Homeಕರ್ನಾಟಕಕೊಡಗಿನಲ್ಲಿ 4 ದಿನ ನಿಷೇಧಾಜ್ಞೆ; ಉಭಯ ಪಕ್ಷಗಳ ಕಾರ್ಯಕ್ರಮಗಳಿಗೆ ಬ್ರೇಕ್‌

ಕೊಡಗಿನಲ್ಲಿ 4 ದಿನ ನಿಷೇಧಾಜ್ಞೆ; ಉಭಯ ಪಕ್ಷಗಳ ಕಾರ್ಯಕ್ರಮಗಳಿಗೆ ಬ್ರೇಕ್‌

- Advertisement -
- Advertisement -

ಕೊಡಗು ಜಿಲ್ಲೆಯಾದ್ಯಂತ ಬುಧವಾರ (ಆಗಸ್ಟ್‌ 24) ಬೆಳಿಗ್ಗೆ ಆರು ಗಂಟೆಯಿಂದ ಆಗಸ್ಟ್‌ 27 ಸಂಜೆ ಆರು ಗಂಟೆವರೆಗೆ 144 ಸೆಕ್ಷನ್‌ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶ ಹೊರಡಿಸಿದ್ದಾರೆ.

ಈ ನಿಷೇಧಾಜ್ಞೆ ಸಮಯದಲ್ಲಿ ಯಾವುದೇ ಪ್ರತಿಭಟನೆ ಜಾಥಾ, ಕಪ್ಪು ಬಟ್ಟೆ ಪ್ರದರ್ಶನ ಹಾಗೂ ಐದು ಜನಕ್ಕಿಂತ ಹೆಚ್ಚಿನ ಜನ ಒಂದೆಡೆ ಗುಂಪು ಸೇರದಂತೆ ಮತ್ತು ಓಡಾಡದಂತೆ ನಿರ್ಬಂಧಿಸಲಾಗಿದೆ.

ಇದೇ ಅಗಸ್ಟ್‌ 26ರಂದು ಮಡಿಕೇರಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಮಡಿಕೇರಿ ಚಲೋ ಮತ್ತು ರಾಜ್ಯ ಸರ್ಕಾರ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು. ಈಗ ಅವೆರಡೂ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಹಿಂದುತ್ವ ಸಂಘಟನೆಯ ಕಾರ್ಯಕರ್ತ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಡಿಕೇರಿ ಪೊಲೀಸ್ ಆಯುಕ್ತ ಕಚೇರಿ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಆ ಕುರಿತು ಲಕ್ಷಾಂತರ ಜನ ಕಾಂಗ್ರೆಸ್ ಕಾರ್ಯಕರ್ತರು ಕೊಡಗಿಗೆ ಆಗಮಿಸುತ್ತಿದ್ದರು.

ಮತ್ತೊಂದಡೆ ರಾಜ್ಯ ಸರ್ಕಾರ ಸಹಿತ ತಮ್ಮ ಸರ್ಕರ ಸಾಧನೆಗಳನ್ನು ತಿಳಿಸಲು ಜನೋತ್ಸವವನ್ನು ಹಮ್ಮಿಕೊಂಡು ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದವು. ಆದರೆ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಜಿಲ್ಲಾ ಎಸ್‌ಪಿ ಅಯ್ಯಪ್ಪ ಅವರ ಮನವಿ ಮೇರೆಗೆ ಜಿಲ್ಲಾಧಿಕಾರಿ ನಿಷೇಧಾಜ್ಞೆ ಹೊರಡಿಸಿದ್ದಾರೆ.

ಮೊಟ್ಟೆ ಎಸೆದವನು ಯಾವ ಪಕ್ಷದ ಕಾರ್ಯಕರ್ತ?

ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಡಗಿಗೆ ಆಗಮಿಸಿದ್ದ ವೇಳೆ ಅವರ ಕಾರಿನ ಮೇಲೆ ಮೊಟ್ಟೆ ಎಸೆದು ಸಿಕ್ಕಿಬಿದ್ದಿರುವ ಆರೋಪಿ ಸಂಪತ್, ಯಾವ ಪಕ್ಷದವನು ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಆತ ಬಿಜೆಪಿ ಕಾರ್ಯಕರ್ತ ಎಂಬ ಆರೋಪಗಳಿವೆ. ಆದರೆ ಆರೋಪಿ ನೀಡುತ್ತಿರುವ ಹೇಳಿಕೆಗಳು ಗೊಂದಲಕಾರಿಯಾಗಿವೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಆತನ ಫೋಟೋಗಳು ಸಂಶಯಗಳಿಗೆ ಎಡೆಮಾಡಿಕೊಟ್ಟಿವೆ.

ಆರೋಪಿ ಸಂಪತ್‌ ಆರ್‌ಎಸ್‌ಎಸ್‌/ಬಿಜೆಪಿಯವನೋ, ಕಾಂಗ್ರೆಸ್‌ ಪಕ್ಷದವನೋ ಅಥವಾ ಜೆಡಿಎಸ್‌ಗೆ ಸೇರಿದವನೋ ಎಂಬುದು ಈಗ ಚರ್ಚೆಗೆ ಗ್ರಾಸವಾಗಿದೆ.

“ನಾನು ಕೂಡ ಕಾಂಗ್ರೆಸ್ ಕಾರ್ಯಕರ್ತ” ಎಂದು ಸಂಪತ್‌ ಹೇಳಿದ ಬಳಿಕ ಆತನ ಹಳೆಯ ಫೋಟೋಗಳು ಹರಿದಾಡಿದವು. ಬಿಜೆಪಿ ಶಾಸಕ ಅಪ್ಪಚ್ಚು ರಂಜನ್‌ ಅವರ ಜೊತೆ ಕೇಸರಿ ಶಾಲು ಧರಿಸಿ ಆತ ನಿಂತಿರುವ ಫೋಟೋವನ್ನು ಸ್ವತಃ ಸಿದ್ದರಾಮಯ್ಯನವರೇ ಹಂಚಿಕೊಂಡಿದ್ದಾರೆ.

“ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ BJP Karnataka ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಬಂದಿದ್ದು ಯಾಕೆ? ಕಾಂಗ್ರೆಸ್‌ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇಷ್ಟರ ನಡುವೆ ಕಾಂಗ್ರೆಸ್‌ ಪಕ್ಷದ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಮತ್ತೊಂದು ಟ್ವೀಟ್ ಮಾಡಲಾಗಿದ್ದು, ಆರ್‌ಎಸ್‌ಎಸ್‌ ಜೊತೆಗೆ ಸಂಪತ್‌ನ ಸಂಪರ್ಕ ಇತ್ತೆಂದು ಪ್ರತಿಪಾದಿಸಲಾಗಿದೆ. “ಆರ್‌ಎಸ್‌ಎಸ್‌ ಶಿಬಿರದಲ್ಲಿ ಸಂತೋಷ್ ಪಾಲ್ಗೊಂಡಿದ್ದಾನೆ” ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿರಿ: ಆಹಾರದ ಹಕ್ಕು ಎತ್ತಿ ಹಿಡಿದ ಸಿದ್ದರಾಮಯ್ಯ: ಸೋಷಿಯಲ್‌ ಮೀಡಿಯಾ ತುಂಬಾ ಈಗ ಬಾಡಿನ ಘಮಲು

“ಬಿಜೆಪಿ ಮತ್ತು ಆರ್‌ಎಸ್‌ಎಸ್‌ ತನ್ನ ಅಜೆಂಡಾ ಸ್ಥಾಪಿಸಲು ತಮ್ಮಲ್ಲಿನ ಮುಗ್ದ ಕಾರ್ಯಕರ್ತರಿಗೆ ಯಾವ ವೇಷವನ್ನು ಬೇಕಿದ್ದರೂ ಹಾಕಿ ಕಳಿಸುತ್ತವೆ. ಯಾವ ಕೃತ್ಯಗಳನ್ನು ಬೇಕಿದ್ದರೂ ಮಾಡಿಸುತ್ತವೆ, ಅವರನ್ನೇ ಕೊಂದು ಚಿತೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತವೆ. ಆರ್‌ಎಸ್‌ಎಸ್‌ ‘ಪ್ಯಾಂಟು’ ತೊಟ್ಟವನಿಗೆ ಕಾಂಗ್ರೆಸ್ ವೇಷ ತೋಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೇ?” ಎಂದು ಕಾಂಗ್ರೆಸ್ ಕುಟುಕಿದೆ.

ಇಷ್ಟೆಲ್ಲದರ ನಡುವೆ ಸಂತೋಷ್‌ ಮೂಲತಃ ಜೆಡಿಎಸ್‌ನವನು ಎಂದು ಹೇಳಲಾಗುತ್ತಿದೆ. ಮಾಧ್ಯಮ ಜೊತೆ ಮಾತನಾಡಿರುವ ಸಂಪತ್‌, “ನಾನು ಜೆಡಿಎಸ್‌. ಮೂಲತಃ ನಾನು ಮೊದಲು ಜೆಡಿಎಸ್‌ನಲ್ಲಿದ್ದೆ. ಲೋಕಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಜೊತೆಯಾಗಿ ಸ್ಪರ್ಧೆ ಮಾಡಿದವು. ಕಾಂಗ್ರೆಸ್‌ ಪಕ್ಷಕ್ಕಾಗಿ ಕೆಲಸ ಮಾಡಲು ಹೇಳಿದರು. ಆಗ ನಾನು ಕಾಂಗ್ರೆಸ್‌ಗೆ ಕೆಲಸ ಮಾಡಿದ್ದೇನೆ. ನಂತರ ಪಟ್ಟಣ ಪಂಚಾಯಿತಿ ಚುನಾವಣೆ ಬಂತು. ಹನ್ನೊಂದು ವಾರ್ಡ್‌ಗಳಲ್ಲಿ ಐದು ವಾರ್ಡ್ ಜೆಡಿಎಸ್‌ಗೆ ಮೀಸಲಾದವು. ನನ್ನ ವಾರ್ಡ್ ಕಾಂಗ್ರೆಸ್‌ಗೆ ಸೀಮಿತವಾಯ್ತು. ಕಾಂಗ್ರೆಸ್‌ಗಾಗಿ ಕೆಲಸ ಮಾಡಿದ್ದೇನೆ. ಯಾರೂ ಇರಲಿಲ್ಲ. ಕಾಂಗ್ರೆಸ್‌ನವರು ಒಬ್ಬರೇ ಒಬ್ಬರು ಬಂದಿಲ್ಲ” ಎಂದಿದ್ದಾನೆ.

ಮೊಟ್ಟೆ ಪ್ರಕರಣದ ಬಳಿಕ ಕೊಡಗು ರಾಜಕೀಯ ವಿದ್ಯಮಾನಗಳ ಕೇಂದ್ರವಾಗಿದೆ. ಈಗ ಉಭಯ ಪಕ್ಷಗಳ ಕಾರ್ಯಕ್ರಮಗಳಿಗೆ ಬ್ರೇಕ್‌ ಹಾಕುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣದಲ್ಲಿ ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸುತ್ತೇವೆ: ಭಟ್ಟಿ ವಿಕ್ರಮಾರ್ಕ ಮಲ್ಲು

ರಾಜ್ಯದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಆದಷ್ಟು ಬೇಗ ಜಾರಿಗೆ ತರಲಾಗುವುದು ಎಂದು ತೆಲಂಗಾಣ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಶನಿವಾರ ಹೇಳಿದ್ದಾರೆ. ಪ್ರಜಾ ಭವನದಲ್ಲಿ ಜಸ್ಟೀಸ್ ಫಾರ್ ರೋಹಿತ್ ವೇಮುಲಾ ಅಭಿಯಾನ ಸಮಿತಿಯ...

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶನಿವಾರ (ಜ.17) ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು...

ಇಂದೋರ್ ಕಲುಷಿತ ನೀರು ದುರಂತ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಶನಿವಾರ (ಜ.17) ಮಧ್ಯಪ್ರದೇಶದ ಇಂದೋರ್‌ಗೆ ಭೇಟಿ ನೀಡಿದ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಇತ್ತೀಚೆಗೆ ಸಂಭವಿಸಿದ ಕಲುಷಿತ ನೀರು ದುರಂತದ ಸಂತ್ರಸ್ತರನ್ನು ಭೇಟಿಯಾದರು. ಕಲುಷಿತ ನೀರು ಕುಡಿದು ವಾಂತಿ ಮತ್ತು...

ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್‌ಡಿಎ ಜೊತೆ ಯಾವುದೇ ಮೈತ್ರಿ ಇಲ್ಲ: ಓವೈಸಿ

ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಥವಾ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಯಾವುದೇ ಮೈತ್ರಿ ಇರುವುದಿಲ್ಲ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಭಾರತದ ಅತ್ಯಂತ ಶ್ರೀಮಂತ ರಾಜ್ಯವಾದ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ...

ರೋಹಿತ್ ವೇಮುಲ ಕಾಯ್ದೆ ಘೋಷಣೆಯಲ್ಲ, ಅಗತ್ಯ : ರಾಹುಲ್ ಗಾಂಧಿ

ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲ ಜಾತಿ ತಾರತಮ್ಯಕ್ಕೆ ಬಲಿಯಾಗಿ ಇಂದಿಗೆ (17 ಜನವರಿ 2026) 10 ವರ್ಷಗಳಾಗಿದ್ದು, ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ರೋಹಿತ್ ಅವರನ್ನು ಸ್ಮರಿಸಿ ಸಾಮಾಜಿಕ...

ದೇವರು-ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ; ಬಿಜೆಪಿ ಕೌನ್ಸಿಲರ್‌ಗಳಿಗೆ ಕೇರಳ ಹೈಕೋರ್ಟ್ ನೋಟಿಸ್

ತಿರುವನಂತಪುರಂ ನಗರಸಭೆಯ ಬಿಜೆಪಿ ಕೌನ್ಸಿಲರ್‌ಗಳು ವಿವಿಧ ದೇವರು, ಹುತಾತ್ಮರು ಮತ್ತು ರಾಜಕೀಯ ಚಳುವಳಿಗಳ ಹೆಸರಿನಲ್ಲಿ ಮಾಡಿದ ಪ್ರಮಾಣವಚನಗಳ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯ ಕುರಿತು ಕೇರಳ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ...

ಮಧ್ಯಪ್ರದೇಶ: ಬುಡಕಟ್ಟು ವಿಶ್ವವಿದ್ಯಾಲಯ ಹಾಸ್ಟೆಲ್ ಒಳಗೆ ಅಸ್ಸಾಮಿ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ

ಮಧ್ಯಪ್ರದೇಶದ ಇಂದಿರಾ ಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯೊಳಗೆ ಐದು ಜನ ವಿದ್ಯಾರ್ಥಿಗಳ ತಂಡವು ಅಸ್ಸಾಮಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಗುಂಪು ಆತನಿಗೆ ಇಲ್ಲಿಯೇ ಸಾಯಬೇಕು ಎಂದು...

ಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಎಐಎಡಿಎಂಕೆ ಚುನಾವಣಾ ಭರವಸೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ (ಜ.17) ಪಕ್ಷದ ಮೊದಲ ಹಂತದ ಪ್ರಣಾಳಿಕೆ (ಚುನಾವಣಾ ಭರವಸೆ) ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಎಲ್ಲಾ ಪಡಿತರ...

ಛತ್ತೀಸ್‌ಗಢ| ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ವಾಯುವ್ಯ ಪ್ರದೇಶದ ಅರಣ್ಯ ಬೆಟ್ಟಗಳಲ್ಲಿ ಶನಿವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು. ಹಿರಿಯ...

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಶುಕ್ರವಾರ (ಜ.16) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ 100 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮಮತಾ...