Homeಮುಖಪುಟಮಧ್ಯಪ್ರದೇಶ: ಆಂಬ್ಯುಲೆನ್ಸ್‌ ಇಲ್ಲದೆ ತಳ್ಳೋಗಾಡಿ ಬಳಕೆ; ಘಟನೆ ವರದಿ ಮಾಡಿದ ಮೂವರು ಪತ್ರಕರ್ತರ ಮೇಲೆ ಎಫ್‌ಐಆರ್‌

ಮಧ್ಯಪ್ರದೇಶ: ಆಂಬ್ಯುಲೆನ್ಸ್‌ ಇಲ್ಲದೆ ತಳ್ಳೋಗಾಡಿ ಬಳಕೆ; ಘಟನೆ ವರದಿ ಮಾಡಿದ ಮೂವರು ಪತ್ರಕರ್ತರ ಮೇಲೆ ಎಫ್‌ಐಆರ್‌

- Advertisement -
- Advertisement -

ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಆಂಬ್ಯುಲೆನ್ಸ್‌ಗಳ ಕೊರತೆ ಎದುರಾಗಿದ್ದು, ಅನಾರೋಗ್ಯ ಪೀಡಿತ ತಂದೆಯನ್ನು ತಳ್ಳುವ ಗಾಡಿಯಲ್ಲಿ ಆಸ್ಪತ್ರೆಗೆ ಕರೆದೊಯ್ದ ವ್ಯಕ್ತಿಯ ಕುರಿತು ವರದಿ ಮಾಡಿದ ಮೂವರು ಪತ್ರಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ‘ದಿ ಕ್ವಿಂಟ್’ ವರದಿ ಮಾಡಿದೆ.

ಪತ್ರಕರ್ತರಾದ ಕುಂಜ್‌ಬಿಹಾರಿ ಕೌರವ್, ಅನಿಲ್ ಶರ್ಮಾ ಮತ್ತು ಎನ್‌.ಕೆ.ಭಟೆಲೆ ಅವರು ‘ಪತ್ರಿಕಾ’, ‘ನ್ಯೂಸ್ 18’ ಮತ್ತು ‘ಲಲ್ಲೂರಾಮ್ ಡಾಟ್ ಕಾಮ್‌’ನಲ್ಲಿ ವರದಿ ಮಾಡಿದ್ದಾರೆ. ಆಂಬ್ಯುಲೆನ್ಸ್ ಕೊರತೆಯ ಕುರಿತು ಬೆಳಕು ಚೆಲ್ಲಿದ್ದಕ್ಕೆ ಪತ್ರಕರ್ತರ ಮೇಲೆ ಕ್ರಮ ಜರುಗಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 420 (ವಂಚನೆ ಮತ್ತು ಅಪ್ರಾಮಾಣಿಕತೆ), 505-2 (ವರ್ಗಗಳ ನಡುವೆ ದ್ವೇಷವನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 69ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದಾಬೋ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಜೀವ್ ಕೌರವ್ ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ.

ಸುಳ್ಳು ಮತ್ತು ಆಧಾರ ರಹಿತ ಸುದ್ದಿಗಳನ್ನು ಮಾಡಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಭಿಂಡ್ ಜಿಲ್ಲಾಧಿಕಾರಿ ಸತೀಶ್ ಕುಮಾರ್ ಎಸ್ ತನಿಖಾ ತಂಡವನ್ನು ರಚಿಸಿದ್ದರು. ಕಂದಾಯ ಮತ್ತು ಆರೋಗ್ಯ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ತನಿಖಾ ತಂಡವು ವರದಿ ನೀಡಿದ್ದು, ಆಂಬ್ಯುಲೆನ್ಸ್‌ ಸೇವೆಗಾಗಿ ಕುಟುಂಬವು ಯಾವುದೇ ಕರೆಯನ್ನು ಮಾಡಿಲ್ಲ ಎಂದು ತಿಳಿಸಲಾಗಿದೆ.

ಜ್ಞಾನ ಪ್ರಸಾದ್ ವಿಶ್ವಕರ್ಮ ಎಂದು ಗುರುತಿಸಲಾದ ವೃದ್ಧನನ್ನು ಮೊದಲು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತೇ ಹೊರತು ಸರ್ಕಾರಿ ಆಸ್ಪತ್ರೆಗಲ್ಲ ಎಂದು ತನಿಖಾ ತಂಡ ಹೇಳಿಕೊಂಡಿದೆ.

ಆದರೆ ತನಿಖಾ ತಂಡದ ಹೇಳಿಕೆಗಳಿಗೆ ವ್ಯತಿರಿಕ್ತವಾಗಿ ವೃದ್ಧನ ಕುಟುಂಬ ಸದಸ್ಯರು ಹೇಳಿಕೆ ನೀಡಿದ್ದಾರೆ.

“ಆಂಬ್ಯುಲೆನ್ಸ್‌ಗೆ ಕರೆ ಮಾಡಿದರೂ ಸಿಗದ ಕಾರಣ ಸುಮಾರು 5 ಕಿಲೋಮೀಟರ್ ತಳ್ಳೊ ಗಾಡಿಯನ್ನು ಬಳಸಬೇಕಾಯಿತು” ಎಂದು ಜ್ಞಾನಪ್ರಸಾದ್ ವಿಶ್ವಕರ್ಮ ಅವರ ಮಕ್ಕಳಾದ ಹರಿಕೃಷ್ಣ ಮತ್ತು ಪುಷ್ಪಾ ಆರೋಪಿಸಿದ್ದಾರೆ.

ಸದರಿ ಕುಟುಂಬಕ್ಕೆ ಸರ್ಕಾರಿ ಯೋಜನೆಗಳ ಅಡಿಯಲ್ಲಿ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಅಧಿಕಾರಿಗಳು ಹೇಳಿರುವುದನ್ನು ಪುಷ್ಪಾ ಅವರು ಅಲ್ಲಗಳೆದಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿರಿ: ಲಕ್ನೋ: ಜಾತಿ ನಿಂದನೆ ದೂರು ನೀಡಿದ ದಲಿತ ಪತ್ರಕರ್ತ; ಬ್ರಾಹ್ಮಣ ಪತ್ರಕರ್ತನ ವಿರುದ್ಧ ಎಫ್‌ಐಆರ್‌

“ನಮಗೆ ಪಿಎಂ ಆವಾಸ್ ಯೋಜನೆಯ ಒಂದು ಕಂತು ಮಾತ್ರ ಸಿಕ್ಕಿದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. “ಜಿಲ್ಲಾಡಳಿತದ ತಂಡವು ನನ್ನ ಸಹೋದರನ ಮನೆಯ ಚಿತ್ರಗಳನ್ನು ತೆಗೆದುಕೊಂಡಿತು” ಎಂದು ತಿಳಿಸಿದ್ದಾರೆ.

ಕೆಲವು ಸರ್ಕಾರಿ ಅಧಿಕಾರಿಗಳು ಖಾಲಿ ಪೇಪರ್ ಮೇಲೆ ಸಹಿ ಹಾಕುವಂತೆ ಒತ್ತಾಯಿಸಿದರು ಎಂದು ಹರಿಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.

ಆದರೆ ಈ ಆರೋಪಕ್ಕೆ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...