Homeಕರ್ನಾಟಕ‘ಅಂಬೇಡ್ಕರ್‌ ಹೇಳಿಕೆ ನಾನು ಓದಿದ್ದಲ್ಲ, ಬೇರೆ ಯಾರೊ ಬರೆದಿದ್ದು ತೆಗೆದುಕೊಂಡಿದ್ದೇನೆ’ - ವಿಜಯ ಕರ್ನಾಟಕ ಅಂಕಣದ...

‘ಅಂಬೇಡ್ಕರ್‌ ಹೇಳಿಕೆ ನಾನು ಓದಿದ್ದಲ್ಲ, ಬೇರೆ ಯಾರೊ ಬರೆದಿದ್ದು ತೆಗೆದುಕೊಂಡಿದ್ದೇನೆ’ – ವಿಜಯ ಕರ್ನಾಟಕ ಅಂಕಣದ ಕುರಿತು ಎನ್‌. ಮಹೇಶ್‌

ಅಂಬೇಡ್ಕರ್‌ ಅವರು ಸಾವರ್ಕರ್ ಅನ್ನು ‘ಸ್ವಾತಂತ್ರ್ಯವೀರ’ ಎಂದು ಕರೆದಿದ್ದಾರೆ ಎಂದು ಅಂಕಣದಲ್ಲಿ ಉಲ್ಲೇಖಿಸಲಾಗಿದೆ

- Advertisement -
- Advertisement -

ಬಿಜೆಪಿ ಶಾಸಕ ಎನ್‌. ಮಹೇಶ್‌ ಅವರು ವಿಜಯ ಕರ್ನಾಟಕ ಪತ್ರಿಕೆಗೆ ಬರೆದ ಅಂಕಣ ಬರಹದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌‌.ಅಂಬೇಡ್ಕರ್‌ ಅವರ ಹೇಳಿಕೆಯನ್ನು ತಿರುಚಿ ಬರೆದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಆರೋಪಕ್ಕೆ ಉತ್ತರಿಸಿರುವ ಅವರು, “ಈ ಬಗ್ಗೆ ಬೇರೆ ಯಾರೊ ಬರೆದಿದ್ದನ್ನು ತೆಗೆದುಕೊಂಡಿದ್ದೇನೆ. ಅವರಲ್ಲಿ ಉಲ್ಲೇಖ ಕೇಳುತ್ತಿದ್ದೇನೆ” ಎಂದು ಹೇಳಿದ್ದಾರೆ.

ಮಾಜಿ ಬಿಎಸ್‌ಪಿ ನಾಯಕ, ಪ್ರಸ್ತುತ ಬಿಜೆಪಿ ಪಕ್ಷಕ್ಕೆ ಪಕ್ಷಾಂತರವಾಗಿರುವ ಕೊಳ್ಳೆಗಾಲದ ಶಾಸಕರಾದ ಮಹೇಶ್ ಅವರು ಮಂಗಳವಾರದ ವಿಜಯ ಕರ್ನಾಟಕ ಪತ್ರಿಕೆಗೆ ‘ಸಮಾಜ ಸುಧಾರಣೆಯ ದಿವ್ಯಚೇತನ ಸಾರ್ವರ್ಕರ್‌’ ಎಂಬ ಲೇಖನವನ್ನು ಬರೆದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬರಹದ ಮೊದಲ ಪ್ಯಾರಾದಲ್ಲಿ, “ಸಮಾಜ ಸುಧಾರಣೆಯ ದಿವ್ಯಚೈತನ್ಯದ ಸೊಡರು ಸ್ವಾತಂತ್ಯ್ರವೀರ ಸಾವರ್ಕರ್‌. ಹಿಂದೂ ಧರ್ಮದಲ್ಲಿರುವ ಅಸ್ಪೃಶ್ಯತೆಯ ಆಚರಣೆಯು ಒಂದು ಕಳಂಕವಾಗಿದ್ದ, ಇಂಥ ಅಮಾನವೀಯ ಆಚರಣೆಯಿಂದ ನನ್ನಂಥವರಿಗೆ ಆಗುವ ಅವಮಾನ ಅಷ್ಟಿಷ್ಟಲ್ಲ. ಆದರೆ, ಸಾವರ್ಕರ್‌ ಅವರು ಇದರ ನಿವಾರಣೆಗೆ ಕೈಗೊಂಡಿರುವ ಕ್ರಮಗಳು ಕ್ರಾಂತಿಕಾರಿಯಾಗಿವೆ. ಇಂಥ ಐದೋ ಹತ್ತೋ ಮಂದಿ ಇದ್ದರೆ ಅಸ್ಪೃಶ್ಯತೆಯು ಮುಂದಿನ ಕೆಲವೇ ವರ್ಷಗಳಲ್ಲಿ ಇತಿಹಾಸದ ಸಂಗತಿಯಾಗುತ್ತದೆ ಎನ್ನುವ ವಿಶ್ವಾಸ ನನಗಿದೆ” ಎಂದು ಅಂಬೇಡ್ಕರ್‌ ಅವರ ಹೇಳಿದ್ದಾರೆ ಎಂದು ಎನ್. ಮಹೇಶ್ ಅವರು ಬರೆದಿದ್ದಾರೆ.

ಆದರೆ ಈ ಬಗ್ಗೆ ಅನೇಕ ಅಂಬೇಡ್ಕರ್‌‌ವಾದಿಗಳು ಆಕ್ಷೇಪವೆತ್ತಿದ್ದು, ಅಂಬೇಡ್ಕರ್‌ ಅವರು ಈ ರೀತಿ ಅಥವಾ ಇದೇ ರೀತಿ ಅರ್ಥ ಬರುವ ಮಾತು ಹಾಗೂ ಬರಹವನ್ನಾಗಲಿ ಹೇಳಿಯೆ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿ.ಎಸ್.ಪಿ ಯ ಎನ್ ಮಹೇಶ್ ಹೀಗೇಕೆ ಮಾಡಿದರು?

ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿಂತಕ ಹ.ರಾ. ಮಹೇಶ್ ಅವರು, “ಈ ಮಾತು ಅಥವಾ ಬರಹ ಬಾಬಾಸಾಹೇಬರ ಯಾವ ಸಂಪುಟದಲ್ಲಿದೆ…!? ಬಾಬಾಸಾಹೇಬರು ಬರೆದಿರುವ ಯಾವ ಪುಸ್ತಕದಲ್ಲಿ ಅಥವಾ ಅವರ ಬರಹ ಭಾಷಣಗಳ‌ ಯಾವ ಸಂಪುಟದ ಯಾವ ಅಧ್ಯಾಯದ ಎಷ್ಟನೇ ಪುಟದಲ್ಲಿ ಬಾಬಾಸಾಹೇಬರು ಸಾವರ್ಕರ್ ಅನ್ನು ‘ಸ್ವಾತಂತ್ರ್ಯವೀರ’ ಎಂದು ಕರೆದಿದ್ದಾರೆ ಅಥವಾ ಆ ಅರ್ಥ ಬರುವಂತೆ ಬರೆದಿದ್ದಾರೆ..?” ಎಂದು ಪ್ರಶ್ನಿಸಿದ್ದಾರೆ.

“ಈ ಲೇಖನ ಬರೆದವರು ಅಥವಾ ಬರೆದುಕೊಟ್ಟವರು ಸಾರ್ವಜನಿಕರಿಗೆ ಆಧಾರ ಸಮೇತ ಸಾಕ್ಷೀಕರಿಸಬೇಕು. ಇಲ್ಲದಿದ್ದರೆ ಈ ಲೇಖನದ ವಿಷಯ ಮತ್ತು ಬರೆದವರ ವ್ಯಕ್ತಿತ್ವ ಎರಡೂ ಫೇಕ್ ಎಂದು ಮತ್ತೆ ಸಾಬೀತಾಗುತ್ತದೆ. ಮತ್ತು ಇದು ಬಾಬಾಸಾಹೇಬರಿಗೆ ಮಾಡಿದ ಅವಮಾನ ಮತ್ತು ಅಂಬೇಡ್ಕರ್ ವಾದಿಗಳಿಗೆ ಮಾಡಿದ ದ್ರೋಹವಾಗುತ್ತದೆ. ಈ ನಡೆಯನ್ನು ಜನ ಎಂದೆಂದಿಗೂ ಕ್ಷಮಿಸುವುದಿಲ್ಲ” ಎಂದು ಹ.ರಾ.ಹೇಶ್‌ ಅವರು ಹೇಳಿದ್ದಾರೆ.

 

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಶಾಸಕ ಎನ್‌. ಮಹೇಶ್‌, “ಈ ಬಗ್ಗೆ ಬೇರೆ ಯಾರೊ ಬರೆದಿದ್ದನ್ನು ತೆಗೆದುಕೊಂಡಿದ್ದೇನೆ. ಅವರಲ್ಲಿ ಉಲ್ಲೇಖ ಕೇಳುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ವಿಜಯ ಕರ್ನಾಟಕದ ಲೇಖನವನ್ನು ಶಾಸಕ ಎನ್‌. ಮಹೇಶ್ ಅವರು ಬರೆದಿಲ್ಲ, ಬೇರೆ ಯಾರೋ ಬರೆದು ಅವರ ಹೆಸರು ಹಾಕಿದ್ದಾರೆ ಎಂಬ ಆರೋಪಕ್ಕೆ ಉತ್ತರಿಸಿದ ಅವರು,“ಆ ಬರಹ ನಾನೆ ಬರೆದಿರುವುದು, ಈ ಬಗ್ಗೆ ಸಂಶಯ ಯಾಕೆ? ಮನುಷ್ಯ ಬದಲಾಗಬಾರದೆ, ನಾನು ನನ್ನ ಗ್ರಹಿಕೆಯಿಂದ ಬರೆದಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

“ಲೇಖನದ ಉಲ್ಲೇಖವನ್ನು ನಾನು ಕೊಡುತ್ತೇನೆ. ಅದನ್ನು ಅವರು ಎಲ್ಲಿಂದ ತೆಗೆದುಕೊಂಡಿದ್ದಾರೆ ಎಂದು ನಾನು ಅವರೊಂದಿಗೆ ಕೇಳುತ್ತಿದ್ದೇನೆ. ಅದನ್ನು ಪಡೆದುಕೊಂಡು ಕೊಡುತ್ತೇನೆ. ಈಗ ನಾನು ಹೊರಗಡೆ ಇದ್ದು, ನಂತರ ನಾನೇ ಮಾಹಿತಿ ನೀಡುತ್ತೇನೆ” ಎಂದು ನಾನುಗೌರಿ.ಕಾಂ ಜೊತೆಗೆ ಶಾಸಕ ಮಹೇಶ್ ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಈ ಅಯ್ಯೋಗ್ಯ ಯಾರಿಗೆ ಬೇಕಾದರೂ ಚಮಚಾಗಿರಿ ಮಾಡಿಕೊಂಡು ಗುಲಾಮಗಿರಿ ಮಾಡಿಕೊಳ್ಳಲಿ,ಅದರೆ ಇಲ್ಲಿ ಭಾಬಾಸಾಹೇಬರ ಹೆಸರನ್ನ ಯಾಕೆ ತೆಗೆದುಕೊಂಡು ಬಂದ? ಇವನ ಸ್ವಾರ್ಥ ತೆವಲಿಗೆ ಇವನ ಕ್ಷೇತ್ರದ ಜನತೆ ಸರಿಯಾಗಿ ವಿಚಾರಿಸಿಕೊಳ್ಳಲಿ.

  2. ಬರಹ ಬೇರೆಯವರದು, ಹೆಸರು ಇವರದು, ದಲಿತರನ್ನು ದಿಕ್ಕು ತಪ್ಪಿಸುವ ಪ್ರಯತ್ನ, ಮುಂದೆ ಒಂದು ದಿನ ದಲಿತ ನಾಯಕರೇ ದಲಿತರಿಗೆ ಮೀಸಲಾತಿಯ ಅಗತ್ಯವಿಲ್ಲ ಎಂದು ಹೇಳುವಂತಹ ಪರಿಸ್ಥಿತಿಗೆ ತರುತ್ತಾರೆ, ಇದು ಶತ ಸಿದ್ಧ, ದಲಿತರು ಹುಷಾರಾಗಿರಿ.

  3. ನಂಗೂ ಮಿಸಲಾತಿ ಬೇಡ … ಆದ್ರೆ ಬಾಬಾ ಸಾಹೇಬರು ಹೇಳಿದ ಸಮ ಪಾಲು ಸಮ ಬಾಳು ಬೇಕು…..

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...