Homeಮುಖಪುಟತೆಲಂಗಾಣ: ಪ್ರವಾದಿ ಮುಹಮ್ಮದ್‌ ನಿಂದನೆ ಮಾಡಿದ ಬಿಜೆಪಿ ಶಾಸಕ ಅರೆಸ್ಟ್‌

ತೆಲಂಗಾಣ: ಪ್ರವಾದಿ ಮುಹಮ್ಮದ್‌ ನಿಂದನೆ ಮಾಡಿದ ಬಿಜೆಪಿ ಶಾಸಕ ಅರೆಸ್ಟ್‌

- Advertisement -
- Advertisement -

ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರು ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು ಬಂಧನಕ್ಕೊಳಗಾಗಿದ್ದಾರೆ. ನಿಂದನೆ ಹೇಳಿಕೆ ಹೊರಬಿದ್ದ ನಂತರ ನಿನ್ನೆ ರಾತ್ರಿ ಹೈದರಾಬಾದ್‌ನಲ್ಲಿ ಪ್ರತಿಭಟನೆ ನಡೆಯಿತು. ಬಳಿಕ ಪೊಲೀಸರು ಕ್ರಮ ಜರುಗಿಸಲಾಗಿದೆ.

ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಿದ ಹಿನ್ನೆಲೆಯಲ್ಲಿ ಕಾನೂನಿನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹೈದರಾಬಾದ್‌ನ ದಕ್ಷಿಣ ವಲಯದ ಉಪ ಪೊಲೀಸ್ ಆಯುಕ್ತ ಪಿ.ಸಾಯಿ ಚೈತನ್ಯ ತಿಳಿಸಿದ್ದಾರೆ.

ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ವಿಡಿಯೊವನ್ನು ಬಿಜೆಪಿ ಶಾಸಕ ರಾಜಾ ಸಿಂಗ್ ಬಿಡುಗಡೆ ಮಾಡಿದ ನಂತರದಲ್ಲಿ ಪ್ರತಿಭಟನೆಗಳು ನಡೆದಿವೆ. ಸೋಮವಾರ ರಾತ್ರಿ ನಗರ ಪೊಲೀಸ್ ಕಮಿಷನರ್ ಸಿವಿ ಆನಂದ್ ಅವರ ಕಚೇರಿ ಎದುರು ಮತ್ತು ಹೈದರಾಬಾದ್‌ನ ಇತರ ಭಾಗಗಳಲ್ಲಿ ಪ್ರತಿಭಟನೆಗಳು ಜರುಗಿವೆ.

ಅವಹೇಳನಕಾರಿ ಹೇಳಿಕೆ ನೀಡಿರುವ ಸಿಂಗ್‌, ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ಅವರನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು.

ನಗರದ ಗೋಶಾಮಹಲ್‌ನ ಶಾಸಕ ಟಿ ರಾಜಾ ಸಿಂಗ್‌ ಕಳೆದ ವಾರ ಕಾಮಿಡಿ ಪ್ರೊಗ್ರಾಂಗೆ ಅಡ್ಡಿಪಡಿಸಲು ಯತ್ನಿಸಿದ್ದರು. ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವರ್ ಫರೂಕಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲು ಒತ್ತಾಯಿಸಿದ್ದರು. ಸುಮಾರು 50 ಮಂದಿ ಬೆಂಬಲಿಗರೊಂದಿಗೆ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿ ಅಡ್ಡಿಪಡಿಸಲು ಪ್ರಯತ್ನಿಸಿದ್ದರು. ಪೊಲೀಸರು ಕ್ರಮ ಜರುಗಿಸಿದ ಬಳಿಕ, ಕಾರ್ಯಕ್ರಮ ಸುಗಮವಾಗಿ ನಡೆಯಿತು.

ಫ್ರಿಂಜ್‌ ಎಲಿಮೆಂಟ್‌ ಆಗುತ್ತಾರೆಯೇ ಬಿಜೆಪಿ ಶಾಸಕ?

ಪ್ರವಾದಿ ಮುಹಮ್ಮದ್‌ ಅವರ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಮತ್ತು ನವೀನ್ ಜಿಂದಾಲ್‌ ಅವರನ್ನು ಪಕ್ಷವು ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಿತ್ತು.

“ಇಂತಹ ಜನರನ್ನು ಅಥವಾ ತತ್ವವನ್ನು ಪ್ರಚಾರ ಮಾಡುವುದಿಲ್ಲ” ಎಂದು ಬಿಜೆಪಿ ಹೇಳಿತ್ತು.

“ಭಾರತದ ಸಾವಿರಾರು ವರ್ಷಗಳ ಇತಿಹಾಸದಲ್ಲಿ, ಇಲ್ಲಿ ಪ್ರತಿಯೊಂದು ಧರ್ಮವೂ ಅರಳಿವೆ. ಪ್ರವರ್ಧಮಾನಕ್ಕೆ ಬಂದಿವೆ. ಬಿಜೆಪಿಯು ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ. ಯಾವುದೇ ಧರ್ಮದ ಯಾವುದೇ ಧಾರ್ಮಿಕ ವ್ಯಕ್ತಿಗಳನ್ನು ಅವಮಾನಿಸುವುದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ” ಎಂದು ತಿಳಿಸಿತ್ತು.

“ಯಾವುದೇ ಪಂಥ ಅಥವಾ ಧರ್ಮವನ್ನು ಅವಮಾನಿಸುವುದನ್ನು ಬಿಜೆಪಿ ಬಲವಾಗಿ ವಿರೋಧಿಸುತ್ತದೆ. ಬಿಜೆಪಿ ಅಂತಹ ಜನರನ್ನು ಅಥವಾ ತತ್ವವನ್ನು ಪ್ರಚಾರ ಮಾಡುವುದಿಲ್ಲ. ಭಾರತದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ತನ್ನ ಆಯ್ಕೆಯ ಯಾವುದೇ ಧರ್ಮವನ್ನು ಆಚರಿಸಲು ಮತ್ತು ಪ್ರತಿ ಧರ್ಮವನ್ನು ಗೌರವಿಸುವ ಹಕ್ಕನ್ನು ನೀಡುತ್ತದೆ” ಎಂದು ಸ್ಪಷ್ಟಪಡಿಸಿತ್ತು.

ನೂಪುರ್‌ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು 15 ಪ್ರಮುಖ ರಾಷ್ಟ್ರಗಳು ಕಟು ಶಬ್ದಗಳಲ್ಲಿ ಖಂಡಿಸಿದ್ದವು. ಇರಾನ್, ಇರಾಕ್, ಕುವೈತ್, ಕತಾರ್, ಸೌದಿ ಅರೇಬಿಯಾ, ಓಮನ್, ಯುಎಇ, ಜೋರ್ಡಾನ್, ಅಫ್ಘಾನಿಸ್ತಾನ, ಬಹ್ರೇನ್, ಮಾಲ್ಡೀವ್ಸ್, ಲಿಬಿಯಾ ಮತ್ತು ಇಂಡೋನೇಷ್ಯಾ ಸೇರಿದಂತೆ ಹಲವು ರಾಷ್ಟ್ರಗಳು ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದವು.

ಇದನ್ನೂ ಓದಿರಿ: ಎಎಪಿ ತೊರೆದರೆ ಸಿಬಿಐ ತನಿಖೆ ನಿಲ್ಲಿಸುತ್ತೇವೆ: ಸಿಸೋಡಿಯಾಗೆ ಬಿಜೆಪಿ ಆಮಿಷ?

ಕತಾರ್, ಇರಾನ್ ಮತ್ತು ಬಹ್ರೇನ್ ದೇಶಗಳು ಭಾರತೀಯ ರಾಯಭಾರಿಯನ್ನು ಕರೆಸಿ, ತಮ್ಮ ವಿರೋಧವನ್ನು ತಿಳಿಸಿದ್ದವು. ಭಾರತ ಸರ್ಕಾರವು ಸಾರ್ವಜನಿಕವಾಗಿ ಈ ಬಗ್ಗೆ ಕ್ಷಮೆಯಾಚನೆ ಮಾಡುವುದನ್ನು ನಿರೀಕ್ಷಿಸುವುದಾಗಿ ಕತಾರ್‌ ಹೇಳಿತ್ತು. ಜೊತೆಗೆ ಪಕ್ಷದ ವಕ್ತಾರರ ವಿರುದ್ಧ ಬಿಜೆಪಿ ಕೈಗೊಂಡಿರುವ ಕ್ರಮವನ್ನು ಬಹ್ರೇನ್ ಮತ್ತು ಸೌದಿ ಅರೇಬಿಯಾ ಸ್ವಾಗತಿಸಿದ್ದವು.

ಇಷ್ಟೆಲ್ಲ ಬೆಳವಣಿಗೆಗಳ ನಡುವೆ ಪ್ರವಾದಿ ನಿಂದನೆ ಮಾಡಿದವರನ್ನು ‘ಪ್ರಿಂಜ್ ಎಲಿಮೆಂಟ್ಸ್‌’ (ಕೊನೆಯ ಎಳಸುಗಳು) ಎಂದು ಸರ್ಕಾರ ಕರೆದಿತ್ತು. ದೇಶದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗಲು ಕಾರಣವಾಗಿದ್ದ ಘಟನೆ ತಾಜಾ ಉದಾಹರಣೆ ನಿಂತಿರುವಾಗ ಮತ್ತೊಮ್ಮೆ ಬಿಜೆಪಿ ನಾಯಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಕ್ಷವು ಇವರನ್ನು ‘ಪ್ರಿಂಜ್ ಎಲಿಮೆಂಟ್’ ಎಂದು ಕರೆದು ಕ್ರಮ ಜರುಗಿಸುತ್ತದೆಯೋ ಇಲ್ಲವೋ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...