Homeಮುಖಪುಟ100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌...

100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌ ಅರೆಸ್ಟ್‌‌!

ಚೀನಾ ಮೂಲದವರು ನಡೆಸುತ್ತಿದ್ದ ₹ 500 ಕೋಟಿ ತ್ವರಿತ ಸಾಲ ಮತ್ತು ಸುಲಿಗೆ ದಂಧೆಯಲ್ಲಿ ಭಾಗಿಯಾಗಿದ್ದಕ್ಕಾಗಿ ದೇಶಾದ್ಯಂತ 22 ಜನರನ್ನು ಬಂಧಿಸಲಾಗಿದೆ.

- Advertisement -
- Advertisement -

ಚೀನಾದ ಕೆಲವು ಪ್ರಜೆಗಳು ನಡೆಸುತ್ತಿದ್ದ ₹ 500 ಕೋಟಿ ತ್ವರಿತ ಸಾಲ ಮತ್ತು ಸುಲಿಗೆ ದಂಧೆಯಲ್ಲಿ ಭಾಗಿಯಾಗಿದ್ದಕ್ಕಾಗಿ ದೇಶಾದ್ಯಂತ 22 ಜನರನ್ನು ಬಂಧಿಸಲಾಗಿದೆ.

ಈ ದಂಧೆಯಲ್ಲಿ 100ಕ್ಕೂ ಹೆಚ್ಚು ಅಪ್ಲಿಕೇಶನ್‌ಗಳನ್ನು ಬಳಸಲಾಗಿದ್ದು, ಬಳಕೆದಾರರಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಇವುಗಳ ಮೂಲಕ ಸಂಗ್ರಹಿಸಲಾಗುತ್ತಿತ್ತು. ಬಳಿಕ ಅದನ್ನು ಚೀನಾ ಮತ್ತು ಹಾಂಗ್ ಕಾಂಗ್ ಮೂಲದ ಸರ್ವರ್‌ಗಳಿಗೆ ಅಪ್‌ಲೋಡ್ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎರಡು ತಿಂಗಳ ಕಾಲ ನಡೆದ ಗ್ಯಾಂಗ್ ಕಾರ್ಯಾಚರಣೆಯ ಬಳಿಕ ದೆಹಲಿ ಪೊಲೀಸರು ಕದೀಮರನ್ನು ಬಂಧಿಸಿದ್ದಾರೆ. ದೆಹಲಿ, ಕರ್ನಾಟಕ, ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಈ ಜಾಲ ಹರಡಿತ್ತು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಲಕ್ನೋದ ಕಾಲ್ ಸೆಂಟರ್ ಮೂಲದ ಗ್ಯಾಂಗ್ ಸಣ್ಣ ಪ್ರಮಾಣದ ಸಾಲವನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸುತ್ತಿತ್ತು. ಬಳಕೆದಾರರು ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಿದ ನಂತರ ಮತ್ತು ಅಪ್ಲಿಕೇಶನ್‌ಗೆ ತಮ್ಮ ಅನುಮತಿಗಳನ್ನು ನೀಡಿದ ನಂತರ, ಈ ಗ್ಯಾಗ್‌ ಕೆಲವೇ ನಿಮಿಷಗಳಲ್ಲಿ ಬಳಕೆದಾರರ ಖಾತೆಗೆ ಸಾಲದ ಹಣವನ್ನು ನೀಡುತ್ತಿತ್ತು ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ.

ನಕಲಿ ಗುರುತಿನ ಚೀಟಿಯಲ್ಲಿ ಪಡೆದ ವಿವಿಧ ಸಂಖ್ಯೆಗಳಿಂದ ಈ ಗ್ಯಾಂಗ್ ಬಳಕೆದಾರರಿಗೆ ಕರೆ ಮಾಡಿ, ತಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಮಾರ್ಫ್ ಮಾಡಿದ ನಗ್ನ ಚಿತ್ರಗಳನ್ನು ಇಂಟರ್ನೆಟ್‌ನಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಸಿ ಹಣ ಸುಲಿಗೆ ಮಾಡುತ್ತಿತ್ತು ಎಂದು ಉಪ ಪೊಲೀಸ್ ಆಯುಕ್ತ (ಐಎಫ್‌ಎಸ್‌ಒ) ಕೆಪಿಎಸ್ ಮಲ್ಹೋತ್ರಾ ಮಾಹಿತಿ ನೀಡಿದ್ದಾರೆ.

ಸಾಮಾಜಿಕ ಸ್ಥಾನಮಾನದ ಭಯ ಮತ್ತು ಕಳಂಕ್ಕೆ ಹೆದರಿ ಬಳಕೆದಾರರು ಹಣವನ್ನು ಪಾವತಿಸುತ್ತಿದ್ದರು. ಈ ಹಣವನ್ನು ಹವಾಲಾ ಮೂಲಕ ಅಥವಾ ಕ್ರಿಪ್ಟೋಕರೆನ್ಸಿಗಳನ್ನು ಖರೀದಿಸಿದ ನಂತರ ಚೀನಾಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಗ್ಯಾಂಗ್ ಅನೇಕ ಖಾತೆಗಳನ್ನು ಬಳಸಿದೆ ಎಂದು ವರದಿಯಾಗಿದೆ. ಪ್ರತಿ ಖಾತೆಯೂ ದಿನಕ್ಕೆ ₹ 1 ಕೋಟಿಗೂ ಹೆಚ್ಚು ಹಣವನ್ನು ರಿಸೀವ್ ಮಾಡಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಬಳಸಲಾದ ಅಪ್ಲಿಕೇಶನ್‌ಗಳನ್ನು ಕ್ಯಾಶ್ ಪೋರ್ಟ್, ರುಪೇ ವೇ, ಲೋನ್ ಕ್ಯೂಬ್, ವಾವ್ ರೂಪಾಯಿ, ಸ್ಮಾರ್ಟ್ ವಾಲೆಟ್, ಜೈಂಟ್ ವಾಲೆಟ್, ಹೈ ರೂಪಾಯಿ, ಸ್ವಿಫ್ಟ್ ರೂಪಾಯಿ, ವಾಲೆಟ್‌ವಿನ್, ಫಿಶ್‌ಕ್ಲಬ್, ಯೆಹ್‌ಕ್ಯಾಶ್, ಇಮ್ ಲೋನ್, ಗ್ರೋಟ್ರೀ, ಮ್ಯಾಜಿಕ್ ಬ್ಯಾಲೆನ್ಸ್, ಯೋಕಾಶ್, ಫಾರ್ಚೂನ್ ಟ್ರೀ, ಸೂಪರ್‌ಕಾಯಿನ್, ರೆಡ್ ಮ್ಯಾಜಿಕ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿರಿ: ಮೊಟ್ಟೆ ಎಸೆದವ ಆರ್‌ಎಸ್‌ಎಸ್ಸೋ/ಬಿಜೆಪಿಯೋ, ಕಾಂಗ್ರೆಸ್ಸೋ, ಜೆಡಿಎಸ್ಸೋ?

ಪೊಲೀಸರು ಕನಿಷ್ಠ 51 ಮೊಬೈಲ್ ಫೋನ್‌ಗಳು, 25 ಹಾರ್ಡ್ ಡಿಸ್ಕ್‌ಗಳು, ಒಂಬತ್ತು ಲ್ಯಾಪ್‌ಟಾಪ್‌ಗಳು, 19 ಡೆಬಿಟ್ ಕಾರ್ಡ್‌ಗಳು/ಕ್ರೆಡಿಟ್ ಕಾರ್ಡ್‌ಗಳು, ಮೂರು ಕಾರುಗಳು ಮತ್ತು ₹ 4 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.

ಚೀನಾದ ಪ್ರಜೆಗಳ ಸೂಚನೆ ಮೇರೆಗೆ ಈ ದಂಧೆ ನಡೆಸಲಾಗಿದೆ ಎಂದು ಬಂಧಿತರು ಪೊಲೀಸರಲ್ಲಿ ಒಪ್ಪಿಕೊಂಡಿದ್ದಾರೆ. ಪೊಲೀಸರು ಕೆಲವು ಚೀನೀ ಪ್ರಜೆಗಳನ್ನು ಗುರುತಿಸಿದ್ದಾರೆ. ಅವರನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ಪೊಲೀಸರು ತಮ್ಮ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆ ಈ ದಂಧೆಕೋರರು ತಮ್ಮ ರಿಕವರಿ ಕಾಲ್ ಸೆಂಟರ್‌ಗಳನ್ನು ಪಾಕಿಸ್ತಾನ, ನೇಪಾಳ ಮತ್ತು ಬಾಂಗ್ಲಾದೇಶಕ್ಕೆ ಸ್ಥಳಾಂತರಿಸುತ್ತಿದ್ದಾರೆ. ಇಲ್ಲಿಯವರೆಗೆ ₹ 500 ಕೋಟಿಗೂ ಹೆಚ್ಚು ಹಣವನ್ನು ಚೀನಾ ಪ್ರಜೆಗಳು ಕಬಳಿಸಿದ್ದಾರೆ ಎಂದು ಪೊಲೀಸರು ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...