Homeಕರ್ನಾಟಕಆಹಾರದ ಹಕ್ಕು ಎತ್ತಿ ಹಿಡಿದ ಸಿದ್ದರಾಮಯ್ಯ: ಸೋಷಿಯಲ್‌ ಮೀಡಿಯಾ ತುಂಬಾ ಈಗ ಬಾಡಿನ ಘಮಲು

ಆಹಾರದ ಹಕ್ಕು ಎತ್ತಿ ಹಿಡಿದ ಸಿದ್ದರಾಮಯ್ಯ: ಸೋಷಿಯಲ್‌ ಮೀಡಿಯಾ ತುಂಬಾ ಈಗ ಬಾಡಿನ ಘಮಲು

- Advertisement -
- Advertisement -

“ನೀನು ಯಾವನಯ್ಯಾ ನಾನ್‌ವೆಜ್‌ ತಿನ್ನಲ್ವೇನಯ್ಯ? ನಾನು ಏನು ತಿಂದೆ ಅಂತ ಕೇಳಲು ನೀನ್ಯಾವನು?” ಎಂದು ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತ್ರಕರ್ತನೊಬ್ಬನಿಗೆ ತರಾಟೆ ತೆಗೆದುಕೊಂಡ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ ‘ಬಾಡಿನ ಘಮಲು’ ಜೋರಾಗಿದೆ.

‘ಬಾಡು ತಿಂದ ಬಳಿಕ ದೇವಾಸ್ಥಾನಕ್ಕೆ ಸಿದ್ದರಾಮಯ್ಯ ಹೋಗಿದ್ದಾರೆ’ ಎಂದು ಬಿಜೆಪಿಯವರು ಹೇಳಿಕೆ ನೀಡಿದ್ದಾರೆಂದು ಸಿದ್ದರಾಮಯ್ಯನವರ ಆಹಾರ ಹಕ್ಕನ್ನು ಕೆಣಕಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮಾಂಸಾಹಾರ ಕೇಂದ್ರಿತ ಶೂದ್ರ, ದಲಿತ ಸಂಸ್ಕೃತಿಯ ಕುರಿತು ಜನರೇ ಈಗ ಬಿಜೆಪಿಗೆ ಪಾಠ ಹೇಳುತ್ತಿದ್ದಾರೆ.

‘ನಮ್ಮ ಆಹಾರ ನಮ್ಮ ಹಕ್ಕು. ನಾವು ಏನು ತಿನ್ನಬೇಕು, ಏನು ತಿನ್ನಬಾರದು ಎಂದು ಕೇಳಲು ನೀವ್ಯಾರು?’ ಎಂಬ ಪ್ರಶ್ನೆ ಬಿರುಸು ಪಡೆದಿದೆ. ‘ಬಾಡೇ ನಮ್‌ ಗಾಡು’ ಅಭಿಯಾನದ ಎರಡನೇ ಆವೃತ್ತಿಯೂ ಚಾಲನೆ ಪಡೆದಿದೆ.

ಹಂಸಲೇಖ ಅವರು ಮಾಂಸಾಹಾರದ ಕುರಿತು ಮಾತನಾಡಿದ್ದ ಸಂದರ್ಭದಲ್ಲಿ ಮಾಂಸಾಹಾರಿಗಳ ಕುರಿತು ಕೆಲವರು ಕುಹಕವಾಡಿದ್ದರು. ಇದರಿಂದ ಸಿಟ್ಟಿಗೆದ್ದ ಬಹುಸಂಖ್ಯಾತ ಮಾಂಸಪ್ರಿಯರು, ‘ಬಾಡೇ ನಮ್‌ ಗಾಡು’ ಅಭಿಯಾನವನ್ನು ಆರಂಭಿಸಿ, ಯಶಸ್ವಿಯಾಗಿದ್ದರು. ಸಿದ್ದರಾಮಯ್ಯನವರು ತಮ್ಮ ಆಹಾರ ಸಂಸ್ಕೃತಿ ಹಾಗೂ ಹಕ್ಕನ್ನು ಪ್ರತಿಪಾದಿಸಿದ ಬಳಿಕ ಮತ್ತೊಮ್ಮೆ ‘ಬಾಡೇ ನಮ್‌ ಗಾಡು’ ಎಂದು ಜನರು ಹೇಳತೊಡಗಿದ್ದಾರೆ.

“ನಾಳೆಯಿಂದ ಬರುವ ಅಮಾವಾಸ್ಯೆವರೆಗೂ #ಬಾಡೇ_ನಮ್_ಗಾಡು ಬೃಹತ್ ಅಭಿಯಾನ. ಈ Hashtag ಬಳಸಿ ಬಾಡೂಟದ ಫೋಟೋ ಪೋಸ್ಟ್ ಮಾಡಬೇಕು. ಬಾಡು ತಿನ್ನದದವರಿಗೂ ನೋಡೋಕೆ ಮುಕ್ತ ಅವಕಾಶವಿದೆ. ಶ್ರಾವಣ, ಸೋಮವಾರ, ಶುಕ್ರವಾರ ಅಂತ ಕಥೆ ಹೊಡೆಯೋ ದಲಿತ ಮತ್ತು ಶೂದ್ರ $#%% ಕ್ಕೆ ಪ್ರವೇಶ ನಿಷಿದ್ಧ. ಇನ್ನುಳಿದಂತೆ ಸರ್ವರಿಗೂ ಮುಕ್ತ ಪ್ರವೇಶ. ಪ್ರಕಟಣೆ : ಅಖಿಲ ಕರ್ನಾಟಕ ಬಾಡು ಪ್ರಿಯ ಸಂಘ” ಎಂಬ ಸಂದೇಶ ವೈರಲ್ ಆಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಬಂದ ಕೆಲವು ಪ್ರತಿಕ್ರಿಯೆಗಳ ಝಲಕ್‌ ಹೀಗಿದೆ:

ರಾಜ್ಯ ಸರ್ಕಾರ ತಕ್ಷಣ ಒಂದು ಆದೇಶ ಹೊರಡಿಸಿ ಎಲ್ಲ ದೇವಸ್ಥಾನಗಳ ಮುಂದೆ ಅಲ್ಲಿಗೆ ಭೇಟಿ ನೀಡುವ ಭಕ್ತರ ಹೊಟ್ಟೆಯಲ್ಲಿ ಏನಿದೆ ಎಂದು ಪರೀಕ್ಷೆ ಮಾಡಲು ಸ್ಕಾನಿಂಗ್ ಮೆಷಿನ್ ಅಳವಡಿಸುವುದನ್ನು ಕಡ್ಡಾಯಗೊಳಿಸ ಬೇಕು.

– ದಿನೇಶ್ ಅಮೀನ್‌ ಮಟ್ಟು

***

ಮಾಂಸಾಹಾರದ ಕುರಿತಾದ ಕೀಳರಿಮೆಯನ್ನು ಮೊದಲು ತೊಡೆದು ಹಾಕಿ. ನಮ್ಮ ಬದುಕು ,ನಮ್ಮ ಊಟ, ನಮ್ಮ ಆಚರಣೆ- ಇದೊಂದು ‘ಪುಷ್ಕಳ’ ಕಂ ಸಮೃದ್ಧ ದ್ರಾವಿಡ ಸಂಸ್ಕೃತಿ. ಮಾಂಸದೂಟದ ಜತೆಗಿನ ಸುಂದರ ನೆನಪುಗಳನ್ನು ಚಿತ್ರ ಬರೆಹಗಳ ಮೂಲಕ ಆದಷ್ಟೂ ದಾಖಲಿಸಿ. ಇಲ್ಲಿ ಯಾವ ಸಂಪಾದಕನೂ ಇಲ್ಲ. ನಿಮ್ಮ ಗೋಡೆ ನಿಮ್ಮಿಷ್ಟ. ನಡೀರಿ. ಇದೊಂದು ಆಂದೋಲನವಾಗಲಿ.

– ದಿನೇಶ್ ಕುಕ್ಕುಜಡ್ಕ

*****

****

ದೇವಸ್ಥಾನಕ್ಕೆ ಹೋಗುವ ಮುನ್ನ ಮಾತ್ರೆ ತೆಗೆದುಕೊಂಡೋ, ಇನ್ಯಾವುದೋ ರೀತಿಯಲ್ಲಿಯೋ ಜಠರ, ಕರುಳು ಸಂಪೂರ್ಣ ಖಾಲಿ ಮಾಡಿ, ಸೋಪು ಸರ್ಫು ಹಾಕಿ ತೊಳೆದು ಹೊಟ್ಟೆಯೊಳಗೆ ಏನೂ ಇಲ್ಲ ಎಂಬುದನ್ನು ಖಾತ್ರಿ ಮಾಡಿಕೊಂಡು ಆಮೇಲೆ ಹೋಗಬೇಕಾಗಿ ವಿನಂತಿ. ಹಾಗೆಯೇ ಹೋದುದು ಕನ್ನಡ ಸುದ್ದಿವಾಹಿನಿಗಳಿಗೆ ಗೊತ್ತಾದರೆ ಕಷ್ಟ.

– ಶ್ರೀನಿವಾಸ ಕಾರ್ಕಳ

****

2016- ದನದ ಮಾಂಸ ತಿಂದ ಎಂದು ಬಡಿದು ಕೊಂದರು ಸೈಯದ್ ಅಕ್ಲಾಕ್‌‌ನನ್ನು. 2022- ಮಾಂಸಾಹಾರ ತಿಂದು ದೇವಸ್ಥಾನಕ್ಕೆ ಹೋದರೆಂದು ದಾಳಿ ನಡೆಸಿದರು ಸಿದ್ದರಾಮಯ್ಯ ಮೇಲೆ. ಬಿಜೆಪಿಯ ಈ ಕ್ರೊನಾಲಜಿ ಗಮನಿಸಿ. ನಿನ್ನೆ ಅಕ್ಲಾಕ್, ಇವತ್ತು ಸಿದ್ದರಾಮಯ್ಯ, ನಾಳೆ ನೀವು, ನೀವು. #ನಮ್ಮ_ಆಹಾರ_ನಮ್ಮ_ಹಕ್ಕು #ಕ್ರೊನಾಲಜಿ_ಸಂಝೇ #bjp_is_sick #my_food_my_right

-ಶಶಿ ಸಂಪಳ್ಳಿ

***

ಏಯ್, ನೀ ಯಾವನಯ್ಯಾ ಕೇಳಾಕೆ? ಆಹಾರ ಅವರವರ ಹಕ್ಕು. ಬಾಡು ನಮ್ಮ ಗಾಡು. ಯಾವುದು ತಿನ್ನಬೇಕು ಯಾವುದು ತಿನ್ನಬಾರದು ಎಂದು ಕೇಳೋಕೆ ನೀನು ಯಾವನಯ್ಯ.

– ಹನುಮೇಶ್‌ ಗುಂಡೂರು

***

ಮಾಂಸ ತಿನ್ನುವವರು
ಇವಿಎಂನಲ್ಲಿ
ಕಮಲದ ಮೇಲೆ
ಬೆರಳಿಡಬೇಡಿ,
ಮಡಿ ಕೆಟ್ಟು ಮೈಲಿಗೆಯಾದೀತು.

– ಡಾ.ಶ್ರೀನಿವಾಸ ಕಕ್ಕಿಲ್ಲಾಯ

***

ಮಾಂಸಾಹಾರ ತಿಂದವರು ದೇವಸ್ಥಾನಕ್ಕೆ ಬರಬಾರದೆಂದು ಯಾವ ದೇವರು ಬಂದು ಹೇಳಿದ್ದು ಅಂತ ಯಾರಾದರೂ ದಾಖಲೆ ಸಮೇತ ಹೇಳಿದರೆ ಒಳ್ಳೆಯದು. ಯಾಕಂದ್ರೆ ನಮ್ಮ ಮಾರಮ್ಮನಿಗೆ ನಾವು ಕುರಿ‌ ಕಡಿದೇ ಹಬ್ಬ ಮಾಡೋದು.‌ ಹಾಗಾದ್ರೆ ಮಾರಮ್ಮ ದೇವರಲ್ಲವೇ?

– ದೇಶಾದ್ರಿ ಹೊಸಮನೆ

***

ನಾನು ಮಾಂಸಹಾರಿ. ಮಾಂಸ ತಿನ್ನುತ್ತೇನೆ. ಇದು ನನ್ನ ಆಹಾರದ ಆಯ್ಕೆ ಮತ್ತು ಹಕ್ಕು.
ನೀನ್ಯಾವನಯ್ಯ ಕೇಳುವುದಕ್ಕೆ. #isupportsiddaramaiah

– ಶ್ರೀಪಾದ ಭಟ್‌

***

#ಬಾಡೇ_ನಮ್_ಗಾಡು

ಸುಮ್ನೆ ಮಾತಾಡೋದೇನು ಅಂತ ಬರುವಾಗ ಕೆ.ಎಂ.ದೊಡ್ಡೀಲಿ ಎರಡೂವರೆ ಕೆ.ಜಿ. ಹಂದಿ ಬಾಡು ತಂದು ಮೆಣಸುಪ್ಪಿನ ಕರಿ ಮಾಡಿ ಹೊಟ್ಟೆ ತುಂಬಾ ತಿಂದೊ. ನಾಳೆಗೂ ಇದೆ. ತಿಂಡಿಗೇ ಬನ್ನಿ.

– ಕೃಷ್ಣೇಗೌಡ ಟಿ.ಲಿಂಗಯ್ಯ

***

ಒಂದು ಎರಡು
ಬಾಳೆಲೆ ಹರಡು
ಮೂರು ನಾಕು
ಬಾಡು ಹಾಕು
ಐದು ಆರು
ಕೋಳಿ ಸಾರು
ಏಳು ಎಂಟು
ಮೀನು ಉಂಟು
ಒಂಬತ್ತು ಹತ್ತು
ಬಲು ರುಚಿ ಇತ್ತು
ಒಂದರಿಂದ ಹತ್ತು ಹೀಗಿತ್ತು
ಬಾಡಿನ ಗತ್ತು ಮುಗಿದಿತ್ತು.
( ಮೂಲ ಕವಿಗಳ ಕ್ಷಮೆ ಕೋರಿ)

– ಪುರುಷೋತ್ತಮ ಬಿಳಿಮಲೆ

****

***

***

ಹೀಗೆ ಸೋಷಿಯಲ್ ಮೀಡಿಯಾಗಳ ತುಂಬಾ ಬಾಡಿನ ಘಮಲು ಹೆಚ್ಚಾಗಿದೆ. ಮಾಂಸ ತಿನ್ನುವವರನ್ನು ಹಂಗಿಸುವ ಬಿಜೆಪಿಯವರನ್ನು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...