Homeಕರ್ನಾಟಕಸಕಲೇಶಪುರ: ದಲಿತರ ಮೇಲೂ ಪ್ರಕರಣ ದಾಖಲು; ಬಜರಂಗದಳ ವಿರುದ್ಧ ಬೀದಿಗಿಳಿದ ಭೀಮ ಪುತ್ರರು

ಸಕಲೇಶಪುರ: ದಲಿತರ ಮೇಲೂ ಪ್ರಕರಣ ದಾಖಲು; ಬಜರಂಗದಳ ವಿರುದ್ಧ ಬೀದಿಗಿಳಿದ ಭೀಮ ಪುತ್ರರು

ದನ ಸಾಗಣೆ ಮಾಡಲಾಗುತ್ತಿದೆ ಎಂದು ಆರೋಪಿಸಿ ದಲಿತ ಮುಖಂಡನ ಮೇಲೆ ಬಜರಂಗದಳದವರು ಹಲ್ಲೆ ನಡೆಸಿದ ಬಳಿಕ ದಲಿತರ ಆಕ್ರೋಶ ಭುಗಿಲೆದ್ದಿದೆ.

- Advertisement -
- Advertisement -

ಸಕಲೇಶಪುರ: ಮನೆಗೆ ಕರು ಸಾಗಿಸುತ್ತಿದ್ದ ದಲಿತ ಮುಖಂಡ ಹಾಗೂ ಅವರ ಸಂಬಂಧಿಕರ ಮೇಲೆ ಹಲ್ಲೆ ನಡೆಸಿದ ಬಜರಂಗ ದಳದ 9 ಕಾರ್ಯಕರ್ತರ ಮೇಲೆ ಪಟ್ಟಣ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ಬಳಿಕ 9 ಮಂದಿ ದಲಿತರ ಮೇಲೂ ಕೇಸು ದಾಖಲಾಗಿದೆ. ಇದರ ವಿರುದ್ಧ ದಲಿತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಹಲಸುಲಿಗೆ ಗ್ರಾಮ ಪಂಚಾಯತ್‌ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯರಾಗಿರುವ ಮಂಜುನಾಥ್‌ ಮೇಲೆ ಬಜರಂಗದಳದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಮಂಜುನಾಥ್‌ ನೀಡಿದ ದೂರಿನ ಆಧಾರದಲ್ಲಿ ಭಜರಂಗದಳದ ಕಾರ್ಯಕರ್ತರಾದ ಗುರು, ರಘು, ಕಿರಣ, ಕೌಶಿಕ್, ಕಟ್ಟನಗದ್ದೆ ನವೀನ, ಲೋಕೇಶ್, ಶಿವು ಜಿಫ್ಟಿ, ರಘು ಹಾಗೂ ಇವರ ಸಹಚರರ ಮೇಲೆ ಐಪಿಸಿ ಸೆಕ್ಷನ್‌ 341, 323, 504, 506 ಮತ್ತು ಎಸ್‌ಸಿ, ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ 3(1), 3(2) ಅಡಿಯಲ್ಲಿ ಪ್ರಕರಣದ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಜುನಾಥ್‌ ಅವರ ಸಂಬಂಧಿ ಕಾಲೇಶ್ ಎಂಬವರ ಮೇಲೆಯೂ ಬಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ಇವರು ನೀಡಿದ ದೂರಿನ ಅನ್ವಯ ಐಪಿಸಿ ಸೆಕ್ಷನ್‌ 323, 341, 504, 506, 114, 34 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಳಿಕ ಭಜರಂಗದಳದ ಕಾರ್ಯಕರ್ತ ಶಿವು ಎಂಬಾತ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾನೆ. ಈತನ ದೂರಿನ ಆಧಾರದಲ್ಲಿ ದಲಿತ ಮುಖಂಡರಾದ ಪುರಸಭೆ ಸದಸ್ಯ ಅಣ್ಣಪ್ಪ, ಬೈಕೆರೆ ದೇವರಾಜ್, ವಕೀಲ ವೇಣುಕುಮಾರ್ ಸೇರಿದಂತೆ 9 ಜನರ ಮೇಲೆ ಪ್ರಕರಣದ ದಾಖಲಿಸಲಾಗಿದೆ.

ತಾಲ್ಲೂಕಿನಲ್ಲಿ ನಡೆಯುತ್ತಿರುವ ಬಜರಂಗದಳ ಅತಿರೇಕಗಳನ್ನು ಖಂಡಿಸಿ, ದಲಿತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅವುಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ದಲಿತರು ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ. ಸಾವಿರಾರು ಮಂದಿ ದಲಿತರು ಜಮಾಯಿಸಿ, ಬಜರಂಗದಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

107 ಕೇಸಿನ ಉದ್ದೇಶಿತ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಆರೋಪಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ದಲಿತರ ಮೇಲೆ ನಕಲಿ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಭಜರಂಗದಳದ ಕಾರ್ಯಕರ್ತರಾದ ಗುರು, ರಘು, ಕಿರಣ, ಕೌಶಿಕ್, ಕಟ್ಟನಗದ್ದೆ ನವೀನ, ಲೋಕೇಶ್, ಶಿವು ಜಿಫ್ಟಿ, ರಘು ಮತ್ತು ಅವರ ಸಂಗಡಿಗರು ಸಕಲೇಶಪುರದ ನಗರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಪಟ್ಟಿಯಲ್ಲಿದ್ದಾರೆ. ಇವರುಗಳು ತಾಲ್ಲೂಕಿನ ಶಾಂತಿ ಕದಡಲು ದಿನನಿತ್ಯ ಇಲ್ಲಸಲ್ಲದ ಕೃತ್ಯಗಳನ್ನು ನಡೆಸುತ್ತಿದ್ದಾರೆ ಎಂದು ದಲಿತ ಮುಖಂಡರು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಸಕಲೇಶಪುರ: ದನ ಸಾಗಿಸುತ್ತಿದ್ದಾನೆಂದು ದಲಿತ ಮುಖಂಡನ ಮೇಲೆ ಬಜರಂಗದಳದ ದುಷ್ಕರ್ಮಿಗಳಿಂದ ಹಲ್ಲೆ

ಈ ರೌಡಿಶೀಟರ್‌ಗಳು ತಾಲ್ಲೂಕಿನ ಶಾಂತಿಗೆ ಧಕ್ಕೆ ಬರಬಹುದು ಎಂಬ ಗುಪ್ತಚರ ಖಚಿತ ಮಾಹಿತಿ ಮೇರೆಗೆ ಸಕಲೇಶಪುರದ ಪೊಲೀಸ್ ಇಲಾಖೆ ಇವರುಗಳ ಮೇಲೆ 107 ಕೇಸು ದಾಖಲಿಸಿ ತಾಲೂಕು ದಂಡಾಧಿಕಾರಿಗಳಿಗೆ ಶಿಫಾರಸು ಮಾಡಿ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಆರೋಪಿಗಳು ತಾಲೂಕು ದಂಡಾಧಿಕಾರಿಗಳ ಬಳಿ ಹೋಗಿ ಮುಂದಿನ 6 ತಿಂಗಳವರೆಗೆ ನಾವು ಯಾವುದೇ ರೀತಿಯ ಸಮಾಜಘಾತಕ ಚಟುವಟಿಕೆಗಳನ್ನು, ಯಾವುದೇ ಶಾಂತಿ ಕದಡುವ ಕೆಲಸ ನಡೆಸುವುದಿಲ್ಲ ಎಂದು ಪ್ರಮಾಣ ಮಾಡಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಇಷ್ಟೆಲ್ಲದರ ನಡುವೆ ಅಹಿತಕರ ಘಟನೆಗಳಿಗೆ ಈ ಕಿಡಿಗೇಡಿಗಳು ಕಾರಣವಾಗಿದ್ದಾರೆ ಎಂದು ದೂರಿದ್ದಾರೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸಕಲೇಶಪುರದ ಆನೆಮಹಾಲ್ ಗ್ರಾಮದ ಮೂಲಕ ತೆರಳುತ್ತಿದ್ದ ಸಂದರ್ಭದಲ್ಲಿ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡದೆ, ಅನುಮತಿ ಪಡೆಯದೆ ಕಾನೂನು ಉಲ್ಲಂಘನೆ ಮಾಡಿ ಪ್ರತಿಭಟನೆ ನೆಪದಲ್ಲಿ ಗಲಾಟೆ ಮಾಡಿದ್ದಾರೆ. ಸಮಾಜದ ಶಾಂತಿ ಕದಡಲು ಯತ್ನಿಸಿರುತ್ತಾರೆ.‌ ಇವರ ಮೇಲೆ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿ ಪೋಲಿಸರಿಗೆ ದೂರು ನೀಡಿದ್ದಾರೆ. ಆನಂತರದಲ್ಲಿ ದಲಿತರಾದ ಮಂಜುನಾಥ್ ಮತ್ತು ಕಾಲೇಶ್ ಎಂಬವರ ಮೇಲೆ ಹಲ್ಲೆ ನಡೆಸಿರುತ್ತಾರೆ ಎಂದು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಮುಖಂಡರು, “ದಲಿತರ ಮೇಲೆ ವಿನಾಕಾರಣ ಪ್ರಕರಣ ದಾಖಲಿಸಿದ್ದೀರಾ. ದಲಿತರು ದನವನ್ನು ಕುಯ್ಯಲೇಬೇಕೆಂದು ನಿಂತರೆ ಹಳ್ಳಿಹಳ್ಳಿಯಲ್ಲಿ ಕುಯ್ಯಲಿದ್ದಾರೆ. ಆದರೆ ನಾವೆಲ್ಲ ಭೀಮಪುತ್ರರು. ಬಾಬಾ ಸಾಹೇಬರ ಅನುಯಾಯಿಗಳು. ಅವರು ಬರೆದಿರುವ ಸಂವಿಧಾನಕ್ಕೆ ಬೆಲೆ ಕೊಡುವವರು. ಬಾಬಾ ಸಾಹೇಬರ ರಕ್ತವನ್ನು ಹಂಚಿಕೊಂಡು ಹುಟ್ಟಿರುವ ನಾವು, ಕಾನೂನನ್ನು ಗೌರವಿಸುತ್ತೇವೆ” ಎಂದು ಗುಡುಗಿದ್ದಾರೆ.

“ದಲಿತರ ಮೇಲೆ ಸುಳ್ಳು ಕೇಸು ದಾಖಲಿಸಲಾಗಿದೆ. ಬಜರಂಗದಳದ ಕಿಡಿಗೇಡಿಗಳನ್ನು ಬಂಧಿಸಿ ಗಡಿಪಾರು ಮಾಡಬೇಕು. ಭಾರತ ದೇಶವನ್ನು ಕಟ್ಟಿ ಬೆಳೆಸಿದ ವಂಶ ನಮ್ಮದು. ನಾವು ಮೂಲ ನಿವಾಸಿಗಳು. ಎಲ್ಲ ಜನಾಂಗ ಇರುವ ದೇಶ ಭಾರತ. ಈ ಭವ್ಯ ಭಾರತಕ್ಕೆ ಕಪ್ಪುಚುಕ್ಕಿ ಇಂತಹ ಕಿಡಿಗೇಡಿಗಳು. ನಾವೆಲ್ಲ ಹಿಂದೂ ನಾವೆಲ್ಲ ಒಂದು ಎನ್ನುತ್ತಾರೆ. ಆದರೆ ದಲಿತರ ಮೇಲೆ ಹಲ್ಲೆ ನಡೆಸುತ್ತಾರೆ. ನಿಜವಾದ ದೇಶದ್ರೋಹಿಗಳಿವರು” ಎಂದು ಸಿಡಿದೆದ್ದಿದ್ದಾರೆ.

ಇದನ್ನೂ ಓದಿರಿ: ಆಹಾರದ ಹಕ್ಕು ಎತ್ತಿ ಹಿಡಿದ ಸಿದ್ದರಾಮಯ್ಯ: ಸೋಷಿಯಲ್‌ ಮೀಡಿಯಾ ತುಂಬಾ ಈಗ ಬಾಡಿನ ಘಮಲು

“ದೇಶದ್ರೋಹಿಗಳನ್ನು ಬಂಧಿಸಿ ಎಂದರೆ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸುತ್ತೀರಿ. ಸಕಲೇಶಪುರದ ಡಿವೈಎಸ್‌ಪಿ ಮನಸ್ಥಿತಿ ಜಾತೀಯತೆಯಿಂದ ಕೂಡಿದೆ. ಯಾರೋ ಕಿಡಿಗೇಡಿ ಕೊಟ್ಟ ದೂರು ಆಧರಿಸಿ, ಸ್ಟೇಷನ್‌ ಒಳಗೆ ಕೂತು ಕಟ್ಟಲಾದ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಹೋರಾಟಗಾರರ ದನಿಯನ್ನು ಅಡಗಿಸಲು ಸಾಧ್ಯವಿಲ್ಲ” ಎಂದು ಎಚ್ಚರಿಸಿದ್ದಾರೆ.

ದಲಿತ ಮುಖಂಡರಾದ ಎಸ್‌.ಎನ್‌.ಮಲ್ಲಪ್ಪ, ರಾಜಶೇಖರ್‌ ಹುಲಿಕಲ್ಲು, ಎಚ್‌.ಕೆ. ಸಂದೇಶ, ಹೊಳಲಹಳ್ಳಿ ವೀರೇಶ್‌, ವೇಣು, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಧರ್ಮೇಶ್‌ ಮೊದಲಾದವರು ಪ್ರತಿಭಟನೆಯಲ್ಲಿ ಮಾತನಾಡಿದ್ದಾರೆ. ತಮ್ಮ ಮನವಿ ಪತ್ರವನ್ನು ಉಪವಿಭಾಗಾಧಿಕಾರಿ, ತಹಸೀಲ್ದಾರ್‌ಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...