Homeಮುಖಪುಟಮೊಟ್ಟೆ ಎಸೆದವ ಆರ್‌ಎಸ್‌ಎಸ್ಸೋ/ಬಿಜೆಪಿಯೋ, ಕಾಂಗ್ರೆಸ್ಸೋ, ಜೆಡಿಎಸ್ಸೋ?

ಮೊಟ್ಟೆ ಎಸೆದವ ಆರ್‌ಎಸ್‌ಎಸ್ಸೋ/ಬಿಜೆಪಿಯೋ, ಕಾಂಗ್ರೆಸ್ಸೋ, ಜೆಡಿಎಸ್ಸೋ?

- Advertisement -
- Advertisement -

ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಡಗಿಗೆ ಆಗಮಿಸಿದ್ದ ವೇಳೆ ಅವರ ಕಾರಿನ ಮೇಲೆ  ಮೊಟ್ಟೆ ಎಸೆದು ಸಿಕ್ಕಿಬಿದ್ದಿರುವ ಆರೋಪಿ ಸಂಪತ್, ಯಾವ ಪಕ್ಷದವನು ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಆತ ಬಿಜೆಪಿ ಕಾರ್ಯಕರ್ತ ಎಂಬ ಆರೋಪಗಳಿವೆ. ಆದರೆ ಆರೋಪಿ ನೀಡುತ್ತಿರುವ ಹೇಳಿಕೆಗಳು ಗೊಂದಲಕಾರಿಯಾಗಿವೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಆತನ ಫೋಟೋಗಳು ಸಂಶಯಗಳಿಗೆ ಎಡೆಮಾಡಿಕೊಟ್ಟಿವೆ.

ಆರೋಪಿ ಸಂಪತ್‌ ಆರ್‌ಎಸ್‌ಎಸ್‌/ಬಿಜೆಪಿಯವನೋ, ಕಾಂಗ್ರೆಸ್‌ ಪಕ್ಷದವನೋ ಅಥವಾ ಜೆಡಿಎಸ್‌ಗೆ ಸೇರಿದವನೋ ಎಂಬುದು ಈಗ ಚರ್ಚೆಗೆ ಗ್ರಾಸವಾಗಿದೆ.

throwing eggs at Siddaramaiahs car arrested man which party rsk mrq

“ನಾನು ಕೂಡ ಕಾಂಗ್ರೆಸ್ ಕಾರ್ಯಕರ್ತ” ಎಂದು ಸಂಪತ್‌ ಹೇಳಿದ ಬಳಿಕ ಆತನ ಹಳೆಯ ಫೋಟೋಗಳು ಹರಿದಾಡಿದವು. ಬಿಜೆಪಿ ಶಾಸಕ ಅಪ್ಪಚ್ಚು ರಂಜನ್‌ ಅವರ ಜೊತೆ ಕೇಸರಿ ಶಾಲು ಧರಿಸಿ ಆತ ನಿಂತಿರುವ ಫೋಟೋವನ್ನು ಸ್ವತಃ ಸಿದ್ದರಾಮಯ್ಯನವರೇ ಹಂಚಿಕೊಂಡರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ BJP Karnataka ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಬಂದಿದ್ದು ಯಾಕೆ? ಕಾಂಗ್ರೆಸ್‌ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

“’ಆಪರೇಷನ್ ಕಮಲ’ ಎಂದರೆ ಶಾಸಕರಿಗೆ ಮಾತ್ರ ಎಂದು ತಿಳಿದುಕೊಂಡಿದ್ದೆವು. ಈಗ ಬೀದಿ ಪುಂಡರ ‘ಆಪರೇಷನ್ ಕಮಲ’ ಕೂಡಾ ಬಿಜೆಪಿ ನಡೆಸುತ್ತದೆ ಎಂದು‌ ಮಡಿಕೇರಿಯಲ್ಲಿ ಸಾಬೀತಾಗಿದೆ. ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ. ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ?” ಎಂದು ಕೇಳಿದರು.

ಮೊಟ್ಟೆ ಹೊಡೆದಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಮೊಟ್ಟೆ ಹೊಡೆದ ಕಿಡಿಗೇಡಿ ಕಾಂಗ್ರೆಸ್ ಕಾರ್ಯಕರ್ತ ಎಂದು ಬಿಜೆಪಿಯ ಹಲವರು ಪ್ರತಿಪಾದಿಸಿದರು. ಆರೋಪಿ ಸಂಪತ್ ಕಾಂಗ್ರೆಸ್ ಬಾವುಟ ಹಿಡಿದಿರುವ ಫೋಟೋ ಬಿಡುಗಡೆ ಮಾಡಿದರು. ಆದರೆ ಶನಿವಾರ ಬೆಳಿಗ್ಗೆ ಮಡಿಕೇರಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ಗೌಡ, “ಮೊಟ್ಟೆ ಹೊಡೆದ ಕಿಡಿಗೇಡಿ ಬಿಜೆಪಿ ಪಕ್ಷದ ಕಾರ್ಯಕರ್ತ” ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅವರೊಂದಿಗೆ ಸಂಪತ್ ಇರುವ ಫೋಟೋಗಳನ್ನು ಬಿಡುಗಡೆ ಮಾಡಿದರು.

throwing eggs at Siddaramaiahs car arrested man which party rsk mrq

ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಶಾಸಕ ಅಪ್ಪಚ್ಚು ರಂಜನ್, “ಈತ ಯಾರು ಎನ್ನುವುದೇ ಗೊತ್ತಿಲ್ಲ, ಆತನ ಪರಿಚಯವೂ ಇಲ್ಲ. ಆದರೆ ಕಾರ್ಯಕರ್ತರನ್ನು ವಿಚಾರಿಸಿದಾಗ ಅವನು ರಾಮನವಮಿಯಲ್ಲಿ ನಿಮ್ಮೊಂದಿಗೆ ಕೇಸರಿ ಶಲ್ಯ ಹಾಕಿಕೊಂಡು ಫೋಟೋ ತೆಗೆಸಿಕೊಂಡಿದ್ದ ಎಂದು ತಿಳಿದುಬಂದಿತು” ಎಂದಿದ್ದಾರೆ.

ಇಷ್ಟರ ನಡುವೆ ಕಾಂಗ್ರೆಸ್‌ ಪಕ್ಷದ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಮತ್ತೊಂದು ಟ್ವೀಟ್ ಮಾಡಲಾಗಿದ್ದು, ಆರ್‌ಎಸ್‌ಎಸ್‌ ಜೊತೆಗೆ ಸಂಪತ್‌ನ ಸಂಪರ್ಕ ಇತ್ತೆಂದು ಪ್ರತಿಪಾದಿಸಲಾಗಿದೆ. “ಆರ್‌ಎಸ್‌ಎಸ್‌ ಶಿಬಿರದಲ್ಲಿ ಸಂತೋಷ್ ಪಾಲ್ಗೊಂಡಿದ್ದಾನೆ” ಎಂದು ಕಾಂಗ್ರೆಸ್ ಹೇಳಿದೆ.

“ಬಿಜೆಪಿ ಮತ್ತು ಆರ್‌ಎಸ್‌ಎಸ್‌ ತನ್ನ ಅಜೆಂಡಾ ಸ್ಥಾಪಿಸಲು ತಮ್ಮಲ್ಲಿನ ಮುಗ್ದ ಕಾರ್ಯಕರ್ತರಿಗೆ ಯಾವ ವೇಷವನ್ನು ಬೇಕಿದ್ದರೂ ಹಾಕಿ ಕಳಿಸುತ್ತವೆ. ಯಾವ ಕೃತ್ಯಗಳನ್ನು ಬೇಕಿದ್ದರೂ ಮಾಡಿಸುತ್ತವೆ, ಅವರನ್ನೇ ಕೊಂದು ಚಿತೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತವೆ. ಆರ್‌ಎಸ್‌ಎಸ್‌ ‘ಪ್ಯಾಂಟು’ ತೊಟ್ಟವನಿಗೆ ಕಾಂಗ್ರೆಸ್ ವೇಷ ತೋಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೇ?” ಎಂದು ಕಾಂಗ್ರೆಸ್ ಕುಟುಕಿದೆ.

ಇಷ್ಟೆಲ್ಲದರ ನಡುವೆ ಸಂತೋಷ್‌ ಮೂಲತಃ ಜೆಡಿಎಸ್‌ನವನು ಎಂದು ಹೇಳಲಾಗುತ್ತಿದೆ.

ಟಿ.ವಿ.9 ಕನ್ನಡ ಸುದ್ದಿವಾಹಿನಿಯ ಜೊತೆ ಮಾತನಾಡಿರುವ ಆರೋಪಿ ಸಂತೋಷ್‌, “ನನಗೆ ಹೆದರಿಕೆಯೇನೂ ಆಗುತ್ತಿಲ್ಲ. ಆದರೆ ಈಗ ಬೆದರಿಕೆ ಕರೆಗಳು ಬರುತ್ತಿವೆ. ನನ್ನ ಮನೆಗೆ ಬೆಂಕಿ ಇಡುವುದಾಗಿ, ಬಸ್‌ಸ್ಟ್ಯಾಂಡ್‌ನಲ್ಲಿ ನಿಲ್ಲಿಸಿ ಮೊಟ್ಟೆ ಸ್ನಾನ ಮಾಡಿಸುವುದಾಗಿ ಹೇಳುತ್ತಿದ್ದಾರೆ” ಎಂದು ಆರೋಪಿಸಿದ್ದಾನೆ.

“ನೀವು ನಿಜವಾಗಿಯೂ ಯಾವ ಪಕ್ಷದವರು? ಜೆಡಿಎಸ್‌ನಲ್ಲಿದ್ದ ಜೀವಿಜಯ ಅವರ ಅನುಯಾಯಿ ಎಂದೂ ನೀವು ಹೇಳಿಕೊಂಡಿದ್ದೀರಿ? ನೀವು ನಿಜಕ್ಕೂ ಯಾವ ಪಕ್ಷದವರು?” ಎಂದು ಟಿ.ವಿ.9 ಪ್ರತಿನಿಧಿ ಕೇಳಿದಾಗ, “ನಾನು ಜೆಡಿಎಸ್‌. ಮೂಲತಃ ನಾನು ಮೊದಲು ಜೆಡಿಎಸ್‌ನಲ್ಲಿದ್ದೆ. ಲೋಕಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಜೊತೆಯಾಗಿ ಸ್ಪರ್ಧೆ ಮಾಡಿದವು. ಕಾಂಗ್ರೆಸ್‌ ಪಕ್ಷಕ್ಕಾಗಿ ಕೆಲಸ ಮಾಡಲು ಹೇಳಿದರು. ಆಗ ನಾನು ಕಾಂಗ್ರೆಸ್‌ಗೆ ಕೆಲಸ ಮಾಡಿದ್ದೇನೆ. ನಂತರ ಪಟ್ಟಣ ಪಂಚಾಯಿತಿ ಚುನಾವಣೆ ಬಂತು. ಹನ್ನೊಂದು ವಾರ್ಡ್‌ಗಳಲ್ಲಿ ಐದು ವಾರ್ಡ್ ಜೆಡಿಎಸ್‌ಗೆ ಮೀಸಲಾದವು. ನನ್ನ ವಾರ್ಡ್ ಕಾಂಗ್ರೆಸ್‌ಗೆ ಸೀಮಿತವಾಯ್ತು. ಕಾಂಗ್ರೆಸ್‌ಗಾಗಿ ಕೆಲಸ ಮಾಡಿದ್ದೇನೆ. ಯಾರೂ ಇರಲಿಲ್ಲ. ಕಾಂಗ್ರೆಸ್‌ನವರು ಒಬ್ಬರೇ ಒಬ್ಬರು ಬಂದಿಲ್ಲ” ಎಂದಿದ್ದಾನೆ.

ಇದನ್ನೂ ಓದಿರಿ: ಸಕಲೇಶಪುರ: ದನ ಸಾಗಿಸುತ್ತಿದ್ದಾನೆಂದು ದಲಿತ ಮುಖಂಡನ ಮೇಲೆ ಬಜರಂಗದಳದ ದುಷ್ಕರ್ಮಿಗಳಿಂದ ಹಲ್ಲೆ

ಕೇಸರಿ ವಸ್ತ್ರ ಧರಿಸಿ ಹಲವು ಕಾರ್ಯಕ್ರಮಗಳಲ್ಲಿ ಆತ ಭಾಗಿಯಾಗಿದ್ದಾನೆಂದು ಪ್ರತಿಪಾದಿಸಿದ ಹಲವಾರು ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್‌ ಮಟ್ಟು ಅವರು ಫೇಸ್‌ಬುಕ್‌ನಲ್ಲಿ, “ಈ ಮೊಟ್ಟೆಯ ಸಂಪತ್‌, ರಂಜನ್‌ ಅವರನ್ನು ಅಪ್ಪಚ್ಚಿ ಮಾಡಿಬಿಟ್ಟಿದ್ದಾನೆ” ಎಂಬ ಶೀರ್ಷಿಕೆಯೊಂದಿಗೆ ಹಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಹೀಗೆ ಆರೋಪಿ ಸಂಪತ್ ಸುತ್ತ ಹಲವು ಸುದ್ದಿಗಳು ಹುಟ್ಟಿಕೊಂಡಿವೆ. ಆತ ಮೂಲತಃ ಆರ್‌ಎಸ್‌ಎಸ್ಸೋ/ಬಿಜೆಪಿಯೋ, ಕಾಂಗ್ರೆಸ್ಸೋ, ಜೆಡಿಎಸ್ಸೋ ಎಂಬ ಗೊಂದಲಗಳು ಹುಟ್ಟಿಕೊಂಡಿವೆ. ಆದರೆ ದುಷ್ಕೃತ್ಯ ನಡೆಸಿ ಆತ ಪೇಚಿಗೆ ಸಿಲುಕಿರುವುದಂತೂ ಮೇಲು ನೋಟಕ್ಕೆ ಸ್ಪಷ್ಟವಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...