Homeಕರ್ನಾಟಕಸಕಲೇಶಪುರ: ದಲಿತರ ಮೇಲೂ ಪ್ರಕರಣ ದಾಖಲು; ಬಜರಂಗದಳ ವಿರುದ್ಧ ಬೀದಿಗಿಳಿದ ಭೀಮ ಪುತ್ರರು

ಸಕಲೇಶಪುರ: ದಲಿತರ ಮೇಲೂ ಪ್ರಕರಣ ದಾಖಲು; ಬಜರಂಗದಳ ವಿರುದ್ಧ ಬೀದಿಗಿಳಿದ ಭೀಮ ಪುತ್ರರು

ದನ ಸಾಗಣೆ ಮಾಡಲಾಗುತ್ತಿದೆ ಎಂದು ಆರೋಪಿಸಿ ದಲಿತ ಮುಖಂಡನ ಮೇಲೆ ಬಜರಂಗದಳದವರು ಹಲ್ಲೆ ನಡೆಸಿದ ಬಳಿಕ ದಲಿತರ ಆಕ್ರೋಶ ಭುಗಿಲೆದ್ದಿದೆ.

- Advertisement -
- Advertisement -

ಸಕಲೇಶಪುರ: ಮನೆಗೆ ಕರು ಸಾಗಿಸುತ್ತಿದ್ದ ದಲಿತ ಮುಖಂಡ ಹಾಗೂ ಅವರ ಸಂಬಂಧಿಕರ ಮೇಲೆ ಹಲ್ಲೆ ನಡೆಸಿದ ಬಜರಂಗ ದಳದ 9 ಕಾರ್ಯಕರ್ತರ ಮೇಲೆ ಪಟ್ಟಣ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ಬಳಿಕ 9 ಮಂದಿ ದಲಿತರ ಮೇಲೂ ಕೇಸು ದಾಖಲಾಗಿದೆ. ಇದರ ವಿರುದ್ಧ ದಲಿತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಹಲಸುಲಿಗೆ ಗ್ರಾಮ ಪಂಚಾಯತ್‌ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯರಾಗಿರುವ ಮಂಜುನಾಥ್‌ ಮೇಲೆ ಬಜರಂಗದಳದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಮಂಜುನಾಥ್‌ ನೀಡಿದ ದೂರಿನ ಆಧಾರದಲ್ಲಿ ಭಜರಂಗದಳದ ಕಾರ್ಯಕರ್ತರಾದ ಗುರು, ರಘು, ಕಿರಣ, ಕೌಶಿಕ್, ಕಟ್ಟನಗದ್ದೆ ನವೀನ, ಲೋಕೇಶ್, ಶಿವು ಜಿಫ್ಟಿ, ರಘು ಹಾಗೂ ಇವರ ಸಹಚರರ ಮೇಲೆ ಐಪಿಸಿ ಸೆಕ್ಷನ್‌ 341, 323, 504, 506 ಮತ್ತು ಎಸ್‌ಸಿ, ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ 3(1), 3(2) ಅಡಿಯಲ್ಲಿ ಪ್ರಕರಣದ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಜುನಾಥ್‌ ಅವರ ಸಂಬಂಧಿ ಕಾಲೇಶ್ ಎಂಬವರ ಮೇಲೆಯೂ ಬಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ಇವರು ನೀಡಿದ ದೂರಿನ ಅನ್ವಯ ಐಪಿಸಿ ಸೆಕ್ಷನ್‌ 323, 341, 504, 506, 114, 34 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಳಿಕ ಭಜರಂಗದಳದ ಕಾರ್ಯಕರ್ತ ಶಿವು ಎಂಬಾತ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾನೆ. ಈತನ ದೂರಿನ ಆಧಾರದಲ್ಲಿ ದಲಿತ ಮುಖಂಡರಾದ ಪುರಸಭೆ ಸದಸ್ಯ ಅಣ್ಣಪ್ಪ, ಬೈಕೆರೆ ದೇವರಾಜ್, ವಕೀಲ ವೇಣುಕುಮಾರ್ ಸೇರಿದಂತೆ 9 ಜನರ ಮೇಲೆ ಪ್ರಕರಣದ ದಾಖಲಿಸಲಾಗಿದೆ.

ತಾಲ್ಲೂಕಿನಲ್ಲಿ ನಡೆಯುತ್ತಿರುವ ಬಜರಂಗದಳ ಅತಿರೇಕಗಳನ್ನು ಖಂಡಿಸಿ, ದಲಿತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅವುಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ದಲಿತರು ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ. ಸಾವಿರಾರು ಮಂದಿ ದಲಿತರು ಜಮಾಯಿಸಿ, ಬಜರಂಗದಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

107 ಕೇಸಿನ ಉದ್ದೇಶಿತ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಆರೋಪಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ದಲಿತರ ಮೇಲೆ ನಕಲಿ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಭಜರಂಗದಳದ ಕಾರ್ಯಕರ್ತರಾದ ಗುರು, ರಘು, ಕಿರಣ, ಕೌಶಿಕ್, ಕಟ್ಟನಗದ್ದೆ ನವೀನ, ಲೋಕೇಶ್, ಶಿವು ಜಿಫ್ಟಿ, ರಘು ಮತ್ತು ಅವರ ಸಂಗಡಿಗರು ಸಕಲೇಶಪುರದ ನಗರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಪಟ್ಟಿಯಲ್ಲಿದ್ದಾರೆ. ಇವರುಗಳು ತಾಲ್ಲೂಕಿನ ಶಾಂತಿ ಕದಡಲು ದಿನನಿತ್ಯ ಇಲ್ಲಸಲ್ಲದ ಕೃತ್ಯಗಳನ್ನು ನಡೆಸುತ್ತಿದ್ದಾರೆ ಎಂದು ದಲಿತ ಮುಖಂಡರು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಸಕಲೇಶಪುರ: ದನ ಸಾಗಿಸುತ್ತಿದ್ದಾನೆಂದು ದಲಿತ ಮುಖಂಡನ ಮೇಲೆ ಬಜರಂಗದಳದ ದುಷ್ಕರ್ಮಿಗಳಿಂದ ಹಲ್ಲೆ

ಈ ರೌಡಿಶೀಟರ್‌ಗಳು ತಾಲ್ಲೂಕಿನ ಶಾಂತಿಗೆ ಧಕ್ಕೆ ಬರಬಹುದು ಎಂಬ ಗುಪ್ತಚರ ಖಚಿತ ಮಾಹಿತಿ ಮೇರೆಗೆ ಸಕಲೇಶಪುರದ ಪೊಲೀಸ್ ಇಲಾಖೆ ಇವರುಗಳ ಮೇಲೆ 107 ಕೇಸು ದಾಖಲಿಸಿ ತಾಲೂಕು ದಂಡಾಧಿಕಾರಿಗಳಿಗೆ ಶಿಫಾರಸು ಮಾಡಿ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಆರೋಪಿಗಳು ತಾಲೂಕು ದಂಡಾಧಿಕಾರಿಗಳ ಬಳಿ ಹೋಗಿ ಮುಂದಿನ 6 ತಿಂಗಳವರೆಗೆ ನಾವು ಯಾವುದೇ ರೀತಿಯ ಸಮಾಜಘಾತಕ ಚಟುವಟಿಕೆಗಳನ್ನು, ಯಾವುದೇ ಶಾಂತಿ ಕದಡುವ ಕೆಲಸ ನಡೆಸುವುದಿಲ್ಲ ಎಂದು ಪ್ರಮಾಣ ಮಾಡಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಇಷ್ಟೆಲ್ಲದರ ನಡುವೆ ಅಹಿತಕರ ಘಟನೆಗಳಿಗೆ ಈ ಕಿಡಿಗೇಡಿಗಳು ಕಾರಣವಾಗಿದ್ದಾರೆ ಎಂದು ದೂರಿದ್ದಾರೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸಕಲೇಶಪುರದ ಆನೆಮಹಾಲ್ ಗ್ರಾಮದ ಮೂಲಕ ತೆರಳುತ್ತಿದ್ದ ಸಂದರ್ಭದಲ್ಲಿ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡದೆ, ಅನುಮತಿ ಪಡೆಯದೆ ಕಾನೂನು ಉಲ್ಲಂಘನೆ ಮಾಡಿ ಪ್ರತಿಭಟನೆ ನೆಪದಲ್ಲಿ ಗಲಾಟೆ ಮಾಡಿದ್ದಾರೆ. ಸಮಾಜದ ಶಾಂತಿ ಕದಡಲು ಯತ್ನಿಸಿರುತ್ತಾರೆ.‌ ಇವರ ಮೇಲೆ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿ ಪೋಲಿಸರಿಗೆ ದೂರು ನೀಡಿದ್ದಾರೆ. ಆನಂತರದಲ್ಲಿ ದಲಿತರಾದ ಮಂಜುನಾಥ್ ಮತ್ತು ಕಾಲೇಶ್ ಎಂಬವರ ಮೇಲೆ ಹಲ್ಲೆ ನಡೆಸಿರುತ್ತಾರೆ ಎಂದು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಮುಖಂಡರು, “ದಲಿತರ ಮೇಲೆ ವಿನಾಕಾರಣ ಪ್ರಕರಣ ದಾಖಲಿಸಿದ್ದೀರಾ. ದಲಿತರು ದನವನ್ನು ಕುಯ್ಯಲೇಬೇಕೆಂದು ನಿಂತರೆ ಹಳ್ಳಿಹಳ್ಳಿಯಲ್ಲಿ ಕುಯ್ಯಲಿದ್ದಾರೆ. ಆದರೆ ನಾವೆಲ್ಲ ಭೀಮಪುತ್ರರು. ಬಾಬಾ ಸಾಹೇಬರ ಅನುಯಾಯಿಗಳು. ಅವರು ಬರೆದಿರುವ ಸಂವಿಧಾನಕ್ಕೆ ಬೆಲೆ ಕೊಡುವವರು. ಬಾಬಾ ಸಾಹೇಬರ ರಕ್ತವನ್ನು ಹಂಚಿಕೊಂಡು ಹುಟ್ಟಿರುವ ನಾವು, ಕಾನೂನನ್ನು ಗೌರವಿಸುತ್ತೇವೆ” ಎಂದು ಗುಡುಗಿದ್ದಾರೆ.

“ದಲಿತರ ಮೇಲೆ ಸುಳ್ಳು ಕೇಸು ದಾಖಲಿಸಲಾಗಿದೆ. ಬಜರಂಗದಳದ ಕಿಡಿಗೇಡಿಗಳನ್ನು ಬಂಧಿಸಿ ಗಡಿಪಾರು ಮಾಡಬೇಕು. ಭಾರತ ದೇಶವನ್ನು ಕಟ್ಟಿ ಬೆಳೆಸಿದ ವಂಶ ನಮ್ಮದು. ನಾವು ಮೂಲ ನಿವಾಸಿಗಳು. ಎಲ್ಲ ಜನಾಂಗ ಇರುವ ದೇಶ ಭಾರತ. ಈ ಭವ್ಯ ಭಾರತಕ್ಕೆ ಕಪ್ಪುಚುಕ್ಕಿ ಇಂತಹ ಕಿಡಿಗೇಡಿಗಳು. ನಾವೆಲ್ಲ ಹಿಂದೂ ನಾವೆಲ್ಲ ಒಂದು ಎನ್ನುತ್ತಾರೆ. ಆದರೆ ದಲಿತರ ಮೇಲೆ ಹಲ್ಲೆ ನಡೆಸುತ್ತಾರೆ. ನಿಜವಾದ ದೇಶದ್ರೋಹಿಗಳಿವರು” ಎಂದು ಸಿಡಿದೆದ್ದಿದ್ದಾರೆ.

ಇದನ್ನೂ ಓದಿರಿ: ಆಹಾರದ ಹಕ್ಕು ಎತ್ತಿ ಹಿಡಿದ ಸಿದ್ದರಾಮಯ್ಯ: ಸೋಷಿಯಲ್‌ ಮೀಡಿಯಾ ತುಂಬಾ ಈಗ ಬಾಡಿನ ಘಮಲು

“ದೇಶದ್ರೋಹಿಗಳನ್ನು ಬಂಧಿಸಿ ಎಂದರೆ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸುತ್ತೀರಿ. ಸಕಲೇಶಪುರದ ಡಿವೈಎಸ್‌ಪಿ ಮನಸ್ಥಿತಿ ಜಾತೀಯತೆಯಿಂದ ಕೂಡಿದೆ. ಯಾರೋ ಕಿಡಿಗೇಡಿ ಕೊಟ್ಟ ದೂರು ಆಧರಿಸಿ, ಸ್ಟೇಷನ್‌ ಒಳಗೆ ಕೂತು ಕಟ್ಟಲಾದ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಹೋರಾಟಗಾರರ ದನಿಯನ್ನು ಅಡಗಿಸಲು ಸಾಧ್ಯವಿಲ್ಲ” ಎಂದು ಎಚ್ಚರಿಸಿದ್ದಾರೆ.

ದಲಿತ ಮುಖಂಡರಾದ ಎಸ್‌.ಎನ್‌.ಮಲ್ಲಪ್ಪ, ರಾಜಶೇಖರ್‌ ಹುಲಿಕಲ್ಲು, ಎಚ್‌.ಕೆ. ಸಂದೇಶ, ಹೊಳಲಹಳ್ಳಿ ವೀರೇಶ್‌, ವೇಣು, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಧರ್ಮೇಶ್‌ ಮೊದಲಾದವರು ಪ್ರತಿಭಟನೆಯಲ್ಲಿ ಮಾತನಾಡಿದ್ದಾರೆ. ತಮ್ಮ ಮನವಿ ಪತ್ರವನ್ನು ಉಪವಿಭಾಗಾಧಿಕಾರಿ, ತಹಸೀಲ್ದಾರ್‌ಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...