Homeಮುಖಪುಟಸರ್ಕಾರಿ ಏಜೆಂಟ್ ನೇಮಿಸಿಕೊಳ್ಳಲು ಟ್ವಿಟರ್‌ ಮೇಲೆ ಭಾರತ ಸರ್ಕಾರ ಒತ್ತಡ; ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ...

ಸರ್ಕಾರಿ ಏಜೆಂಟ್ ನೇಮಿಸಿಕೊಳ್ಳಲು ಟ್ವಿಟರ್‌ ಮೇಲೆ ಭಾರತ ಸರ್ಕಾರ ಒತ್ತಡ; ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ ಆರೋಪ

- Advertisement -
- Advertisement -

ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ ಪೀಟರ್ ಝಟ್ಕೊ ಅವರು ಟ್ವಿಟರ್‌ ಸಂಸ್ಥೆ ವಿರುದ್ಧ ದೂರು ನೀಡಿದ್ದು, ಭಾರತದ ಸರ್ಕಾರದತ್ತಲೂ ಬೊಟ್ಟು ಮಾಡಿದ್ದಾರೆ. ‘ಸರ್ಕಾರಿ ಏಜೆಂಟ್’ ಆಗಿರುವ ಮತ್ತು ಸೂಕ್ಷ್ಮ ಬಳಕೆದಾರರ ಡೇಟಾಗೆ ಪ್ರವೇಶ ಪಡೆದಿರುವ ವ್ಯಕ್ತಿಯನ್ನು ಸಾಮಾಜಿಕ ಮಾಧ್ಯಮ ಕಂಪನಿ ಟ್ವಿಟರ್‌ಗೆ ನೇಮಿಸಿಕೊಳ್ಳಲು ಭಾರತ ಸರ್ಕಾರ ಒತ್ತಾಯಿಸಿತು ಎಂದು ಅವರು ಆರೋಪಿಸಿದ್ದಾರೆ.

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್‌ ಕಮಿಷನ್‌ಗೆ ಕಳುಹಿಸಲಾದ 84-ಪುಟಗಳ ಕಡತದ ಕುರಿತು ಮಂಗಳವಾರ ಮಧ್ಯಾಹ್ನ ವಾಷಿಂಗ್ಟನ್ ಪೋಸ್ಟ್‌ ವರದಿ ಮಾಡಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ ಸಾಕ್ಷಿ ಮತ್ತು ದೃಢೀಕರಣದ ಮಾಹಿತಿಯನ್ನು ಝಟ್ಕೊ ಅವರ ವಕೀಲರು ಸಲ್ಲಿಸಿದ್ದಾರೆ. ಅಮೆರಿಕದ ನ್ಯಾಯಾಂಗ ಇಲಾಖೆಯ ರಾಷ್ಟ್ರೀಯ ಭದ್ರತಾ ವಿಭಾಗಕ್ಕೆ ಮತ್ತು ಅಮೆರಿಕದ ಗುಪ್ತಚರ ಸಮಿತಿಗೆ ದೂರು ರವಾನೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತನ್ನ ಸಹೋದ್ಯೋಗಿಗಳ ನಡುವೆ ‘ಮುಡ್ಜ್’ ಎಂದೇ ವ್ಯಾಪಕವಾಗಿ ಮೆಚ್ಚುಗೆ ಪಡೆದ ಹ್ಯಾಕರ್ ಝಟ್ಕೊ, “238 ಮಿಲಿಯನ್‌ನಷ್ಟು ದೈನಂದಿನ ಬಳಕೆದಾರರನ್ನು ಸರಿಯಾಗಿ ರಕ್ಷಿಸಲು ಸಾಧ್ಯವಾಗದ, ಅಸ್ತವ್ಯಸ್ತವಾಗಿರುವ ಕಂಪನಿ ಟ್ವಿಟರ್‌” ಎಂಬುದಾಗಿ ತಮ್ಮ ದೂರಿನಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಈ ಎಲ್ಲ ವಿಷಯಗಳನ್ನು ತನ್ನ ದಾಖಲೆಯಲ್ಲಿ ಉಲ್ಲೇಖಿಸಿದ್ದಾರೆ.

ಸಲ್ಲಿಸಲಾಗಿರುವ ದಾಖಲೆಯಲ್ಲಿ ‘ವಿದೇಶಿ ಗುಪ್ತಚರದಿಂದ ಒಳಪ್ರವೇಶಿಕೆ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯ’ ಎಂಬ ಶೀರ್ಷಿಕೆಯ ವಿಭಾಗವಿದ್ದು, ಟ್ವಿಟರ್ ಪ್ರಜಾಪ್ರಭುತ್ವಕ್ಕೆ ತೊಂದರೆ ನೀಡಿರುವ ಅನೇಕ ಸಂಚಿಕೆಗಳನ್ನು ಝಟ್ಕೊ ಅಲ್ಲಿ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

“ಸರ್ಕಾರಿ ಏಜೆಂಟ್‌ಗಳಾಗಿರುವ ನಿರ್ದಿಷ್ಟ ವ್ಯಕ್ತಿ(ಗಳನ್ನು) ಟ್ವಿಟರ್‌ಗೆ ನೇಮಿಸಿಕೊಳ್ಳುವಂತೆ ಭಾರತೀಯ ಸರ್ಕಾರವು ಒತ್ತಾಯಿಸಿತು. ಆ ನಿರ್ದಿಷ್ಟ ವ್ಯಕ್ತಿಗಳು (ಟ್ವಿಟರ್‌ನ ಮೂಲಭೂತ ದೋಷಗಳ ಕಾರಣದಿಂದಾಗಿ) ಅಪಾರ ಪ್ರಮಾಣದ ಟ್ವಿಟರ್ ಬಳಕೆದಾರರ ಸೂಕ್ಷ್ಮ ಡೇಟಾಗೆ ಪ್ರವೇಶ ಪಡೆದಿರುತ್ತಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಯಾವುದೇ ನಿರ್ಬಂಧವಿಲ್ಲದೆ ಭಾರತೀಯ ಸರ್ಕಾರಿ ಏಜೆಂಟ್‌, ಕಂಪನಿಯ ಬಳಕೆದಾರರ ಡೇಟಾಗೆ ನೇರ ಪ್ರವೇಶವನ್ನು ಪಡೆಯಲು ಅನುಮತಿ ನೀಡಲಾಗಿದೆ. ಟ್ವಿಟರ್‌ ಸಂಸ್ಥೆ ತನ್ನ ಬಳಕೆದಾರರಿಗೆ ಖಚಿತಪಡಿಸಿದ ಬದ್ಧತೆಯನ್ನು ಟ್ವಿಟರ್‌ ಅಧಿಕಾರಿಗಳು ಉಲ್ಲಂಘಿಸಿದ್ದಾರೆ” ಎಂದು ಗಂಭೀರವಾದ ಆರೋಪವನ್ನು ಅವರು ಮಾಡಿದ್ದಾರೆ.

ಇದನ್ನೂ ಓದಿರಿ: ಚಕ್ರವರ್ತಿ ಸೂಲಿಬೆಲೆಯಿಂದ ಆಯುಧ ತರಬೇತಿ ಆರೋಪ: ಟ್ವಿಟರ್‌ನಲ್ಲಿ ಕನ್ನಡಿಗರ ಆಕ್ಷೇಪ

ವಾಷಿಂಗ್ಟನ್ ಪೋಸ್ಟ್ ತನ್ನ ವರದಿಯಲ್ಲಿ ವಿಷಯಕ್ಕೆ ಸಂಬಂಧಿಸಿದ ವ್ಯಕ್ತಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿದೆ. ಝಕ್ಟೋ ಮಾಡಿರುವ ಆರೋಪಗಳನ್ನು ಅವರು ಕೂಡ ಅಲ್ಲಗಳೆದಿಲ್ಲ. ನೇಮಕಗೊಂಡ ಉದ್ಯೋಗಿ ಬಹುಶಃ ಸರ್ಕಾರಿ ಏಜೆಂಟ್ ಎಂಬ ಅಂಶವನ್ನು ಅವರೂ ಪ್ರಸ್ತಾಪಿಸಿದ್ದಾರೆ.

‘ಸ್ಕ್ವೀಜಿಂಗ್ ಲೋಕಲ್ ಸ್ಟಾಫ್’ ಎಂಬ ಶೀರ್ಷಿಕೆಯ ಮತ್ತೊಂದು ವಿಭಾಗದಲ್ಲಿ ಮಾಜಿ ಟ್ವಿಟರ್ ಭದ್ರತಾ ಮುಖ್ಯಸ್ಥರು ಮತ್ತಷ್ಟು ಸಂಗತಿಗಳನ್ನು ಪ್ರಸ್ತಾಪಿಸಿದ್ದಾರೆ. ಹತೋಟಿಯಾಗಿ ಬಳಸಬಹುದಾದ, ಸ್ಥಳೀಯ ಪೂರ್ಣ ಸಮಯದ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಟ್ವಿಟರ್ ಅನ್ನು ಭಾರತ ಸರ್ಕಾರ ಒತ್ತಾಯಿಸಿತು ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...