Homeಕರ್ನಾಟಕಸಕಲೇಶಪುರ: ದಲಿತರ ಮೇಲೂ ಪ್ರಕರಣ ದಾಖಲು; ಬಜರಂಗದಳ ವಿರುದ್ಧ ಬೀದಿಗಿಳಿದ ಭೀಮ ಪುತ್ರರು

ಸಕಲೇಶಪುರ: ದಲಿತರ ಮೇಲೂ ಪ್ರಕರಣ ದಾಖಲು; ಬಜರಂಗದಳ ವಿರುದ್ಧ ಬೀದಿಗಿಳಿದ ಭೀಮ ಪುತ್ರರು

ದನ ಸಾಗಣೆ ಮಾಡಲಾಗುತ್ತಿದೆ ಎಂದು ಆರೋಪಿಸಿ ದಲಿತ ಮುಖಂಡನ ಮೇಲೆ ಬಜರಂಗದಳದವರು ಹಲ್ಲೆ ನಡೆಸಿದ ಬಳಿಕ ದಲಿತರ ಆಕ್ರೋಶ ಭುಗಿಲೆದ್ದಿದೆ.

- Advertisement -
- Advertisement -

ಸಕಲೇಶಪುರ: ಮನೆಗೆ ಕರು ಸಾಗಿಸುತ್ತಿದ್ದ ದಲಿತ ಮುಖಂಡ ಹಾಗೂ ಅವರ ಸಂಬಂಧಿಕರ ಮೇಲೆ ಹಲ್ಲೆ ನಡೆಸಿದ ಬಜರಂಗ ದಳದ 9 ಕಾರ್ಯಕರ್ತರ ಮೇಲೆ ಪಟ್ಟಣ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ಬಳಿಕ 9 ಮಂದಿ ದಲಿತರ ಮೇಲೂ ಕೇಸು ದಾಖಲಾಗಿದೆ. ಇದರ ವಿರುದ್ಧ ದಲಿತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಹಲಸುಲಿಗೆ ಗ್ರಾಮ ಪಂಚಾಯತ್‌ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯರಾಗಿರುವ ಮಂಜುನಾಥ್‌ ಮೇಲೆ ಬಜರಂಗದಳದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಮಂಜುನಾಥ್‌ ನೀಡಿದ ದೂರಿನ ಆಧಾರದಲ್ಲಿ ಭಜರಂಗದಳದ ಕಾರ್ಯಕರ್ತರಾದ ಗುರು, ರಘು, ಕಿರಣ, ಕೌಶಿಕ್, ಕಟ್ಟನಗದ್ದೆ ನವೀನ, ಲೋಕೇಶ್, ಶಿವು ಜಿಫ್ಟಿ, ರಘು ಹಾಗೂ ಇವರ ಸಹಚರರ ಮೇಲೆ ಐಪಿಸಿ ಸೆಕ್ಷನ್‌ 341, 323, 504, 506 ಮತ್ತು ಎಸ್‌ಸಿ, ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ 3(1), 3(2) ಅಡಿಯಲ್ಲಿ ಪ್ರಕರಣದ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಜುನಾಥ್‌ ಅವರ ಸಂಬಂಧಿ ಕಾಲೇಶ್ ಎಂಬವರ ಮೇಲೆಯೂ ಬಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ಇವರು ನೀಡಿದ ದೂರಿನ ಅನ್ವಯ ಐಪಿಸಿ ಸೆಕ್ಷನ್‌ 323, 341, 504, 506, 114, 34 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಳಿಕ ಭಜರಂಗದಳದ ಕಾರ್ಯಕರ್ತ ಶಿವು ಎಂಬಾತ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾನೆ. ಈತನ ದೂರಿನ ಆಧಾರದಲ್ಲಿ ದಲಿತ ಮುಖಂಡರಾದ ಪುರಸಭೆ ಸದಸ್ಯ ಅಣ್ಣಪ್ಪ, ಬೈಕೆರೆ ದೇವರಾಜ್, ವಕೀಲ ವೇಣುಕುಮಾರ್ ಸೇರಿದಂತೆ 9 ಜನರ ಮೇಲೆ ಪ್ರಕರಣದ ದಾಖಲಿಸಲಾಗಿದೆ.

ತಾಲ್ಲೂಕಿನಲ್ಲಿ ನಡೆಯುತ್ತಿರುವ ಬಜರಂಗದಳ ಅತಿರೇಕಗಳನ್ನು ಖಂಡಿಸಿ, ದಲಿತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅವುಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ದಲಿತರು ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ. ಸಾವಿರಾರು ಮಂದಿ ದಲಿತರು ಜಮಾಯಿಸಿ, ಬಜರಂಗದಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

107 ಕೇಸಿನ ಉದ್ದೇಶಿತ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಆರೋಪಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ದಲಿತರ ಮೇಲೆ ನಕಲಿ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಭಜರಂಗದಳದ ಕಾರ್ಯಕರ್ತರಾದ ಗುರು, ರಘು, ಕಿರಣ, ಕೌಶಿಕ್, ಕಟ್ಟನಗದ್ದೆ ನವೀನ, ಲೋಕೇಶ್, ಶಿವು ಜಿಫ್ಟಿ, ರಘು ಮತ್ತು ಅವರ ಸಂಗಡಿಗರು ಸಕಲೇಶಪುರದ ನಗರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಪಟ್ಟಿಯಲ್ಲಿದ್ದಾರೆ. ಇವರುಗಳು ತಾಲ್ಲೂಕಿನ ಶಾಂತಿ ಕದಡಲು ದಿನನಿತ್ಯ ಇಲ್ಲಸಲ್ಲದ ಕೃತ್ಯಗಳನ್ನು ನಡೆಸುತ್ತಿದ್ದಾರೆ ಎಂದು ದಲಿತ ಮುಖಂಡರು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಸಕಲೇಶಪುರ: ದನ ಸಾಗಿಸುತ್ತಿದ್ದಾನೆಂದು ದಲಿತ ಮುಖಂಡನ ಮೇಲೆ ಬಜರಂಗದಳದ ದುಷ್ಕರ್ಮಿಗಳಿಂದ ಹಲ್ಲೆ

ಈ ರೌಡಿಶೀಟರ್‌ಗಳು ತಾಲ್ಲೂಕಿನ ಶಾಂತಿಗೆ ಧಕ್ಕೆ ಬರಬಹುದು ಎಂಬ ಗುಪ್ತಚರ ಖಚಿತ ಮಾಹಿತಿ ಮೇರೆಗೆ ಸಕಲೇಶಪುರದ ಪೊಲೀಸ್ ಇಲಾಖೆ ಇವರುಗಳ ಮೇಲೆ 107 ಕೇಸು ದಾಖಲಿಸಿ ತಾಲೂಕು ದಂಡಾಧಿಕಾರಿಗಳಿಗೆ ಶಿಫಾರಸು ಮಾಡಿ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಆರೋಪಿಗಳು ತಾಲೂಕು ದಂಡಾಧಿಕಾರಿಗಳ ಬಳಿ ಹೋಗಿ ಮುಂದಿನ 6 ತಿಂಗಳವರೆಗೆ ನಾವು ಯಾವುದೇ ರೀತಿಯ ಸಮಾಜಘಾತಕ ಚಟುವಟಿಕೆಗಳನ್ನು, ಯಾವುದೇ ಶಾಂತಿ ಕದಡುವ ಕೆಲಸ ನಡೆಸುವುದಿಲ್ಲ ಎಂದು ಪ್ರಮಾಣ ಮಾಡಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಇಷ್ಟೆಲ್ಲದರ ನಡುವೆ ಅಹಿತಕರ ಘಟನೆಗಳಿಗೆ ಈ ಕಿಡಿಗೇಡಿಗಳು ಕಾರಣವಾಗಿದ್ದಾರೆ ಎಂದು ದೂರಿದ್ದಾರೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸಕಲೇಶಪುರದ ಆನೆಮಹಾಲ್ ಗ್ರಾಮದ ಮೂಲಕ ತೆರಳುತ್ತಿದ್ದ ಸಂದರ್ಭದಲ್ಲಿ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡದೆ, ಅನುಮತಿ ಪಡೆಯದೆ ಕಾನೂನು ಉಲ್ಲಂಘನೆ ಮಾಡಿ ಪ್ರತಿಭಟನೆ ನೆಪದಲ್ಲಿ ಗಲಾಟೆ ಮಾಡಿದ್ದಾರೆ. ಸಮಾಜದ ಶಾಂತಿ ಕದಡಲು ಯತ್ನಿಸಿರುತ್ತಾರೆ.‌ ಇವರ ಮೇಲೆ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿ ಪೋಲಿಸರಿಗೆ ದೂರು ನೀಡಿದ್ದಾರೆ. ಆನಂತರದಲ್ಲಿ ದಲಿತರಾದ ಮಂಜುನಾಥ್ ಮತ್ತು ಕಾಲೇಶ್ ಎಂಬವರ ಮೇಲೆ ಹಲ್ಲೆ ನಡೆಸಿರುತ್ತಾರೆ ಎಂದು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಮುಖಂಡರು, “ದಲಿತರ ಮೇಲೆ ವಿನಾಕಾರಣ ಪ್ರಕರಣ ದಾಖಲಿಸಿದ್ದೀರಾ. ದಲಿತರು ದನವನ್ನು ಕುಯ್ಯಲೇಬೇಕೆಂದು ನಿಂತರೆ ಹಳ್ಳಿಹಳ್ಳಿಯಲ್ಲಿ ಕುಯ್ಯಲಿದ್ದಾರೆ. ಆದರೆ ನಾವೆಲ್ಲ ಭೀಮಪುತ್ರರು. ಬಾಬಾ ಸಾಹೇಬರ ಅನುಯಾಯಿಗಳು. ಅವರು ಬರೆದಿರುವ ಸಂವಿಧಾನಕ್ಕೆ ಬೆಲೆ ಕೊಡುವವರು. ಬಾಬಾ ಸಾಹೇಬರ ರಕ್ತವನ್ನು ಹಂಚಿಕೊಂಡು ಹುಟ್ಟಿರುವ ನಾವು, ಕಾನೂನನ್ನು ಗೌರವಿಸುತ್ತೇವೆ” ಎಂದು ಗುಡುಗಿದ್ದಾರೆ.

“ದಲಿತರ ಮೇಲೆ ಸುಳ್ಳು ಕೇಸು ದಾಖಲಿಸಲಾಗಿದೆ. ಬಜರಂಗದಳದ ಕಿಡಿಗೇಡಿಗಳನ್ನು ಬಂಧಿಸಿ ಗಡಿಪಾರು ಮಾಡಬೇಕು. ಭಾರತ ದೇಶವನ್ನು ಕಟ್ಟಿ ಬೆಳೆಸಿದ ವಂಶ ನಮ್ಮದು. ನಾವು ಮೂಲ ನಿವಾಸಿಗಳು. ಎಲ್ಲ ಜನಾಂಗ ಇರುವ ದೇಶ ಭಾರತ. ಈ ಭವ್ಯ ಭಾರತಕ್ಕೆ ಕಪ್ಪುಚುಕ್ಕಿ ಇಂತಹ ಕಿಡಿಗೇಡಿಗಳು. ನಾವೆಲ್ಲ ಹಿಂದೂ ನಾವೆಲ್ಲ ಒಂದು ಎನ್ನುತ್ತಾರೆ. ಆದರೆ ದಲಿತರ ಮೇಲೆ ಹಲ್ಲೆ ನಡೆಸುತ್ತಾರೆ. ನಿಜವಾದ ದೇಶದ್ರೋಹಿಗಳಿವರು” ಎಂದು ಸಿಡಿದೆದ್ದಿದ್ದಾರೆ.

ಇದನ್ನೂ ಓದಿರಿ: ಆಹಾರದ ಹಕ್ಕು ಎತ್ತಿ ಹಿಡಿದ ಸಿದ್ದರಾಮಯ್ಯ: ಸೋಷಿಯಲ್‌ ಮೀಡಿಯಾ ತುಂಬಾ ಈಗ ಬಾಡಿನ ಘಮಲು

“ದೇಶದ್ರೋಹಿಗಳನ್ನು ಬಂಧಿಸಿ ಎಂದರೆ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸುತ್ತೀರಿ. ಸಕಲೇಶಪುರದ ಡಿವೈಎಸ್‌ಪಿ ಮನಸ್ಥಿತಿ ಜಾತೀಯತೆಯಿಂದ ಕೂಡಿದೆ. ಯಾರೋ ಕಿಡಿಗೇಡಿ ಕೊಟ್ಟ ದೂರು ಆಧರಿಸಿ, ಸ್ಟೇಷನ್‌ ಒಳಗೆ ಕೂತು ಕಟ್ಟಲಾದ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಹೋರಾಟಗಾರರ ದನಿಯನ್ನು ಅಡಗಿಸಲು ಸಾಧ್ಯವಿಲ್ಲ” ಎಂದು ಎಚ್ಚರಿಸಿದ್ದಾರೆ.

ದಲಿತ ಮುಖಂಡರಾದ ಎಸ್‌.ಎನ್‌.ಮಲ್ಲಪ್ಪ, ರಾಜಶೇಖರ್‌ ಹುಲಿಕಲ್ಲು, ಎಚ್‌.ಕೆ. ಸಂದೇಶ, ಹೊಳಲಹಳ್ಳಿ ವೀರೇಶ್‌, ವೇಣು, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಧರ್ಮೇಶ್‌ ಮೊದಲಾದವರು ಪ್ರತಿಭಟನೆಯಲ್ಲಿ ಮಾತನಾಡಿದ್ದಾರೆ. ತಮ್ಮ ಮನವಿ ಪತ್ರವನ್ನು ಉಪವಿಭಾಗಾಧಿಕಾರಿ, ತಹಸೀಲ್ದಾರ್‌ಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...