Homeಸಿನಿಮಾಕ್ರೀಡೆಮಳೆಯಿಂದ ಸೆಮಿಫೈನಲ್ ಬುಧವಾರಕ್ಕೆ ಮುಂದೂಡಿಕೆ. ಬುಧವಾರ ಏನೆಲ್ಲಾ ಆಗಬಹುದು?

ಮಳೆಯಿಂದ ಸೆಮಿಫೈನಲ್ ಬುಧವಾರಕ್ಕೆ ಮುಂದೂಡಿಕೆ. ಬುಧವಾರ ಏನೆಲ್ಲಾ ಆಗಬಹುದು?

- Advertisement -
- Advertisement -

ಭಾರತ ಮತ್ತು ನ್ಯೂಝಿಲೆಂಡ್ ನಡುವೆ ನಡೆಯಬೇಕಿದ್ದ ವಿಶ್ವಕಪ್‌ನ ಮೊದಲ ಸೆಮಿಫೈನಲ್ಸ್ ಮಳೆಯಿಂದಾಗಿ ತಾತ್ಕಾಲಿಕವಾಗಿ ರದ್ಧಾಗಿದ್ದು ಬುಧವಾರಕ್ಕೆ ಪಂದ್ಯವನ್ನು ಮುಂದೂಡಲಾಗಿದೆ.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ಸಧ್ಯ 46.1 ಓವರ್‌ಗೆ ತನ್ನ 5 ವಿಕೆಟ್‌ಗಳನ್ನು ಕಳೆದುಕೊಂಡು 211 ರನ್ ಗಳಿಸಿದೆ. ಬಿರುಸಿನ ಆಟಗಾರ ರಾಸ್ ಟೇಲರ್ ಔಟಾಗದೆ 67 ರನ್ ಗಳಿಸಿ ಇನ್ನೂ ಕ್ರೀಸ್‌ನಲ್ಲಿ ಇದ್ದಾರೆ. ಈಗ ಮಳೆಯ ಕಾರಣಕ್ಕೆ ಆಟ ತಾತ್ಕಲಿಕವಾಗಿ ರದ್ಧಾಗಿದ್ದು ಮುಂದಿನ ಸಾಧ್ಯತೆಯ ಕುರಿತು ICC ಹಾಗೂ BCCI ಸರಣಿ ಟ್ವೀಟ್‌ಗಳನ್ನು ಮಾಡಿದೆ. ಅವರ ಪ್ರಕಾರ ಪಂದ್ಯ ಎಲ್ಲಿಗೆ ನಿಂತಿದ್ದೆಯೋ ಅಲ್ಲಿಂದಲೇ ಬುಧವಾರ ಮುಂದುವರೆಯಲಿದೆ.

 

ICC ಪ್ರಕಾರ ಈ ಪಂದ್ಯದ ಫಲಿತಾಂಶ ಪ್ರಕಟವಾಗುವುದು ಬಹಳ ಮುಖ್ಯವಾಗಿದ್ದು, ಫಲಿತಾಂಶ ಪ್ರಕಟವಾಗಲೇಬೇಕಾದರೆ ಭಾರತ ಕನಿಷ್ಠ 20 ಓವರ್‌ಗಳ ಪಂದ್ಯವನ್ನು ಆಡಲೇಬೇಕಿದೆ. ಹಾಗೊಂದು ವೇಳೆ ಎರಡನೇ ದಿನವೂ ಮಳೆ ಬಂದು ಒಂದೂ ಬಾಲ್ ಆಡಲು ಸಾಧ್ಯವಾಗಿಲ್ಲ ಎಂದಾದರೆ ಭಾರತವನ್ನು ಫೈನಲ್‌ಗೆ ಕಳಿಸಬಹುದಾಗಿದೆ. (ಈ ಸಾಧ್ಯತೆ ಬಹಳ ಕಡಿಮೆ) ಇದರ ಹೊರತಾಗಿ ಇರುವ ಬೇರೆ ಸಾಧ್ಯತೆಗಳು ಹೀಗಿವೆ.

  1. ಬುಧವಾರ ಮಳೆ ಬಾರದಿದ್ದರೆ ನ್ಯೂಝಿಲೆಂಡ್ ತಂಡ ಮತ್ತೆ ತಾನು ನಿಲ್ಲಿಸಿದ 211/5 (46.1) ರಿಂದ ಶುರು ಮಾಡಬೇಕಿರುತ್ತದೆ‌.
  2. ಬುಧವಾರವೂ ನ್ಯೂಝಿಲೆಂಡ್ ಬ್ಯಾಟ್ ಮಾಡದೇ ಇದ್ದರೆ DLS ಪ್ರಕಾರ ಪಂದ್ಯವನ್ನು 46 ಓವರ್‌ಗೆ ಸೀಮಿತಗೊಳಿಸಿ ಭಾರತಕ್ಕೆ 237 ರನ್ ನ ಗುರಿ ನೀಡಲಾಗುತ್ತದೆ. ಅಥವಾ
  3. ಪಂದ್ಯವನ್ನು 20 ಓವರ್‌ಗೆ ಇಳಿಸಿ 148 ರನ್ ಪೂರ್ಣಗೊಳಿಸುವ ಗುರಿಯನ್ನು ಭಾರತಕ್ಕೆ ನೀಡಲಾಗುತ್ತದೆ.

ನಾಳಿನ ಪಂದ್ಯಕ್ಕೂ ಪ್ರಕ್ಷಕರು ಅದೇ ಟಿಕೆಟ್‌ನಿಂದ ಕ್ರೀಡಾಂಗಣ ಪ್ರವೇಶ ಮಾಡಬಹುದು ಆದರೆ ಅದನ್ನು ಬೇರೆಯವರಿಗೆ ಮಾರಾಟ/ಹಸ್ತಾಂತರ ಮಾಡಲು ಸಾಧ್ಯವಿಲ್ಲ ಎಂದು ICC ತಿಳಿಸಿದೆ‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...