Homeದಲಿತ್ ಫೈಲ್ಸ್ಯುಪಿ: ದಲಿತ ಯುವಕನನ್ನು ಶೂಗಳಿಂದ ಥಳಿಸಿದ ಗ್ರಾಮದ ಮುಖ್ಯಸ್ಥ

ಯುಪಿ: ದಲಿತ ಯುವಕನನ್ನು ಶೂಗಳಿಂದ ಥಳಿಸಿದ ಗ್ರಾಮದ ಮುಖ್ಯಸ್ಥ

- Advertisement -
- Advertisement -

ಗ್ರಾಮದ ಮುಖ್ಯಸ್ಥ ಗ್ರಾಮದ ಮಾಜಿ ಮುಖ್ಯಸ್ಥನೊಂದಿಗೆ ಸೇರಿ ದಲಿತ ಸಮುದಾಯದ ಯುವಕನಿಗೆ ಶೂಗಳಿಂದ ಥಳಿಸಿ, ಕೊಲೆ ಬೆದರಿಕೆ ಹಾಕಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್‌ ನಗರದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮ ಗಳಲ್ಲಿ ವೈರಲ್ ಆದ ನಂತರ ಮುಜಾಫರ್‌ನಗರದಲ್ಲಿ ಹಲ್ಲೆ ನಡೆಸಿದ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಆಗಸ್ಟ್ 20 ರಂದು ತಿಳಿಸಿದ್ದಾರೆ.

“27 ವರ್ಷದ ದಿನೇಶ್ ಕುಮಾರ್ ಅವರನ್ನು ತಾಜ್‌ಪುರದ ಗ್ರಾಮದ ಮುಖ್ಯಸ್ಥ ಶಕ್ತಿ ಮೋಹನ್ ಗುರ್ಜಾರ್ ಮತ್ತು ರೆಟಾ ನಾಗ್ಲಾ ಗ್ರಾಮದ ಮಾಜಿ ಗ್ರಾಮ ಮುಖ್ಯಸ್ಥ ಗಜೆ ಸಿಂಗ್ ಶೂಗಳಿಂದ ಹೊಡೆದಿದ್ದು, ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ ಎಂದು ದಿ ವೈರ್‌ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಇಬ್ಬರ ಮೇಲೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ನಗರ) ಅರ್ಪಿತ್ ವಿಜಯವರ್ಗಿಯಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಗ್ರಾಮದ ಮುಖಂಡ ಶಕ್ತಿ ಮೋಹನ್‌ನನ್ನು ಪೊಲೀಸರು ಬಂಧಿಸಿದ್ದು, ಎರಡನೇ ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮೊದಲ ಬೆಂಚ್‌ನಲ್ಲಿ ಕುಳಿತ ಕಾರಣ ದಲಿತ ಬಾಲಕಿಗೆ ಶಿಕ್ಷಕಿಯಿಂದ ಥಳಿತ; ಎಫ್‌ಐಆರ್‌

ದಲಿತ ಸಮುದಾಯದ ಸದಸ್ಯರೊಂದಿಗೆ ಭೀಮ್ ಆರ್ಮಿ ಕಾರ್ಯಕರ್ತರು ಘಟನೆಯ ವಿರುದ್ಧ ಛಾಪರ್ ಪೊಲೀಸ್ ಠಾಣೆಯ ಹೊರಗೆ ಧರಣಿ ನಡೆಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು. ಈ ಪ್ರದೇಶದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಉತ್ತರ ಪ್ರದೇಶದ ಸಹರಾನ್‌ಪುರ ವಿಭಾಗದ ಅಡಿಯಲ್ಲಿ ಬರುವ ಮುಜಾಫರ್‌ ನಗರವು ಸಾಕಷ್ಟು ದಲಿತ ಜನಸಂಖ್ಯೆಯನ್ನು ಹೊಂದಿದೆ. ಆದರೂ ಇಲ್ಲಿ ಜಾತಿ ಸಂಬಂಧಿತ ಘಟನೆಗಳು ಏರಿಕೆಯಾಗುತ್ತಲೆ ಇದೆ.

ಇದನ್ನೂ ಓದಿ: ಸಕಲೇಶಪುರ: ದನ ಸಾಗಿಸುತ್ತಿದ್ದಾನೆಂದು ದಲಿತ ಮುಖಂಡನ ಮೇಲೆ ಬಜರಂಗದಳದ ದುಷ್ಕರ್ಮಿಗಳಿಂದ ಹಲ್ಲೆ

ಈ ತಿಂಗಳ ಆರಂಭದಲ್ಲಿ, ಮುಜಾಫರ್‌ ನಗರದಲ್ಲಿ 30 ವರ್ಷದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲಾಗಿದ್ದು, ಬಂದೂಕು ಗುರಿಯಿಟ್ಟು ಅವರ ಬಟ್ಟೆಗಳನ್ನು ಬಿಚ್ಚುವಂತೆ ಒತ್ತಾಯಿಸಲಾಗಿತ್ತು. ಈ ಕೃತ್ಯವು ಕ್ಯಾಮೆರಾದಲ್ಲಿ ದಾಖಲಾಗಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಸಂತ್ರಸ್ತೆ ನೀಡಿದ ಪೊಲೀಸ್‌ ದೂರಿನ ಪ್ರಕಾರ, ಮಹಿಳೆ ಹುಲ್ಲಿಗಾಗಿ ಹೊಲಕ್ಕೆ ಹೋಗಿದ್ದರು. ಅಲ್ಲಿ ಆರೋಪಿಗಳು ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಬಂದೂಕು ತೋರಿಸಿ ತನ್ನ ಬಟ್ಟೆಗಳನ್ನು ತೆಗೆಯುವಂತೆ ಒತ್ತಾಯಿಸಿ ನಂತರ ವೀಡಿಯೊ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಎಲ್ಲಾ ಏಳು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...