Homeಮುಖಪುಟ100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌...

100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌ ಅರೆಸ್ಟ್‌‌!

ಚೀನಾ ಮೂಲದವರು ನಡೆಸುತ್ತಿದ್ದ ₹ 500 ಕೋಟಿ ತ್ವರಿತ ಸಾಲ ಮತ್ತು ಸುಲಿಗೆ ದಂಧೆಯಲ್ಲಿ ಭಾಗಿಯಾಗಿದ್ದಕ್ಕಾಗಿ ದೇಶಾದ್ಯಂತ 22 ಜನರನ್ನು ಬಂಧಿಸಲಾಗಿದೆ.

- Advertisement -
- Advertisement -

ಚೀನಾದ ಕೆಲವು ಪ್ರಜೆಗಳು ನಡೆಸುತ್ತಿದ್ದ ₹ 500 ಕೋಟಿ ತ್ವರಿತ ಸಾಲ ಮತ್ತು ಸುಲಿಗೆ ದಂಧೆಯಲ್ಲಿ ಭಾಗಿಯಾಗಿದ್ದಕ್ಕಾಗಿ ದೇಶಾದ್ಯಂತ 22 ಜನರನ್ನು ಬಂಧಿಸಲಾಗಿದೆ.

ಈ ದಂಧೆಯಲ್ಲಿ 100ಕ್ಕೂ ಹೆಚ್ಚು ಅಪ್ಲಿಕೇಶನ್‌ಗಳನ್ನು ಬಳಸಲಾಗಿದ್ದು, ಬಳಕೆದಾರರಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಇವುಗಳ ಮೂಲಕ ಸಂಗ್ರಹಿಸಲಾಗುತ್ತಿತ್ತು. ಬಳಿಕ ಅದನ್ನು ಚೀನಾ ಮತ್ತು ಹಾಂಗ್ ಕಾಂಗ್ ಮೂಲದ ಸರ್ವರ್‌ಗಳಿಗೆ ಅಪ್‌ಲೋಡ್ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎರಡು ತಿಂಗಳ ಕಾಲ ನಡೆದ ಗ್ಯಾಂಗ್ ಕಾರ್ಯಾಚರಣೆಯ ಬಳಿಕ ದೆಹಲಿ ಪೊಲೀಸರು ಕದೀಮರನ್ನು ಬಂಧಿಸಿದ್ದಾರೆ. ದೆಹಲಿ, ಕರ್ನಾಟಕ, ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಈ ಜಾಲ ಹರಡಿತ್ತು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಲಕ್ನೋದ ಕಾಲ್ ಸೆಂಟರ್ ಮೂಲದ ಗ್ಯಾಂಗ್ ಸಣ್ಣ ಪ್ರಮಾಣದ ಸಾಲವನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸುತ್ತಿತ್ತು. ಬಳಕೆದಾರರು ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಿದ ನಂತರ ಮತ್ತು ಅಪ್ಲಿಕೇಶನ್‌ಗೆ ತಮ್ಮ ಅನುಮತಿಗಳನ್ನು ನೀಡಿದ ನಂತರ, ಈ ಗ್ಯಾಗ್‌ ಕೆಲವೇ ನಿಮಿಷಗಳಲ್ಲಿ ಬಳಕೆದಾರರ ಖಾತೆಗೆ ಸಾಲದ ಹಣವನ್ನು ನೀಡುತ್ತಿತ್ತು ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ.

ನಕಲಿ ಗುರುತಿನ ಚೀಟಿಯಲ್ಲಿ ಪಡೆದ ವಿವಿಧ ಸಂಖ್ಯೆಗಳಿಂದ ಈ ಗ್ಯಾಂಗ್ ಬಳಕೆದಾರರಿಗೆ ಕರೆ ಮಾಡಿ, ತಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಮಾರ್ಫ್ ಮಾಡಿದ ನಗ್ನ ಚಿತ್ರಗಳನ್ನು ಇಂಟರ್ನೆಟ್‌ನಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಸಿ ಹಣ ಸುಲಿಗೆ ಮಾಡುತ್ತಿತ್ತು ಎಂದು ಉಪ ಪೊಲೀಸ್ ಆಯುಕ್ತ (ಐಎಫ್‌ಎಸ್‌ಒ) ಕೆಪಿಎಸ್ ಮಲ್ಹೋತ್ರಾ ಮಾಹಿತಿ ನೀಡಿದ್ದಾರೆ.

ಸಾಮಾಜಿಕ ಸ್ಥಾನಮಾನದ ಭಯ ಮತ್ತು ಕಳಂಕ್ಕೆ ಹೆದರಿ ಬಳಕೆದಾರರು ಹಣವನ್ನು ಪಾವತಿಸುತ್ತಿದ್ದರು. ಈ ಹಣವನ್ನು ಹವಾಲಾ ಮೂಲಕ ಅಥವಾ ಕ್ರಿಪ್ಟೋಕರೆನ್ಸಿಗಳನ್ನು ಖರೀದಿಸಿದ ನಂತರ ಚೀನಾಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಗ್ಯಾಂಗ್ ಅನೇಕ ಖಾತೆಗಳನ್ನು ಬಳಸಿದೆ ಎಂದು ವರದಿಯಾಗಿದೆ. ಪ್ರತಿ ಖಾತೆಯೂ ದಿನಕ್ಕೆ ₹ 1 ಕೋಟಿಗೂ ಹೆಚ್ಚು ಹಣವನ್ನು ರಿಸೀವ್ ಮಾಡಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಬಳಸಲಾದ ಅಪ್ಲಿಕೇಶನ್‌ಗಳನ್ನು ಕ್ಯಾಶ್ ಪೋರ್ಟ್, ರುಪೇ ವೇ, ಲೋನ್ ಕ್ಯೂಬ್, ವಾವ್ ರೂಪಾಯಿ, ಸ್ಮಾರ್ಟ್ ವಾಲೆಟ್, ಜೈಂಟ್ ವಾಲೆಟ್, ಹೈ ರೂಪಾಯಿ, ಸ್ವಿಫ್ಟ್ ರೂಪಾಯಿ, ವಾಲೆಟ್‌ವಿನ್, ಫಿಶ್‌ಕ್ಲಬ್, ಯೆಹ್‌ಕ್ಯಾಶ್, ಇಮ್ ಲೋನ್, ಗ್ರೋಟ್ರೀ, ಮ್ಯಾಜಿಕ್ ಬ್ಯಾಲೆನ್ಸ್, ಯೋಕಾಶ್, ಫಾರ್ಚೂನ್ ಟ್ರೀ, ಸೂಪರ್‌ಕಾಯಿನ್, ರೆಡ್ ಮ್ಯಾಜಿಕ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿರಿ: ಮೊಟ್ಟೆ ಎಸೆದವ ಆರ್‌ಎಸ್‌ಎಸ್ಸೋ/ಬಿಜೆಪಿಯೋ, ಕಾಂಗ್ರೆಸ್ಸೋ, ಜೆಡಿಎಸ್ಸೋ?

ಪೊಲೀಸರು ಕನಿಷ್ಠ 51 ಮೊಬೈಲ್ ಫೋನ್‌ಗಳು, 25 ಹಾರ್ಡ್ ಡಿಸ್ಕ್‌ಗಳು, ಒಂಬತ್ತು ಲ್ಯಾಪ್‌ಟಾಪ್‌ಗಳು, 19 ಡೆಬಿಟ್ ಕಾರ್ಡ್‌ಗಳು/ಕ್ರೆಡಿಟ್ ಕಾರ್ಡ್‌ಗಳು, ಮೂರು ಕಾರುಗಳು ಮತ್ತು ₹ 4 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.

ಚೀನಾದ ಪ್ರಜೆಗಳ ಸೂಚನೆ ಮೇರೆಗೆ ಈ ದಂಧೆ ನಡೆಸಲಾಗಿದೆ ಎಂದು ಬಂಧಿತರು ಪೊಲೀಸರಲ್ಲಿ ಒಪ್ಪಿಕೊಂಡಿದ್ದಾರೆ. ಪೊಲೀಸರು ಕೆಲವು ಚೀನೀ ಪ್ರಜೆಗಳನ್ನು ಗುರುತಿಸಿದ್ದಾರೆ. ಅವರನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ಪೊಲೀಸರು ತಮ್ಮ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆ ಈ ದಂಧೆಕೋರರು ತಮ್ಮ ರಿಕವರಿ ಕಾಲ್ ಸೆಂಟರ್‌ಗಳನ್ನು ಪಾಕಿಸ್ತಾನ, ನೇಪಾಳ ಮತ್ತು ಬಾಂಗ್ಲಾದೇಶಕ್ಕೆ ಸ್ಥಳಾಂತರಿಸುತ್ತಿದ್ದಾರೆ. ಇಲ್ಲಿಯವರೆಗೆ ₹ 500 ಕೋಟಿಗೂ ಹೆಚ್ಚು ಹಣವನ್ನು ಚೀನಾ ಪ್ರಜೆಗಳು ಕಬಳಿಸಿದ್ದಾರೆ ಎಂದು ಪೊಲೀಸರು ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...