Homeಕರ್ನಾಟಕಚಳ್ಳಕೆರೆ: ಪೊಲೀಸ್ ವ್ಯವಸ್ಥೆಯಿಂದ ನೊಂದು ನವ ವಿವಾಹಿತೆ ಸಾವಿಗೆ ಶರಣು

ಚಳ್ಳಕೆರೆ: ಪೊಲೀಸ್ ವ್ಯವಸ್ಥೆಯಿಂದ ನೊಂದು ನವ ವಿವಾಹಿತೆ ಸಾವಿಗೆ ಶರಣು

- Advertisement -
- Advertisement -

ಪೊಲೀಸ್‌ ವ್ಯವಸ್ಥೆಯಿಂದ ನೊಂದು ನವವಿವಾಹಿತೆ ಸಾವಿಗೆ ಶರಣಾಗಿರುವ ಘಟನೆ ಚಳ್ಳಕೆರೆ ತಾಲ್ಲೂಕಿನಲ್ಲಿ ನಡೆದಿದೆ. ತನ್ನ ಮೇಲೆ ದಾಖಲಾಗಿದ್ದ ಪ್ರಕರಣ ಹಿಂಪಡೆಯದ ಕಾರಣ ಯುವತಿ ಮನನೊಂದಿದ್ದರು ಎಂದು ವರದಿಯಾಗಿದೆ.

ತಾಲ್ಲೂಕಿನ ಪರಶುರಾಂಪುರ ಠಾಣಾ ವ್ಯಾಪ್ತಿಯ ಕಾಮಸಮುದ್ರ ಗ್ರಾಮದ ಯಶೋದಮ್ಮನ ಹಿರಿಯ ಮಗಳು ಉಷಾ ನೇಣು ಹಾಕಿಕೊಂಡು ಕೊನೆಯುಸಿರೆಳೆದಿದ್ದಾರೆ.

ಜಮೀನಿನ ಅಕ್ಕಪಕ್ಕದಲ್ಲಿನ ಹುಣಸೆ ಮರದ ಜಗಳ ಠಾಣೆ ಮೆಟ್ಟಿಲೇರಿ ರಾಜೀಸಂಧಾನ ವಿಫಲವಾಗಿತ್ತು. ಈ ಪ್ರಕರಣದಲ್ಲಿ ಉಷಾ ಅವರ ಹೆಸರನ್ನು ಉಲ್ಲೇಖಿಸಲಾಗಿತ್ತು. ತನಗೆ ದೊರಲಿದ್ದ ಸರ್ಕಾರಿ ಕೆಲಸ ಈ ಪ್ರಕರಣದ ಕಾರಣಕ್ಕಾಗಿ ಸಿಗುತ್ತಿಲ್ಲ ಎಂದು ಉಷಾ ಬೇಸತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿ.ಎಸ್ಸಿ ಮುಗಿಸಿ ಬಿ.ಇಡಿ ವ್ಯಾಸಂಗ ಮಾಡುತ್ತಿದ್ದ ಉಷಾ, ಕೊಂಡ್ಲಹಳ್ಳಿ ಗ್ರಾಮದ ಸೋದರ ಮಾವ ಗಣೇಶ ಅವರ ಜೊತೆಗೆ ಕಳೆದ ಏಪ್ರಿಲ್‌ 25ರಂದು ವಿವಾಹವಾಗಿದ್ದರು. ವಿವಾಹನ ನಂತರ ವ್ಯಾಸಂಗ ಮೊಟಕುಗೊಳಿಸಿದ್ದರು. ಹತ್ತನೇ ತರಗತಿ ವ್ಯಾಸಂಗದ ಮೇಲೆ ಕೋರ್ಟ್‌ನಲ್ಲಿ ಪ್ರೋಸೆಸ್‌ ಸರ್ವರ್‌ ಹುದ್ದೆಗೆ ಅರ್ಜಿ ಹಾಕಿದ್ದರು. ಅದು ಪೊಲೀಸ್ ಠಾಣೆಯಲ್ಲಿ ವೆರಿಫಿಕೇಷನ್‌ ಆಗಿತ್ತು.

ಜಮೀನಿನ ಬೇಲಿ ಪಕ್ಕದಲ್ಲಿರುವ ಹುಣಸೇಹಣ್ಣು ಮರದಲ್ಲಿ ಹುಣಸೇಹಣ್ಣು ಬಡಿಯುವ ವಿಚಾರಕ್ಕೆ ಫೆ.13ರಂದು ಗಲಾಟೆಯಾಗಿತ್ತು. ಕಾಮಸಂದ್ರ ನಾಗರಾಜ, ಜಯಮ್ಮ ಹಾಗೂ ಅವರ ಮಕ್ಕಳಾದ ಪುನೀತ್ ನಡುವೆ ಗಲಾಟೆಯಾಗಿತ್ತು. ಎರಡು ಕುಟುಂಬಗಳು ಸಹ ಪರಶುರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದವು. ಅದರಲ್ಲಿ ಮೃತ ಉಷಾಳ ಹೆಸರು ಕೂಡ ಇತ್ತು.

“ತನ್ನ ಮಗಳಿಗೆ ಸರಕಾರಿ ಉದ್ಯೋಗ ದೊರೆಯುತ್ತದೆ. ಏನಾದರೂ ಮಾಡಿ ಅವಳ ಹೆಸರನ್ನು ಪೊಲೀಸ್ ಪ್ರಕರಣದಿಂದ ತೆಗೆಸಿ” ಎಂದು ತಾಯಿ ಅಂಗಲಾಚಿದ್ದರು. “ಸರಕಾರಿ ಕೆಲಸವಲ್ಲ, ಅವಳು ಸತ್ತರೂ ನಾವು ರಾಜೀ ಆಗುವುದಿಲ್ಲ” ಎಂದು ಉಡಾಫೆ ಉತ್ತರ ನೀಡಲಾಗಿತ್ತು. ಇದರಿಂದ ಬೇಸತ್ತ ಉಷಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಭಾನುವಾರ ನೇಣು ಬಿಗಿದುಕೊಂಡಿದ್ದಾರೆ.

“ಜಾಬ್‌ಗೋಸ್ಕರವಾಗಿ ಸಾಯುತ್ತಿದ್ದೇನೆ. ನನ್ನ ಸಾವಿಗೆ ನನ್ನ ಕುಟುಂಬ ಕಾರಣವಲ್ಲ. ಸಮಾಜದ ಅವ್ಯವಸ್ಥೆಯೇ ಕಾರಣ” ಎಂದು ಡೆತ್‌ನೋಟ್‌ ಬರೆದಿಟ್ಟಿದ್ದಾರೆ.

“ಪೊಲೀಸರ ವರ್ತನೆಯಿಂದ ನೊಂದು ಉಷಾ ಜೀವ ಕಳೆದುಕೊಂಡಿದ್ದಾಳೆ” ಎಂದು ಉಷಾ ಅವರ ಭಾವ ಹೇಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

“ಅಮಾಯಕ ವಿದ್ಯಾವಂತ ಹೆಣ್ಣುಮಗಳನ್ನು ಪ್ರಕರಣದಲ್ಲಿ ಸೇರಿಸುವ ಮುನ್ನ ಗ್ರಾಮದಲ್ಲಿ ವಿಚಾರಣೆ ಮಾಡಬೇಕಿತ್ತು. ಪೊಲೀಸರ ಬೇಜವಾಬ್ದಾರಿಯಿಂದ ಈ ಘಟನೆ ಜರುಗಿದೆ. ಪೊಲೀಸ್ ಇಲಾಖೆ ಹಾಗೂ ದೂರು ಕೊಟ್ಟವರು ಸಾವಿಗೆ ಕಾರಣ” ಎಂದು ದೂರಿದ್ದಾರೆ.

May be an image of text
ಉಷಾ ಬರೆದಿಟ್ಟಿರುವ ಡೆತ್‌ನೋಟ್‌

ಪಾಠ ಮಾಡಿದ ಶಿಕ್ಷಕರ ಸಂತಾಪ

ನೆಚ್ಚಿನ ಶಿಷ್ಯೆ ಆತ್ಮಹತ್ಯೆಗೆ ಶರಣಾಗಿರುವ ಕುರಿತು ಫೇಸ್‌ಬುಕ್‌ ಫೋಸ್ಟ್‌ ಹಾಕಿರುವ ಶಿಕ್ಷಕ ಲಕ್ಷ್ಮಿಕಾಂತ ಮಿರಜಕರ, “ಮೊನ್ನೆ ಸಂಜೆ ಈ ಘಟನೆ ಕೇಳಿದಾಗಿನಿಂದ ಮನಸ್ಸು ಬಹಳ ಘಾಸಿಗೊಂಡಿತ್ತು. ಉಷಾ ನಮ್ಮ ಶಾಲೆಯ ಹಳೆಯ ವಿದ್ಯಾರ್ಥಿನಿ. ಪ್ರತಿಭಾವಂತೆ, ಗುಣವಂತೆ. ಎಸ್‌ಎಸ್‌ಎಲ್‌ಸಿಯಲ್ಲಿ ಶಾಲೆಗೆ ಎರಡನೇ ಟಾಪರ್. ಕನಸುಗಾರ್ತಿ” ಎಂದು ಸ್ಮರಿಸಿದ್ದಾರೆ.

“ಬಡತನದಲ್ಲಿ ಬೆಳೆದಿದ್ದ, ಮೂರು ತಂಗಿಯರು ಒಬ್ಬ ತಮ್ಮನನ್ನು ಹೊಂದಿದ್ದ ಮನೆಯ ಹಿರಿಮಗಳು ಉಷಾ. ಮನೆ ತೊರೆದು ನಡುದಾರಿಯಲ್ಲಿ ಕೈಬಿಟ್ಟ ಹೋದ ಗಂಡನ ಅನುಪಸ್ಥಿತಿಯಲ್ಲಿ ಉಷಾ ಅವರ ತಾಯಿ ಎಲ್ಲ ಮಕ್ಕಳಿಗೂ ಶಿಕ್ಷಣ ಕೊಡಿಸಿದ್ದರು. ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಹಂಬಲ ಹೊತ್ತಿದ್ದ ಉಷಾಳನ್ನು ನಮ್ಮ ಭ್ರಷ್ಟ ವ್ಯವಸ್ಥೆ ಬಲಿ ಪಡೆದಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ವ್ಯವಸ್ಥೆ ಇರೋದೆ ಹಾಗೆ. ಅದನ್ನು ಪ್ರತಿರೋಧಿಸಿ ಗೆಲ್ಲಬೇಕು ಎಂದು ಸಾವಿರ ಸಲ ಪಾಠ ಮಾಡುವಾಗ ಮಕ್ಕಳಿಗೆ ಹೇಳಿದ್ದೇನೆ. ಆದರೆ ಈ ಹುಡುಗಿ ವ್ಯವಸ್ಥೆಯ ಎದುರು ಸೋಲು ಒಪ್ಪಿಕೊಂಡು ತನ್ನ ಜೀವನಕ್ಕೆ ಅಂತ್ಯ ಹಾಡಿದ್ದಾಳೆ. ಈ ಘಟನೆಯಿಂದ ಮಕ್ಕಳಿಗೆ ಆದರ್ಶಗಳ ಕುರಿತು ಅತಿಯಾಗಿ ಹೇಳಬಾರದೇನೋ ಅನಿಸಿಬಿಟ್ಟಿದೆ” ಎಂದು ವಿಷಾದಿಸಿದ್ದಾರೆ.

“ಇವತ್ತಲ್ಲ ನಾಳೆ ನೌಕರಿ ಸಿಕ್ಕೇ ಸಿಗುತ್ತಿತ್ತು. ಆ ಅರ್ಹತೆ ಅವಳಿಗೆ ಖಂಡಿತ ಇತ್ತು. ಆದರೆ ಜನರ ಸ್ವಾರ್ಥ, ದುರಾಸೆ, ದ್ವೇಷ, ಭ್ರಷ್ಟ ಮನಸ್ಸನ್ನು ನೋಡಲಾಗದೇ ಉಷಾ ಡೆತ್ ನೋಟ್ ಬರೆದಿಟ್ಟು ಉಸಿರು ಚೆಲ್ಲಿದ್ದಾಳೆ. ಇವಳಿಗೆ ಪಾಠ ಮಾಡಿದ ನಾವೆಲ್ಲ ಶಿಕ್ಷಕರು ಸುದ್ದಿ ಕೇಳಿ ಇಡೀ ದಿನ ಕಂಗಾಲಾದೆವು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...