Homeಕರ್ನಾಟಕಕೊಡಗಿನಲ್ಲಿ 4 ದಿನ ನಿಷೇಧಾಜ್ಞೆ; ಉಭಯ ಪಕ್ಷಗಳ ಕಾರ್ಯಕ್ರಮಗಳಿಗೆ ಬ್ರೇಕ್‌

ಕೊಡಗಿನಲ್ಲಿ 4 ದಿನ ನಿಷೇಧಾಜ್ಞೆ; ಉಭಯ ಪಕ್ಷಗಳ ಕಾರ್ಯಕ್ರಮಗಳಿಗೆ ಬ್ರೇಕ್‌

- Advertisement -
- Advertisement -

ಕೊಡಗು ಜಿಲ್ಲೆಯಾದ್ಯಂತ ಬುಧವಾರ (ಆಗಸ್ಟ್‌ 24) ಬೆಳಿಗ್ಗೆ ಆರು ಗಂಟೆಯಿಂದ ಆಗಸ್ಟ್‌ 27 ಸಂಜೆ ಆರು ಗಂಟೆವರೆಗೆ 144 ಸೆಕ್ಷನ್‌ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶ ಹೊರಡಿಸಿದ್ದಾರೆ.

ಈ ನಿಷೇಧಾಜ್ಞೆ ಸಮಯದಲ್ಲಿ ಯಾವುದೇ ಪ್ರತಿಭಟನೆ ಜಾಥಾ, ಕಪ್ಪು ಬಟ್ಟೆ ಪ್ರದರ್ಶನ ಹಾಗೂ ಐದು ಜನಕ್ಕಿಂತ ಹೆಚ್ಚಿನ ಜನ ಒಂದೆಡೆ ಗುಂಪು ಸೇರದಂತೆ ಮತ್ತು ಓಡಾಡದಂತೆ ನಿರ್ಬಂಧಿಸಲಾಗಿದೆ.

ಇದೇ ಅಗಸ್ಟ್‌ 26ರಂದು ಮಡಿಕೇರಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಮಡಿಕೇರಿ ಚಲೋ ಮತ್ತು ರಾಜ್ಯ ಸರ್ಕಾರ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು. ಈಗ ಅವೆರಡೂ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಹಿಂದುತ್ವ ಸಂಘಟನೆಯ ಕಾರ್ಯಕರ್ತ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಡಿಕೇರಿ ಪೊಲೀಸ್ ಆಯುಕ್ತ ಕಚೇರಿ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಆ ಕುರಿತು ಲಕ್ಷಾಂತರ ಜನ ಕಾಂಗ್ರೆಸ್ ಕಾರ್ಯಕರ್ತರು ಕೊಡಗಿಗೆ ಆಗಮಿಸುತ್ತಿದ್ದರು.

ಮತ್ತೊಂದಡೆ ರಾಜ್ಯ ಸರ್ಕಾರ ಸಹಿತ ತಮ್ಮ ಸರ್ಕರ ಸಾಧನೆಗಳನ್ನು ತಿಳಿಸಲು ಜನೋತ್ಸವವನ್ನು ಹಮ್ಮಿಕೊಂಡು ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದವು. ಆದರೆ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಜಿಲ್ಲಾ ಎಸ್‌ಪಿ ಅಯ್ಯಪ್ಪ ಅವರ ಮನವಿ ಮೇರೆಗೆ ಜಿಲ್ಲಾಧಿಕಾರಿ ನಿಷೇಧಾಜ್ಞೆ ಹೊರಡಿಸಿದ್ದಾರೆ.

ಮೊಟ್ಟೆ ಎಸೆದವನು ಯಾವ ಪಕ್ಷದ ಕಾರ್ಯಕರ್ತ?

ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಡಗಿಗೆ ಆಗಮಿಸಿದ್ದ ವೇಳೆ ಅವರ ಕಾರಿನ ಮೇಲೆ ಮೊಟ್ಟೆ ಎಸೆದು ಸಿಕ್ಕಿಬಿದ್ದಿರುವ ಆರೋಪಿ ಸಂಪತ್, ಯಾವ ಪಕ್ಷದವನು ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಆತ ಬಿಜೆಪಿ ಕಾರ್ಯಕರ್ತ ಎಂಬ ಆರೋಪಗಳಿವೆ. ಆದರೆ ಆರೋಪಿ ನೀಡುತ್ತಿರುವ ಹೇಳಿಕೆಗಳು ಗೊಂದಲಕಾರಿಯಾಗಿವೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಆತನ ಫೋಟೋಗಳು ಸಂಶಯಗಳಿಗೆ ಎಡೆಮಾಡಿಕೊಟ್ಟಿವೆ.

ಆರೋಪಿ ಸಂಪತ್‌ ಆರ್‌ಎಸ್‌ಎಸ್‌/ಬಿಜೆಪಿಯವನೋ, ಕಾಂಗ್ರೆಸ್‌ ಪಕ್ಷದವನೋ ಅಥವಾ ಜೆಡಿಎಸ್‌ಗೆ ಸೇರಿದವನೋ ಎಂಬುದು ಈಗ ಚರ್ಚೆಗೆ ಗ್ರಾಸವಾಗಿದೆ.

“ನಾನು ಕೂಡ ಕಾಂಗ್ರೆಸ್ ಕಾರ್ಯಕರ್ತ” ಎಂದು ಸಂಪತ್‌ ಹೇಳಿದ ಬಳಿಕ ಆತನ ಹಳೆಯ ಫೋಟೋಗಳು ಹರಿದಾಡಿದವು. ಬಿಜೆಪಿ ಶಾಸಕ ಅಪ್ಪಚ್ಚು ರಂಜನ್‌ ಅವರ ಜೊತೆ ಕೇಸರಿ ಶಾಲು ಧರಿಸಿ ಆತ ನಿಂತಿರುವ ಫೋಟೋವನ್ನು ಸ್ವತಃ ಸಿದ್ದರಾಮಯ್ಯನವರೇ ಹಂಚಿಕೊಂಡಿದ್ದಾರೆ.

“ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ BJP Karnataka ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಬಂದಿದ್ದು ಯಾಕೆ? ಕಾಂಗ್ರೆಸ್‌ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇಷ್ಟರ ನಡುವೆ ಕಾಂಗ್ರೆಸ್‌ ಪಕ್ಷದ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಮತ್ತೊಂದು ಟ್ವೀಟ್ ಮಾಡಲಾಗಿದ್ದು, ಆರ್‌ಎಸ್‌ಎಸ್‌ ಜೊತೆಗೆ ಸಂಪತ್‌ನ ಸಂಪರ್ಕ ಇತ್ತೆಂದು ಪ್ರತಿಪಾದಿಸಲಾಗಿದೆ. “ಆರ್‌ಎಸ್‌ಎಸ್‌ ಶಿಬಿರದಲ್ಲಿ ಸಂತೋಷ್ ಪಾಲ್ಗೊಂಡಿದ್ದಾನೆ” ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿರಿ: ಆಹಾರದ ಹಕ್ಕು ಎತ್ತಿ ಹಿಡಿದ ಸಿದ್ದರಾಮಯ್ಯ: ಸೋಷಿಯಲ್‌ ಮೀಡಿಯಾ ತುಂಬಾ ಈಗ ಬಾಡಿನ ಘಮಲು

“ಬಿಜೆಪಿ ಮತ್ತು ಆರ್‌ಎಸ್‌ಎಸ್‌ ತನ್ನ ಅಜೆಂಡಾ ಸ್ಥಾಪಿಸಲು ತಮ್ಮಲ್ಲಿನ ಮುಗ್ದ ಕಾರ್ಯಕರ್ತರಿಗೆ ಯಾವ ವೇಷವನ್ನು ಬೇಕಿದ್ದರೂ ಹಾಕಿ ಕಳಿಸುತ್ತವೆ. ಯಾವ ಕೃತ್ಯಗಳನ್ನು ಬೇಕಿದ್ದರೂ ಮಾಡಿಸುತ್ತವೆ, ಅವರನ್ನೇ ಕೊಂದು ಚಿತೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತವೆ. ಆರ್‌ಎಸ್‌ಎಸ್‌ ‘ಪ್ಯಾಂಟು’ ತೊಟ್ಟವನಿಗೆ ಕಾಂಗ್ರೆಸ್ ವೇಷ ತೋಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೇ?” ಎಂದು ಕಾಂಗ್ರೆಸ್ ಕುಟುಕಿದೆ.

ಇಷ್ಟೆಲ್ಲದರ ನಡುವೆ ಸಂತೋಷ್‌ ಮೂಲತಃ ಜೆಡಿಎಸ್‌ನವನು ಎಂದು ಹೇಳಲಾಗುತ್ತಿದೆ. ಮಾಧ್ಯಮ ಜೊತೆ ಮಾತನಾಡಿರುವ ಸಂಪತ್‌, “ನಾನು ಜೆಡಿಎಸ್‌. ಮೂಲತಃ ನಾನು ಮೊದಲು ಜೆಡಿಎಸ್‌ನಲ್ಲಿದ್ದೆ. ಲೋಕಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಜೊತೆಯಾಗಿ ಸ್ಪರ್ಧೆ ಮಾಡಿದವು. ಕಾಂಗ್ರೆಸ್‌ ಪಕ್ಷಕ್ಕಾಗಿ ಕೆಲಸ ಮಾಡಲು ಹೇಳಿದರು. ಆಗ ನಾನು ಕಾಂಗ್ರೆಸ್‌ಗೆ ಕೆಲಸ ಮಾಡಿದ್ದೇನೆ. ನಂತರ ಪಟ್ಟಣ ಪಂಚಾಯಿತಿ ಚುನಾವಣೆ ಬಂತು. ಹನ್ನೊಂದು ವಾರ್ಡ್‌ಗಳಲ್ಲಿ ಐದು ವಾರ್ಡ್ ಜೆಡಿಎಸ್‌ಗೆ ಮೀಸಲಾದವು. ನನ್ನ ವಾರ್ಡ್ ಕಾಂಗ್ರೆಸ್‌ಗೆ ಸೀಮಿತವಾಯ್ತು. ಕಾಂಗ್ರೆಸ್‌ಗಾಗಿ ಕೆಲಸ ಮಾಡಿದ್ದೇನೆ. ಯಾರೂ ಇರಲಿಲ್ಲ. ಕಾಂಗ್ರೆಸ್‌ನವರು ಒಬ್ಬರೇ ಒಬ್ಬರು ಬಂದಿಲ್ಲ” ಎಂದಿದ್ದಾನೆ.

ಮೊಟ್ಟೆ ಪ್ರಕರಣದ ಬಳಿಕ ಕೊಡಗು ರಾಜಕೀಯ ವಿದ್ಯಮಾನಗಳ ಕೇಂದ್ರವಾಗಿದೆ. ಈಗ ಉಭಯ ಪಕ್ಷಗಳ ಕಾರ್ಯಕ್ರಮಗಳಿಗೆ ಬ್ರೇಕ್‌ ಹಾಕುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...