Homeಕರ್ನಾಟಕಸಕಲೇಶಪುರ: ದನ ಸಾಗಿಸುತ್ತಿದ್ದಾನೆಂದು ದಲಿತ ಮುಖಂಡನ ಮೇಲೆ ಬಜರಂಗದಳದ ದುಷ್ಕರ್ಮಿಗಳಿಂದ ಹಲ್ಲೆ

ಸಕಲೇಶಪುರ: ದನ ಸಾಗಿಸುತ್ತಿದ್ದಾನೆಂದು ದಲಿತ ಮುಖಂಡನ ಮೇಲೆ ಬಜರಂಗದಳದ ದುಷ್ಕರ್ಮಿಗಳಿಂದ ಹಲ್ಲೆ

ದಾಳಿ ಮಾಡಿದವನು ನೋಡಲು ಟೆರರಿಸ್ಟ್‌ ಥರ ಇದ್ದ ಎಂದು ಹಲ್ಲೆಗೊಳಗಾದ ದಲಿತ ಮುಖಂಡ ಮಂಜುನಾಥ್‌ ವಿವರಿಸಿದ್ದಾರೆ

- Advertisement -
- Advertisement -

ತನ್ನ ಮನೆಗೆ ವಾಹನದಲ್ಲಿ ಕರುವನ್ನು ತೆಗೆದುಕೊಂಡು ಹೋಗುತ್ತಿದ್ದ ದಲಿತ ಯುವ ಮುಖಂಡನ ಮೇಲೆ ಬಜರಂಗದಳ ಕಾರ್ಯಕರ್ತರು ಸಕಲೇಶಪುರ ಪಟ್ಟಣದ ಹೊಸ ಬಸ್‌ ನಿಲ್ದಾಣ ಬಳಿ ಹಲ್ಲೆ ನಡೆಸಿದ್ದಾರೆ ಎಂದು ‘ವಾರ್ತಾಭಾರತಿ’ ವರದಿ ಮಾಡಿದೆ.

ಹಲಸುಲಿಗೆ ಗ್ರಾಮ ಪಂಚಾಯತ್‌ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯರಾಗಿರುವ ಮಂಜುನಾಥ್‌ ಮೇಲೆ ಬಜರಂಗದಳದ ಕಾರ್ಯಕರ್ತ ದೀಪು ಹಾಗೂ ಇತರರು ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿರುವುದಾಗಿ ವರದಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಲ್ಲೆಗೆ ಒಳಗಾದ ಮಂಜುನಾಥ್‌ ಸಕಲೇಶಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬಜರಂಗದಳದ ದುಷ್ಕರ್ಮಿಗಳು ಈತನ ಅಣ್ಣನ ಮಗ ಕಾವೇಶ್ ಮೇಲೆಯೂ ಹಲ್ಲೆಗೆ ಮುಂದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಮಂಜುನಾಥ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, “ಹೊಸ ಬಸ್ ನಿಲ್ದಾಣದ ಬಳಿ ಒಬ್ಬ ಹುಡುಗ ಬಂದನು. ನಾನು ಬಜರಂಗದಳದವನು. ಲೆಟರ್‌ ಕೊಡು ಎಂದು ಕೇಳಿದನು. ಅದಕ್ಕೆ ನಾನು,- ಲೆಟರ್‌ ಕೇಳಲು ನೀನ್ಯಾರಪ್ಪ? ಪೊಲೀಸರು ಬಂದರೆ ಕೊಡುತ್ತೇನೆ. ನಿನಗೇನಾದರೂ ಸರ್ಕಾರ ಪರವಾನಗಿ ನೀಡಿದೆಯಾ? ಬೇರೆ ಏನಾದರೂ ಕೊಟ್ಟಿದೆಯಾ? ನೀನು ಎ.ಸಿ.ಯ, ಡಿ.ಸಿ.ಯ, ತಹಸೀಲ್ದಾರಾ? ಲೆಟರ್‌ ಕೇಳಲು ನೀನ್ಯಾರು? ಪೊಲೀಸರನ್ನು ಕರೆದುಕೊಂಡು ಬಾ- ಎಂದೆ. ನಾನು ನಿಮ್ಮ ಅಪ್ಪ ಎಂದು ಬೈದನು. ಬಾಯಿ ಬಂದಂತೆ ಹೀಯಾಳಿಸಿ, ನನಗೆ ಹೊಡೆದ” ಎಂದು ವಿವರಿಸಿದ್ದಾರೆ.

“ಆಟೋ ಹುಡುಗರೆಲ್ಲ ಬಂದರು. ಆ ಮೇಲೆ ನನ್ನನ್ನು ಬಿಟ್ಟು ಹೋಗಲಾಯಿತು. ನನ್ನ ಮನಸ್ಸಿಗೆ ತುಂಬಾ ಬೇಜಾರಾಗಿದೆ. ನಾನು ಮಾಜಿ ಗ್ರಾಪಂ ಅಧ್ಯಕ್ಷ. ನಾಲ್ಕೂರು ಜನರಿಗೆ ಅನುಕೂಲವಾಗುವಂತೆ ಕಾನೂನುಬದ್ಧವಾಗಿ ಕೆಲಸ ಮಾಡುತ್ತೇನೆ.  ಯಾರಿಗೂ ತೊಂದರೆ ಮಾಡಿಲ್ಲ. ನನಗೆ ತೊಂದರೆ ನೀಡಿದ ಈತನಿಗೆ ತಕ್ಕ ಶಿಕ್ಷೆಯಾಗಬೇಕು. ಈ ರೀತಿಯ ಕಿಡಿಗೇಡಿಗಳನ್ನು ಬಜರಂಗದಳದಲ್ಲಿ ಇಟ್ಟುಕೊಳ್ಳಬೇಡಿ” ಎಂದಿದ್ದಾರೆ.

“ಅವನು ನೋಡಲು ಟೆರರಿಸ್ಟ್‌ ಥರ ಇದ್ದಾನೆ. ಅವನ ಮೂಲ ಯಾವುದೆಂದು ಕಂಡುಹಿಡಿಯಬೇಕು. ಅವನನ್ನು ಗಡಿಪಾರು ಮಾಡಬೇಕು. ನಾವು ನಮ್ಮ ತಾತ, ಮುತ್ತಾತನನ ಕಾಲದಿಂದಲೂ ಇಲ್ಲಿ ವಾಸವಿದ್ದೇವೆ. ನಮಗೆ ಬೆಲೆ ಇಲ್ಲ ಎಂದ ಮೇಲೆ ಈ ರೀತಿಯ ಟೆರರಿಸ್ಟ್‌ಗಳಿಗೆ ಬೆಲೆ ಕೊಡುವುದೇ? ಆತನನ್ನು ಗಡಿಪಾರು ಮಾಡಿ ನನಗೆ ನ್ಯಾಯ ಒದಗಿಸಬೇಕು. ಇಲ್ಲವಾದರೆ ಹೋರಾಟ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

ವಾಹನದಲ್ಲಿ ಕಾನೂನಾತ್ಮಕವಾಗಿ ಕರು ಸಾಗಿಸುತ್ತಿದ್ದ ಸಂದರ್ಭದಲ್ಲಿ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಸಕಲೇಶಪುರ ತಾಲೂಕಿನ ವಿವಿಧ ದಲಿತ ಸಂಘಟನೆ ಮುಖಂಡರು ಠಾಣೆ ಎದುರು ಜಮಾಯಿಸಿ, ಪ್ರತಿಭಟನೆ ನಡೆಸಿ ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಪ್ರತಿಭಟನೆ ವೇಳೆ ಮಾತನಾಡಿದ ಕಾಂಗ್ರೆಸ್‌ ಹಾಗೂ ದಲಿತ ಮುಖಂಡ ಬೈಕೆರೆ ದೇವರಾಜ್‌, “ಬಜರಂಗದಳದ ಕಾರ್ಯಕರ್ತರ ಅಟ್ಟಹಾಸ ತಾಲ್ಲೂಕಿನಲ್ಲಿ ದಿನೇದಿನೇ ಹೆಚ್ಚಾಗುತ್ತಿದೆ. ನಾವ್ಯಾರೂ ಹಿಂದೂಗಳಲ್ಲವಾ? ಅವರು ಮಾತ್ರ ಹಿಂದೂಗಳಾ” ಎಂದು ಪ್ರಶ್ನಿಸಿದ್ದಾರೆ.

“ದಲಿತರು ಮೌನವಾಗಿದ್ದಾರೆ ಎಲ್ಲವನ್ನೂ ಸಹಿಸಿಕೊಳ್ಳುತ್ತಾರೆ ಎಂದು ತಿಳಿದಿದ್ದರೆ ಅದು ತಪ್ಪು. ದಲಿತರು ಬೀದಿಗಿಳಿದರೆ ಇದರ ಪರಿಣಾಮ ಏನಾಗುತ್ತದೆ ಎಂಬುದನ್ನು ಈ ಬಜರಂಗದಳದ ಕಾರ್ಯಕರ್ತರು ಅರ್ಥಮಾಡಿಕೊಳ್ಳಬೇಕು. ನಿಮ್ಮ ಪುಂಡಾಟಿಕೆಯನ್ನು ದಲಿತರು ಇನ್ನು ಸಹಿಸಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ಬ್ರಾಹ್ಮಣರ ವಿರುದ್ಧ ವಿವಾದಾತ್ಮಕ ಹೇಳಿಕೆ; ಪ್ರೀತಂ ಸಿಂಗ್‌ ಲೋಧಿ ಬಿಜೆಪಿಯಿಂದ ಉಚ್ಚಾಟನೆ

ವಕೀಲರಾದ ವೇಣುಕುಮಾರ್ ಮಾತನಾಡಿ, “ತಾಲೂಕಿನ ಶಾಂತಿಯನ್ನು ಕದಡಲು ಪ್ರಯತ್ನಿಸುತ್ತಿದ್ದು ಬಜರಂಗದಳದ ಕೃತ್ಯಗಳನ್ನು ನಾವು ಖಂಡಿಸುತ್ತೇವೆ. ಮತೀಯ ಗೂಂಡಾಗಿರಿ ನಡೆಸಲು ಸರಕಾರ ಇವರಿಗೆ ಯಾವ ಹಕ್ಕು ನೀಡಿದೆ?” ಎಂದು ಪ್ರಶ್ನಿಸಿರುವ ಅವರು, “ಪೊಲೀಸರು ದುಷ್ಕರ್ಮಿಗಳನ್ನು ಈ ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

“ನಾವು ಸಂವಿಧಾನಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿಗಳು. ಶಾಂತಿಗೆ ಭಂಗ ತರುವುದಕ್ಕೆ ನಾವು ಇಷ್ಟಪಡುವುದಿಲ್ಲ. ಆದರೆ ಸ್ವಾಭಿಮಾನಕ್ಕೆ ಧಕ್ಕೆಯಾದರೆ ನಾವು ಸುಮ್ಮನಿರುವುದಿಲ್ಲ” ಎಂಬ ಸ್ಪಷ್ಟ ಸಂದೇಶವನ್ನು ಅವರು ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಹಲವು ದಲಿತ ಮುಖಂಡರು ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹಲ್ಲೆ ನಡೆಸಿದ ಬಜರಂಗಿ ದಳದ ಬೇವರ್ಸಿಗಳಿಗೆ ಅವರದೇ ಭಾಷೆಯಲ್ಲಿ ದಲಿತರು ಸಹ ತಿರುಗೇಟು ಮುಟ್ಟಿನೋಡಿಕೊಳ್ಳುವ ಹಾಗೆ ನೀಡಬೇಕು ,ಆಗ ಉಷಾರಾಗುತ್ತಾರೆ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...