Homeಮುಖಪುಟತೆಲಂಗಾಣ: ಪ್ರವಾದಿ ಮುಹಮ್ಮದ್‌ರನ್ನು ನಿಂದಿಸಿದ್ದ ಶಾಸಕನನ್ನು ಅಮಾನತು ಮಾಡಿದ ಬಿಜೆಪಿ

ತೆಲಂಗಾಣ: ಪ್ರವಾದಿ ಮುಹಮ್ಮದ್‌ರನ್ನು ನಿಂದಿಸಿದ್ದ ಶಾಸಕನನ್ನು ಅಮಾನತು ಮಾಡಿದ ಬಿಜೆಪಿ

- Advertisement -
- Advertisement -

ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರು ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಬಂಧನಕ್ಕೊಳಗಾಗಿದ್ದಾರೆ. ನಿಂದನೆ ಹೇಳಿಕೆ ಹೊರಬಿದ್ದ ನಂತರ ನಿನ್ನೆ ರಾತ್ರಿ ಹೈದರಾಬಾದ್‌ನಲ್ಲಿ ಪ್ರತಿಭಟನೆಗಳು ನಡೆದಿದ್ದು, ತಕ್ಷಣ ಎಚ್ಚೆತ್ತುಕೊಂಡ ಬಿಜೆಪಿ ರಾಜ್‌ ಸಿಂಗ್ ಅವರನ್ನು ಪಕ್ಷದಿಂದ ಅಮಾನತು ಮಾಡಿದೆ.

ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ರಾಜ್‌ಸಿಂಗ್‌ಗೆ ನೋಟೀಸ್ ನೀಡಿದ್ದು, “ನೀವು ಸಂವಿಧಾನವನ್ನು ಉಲ್ಲಂಘಿಸಿದ್ದೀರಿ. ಪಕ್ಷದ ನಿಲುವಿಗೆ ವಿರುದ್ಧವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದೀರಿ. ಮುಂದಿನ ವಿಚಾರಣೆ ಬಾಕಿಯಿದೆ, ನಿಮ್ಮನ್ನು ಪಕ್ಷದಿಂದ ಹಾಗೂ ಎಲ್ಲಾ ಜವಾಬ್ದಾರಿಗಳಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಕ್ಕೂ ಮುನ್ನ ಸಂಸದ ಅಸಾದುದ್ದೀನ್ ಓವೈಸಿ ನೇತೃತ್ವದ ಆಲ್ ಇಂಡಿಯಾ ಮಜ್ಲಿಸ್-ಎ-ಇತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಕಾರ್ಯಕರ್ತರು ರಾಜಾ ಅವರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಹೈದರಾಬಾದ್ ಪೊಲೀಸ್ ಮುಖ್ಯಸ್ಥರ ಕಚೇರಿ ಎದುರು ಧರಣಿ ನಡೆಸಿದರು. ತಮ್ಮ ಉದ್ರೇಕಕಾರಿ ಭಾಷಣಗಳಿಂದ ಆಗಾಗ್ಗೆ ಸುದ್ದಿಯಲ್ಲಿರುವ ರಾಜಾ ಅವರನ್ನು 24 ಗಂಟೆಗಳ ಒಳಗೆ ಬಂಧಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಅವರು ಎಚ್ಚರಿಸಿದ್ದರು.

ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಿದ ಹಿನ್ನೆಲೆಯಲ್ಲಿ ಕಾನೂನಿನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹೈದರಾಬಾದ್‌ನ ದಕ್ಷಿಣ ವಲಯದ ಉಪ ಪೊಲೀಸ್ ಆಯುಕ್ತ ಪಿ.ಸಾಯಿ ಚೈತನ್ಯ ತಿಳಿಸಿದ್ದಾರೆ.

ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ವಿಡಿಯೊವನ್ನು ಬಿಜೆಪಿ ಶಾಸಕ ರಾಜಾ ಸಿಂಗ್ ಬಿಡುಗಡೆ ಮಾಡಿದ ನಂತರದಲ್ಲಿ ಪ್ರತಿಭಟನೆಗಳು ನಡೆದಿವೆ. ಸೋಮವಾರ ರಾತ್ರಿ ನಗರ ಪೊಲೀಸ್ ಕಮಿಷನರ್ ಸಿವಿ ಆನಂದ್ ಅವರ ಕಚೇರಿ ಎದುರು ಮತ್ತು ಹೈದರಾಬಾದ್‌ನ ಇತರ ಭಾಗಗಳಲ್ಲಿ ಪ್ರತಿಭಟನೆಗಳು ಜರುಗಿವೆ.

 

ನಗರದ ಗೋಶಾಮಹಲ್‌ನ ಶಾಸಕ ಟಿ ರಾಜಾ ಸಿಂಗ್‌ ಕಳೆದ ವಾರ ಕಾಮಿಡಿ ಪ್ರೊಗ್ರಾಂಗೆ ಅಡ್ಡಿಪಡಿಸಲು ಯತ್ನಿಸಿದ್ದರು. ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವರ್ ಫರೂಕಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲು ಒತ್ತಾಯಿಸಿದ್ದರು. ಸುಮಾರು 50 ಮಂದಿ ಬೆಂಬಲಿಗರೊಂದಿಗೆ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿ ಅಡ್ಡಿಪಡಿಸಲು ಪ್ರಯತ್ನಿಸಿದ್ದರು. ಪೊಲೀಸರು ಕ್ರಮ ಜರುಗಿಸಿದ ಬಳಿಕ, ಕಾರ್ಯಕ್ರಮ ಸುಗಮವಾಗಿ ನಡೆಯಿತು.

ಪ್ರವಾದಿ ನಿಂದನೆಗೆ ಮತ್ತೊಂದು ಫ್ರಿಂಜ್ ಸೇರ್ಪಡೆ!

ಪ್ರವಾದಿ ಮುಹಮ್ಮದ್‌ ಅವರ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಮತ್ತು ನವೀನ್ ಜಿಂದಾಲ್‌ ಅವರನ್ನು ಪಕ್ಷವು ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಿತ್ತು. ಈಗ ಆ ಸಾಲಿಗೆ ಟಿ.ರಾಜಾ ಸಿಂಗ್ ಸೇರ್ಪಡೆಯಾಗಿದ್ದಾರೆ.

ನೂಪುರ್‌‌ ವಿದ್ಯಮಾನದ ಸಂದರ್ಭದಲ್ಲಿ ಬಿಜೆಪಿ, “ಇಂತಹ ಜನರನ್ನು ಅಥವಾ ತತ್ವವನ್ನು ನಾವು ಪ್ರಚಾರ ಮಾಡುವುದಿಲ್ಲ” ಎಂದಿತ್ತು.

“ಭಾರತದ ಸಾವಿರಾರು ವರ್ಷಗಳ ಇತಿಹಾಸದಲ್ಲಿ, ಇಲ್ಲಿ ಪ್ರತಿಯೊಂದು ಧರ್ಮವೂ ಅರಳಿವೆ. ಪ್ರವರ್ಧಮಾನಕ್ಕೆ ಬಂದಿವೆ. ಬಿಜೆಪಿಯು ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ. ಯಾವುದೇ ಧರ್ಮದ ಯಾವುದೇ ಧಾರ್ಮಿಕ ವ್ಯಕ್ತಿಗಳನ್ನು ಅವಮಾನಿಸುವುದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ” ಎಂದು ತಿಳಿಸಿತ್ತು.

“ಯಾವುದೇ ಪಂಥ ಅಥವಾ ಧರ್ಮವನ್ನು ಅವಮಾನಿಸುವುದನ್ನು ಬಿಜೆಪಿ ಬಲವಾಗಿ ವಿರೋಧಿಸುತ್ತದೆ. ಬಿಜೆಪಿ ಅಂತಹ ಜನರನ್ನು ಅಥವಾ ತತ್ವವನ್ನು ಪ್ರಚಾರ ಮಾಡುವುದಿಲ್ಲ. ಭಾರತದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ತನ್ನ ಆಯ್ಕೆಯ ಯಾವುದೇ ಧರ್ಮವನ್ನು ಆಚರಿಸಲು ಮತ್ತು ಪ್ರತಿ ಧರ್ಮವನ್ನು ಗೌರವಿಸುವ ಹಕ್ಕನ್ನು ನೀಡುತ್ತದೆ” ಎಂದು ಸ್ಪಷ್ಟಪಡಿಸಿತ್ತು.

ನೂಪುರ್‌ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು 15 ಪ್ರಮುಖ ರಾಷ್ಟ್ರಗಳು ಕಟು ಶಬ್ದಗಳಲ್ಲಿ ಖಂಡಿಸಿದ್ದವು. ಇರಾನ್, ಇರಾಕ್, ಕುವೈತ್, ಕತಾರ್, ಸೌದಿ ಅರೇಬಿಯಾ, ಓಮನ್, ಯುಎಇ, ಜೋರ್ಡಾನ್, ಅಫ್ಘಾನಿಸ್ತಾನ, ಬಹ್ರೇನ್, ಮಾಲ್ಡೀವ್ಸ್, ಲಿಬಿಯಾ ಮತ್ತು ಇಂಡೋನೇಷ್ಯಾ ಸೇರಿದಂತೆ ಹಲವು ರಾಷ್ಟ್ರಗಳು ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದವು.

ಇದನ್ನೂ ಓದಿರಿ: ಎಎಪಿ ತೊರೆದರೆ ಸಿಬಿಐ ತನಿಖೆ ನಿಲ್ಲಿಸುತ್ತೇವೆ: ಸಿಸೋಡಿಯಾಗೆ ಬಿಜೆಪಿ ಆಮಿಷ?

ಕತಾರ್, ಇರಾನ್ ಮತ್ತು ಬಹ್ರೇನ್ ದೇಶಗಳು ಭಾರತೀಯ ರಾಯಭಾರಿಯನ್ನು ಕರೆಸಿ, ತಮ್ಮ ವಿರೋಧವನ್ನು ತಿಳಿಸಿದ್ದವು. ಭಾರತ ಸರ್ಕಾರವು ಸಾರ್ವಜನಿಕವಾಗಿ ಈ ಬಗ್ಗೆ ಕ್ಷಮೆಯಾಚನೆ ಮಾಡುವುದನ್ನು ನಿರೀಕ್ಷಿಸುವುದಾಗಿ ಕತಾರ್‌ ಹೇಳಿತ್ತು. ಜೊತೆಗೆ ಪಕ್ಷದ ವಕ್ತಾರರ ವಿರುದ್ಧ ಬಿಜೆಪಿ ಕೈಗೊಂಡಿರುವ ಕ್ರಮವನ್ನು ಬಹ್ರೇನ್ ಮತ್ತು ಸೌದಿ ಅರೇಬಿಯಾ ಸ್ವಾಗತಿಸಿದ್ದವು.

ಇಷ್ಟೆಲ್ಲ ಬೆಳವಣಿಗೆಗಳ ನಡುವೆ ಪ್ರವಾದಿ ನಿಂದನೆ ಮಾಡಿದವರನ್ನು ‘ಪ್ರಿಂಜ್ ಎಲಿಮೆಂಟ್ಸ್‌’ (ಕೊನೆಯ ಎಳಸುಗಳು) ಎಂದು ಸರ್ಕಾರ ಕರೆದಿತ್ತು. ಆ ಸಾಲಿಗೆ ಈಗ ತೆಲಂಗಾಣ ಶಾಸಕ ಟಿ.ರಾಜಾ ಸಿಂಗ್ ಸೇರ್ಪಡೆಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....