Homeಮುಖಪುಟಯುಪಿ: ಮಹಿಳೆಯ ಮೇಲೆ ಹಲ್ಲೆ ಮಾಡಿದ್ದ ಬಿಜೆಪಿ ನಾಯಕನ ಪರ ಬೃಹತ್‌ ಪ್ರತಿಭಟನೆ

ಯುಪಿ: ಮಹಿಳೆಯ ಮೇಲೆ ಹಲ್ಲೆ ಮಾಡಿದ್ದ ಬಿಜೆಪಿ ನಾಯಕನ ಪರ ಬೃಹತ್‌ ಪ್ರತಿಭಟನೆ

ತ್ಯಾಗಿ ಸಮುದಾಯ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಸ್ಥಳೀಯ ಬಿಜೆಪಿ ಸಂಸದ ಮಹೇಶ್ ಶರ್ಮಾ ಅವರನ್ನು ಖಂಡಿಸಿ ಘೋಷಣೆಗಳನ್ನು ಕೂಗಲಾಗಿದೆ.

- Advertisement -
- Advertisement -

ಕೆಲವು ದಿನಗಳ ಹಿಂದೆ ಮಹಿಳೆಯನ್ನು ನಿಂದಿಸಿ, ಅಸಭ್ಯವಾಗಿ ವರ್ತಿಸಿ, ಪೊಲೀಸ್‌ ವಿಚಾರಣೆಗೆ ಒಳಪಟ್ಟಿರುವ ಹಾಗೂ ಬಿಜೆಪಿ ನಾಯಕ ಎಂದೇ ಗುರುತಿಸಿಕೊಂಡಿರುವ ಶ್ರೀಕಾಂತ್ ತ್ಯಾಗಿಯನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ ನಡೆದಿದೆ.

ದೆಹಲಿ ಸಮೀಪದ ನೋಯ್ಡಾದಲ್ಲಿ ಬೃಹತ್ ರ್ಯಾಲಿಯನ್ನು ತ್ಯಾಗಿ ಸಮುದಾಯ ಆಯೋಜಿಸಿತ್ತು. ಪ್ರತಿಭಟನೆಯಲ್ಲಿ ಸ್ಥಳೀಯ ಬಿಜೆಪಿ ಸಂಸದ ಮಹೇಶ್ ಶರ್ಮಾ ಅವರನ್ನು ಖಂಡಿಸಿ ಘೋಷಣೆಗಳನ್ನು ಕೂಗಲಾಗಿದೆ.

ಶ್ರೀಕಾಂತ್ ತ್ಯಾಗಿ ಆಡಳಿತರೂಢ ಬಿಜೆಪಿಯ ಸದಸ್ಯನಲ್ಲ ಎಂದು ಹೇಳಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಮುದಾಯದ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಲಾಗಿದೆ ಎಂದು ಆರೋಪಿಸಿ ಗೌತಮ್ ಬುದ್ಧ ನಗರ ಸಂಸದರ ವಿರುದ್ಧ ತ್ಯಾಗಿ ಸಮುದಾಯವು ಅಸಮಾಧಾನ ಹೊರಹಾಕಿದೆ. ಆದರೆ ಅಂತಹ ಯಾವುದೇ ಹೇಳಿಕೆಗಳನ್ನು ನೀಡಿಲ್ಲ ಎಂದು ಮಹೇಶ್‌ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಗಸ್ಟ್‌ ತಿಂಗಳ ಮೊದಲ ವಾರ ಗ್ರಾಂಡ್ ಓಮ್ಯಾಕ್ಸ್ ಸೊಸೈಟಿಯ ನಿವಾಸಿಗಳು ಮೌನ ಪ್ರತಿಭಟನೆ ನಡೆಸಿದಾಗ ಬಳಸಲಾದ ಪೋಸ್ಟರ್‌ಗಳು ವಿವಾದಕ್ಕೆ ಕಾರಣವಾಗಿವೆ. ಆ ಪೋಸ್ಟರ್‌ಗಳಲ್ಲಿ ತ್ಯಾಗ ಸಮುದಾಯಕ್ಕೆ ಚ್ಯುತಿ ತರಲಾಗಿದೆ ಎಂದು ಆರೋಪಿಸಲಾಗಿದೆ.

ಶ್ರೀಕಾಂತ್ ತ್ಯಾಗಿ ಅವರನ್ನು ಬೆಂಬಲಿಸಿ ಸಂಯುಕ್ತ ತ್ಯಾಗಿ ಸ್ವಾಭಿಮಾನ್ ಮೋರ್ಚಾ ಆಯೋಜಿಸಿದ್ದ ಪ್ರತಿಭಟನಾ ಸಭೆಯು ಗೆಜ್ಜಾ ಗ್ರಾಮದ ರಾಮಲೀಲಾ ಮೈದಾನದಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಯಿತು. ಪಶ್ಚಿಮ ಉತ್ತರ ಪ್ರದೇಶದ ವಿವಿಧ ಭಾಗಗಳಿಂದ ತ್ಯಾಗಿ ಸಮುದಾಯದ ನೂರಾರು ಮಂದಿ ಇಲ್ಲಿಗೆ ಆಗಮಿಸಿದ್ದರು.

ಶ್ರೀಕಾಂತ್ ತ್ಯಾಗಿ ಅವರು ಮಾಡಿರುವ ಹಿಂಸೆ ಹಾಗೂ ನಿಂದನೆಗಳಿಗೆ ಸಂಬಂಧಿಸಿದಂತೆ ಶಿಕ್ಷೆಯಾಗಲಿ. ಆದರೆ ಅವರ ಪತ್ನಿ ಮತ್ತು ಚಿಕ್ಕಮ್ಮನನ್ನು ಪೊಲೀಸ್ ಠಾಣೆಗೆ ಕರೆಸಿರುವುದು ತಪ್ಪು ಎಂದು ಸಮುದಾಯದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

“ಪೊಲೀಸರು ಶ್ರೀಕಾಂತ್ ಅವರ ಚಿಕ್ಕಮ್ಮನನ್ನು ಜೀಪ್‌ನಲ್ಲಿ ಕರೆದೊಯ್ದು ನಾಲ್ಕು ದಿನಗಳ ಕಾಲ ಪಶ್ಚಿಮ ಯುಪಿಯಲ್ಲಿ ಸುತ್ತಾಡಿದರು. ಇದು ಅಮಾನವೀಯ ನಡೆ” ಎಂದು ರಾಷ್ಟ್ರೀಯ ಲೋಕದಳದ ಪ್ರಧಾನ ಕಾರ್ಯದರ್ಶಿ ತ್ರಿಲೋಕ್ ತ್ಯಾಗಿ ಹೇಳಿದ್ದಾರೆ.

ತ್ಯಾಗಿ ಅವರು ಸಮಾಜದ ನಿಯಮಗಳಿಗೆ ಬದ್ಧರಾಗಿದ್ದರೆ ಮತ್ತು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸದಿದ್ದರೆ ಸಮಸ್ಯೆ ದೊಡ್ಡದಾಗುತ್ತಿರಲಿಲ್ಲ ಎಂದು ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯ ನಿವಾಸಿಗಳು ಹೇಳಿದ್ದಾರೆ.

“ಸಮಾಜದ ನಿಯಮಗಳನ್ನು ಉಲ್ಲಂಘಿಸಿದ್ದು ಅವರ ಮೊದಲ ತಪ್ಪು. ಎರಡನೆಯದಾಗಿ, ಅವರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದರು. ಅವರು ಬಳಸಿದ ಭಾಷೆ ಸಮಸ್ಯೆಯನ್ನು ದೊಡ್ಡದಾಗಿಸಿತು” ಎಂದು ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯ ನಿವಾಸಿ ಕಲ್ಯಾಣ ಸಂಘದ (ಆರ್‌ಡಬ್ಲ್ಯೂಎ) ಪ್ರಧಾನ ಕಾರ್ಯದರ್ಶಿ ಮಹಿಮಾ ಜೋಶಿ ಹೇಳಿದ್ದಾರೆ.

ತಮ್ಮ ಪ್ರತಿಭಟನೆ ಕೇವಲ ಶ್ರೀಕಾಂತ್ ತ್ಯಾಗಿ ಅವರ ವಿರುದ್ಧವೇ ಹೊರತು ಯಾವುದೇ ಸಮುದಾಯದ ವಿರುದ್ಧ ಅಲ್ಲ ಎಂದು ನಿವಾಸಿಗಳು ಸ್ಪಷ್ಟಪಡಿಸಿದ್ದಾರೆ.

ಉತ್ತರ ಪ್ರದೇಶದ ನೋಯ್ಡಾ ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆಯೊಬ್ಬರಿಗೆ ಅಶ್ಲೀಲವಾಗಿ ನಿಂದಿಸಿ ಹಲ್ಲೆ ನಡೆಸಿದ್ದ ಶ್ರೀಕಾಂತ್‌ ತ್ಯಾಗಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದ ದಾಖಲಾದ ಬಳಿಕ ಆತ ಪರಾರಿಯಾಗಿದ್ದನು.

ಇದನ್ನೂ ಓದಿರಿ: 100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌ ಅರೆಸ್ಟ್‌‌!

ತ್ಯಾಗಿ ಪರ ವಕೀಲರು ಗ್ರೇಟರ್ ನೋಯ್ಡಾ ನ್ಯಾಯಾಲಯದಲ್ಲಿ ಶರಣಾಗತಿ ಅರ್ಜಿಯನ್ನು ಸಲ್ಲಿಸಿದ ನಂತರ, ತ್ಯಾಗಿಯನ್ನು ಹಿಡಿದುಕೊಟ್ಟವರಿಗೆ ₹ 25,000 ಬಹುಮಾನವನ್ನು ಯುಪಿ ಪೊಲೀಸರು ಘೋಷಿಸಿದ್ದರು. ಬಳಿಕ ತ್ಯಾಗಿ ಸಿಕ್ಕಿಬಿದ್ದಿದ್ದನು.

ಮೀರತ್‌ನ ಹೊರವಲಯದಲ್ಲಿರುವ ಶ್ರದ್ಧಾಪುರಿಯಲ್ಲಿ ತನ್ನ ಸಹಾಯಕರ ಮನೆಯಲ್ಲಿ ತ್ಯಾಗಿ ಅವಿತುಕುಳಿತ್ತಿದ್ದನು. ಡೆಹ್ರಾಡೂನ್, ಹರಿದ್ವಾರ ಮತ್ತು ರಿಷಿಕೇಶ ಮೂಲಕ ಸಹರಾನ್‌ಪುರಕ್ಕೆ ಹೋಗಲು ಪ್ಲಾನ್‌ ಮಾಡಿದ್ದನು. ಜೊತೆಗೆ ತನ್ನ ಪತ್ನಿ ಮತ್ತು ವಕೀಲನ ಸಂಪರ್ಕದಲ್ಲಿದ್ದನು.

ಬಿಜೆಪಿ ಕಿಸಾನ್ ಮೋರ್ಚಾದ ಸದಸ್ಯನೆಂದು ತ್ಯಾಗಿ ಹೇಳಿಕೊಂಡಿದ್ದಾನೆ. ಆತ ಸೋಷಿಯಲ್ ಮೀಡಿಯಾಗಳಲ್ಲಿ ಪೊಸ್ಟ್‌ ಮಾಡಲಾದ ಹಲವಾರು ಪೋಟೊಗಳಲ್ಲಿ ಬಿಜೆಪಿ ನಾಯಕರೊಂದಿಗೆ ಇರುವುದನ್ನು ಕಾಣಬಹುದು. ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಉನ್ನತ ನಾಯಕರೊಂದಿಗೆ ತ್ಯಾಗಿ ಫೋಟೋ ತೆಗೆಸಿಕೊಂಡಿರುವುದು, ಪ್ರತಿಪಕ್ಷಗಳ ಟೀಕೆಗೆ ಕಾರಣವಾಗಿದೆ. ಆದರೆ ತ್ಯಾಗಿ ಬಿಜೆಪಿ ಮುಖಂಡನಲ್ಲ ಎಂದು ಪಕ್ಷದ ನಾಯಕರು ಹೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...