Homeಮುಖಪುಟಎಎಪಿ ತೊರೆದರೆ ಸಿಬಿಐ ತನಿಖೆ ನಿಲ್ಲಿಸುತ್ತೇವೆ: ಸಿಸೋಡಿಯಾಗೆ ಬಿಜೆಪಿ ಆಮಿಷ?

ಎಎಪಿ ತೊರೆದರೆ ಸಿಬಿಐ ತನಿಖೆ ನಿಲ್ಲಿಸುತ್ತೇವೆ: ಸಿಸೋಡಿಯಾಗೆ ಬಿಜೆಪಿ ಆಮಿಷ?

ದೆಹಲಿ ಡಿಸಿಎಂ ಮನೀಶ್‌ ಸಿಸೋಡಿಯಾ ಮಾಡಿರುವ ಆರೋಪಗಳನ್ನು ಬಿಜೆಪಿ ತಳ್ಳಿಹಾಕಿದೆ. ತಮ್ಮ ಬಳಿ ಆಡಿಯೊ ಇರುವುದಾಗಿ ಎಎಪಿ ತಿರುಗೇಟು ನೀಡಿದೆ.

- Advertisement -
- Advertisement -

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಆಮ್ ಆದ್ಮಿ ಪಕ್ಷ (ಎಎಪಿ) ತೊರೆದು, ಪಕ್ಷವನ್ನು  ಉರುಳಿಸಲು ಸಹಾಯ ಮಾಡಿದರೆ ಅವರ ವಿರುದ್ಧದ ಸಿಬಿಐ ಪ್ರಕರಣವನ್ನು ಕೈಬಿಡುವ ಪ್ರಸ್ತಾಪದೊಂದಿಗೆ ಬಿಜೆಪಿ ನಾಯಕರೊಬ್ಬರು ಸಿಸೋಡಿಯಾ ಅವರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ. “ಆ ಆಡಿಯೊ ರೆಕಾರ್ಡ್ ಸಿಸೋಡಿಯಾ ಅವರ ಬಳಿ ಇದೆ” ಎಂದು ಎಎಪಿ ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

“ಈ ಹಂತದಲ್ಲಿ ನಾವು ಸಂಭಾಷಣೆಯನ್ನು ಬಿಡುಗಡೆ ಮಾಡುವ ಅಗತ್ಯವಿಲ್ಲ. ಆದರೆ ಸಮಯ ಬಂದಾಗ, ಎಎಪಿ ಫೋನ್ ಸಂಭಾಷಣೆಯನ್ನು ಬಿಡುಗಡೆ ಮಾಡುತ್ತದೆ” ಎಂದು ಎಎಪಿ ನಾಯಕರೊಬ್ಬರು ತಿಳಿಸಿದ್ದಾರೆ.

“ಈಗ ರದ್ದು ಮಾಡಲಾಗಿರುವ ಮದ್ಯದ ನೀತಿಗೆ ಸಂಬಂಧಿಸಿದ ಆರೋಪಗಳ ಮೇಲೆ ಸಿಬಿಐನಿಂದ ಆರೋಪ ಎದುರಿಸುತ್ತಿರುವ ನೀವು ಎಎಪಿ ತೊರೆದರೆ, ಬಿಜೆಪಿಯು ನಿಮ್ಮ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಮುಚ್ಚಿಹಾಕಲು ಮುಂದಾಗಿದೆ ಎಂಬ ಆಮಿಷ ನೀಡಲಾಗಿದೆ” ಎಂದು ಸಿಸೋಡಿಯಾ ಅವರೂ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನನಗೆ ಬಿಜೆಪಿಯಿಂದ ಸಂದೇಶ ಬಂದಿದೆ – ಆಪ್ ಒಡೆದುಹಾಕಿ ಬಿಜೆಪಿಗೆ ಸೇರಿಕೊಳ್ಳಿ. ನಿಮ್ಮ ವಿರುದ್ಧದ ಸಿಬಿಐ ಮತ್ತು ಇ.ಡಿ.ಯ ಎಲ್ಲಾ ಪ್ರಕರಣಗಳನ್ನು ತೆರವು ಮಾಡಲಾಗುವುದು ಎಂದು ಸೂಚಿಸಲಾಗಿದೆ” ಎಂದು ಸಿಬಿಐ ದಾಳಿ ನಡೆಸಿದ ಎರಡು ದಿನಗಳ ನಂತರ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.

ಈ ಹೇಳಿಕೆಯನ್ನು ಬಿಜೆಪಿ ಬಲವಾಗಿ ತಳ್ಳಿಹಾಕಿದೆ. “ಇದು ಎಎಪಿಯ ತಂತ್ರಗಾರಿಕೆಯ ಒಂದು ಭಾಗವಾಗಿದೆಯಷ್ಟೇ. ಅವರ ಬಳಿ ಪುರಾವೆ ಇದ್ದರೆ ಬಿಡುಗಡೆ ಮಾಡಬೇಕು” ಎಂದು ಬಿಜೆಪಿ ನಾಯಕ ಪ್ರಮೋದ್ ಸ್ವಾಮಿ ಒತ್ತಾಯಿಸಿದ್ದಾರೆ.

ತಮ್ಮ ವಿರುದ್ಧದ ಎಲ್ಲಾ ಪ್ರಕರಣಗಳು ಸುಳ್ಳು ಎಂದು ಒತ್ತಿ ಹೇಳಿರುವ ಮನೀಶ್ ಸಿಸೋಡಿಯಾ, “ನೀವು ಏನು ಬೇಕಾದರೂ ಮಾಡಿ, ಹೆದರಲ್ಲ” ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.

“ಬಿಜೆಪಿಗೆ ನನ್ನ ಪ್ರತ್ಯುತ್ತರವಿದು- ನಾನು ಮಹಾರಾಣಾ ಪ್ರತಾಪ್ ಮತ್ತು ರಜಪೂತರ ವಂಶಸ್ಥ. ನಾನು ಶಿರಚ್ಛೇದನಕ್ಕೂ ಸಿದ್ಧನಿದ್ದೇನೆ. ಆದರೆ ಪಿತೂರಿಗಾರರು ಮತ್ತು ಭ್ರಷ್ಟರ ಮುಂದೆ ಎಂದಿಗೂ ತಲೆಬಾಗುವುದಿಲ್ಲ. ನನ್ನ ವಿರುದ್ಧದ ಎಲ್ಲಾ ಪ್ರಕರಣಗಳು ಸುಳ್ಳು. ನೀವು ಏನು ಬೇಕಾದರೂ ಮಾಡಿ” ಎಂದಿದ್ದಾರೆ.

ಸಿಸೋಡಿಯಾ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ನಾಯಕ ಮನೋಜ್ ತಿವಾರಿ, “ತಮ್ಮನ್ನು ಮಹಾರಾಣಾ ಪ್ರತಾಪ್‌ಗೆ ಹೋಲಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಟೀಕಿಸಿದ್ದಾರೆ.

“ತನ್ನನ್ನು ಮಹಾರಾಣಾ ಪ್ರತಾಪ್‌ಗೆ ಹೋಲಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಮಹಾರಾಣಾ ಪ್ರತಾಪ್ ಅವರು ಜನರಿಗೆ ಮದ್ಯಪಾನ ಮಾಡಿಸಿದ್ದರೆ? ನೀವು ಮೂಲೆ ಮೂಲೆಗಳಲ್ಲಿ ಮದ್ಯ ಮಾರಾಟ ಮಾಡುತ್ತಿದ್ದೀರಿ, ನೀವು ದೆಹಲಿಯ ಮಹಿಳೆಯರ ಕೂಗನ್ನು ನಿರ್ಲಕ್ಷಿಸುತ್ತಿದ್ದೀರಿ. ಮಹಾರಾಣಾ ಪ್ರತಾಪ್ ಒಂದು ಕಾಲದಲ್ಲಿ ಮಹಿಳೆಯರಿಗಾಗಿ ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಂಡಿದ್ದರು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿರಿ: ಸಕಲೇಶಪುರ: ದಲಿತರ ಮೇಲೂ ಪ್ರಕರಣ ದಾಖಲು; ಬಜರಂಗದಳ ವಿರುದ್ಧ ಬೀದಿಗಿಳಿದ ಭೀಮ ಪುತ್ರರು

ಮಹಾರಾಣಾ ಪ್ರತಾಪ್ ಅವರನ್ನು ಭ್ರಷ್ಟಾಚಾರ ಪ್ರಕರಣ ಎದುರಿಸುತ್ತಿರುವ ವ್ಯಕ್ತಿಯೊಂದಿಗೆ ಹೋಲಿಸಬಹುದೇ? ಅಂತಹ ಭ್ರಷ್ಟರಿಗೆ ಆಪ್‌ನಲ್ಲಿ ಮಾತ್ರ ಸ್ಥಾನ ಸಿಗುತ್ತದೆ. ಮಾಡಿರುವ ತಪ್ಪಿಗೆ ಶಿಕ್ಷೆಯಾಗುತ್ತದೆ. ಮನೀಶ್ ಸಿಸೋಡಿಯಾ ಅವರಂತಹ ತಪ್ಪಿತಸ್ಥರನ್ನು ಶಿಕ್ಷಿಸಲು ಬಿಜೆಪಿ ಕೆಲಸ ಮಾಡುತ್ತದೆ. ಬಿಜೆಪಿಯಲ್ಲಿ ಭ್ರಷ್ಟರಿಗೆ ಸ್ಥಾನವಿಲ್ಲ” ಎಂದು ತಿಳಿಸಿದ್ದಾರೆ.

ಎಎಪಿ ನಾಯಕ ಸೌರಭ್ ಭಾರದ್ವಾಜ್ ಪ್ರತಿಕ್ರಿಯಿಸಿ, “ಬಿಜೆಪಿಯು ಪ್ರತಿಪಕ್ಷಗಳ ನಾಯಕರ ಮೇಲೆ ತನಿಖೆಯ ಮೂಲಕ ಒತ್ತಡ ಹೇರಿದ ಮೂರು ಡಜನ್ ಉದಾಹರಣೆಗಳಿವೆ. ಒತ್ತಡ ಎದುರಿಸಿದ ರಾಜಕಾರಣಿಗಳು ಬಿಜೆಪಿಯ ಮಾತು ಕೇಳಿದ ಬಳಿಕವಷ್ಟೇ ಪ್ರಕರಣಗಳನ್ನು ಕೈಬಿಡಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರನ್ನು ತಮ್ಮ ರಾಜಕೀಯ ಗುರು ಎಂದಿರುವ ಸಿಸೋಡಿಯಾ, “ನಾನು ಎಂದಿಗೂ ಅವರಿಗೆ ಮೋಸ ಮಾಡುವುದಿಲ್ಲ. ನನ್ನನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮಾಡುವ ಪ್ರಸ್ತಾಪವಿಟ್ಟು ಕರೆದಿರುವ ಬಿಜೆಪಿಗೆ ನನ್ನ ಸಂದೇಶವಿದು. ಅರವಿಂದ್ ಕೇಜ್ರಿವಾಲ್ ನನ್ನ ರಾಜಕೀಯ ಗುರು, ನಾನು ಅವರಿಗೆ ಎಂದಿಗೂ ದ್ರೋಹ ಮಾಡುವುದಿಲ್ಲ. ನಾನು ಸಿಎಂ ಆಗಲು ಇಲ್ಲಿಗೆ ಬಂದಿಲ್ಲ. ದೇಶದ ಪ್ರತಿ ಮಗುವಿಗೆ ಉತ್ತಮ ಶಿಕ್ಷಣ ಸಿಗಬೇಕು, ಆಗ ಮಾತ್ರ ಭಾರತವು ನಂಬರ್ 1 ದೇಶವಾಗುತ್ತದೆ ಎಂಬುದು ನನ್ನ ಕನಸಾಗಿದೆ. ಕೇಜ್ರಿವಾಲ್ ಅವರು ಮಾತ್ರ ಇಡೀ ದೇಶದಲ್ಲಿ ಈ ಕೆಲಸವನ್ನು ಮಾಡಲು ಸಾಧ್ಯ” ಎಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...