Homeಮುಖಪುಟತೆಲಂಗಾಣ: ಪ್ರವಾದಿ ಮುಹಮ್ಮದ್‌ ನಿಂದನೆ ಮಾಡಿದ ಬಿಜೆಪಿ ಶಾಸಕ ಅರೆಸ್ಟ್‌

ತೆಲಂಗಾಣ: ಪ್ರವಾದಿ ಮುಹಮ್ಮದ್‌ ನಿಂದನೆ ಮಾಡಿದ ಬಿಜೆಪಿ ಶಾಸಕ ಅರೆಸ್ಟ್‌

- Advertisement -
- Advertisement -

ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರು ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು ಬಂಧನಕ್ಕೊಳಗಾಗಿದ್ದಾರೆ. ನಿಂದನೆ ಹೇಳಿಕೆ ಹೊರಬಿದ್ದ ನಂತರ ನಿನ್ನೆ ರಾತ್ರಿ ಹೈದರಾಬಾದ್‌ನಲ್ಲಿ ಪ್ರತಿಭಟನೆ ನಡೆಯಿತು. ಬಳಿಕ ಪೊಲೀಸರು ಕ್ರಮ ಜರುಗಿಸಲಾಗಿದೆ.

ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಿದ ಹಿನ್ನೆಲೆಯಲ್ಲಿ ಕಾನೂನಿನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹೈದರಾಬಾದ್‌ನ ದಕ್ಷಿಣ ವಲಯದ ಉಪ ಪೊಲೀಸ್ ಆಯುಕ್ತ ಪಿ.ಸಾಯಿ ಚೈತನ್ಯ ತಿಳಿಸಿದ್ದಾರೆ.

ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ವಿಡಿಯೊವನ್ನು ಬಿಜೆಪಿ ಶಾಸಕ ರಾಜಾ ಸಿಂಗ್ ಬಿಡುಗಡೆ ಮಾಡಿದ ನಂತರದಲ್ಲಿ ಪ್ರತಿಭಟನೆಗಳು ನಡೆದಿವೆ. ಸೋಮವಾರ ರಾತ್ರಿ ನಗರ ಪೊಲೀಸ್ ಕಮಿಷನರ್ ಸಿವಿ ಆನಂದ್ ಅವರ ಕಚೇರಿ ಎದುರು ಮತ್ತು ಹೈದರಾಬಾದ್‌ನ ಇತರ ಭಾಗಗಳಲ್ಲಿ ಪ್ರತಿಭಟನೆಗಳು ಜರುಗಿವೆ.

ಅವಹೇಳನಕಾರಿ ಹೇಳಿಕೆ ನೀಡಿರುವ ಸಿಂಗ್‌, ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ಅವರನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು.

ನಗರದ ಗೋಶಾಮಹಲ್‌ನ ಶಾಸಕ ಟಿ ರಾಜಾ ಸಿಂಗ್‌ ಕಳೆದ ವಾರ ಕಾಮಿಡಿ ಪ್ರೊಗ್ರಾಂಗೆ ಅಡ್ಡಿಪಡಿಸಲು ಯತ್ನಿಸಿದ್ದರು. ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವರ್ ಫರೂಕಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲು ಒತ್ತಾಯಿಸಿದ್ದರು. ಸುಮಾರು 50 ಮಂದಿ ಬೆಂಬಲಿಗರೊಂದಿಗೆ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿ ಅಡ್ಡಿಪಡಿಸಲು ಪ್ರಯತ್ನಿಸಿದ್ದರು. ಪೊಲೀಸರು ಕ್ರಮ ಜರುಗಿಸಿದ ಬಳಿಕ, ಕಾರ್ಯಕ್ರಮ ಸುಗಮವಾಗಿ ನಡೆಯಿತು.

ಫ್ರಿಂಜ್‌ ಎಲಿಮೆಂಟ್‌ ಆಗುತ್ತಾರೆಯೇ ಬಿಜೆಪಿ ಶಾಸಕ?

ಪ್ರವಾದಿ ಮುಹಮ್ಮದ್‌ ಅವರ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಮತ್ತು ನವೀನ್ ಜಿಂದಾಲ್‌ ಅವರನ್ನು ಪಕ್ಷವು ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಿತ್ತು.

“ಇಂತಹ ಜನರನ್ನು ಅಥವಾ ತತ್ವವನ್ನು ಪ್ರಚಾರ ಮಾಡುವುದಿಲ್ಲ” ಎಂದು ಬಿಜೆಪಿ ಹೇಳಿತ್ತು.

“ಭಾರತದ ಸಾವಿರಾರು ವರ್ಷಗಳ ಇತಿಹಾಸದಲ್ಲಿ, ಇಲ್ಲಿ ಪ್ರತಿಯೊಂದು ಧರ್ಮವೂ ಅರಳಿವೆ. ಪ್ರವರ್ಧಮಾನಕ್ಕೆ ಬಂದಿವೆ. ಬಿಜೆಪಿಯು ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ. ಯಾವುದೇ ಧರ್ಮದ ಯಾವುದೇ ಧಾರ್ಮಿಕ ವ್ಯಕ್ತಿಗಳನ್ನು ಅವಮಾನಿಸುವುದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ” ಎಂದು ತಿಳಿಸಿತ್ತು.

“ಯಾವುದೇ ಪಂಥ ಅಥವಾ ಧರ್ಮವನ್ನು ಅವಮಾನಿಸುವುದನ್ನು ಬಿಜೆಪಿ ಬಲವಾಗಿ ವಿರೋಧಿಸುತ್ತದೆ. ಬಿಜೆಪಿ ಅಂತಹ ಜನರನ್ನು ಅಥವಾ ತತ್ವವನ್ನು ಪ್ರಚಾರ ಮಾಡುವುದಿಲ್ಲ. ಭಾರತದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ತನ್ನ ಆಯ್ಕೆಯ ಯಾವುದೇ ಧರ್ಮವನ್ನು ಆಚರಿಸಲು ಮತ್ತು ಪ್ರತಿ ಧರ್ಮವನ್ನು ಗೌರವಿಸುವ ಹಕ್ಕನ್ನು ನೀಡುತ್ತದೆ” ಎಂದು ಸ್ಪಷ್ಟಪಡಿಸಿತ್ತು.

ನೂಪುರ್‌ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು 15 ಪ್ರಮುಖ ರಾಷ್ಟ್ರಗಳು ಕಟು ಶಬ್ದಗಳಲ್ಲಿ ಖಂಡಿಸಿದ್ದವು. ಇರಾನ್, ಇರಾಕ್, ಕುವೈತ್, ಕತಾರ್, ಸೌದಿ ಅರೇಬಿಯಾ, ಓಮನ್, ಯುಎಇ, ಜೋರ್ಡಾನ್, ಅಫ್ಘಾನಿಸ್ತಾನ, ಬಹ್ರೇನ್, ಮಾಲ್ಡೀವ್ಸ್, ಲಿಬಿಯಾ ಮತ್ತು ಇಂಡೋನೇಷ್ಯಾ ಸೇರಿದಂತೆ ಹಲವು ರಾಷ್ಟ್ರಗಳು ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದವು.

ಇದನ್ನೂ ಓದಿರಿ: ಎಎಪಿ ತೊರೆದರೆ ಸಿಬಿಐ ತನಿಖೆ ನಿಲ್ಲಿಸುತ್ತೇವೆ: ಸಿಸೋಡಿಯಾಗೆ ಬಿಜೆಪಿ ಆಮಿಷ?

ಕತಾರ್, ಇರಾನ್ ಮತ್ತು ಬಹ್ರೇನ್ ದೇಶಗಳು ಭಾರತೀಯ ರಾಯಭಾರಿಯನ್ನು ಕರೆಸಿ, ತಮ್ಮ ವಿರೋಧವನ್ನು ತಿಳಿಸಿದ್ದವು. ಭಾರತ ಸರ್ಕಾರವು ಸಾರ್ವಜನಿಕವಾಗಿ ಈ ಬಗ್ಗೆ ಕ್ಷಮೆಯಾಚನೆ ಮಾಡುವುದನ್ನು ನಿರೀಕ್ಷಿಸುವುದಾಗಿ ಕತಾರ್‌ ಹೇಳಿತ್ತು. ಜೊತೆಗೆ ಪಕ್ಷದ ವಕ್ತಾರರ ವಿರುದ್ಧ ಬಿಜೆಪಿ ಕೈಗೊಂಡಿರುವ ಕ್ರಮವನ್ನು ಬಹ್ರೇನ್ ಮತ್ತು ಸೌದಿ ಅರೇಬಿಯಾ ಸ್ವಾಗತಿಸಿದ್ದವು.

ಇಷ್ಟೆಲ್ಲ ಬೆಳವಣಿಗೆಗಳ ನಡುವೆ ಪ್ರವಾದಿ ನಿಂದನೆ ಮಾಡಿದವರನ್ನು ‘ಪ್ರಿಂಜ್ ಎಲಿಮೆಂಟ್ಸ್‌’ (ಕೊನೆಯ ಎಳಸುಗಳು) ಎಂದು ಸರ್ಕಾರ ಕರೆದಿತ್ತು. ದೇಶದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗಲು ಕಾರಣವಾಗಿದ್ದ ಘಟನೆ ತಾಜಾ ಉದಾಹರಣೆ ನಿಂತಿರುವಾಗ ಮತ್ತೊಮ್ಮೆ ಬಿಜೆಪಿ ನಾಯಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಕ್ಷವು ಇವರನ್ನು ‘ಪ್ರಿಂಜ್ ಎಲಿಮೆಂಟ್’ ಎಂದು ಕರೆದು ಕ್ರಮ ಜರುಗಿಸುತ್ತದೆಯೋ ಇಲ್ಲವೋ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...