Homeಕರ್ನಾಟಕಬೆಂಗಳೂರು: ಖಾಸಗಿ ವಿವಿಗೆ ನೀಡಿರುವ ಭೂಮಿ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು: ಖಾಸಗಿ ವಿವಿಗೆ ನೀಡಿರುವ ಭೂಮಿ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

- Advertisement -
- Advertisement -

ಖಾಸಗಿ ವಿದ್ಯಾಸಂಸ್ಥೆಯಾದ ಚಾಣಕ್ಯ ವಿವಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನಲ್ಲಿ 116 ಎಕರೆ ಭೂಮಿ ನೀಡಿರುವುದನ್ನು ಸರ್ಕಾರ ಈ ಕೂಡಲೇ ರದ್ದು ಮಾಡಬೇಕು ಎಂದು ಸಿಪಿಐಎಂನ ರಾಜ್ಯ ಸಮಿತಿ ಸದಸ್ಯ ಜಿ.ಸಿ.ಬೈಯ್ಯಾರೆಡ್ಡಿ ಒತ್ತಾಯಿಸಿದರು.

ಚಾಣಕ್ಯ ಖಾಸಗಿ ವಿವಿಗೆ ಅಕ್ರಮವಾಗಿ ನೀಡಿರುವ ಭೂಮಿ ರದ್ದತಿಗಾಗಿ ಕಾನೂನು ಉಲ್ಲಂಘನೆ ಮಾಡಿರುವ ಅಧಿಕಾರಿಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮಾರ್ಕ್ಸ್‌ ವಾದಿ ಕಮ್ಯುನಿಸ್ಟ್ ಪಕ್ಷದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ಬಳಿ 2019ರಲ್ಲಿ ಕೆಐಎಡಿಬಿ ರೈತರ ಫಲವತ್ತಾದ 1300 ಎಕರೆ ಕೃಷಿ ಭೂಮಿಯನ್ನು ಸ್ವಾಧೀನ ಮಾಡಿಕೊಂಡಿದೆ. ಅದರಲ್ಲಿ 116 ಎಕರೆ ಭೂಮಿಯನ್ನು ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಅಂದಿನ ಸರ್ಕಾರ ಚಾಣಕ್ಯ ವಿಶ್ವವಿದ್ಯಾಲಯ ಎಂಬ ಖಾಸಗಿ ಸಂಸ್ಥೆಗೆ ಅತೀ ಕಡಿಮೆ ದರದಲ್ಲಿ ನೀಡಿದೆ. ಇದರಿಂದ ಸರ್ಕಾರಕ್ಕೆ ₹250 ಕೋಟಿ ನಷ್ಟ ಉಂಟಾಗಿದೆ ಎಂದು ಆರೋಪಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೊಂದು ದೊಡ್ಡ ಹಗರಣವಾಗಿದ್ದು, ಇದನ್ನು ಇಲ್ಲಿಗೆ ಬಿಡುವ ಪ್ರಶ್ನೆಯೇ ಇಲ್ಲ. ರಾಜ್ಯಾದಾದ್ಯಂತ ಈ ರೀತಿಯ ಪ್ರಕರಣಗಳು ಹಲವಾರು ಬೆಳಕಿಗೆ ಬಂದಿದ್ದು ಈ ಹೋರಾಟವನ್ನು ರಾಜ್ಯವ್ಯಾಪಿ ವಿಸ್ತರಣೆ ಮಾಡುತ್ತೇವೆ ಎಂದು ಗುಡುಗಿದರು.

ದೇಶ ಸ್ವಾತಂತ್ರ್ಯ ಪಡೆದ ನಂತರ 70% ಜನರಿಗೆ ರಾಜಕೀಯ ಸ್ವಾತಂತ್ರ್ಯ ಮಾತ್ರ ಲಭಿಸಿದ್ದು, ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಇನ್ನೂ ಸಿಗಲಿಲ್ಲ. ತೊಂಬತ್ತರ ದಶಕದ ನಂತರ ಜಾಗತೀಕರಣದ ಪ್ರಭಾವದಿಂದ ದೇಶದಲ್ಲಿ ಏಳು ಲಕ್ಷ ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದುಡಿಯುವ ಕೈಗಳಿಗೆ ಕೆಲಸ ಸಿಗುತ್ತಿಲ್ಲ, ವ್ಯವಸಾಯ ಮಾಡಿ ಬದುಕಲು ಸರ್ಕಾರ ಭೂಮಿ ನೀಡುವುದಿಲ್ಲ. ರಾಜ್ಯದ ನಲವತ್ತು ಲಕ್ಷ ಎಕರೆ ಭೂಮಿಗೆ ದಲಿತರು, ಬಡ ರೈತರು ತುಂಡು ಭೂಮಿ ಪಡೆಯಲು ಅರ್ಜಿ ಹಾಕಿಕೊಂಡು ನಲವತ್ತು ವರ್ಷದಿಂದ ಕಾಯುತ್ತಿದ್ದಾರೆ. ಆದರೆ ಸರ್ಕಾರ ಅವರಿಗೆ ಭೂಮಿ‌ ನೀಡಲು ನಿರಾಕರಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರೈತರಿಗೆ ಇನ್ಮುಂದೆ ಸಾಗುವಳಿ ಚೀಟಿ ಕೊಡಲ್ಲ, ಸರ್ಕಾರಿ ಭೂಮಿಯನ್ನು ಲೀಸ್ಗೆ ಕೊಡ್ತೇವೆ ಎಂದು ಕಂದಾಯ ಸಚಿವ ಅಶೋಕ್ ಹೇಳಿದ್ದಾರೆ. ಸರ್ಕಾರ ಭೂಮಿಯನ್ನು ಬಹುರಾಷ್ಟ್ರೀಯ ಕಂಪನಿಗಳಿಗೆ‌ ಕೊಟ್ಟು ರೈತರನ್ನು ಒಕ್ಕಲೆಬ್ಬಿಸಿ ಕಂಪನಿ ಕೃಷಿಗೆ ಪ್ರೊತ್ಸಾಹ ನೀಡುತ್ತಿದೆ ಎಂದು ಎಚ್ಚರಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರ ಬಳಿ ಜಮೀನುಗಳು ಇಲ್ಲ. ಅದರಲ್ಲೂ ದೇವನಹಳ್ಳಿ ತಾಲ್ಲೂಕಿನ 70% ಭೂಮಿ ರೈತರ ಬಳಿ ಇಲ್ಲ. ಮುವ್ವತ್ತು, ಐವತ್ತು ಮತ್ತು ನೂರು ಎಕರೆ ಭೂಮಿಯನ್ನು ನಗರದ ಬಂಡವಾಳಶಾಹಿಗಳು ಖರೀದಿಸಿ ಕಾಂಪೌಂಡ್ ಹಾಕಿಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರು ಬದುಕುವುದಾದರೂ ಹೇಗೆ ಎಂದು ಪ್ರಶ್ನಿಸಿದರು.

ಸರ್ಕಾರ ದೇಶಭಕ್ತಿಯ ಪಾಠ ಮಾಡುತ್ತಿದೆ. ಹಸಿವನ್ನು‌ ನೀಗಿಸುವ ರೈತರು ಮತ್ತು ಸಂಪತ್ತನ್ನು ಸೃಷ್ಟಿ ಮಾಡುವ ಕಾರ್ಮಿಕರು ನಿಜವಾದ ದೇಶಪ್ರೇಮಿಗಳು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಕೆಐಎಡಿಬಿ 2019ರಲ್ಲಿ ರೈತರಿಂದ ಸ್ವಾಧೀನ ಮಾಡಿಕೊಂಡ ಭೂಮಿಯನ್ನು ಯಾವುದೇ ಅಭಿವೃದ್ಧಿ ಮಾಡದೆ ಖಾಸಗಿ ಸಂಸ್ಥೆಯಾದ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಎಕರೆಗೆ 50 ಲಕ್ಷ ರೂ.ನಂತೆ ಕೊಡಲಾಗಿದೆ ಎಂದು ಆರೋಪಿಸಿದ ಅವರು, ಸರ್ಕಾರಿ ವಿವಿ ಆದರೆ ಎಕರೆ ಭೂಮಿಯನ್ನ 25 ಲಕ್ಷಕ್ಕೆ ಕೊಡಲಿ, ನಮ್ಮ ಅಭ್ಯಾಂತರವಿಲ್ಲ. ನಿಯಮಗಳ ಪ್ರಕಾರ ಕೆಐಎಡಿಬಿ ಸ್ವಾಧೀನ ಮಾಡಿಕೊಂಡ ಭೂಮಿಯನ್ನು ಕಾರ್ಖಾನೆಗಳ ಅಭಿವೃದ್ಧಿಗೆ ಬಳಸಬೇಕು. ಆದರೆ ರಾಜಕಾರಣಿಗಳು ಮತ್ತು ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ಖಾಸಗಿ ವಿವಿಗೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ಬೊಕ್ಕಸಕ್ಕೆ ನಷ್ಟಮಾಡಿ ವಿವಿಗೆ ಭೂಮಿ ನೀಡಿರುವವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಪಕ್ಷದ ಜಿಲ್ಲಾ ಕಾರ್ಯದರ್ಶಿ ಚಂದ್ರತೇಜಸ್ವಿ‌‌ ಮಾತನಾಡಿ, “ಕೆಐಎಡಿಬಿ ಸ್ವಾಧೀನ ಮಾಡಿಕೊಂಡ ಭೂಮಿಯನ್ನು ಸರ್ಕಾರ 116 ಖಾಸಗಿ ವಿವಿಗೆ ಮಂಜೂರಿ ಮಾಡಿದೆ. ಇದರಿಂದ ರಾಜ್ಯಕ್ಕೆ 250 ಕೋಟಿ ನಷ್ಟ ಉಂಟಾಗಿದೆ. ಬಿಜೆಪಿ ಸರ್ಕಾರದಲ್ಲಿ ತಮ್ಮ ಆರ್‌ಎಸ್‌ಎಸ್‌ನ ಅಂಗ ಸಂಸ್ಥೆಗಳಿಗೆ ಸಾವಿರಾರು ಎಕರೆ ಭೂಮಿ‌ ಮಂಜೂರು ಮಾಡಿದ್ದಾರೆ” ಎಂದು ದೂರಿದರು.

ಇದನ್ನೂ ಓದಿರಿ: ಮಧ್ಯಪ್ರದೇಶ: ಬ್ರಾಹ್ಮಣರ ವಿರುದ್ಧ ವಿವಾದಾತ್ಮಕ ಹೇಳಿಕೆ; ಪ್ರೀತಂ ಸಿಂಗ್‌ ಲೋಧಿ ಬಿಜೆಪಿಯಿಂದ ಉಚ್ಚಾಟನೆ

ನಗರ ಜಿಲ್ಲೆಯ ಕುರುಬರಹಳ್ಳಿ ಬಳಿ ನಿವೇಶನಕ್ಕಾಗಿ ಮೀಸಲಿಟ್ಟ 35 ಎಕರೆ ಭೂಮಿಯನ್ನು ಜನಸೇವಾ ಟ್ರಸ್ಟ್ ಶಿಕ್ಷಣ ಸಂಸ್ಥೆಗೆ ಅಕ್ರಮವಾಗಿ ಮಂಜೂರು ಮಾಡಿರುವುದು ತಾಜಾ ಉದಾಹರಣೆಯಾಗಿದೆ ಎಂದು ಆಕ್ರೋಶ ಹೊರಹಾಕಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಕೆಐಎಡಿಬಿ ನಿಯಮ ಮೀರಿ ಚಾಣಕ್ಯ ಖಾಸಗಿ ವಿವಿಗೆ ಭೂಮಿ ನೀಡಿರುವುದನ್ನು ಈ ಕೂಡಲೇ ರದ್ದು ಮಾಡಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿ ಆರ್.ಲತಾ ಅವರ ಮೂಲಕ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

ಕಮ್ಯುನಿಸ್ಟ್ ಪಕ್ಷದ ನಾಯಕರಾದ ಹರೀಂದ್ರ, ರುದ್ರಾರಾಧ್ಯ, ರೇಣುಕಾರಾಧ್ಯ, ಡಿಎಸ್‌ಎಸ್‌ನ ವೆಂಕಟರಾಜು, ಪಿ.ಎ.ವೆಂಕಟೇಶ್, ದಲಿತ ಮುಖಂಡ ಕಾರಳ್ಳಿ ಶ್ರೀನಿವಾಸ್, ರೈತ ಮುಖಂಡರಾದ ಮುಕುಂದ, ಪ್ರಮೋದ್ ಪ್ರತಿಭಟನೆಯಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...