿ ಕಾಂಪೌಂಡ್ ಹಾಕಿಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರು ಬದುಕುವುದಾದರೂ ಹೇಗೆ ಎಂದು ಪ್ರಶ್ನಿಸಿದರು.

ಸರ್ಕಾರ ದೇಶಭಕ್ತಿಯ ಪಾಠ ಮಾಡುತ್ತಿದೆ. ಹಸಿವನ್ನು‌ ನೀಗಿಸುವ ರೈತರು ಮತ್ತು ಸಂಪತ್ತನ್ನು ಸೃಷ್ಟಿ ಮಾಡುವ ಕಾರ್ಮಿಕರು ನಿಜವಾದ ದೇಶಪ್ರೇಮಿಗಳು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಕೆಐಎಡಿಬಿ 2019ರಲ್ಲಿ ರೈತರಿಂದ ಸ್ವಾಧೀನ ಮಾಡಿಕೊಂಡ ಭೂಮಿಯನ್ನು ಯಾವುದೇ ಅಭಿವೃದ್ಧಿ ಮಾಡದೆ ಖಾಸಗಿ ಸಂಸ್ಥೆಯಾದ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಎಕರೆಗೆ 50 ಲಕ್ಷ ರೂ.ನಂತೆ ಕೊಡಲಾಗಿದೆ ಎಂದು ಆರೋಪಿಸಿದ ಅವರು, ಸರ್ಕಾರಿ ವಿವಿ ಆದರೆ ಎಕರೆ ಭೂಮಿಯನ್ನ 25 ಲಕ್ಷಕ್ಕೆ ಕೊಡಲಿ, ನಮ್ಮ ಅಭ್ಯಾಂತರವಿಲ್ಲ. ನಿಯಮಗಳ ಪ್ರಕಾರ ಕೆಐಎಡಿಬಿ ಸ್ವಾಧೀನ ಮಾಡಿಕೊಂಡ ಭೂಮಿಯನ್ನು ಕಾರ್ಖಾನೆಗಳ ಅಭಿವೃದ್ಧಿಗೆ ಬಳಸಬೇಕು. ಆದರೆ ರಾಜಕಾರಣಿಗಳು ಮತ್ತು ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ಖಾಸಗಿ ವಿವಿಗೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ಬೊಕ್ಕಸಕ್ಕೆ ನಷ್ಟಮಾಡಿ ವಿವಿಗೆ ಭೂಮಿ ನೀಡಿರುವವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಪಕ್ಷದ ಜಿಲ್ಲಾ ಕಾರ್ಯದರ್ಶಿ ಚಂದ್ರತೇಜಸ್ವಿ‌‌ ಮಾತನಾಡಿ, “ಕೆಐಎಡಿಬಿ ಸ್ವಾಧೀನ ಮಾಡಿಕೊಂಡ ಭೂಮಿಯನ್ನು ಸರ್ಕಾರ 116 ಖಾಸಗಿ ವಿವಿಗೆ ಮಂಜೂರಿ ಮಾಡಿದೆ. ಇದರಿಂದ ರಾಜ್ಯಕ್ಕೆ 250 ಕೋಟಿ ನಷ್ಟ ಉಂಟಾಗಿದೆ. ಬಿಜೆಪಿ ಸರ್ಕಾರದಲ್ಲಿ ತಮ್ಮ ಆರ್‌ಎಸ್‌ಎಸ್‌ನ ಅಂಗ ಸಂಸ್ಥೆಗಳಿಗೆ ಸಾವಿರಾರು ಎಕರೆ ಭೂಮಿ‌ ಮಂಜೂರು ಮಾಡಿದ್ದಾರೆ” ಎಂದು ದೂರಿದರು.

ಇದನ್ನೂ ಓದಿರಿ: ಮಧ್ಯಪ್ರದೇಶ: ಬ್ರಾಹ್ಮಣರ ವಿರುದ್ಧ ವಿವಾದಾತ್ಮಕ ಹೇಳಿಕೆ; ಪ್ರೀತಂ ಸಿಂಗ್‌ ಲೋಧಿ ಬಿಜೆಪಿಯಿಂದ ಉಚ್ಚಾಟನೆ

ನಗರ ಜಿಲ್ಲೆಯ ಕುರುಬರಹಳ್ಳಿ ಬಳಿ ನಿವೇಶನಕ್ಕಾಗಿ ಮೀಸಲಿಟ್ಟ 35 ಎಕರೆ ಭೂಮಿಯನ್ನು ಜನಸೇವಾ ಟ್ರಸ್ಟ್ ಶಿಕ್ಷಣ ಸಂಸ್ಥೆಗೆ ಅಕ್ರಮವಾಗಿ ಮಂಜೂರು ಮಾಡಿರುವುದು ತಾಜಾ ಉದಾಹರಣೆಯಾಗಿದೆ ಎಂದು ಆಕ್ರೋಶ ಹೊರಹಾಕಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಕೆಐಎಡಿಬಿ ನಿಯಮ ಮೀರಿ ಚಾಣಕ್ಯ ಖಾಸಗಿ ವಿವಿಗೆ ಭೂಮಿ ನೀಡಿರುವುದನ್ನು ಈ ಕೂಡಲೇ ರದ್ದು ಮಾಡಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿ ಆರ್.ಲತಾ ಅವರ ಮೂಲಕ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

ಕಮ್ಯುನಿಸ್ಟ್ ಪಕ್ಷದ ನಾಯಕರಾದ ಹರೀಂದ್ರ, ರುದ್ರಾರಾಧ್ಯ, ರೇಣುಕಾರಾಧ್ಯ, ಡಿಎಸ್‌ಎಸ್‌ನ ವೆಂಕಟರಾಜು, ಪಿ.ಎ.ವೆಂಕಟೇಶ್, ದಲಿತ ಮುಖಂಡ ಕಾರಳ್ಳಿ ಶ್ರೀನಿವಾಸ್, ರೈತ ಮುಖಂಡರಾದ ಮುಕುಂದ, ಪ್ರಮೋದ್ ಪ್ರತಿಭಟನೆಯಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...