Homeಕರ್ನಾಟಕಚಳ್ಳಕೆರೆ: ಪೊಲೀಸ್ ವ್ಯವಸ್ಥೆಯಿಂದ ನೊಂದು ನವ ವಿವಾಹಿತೆ ಸಾವಿಗೆ ಶರಣು

ಚಳ್ಳಕೆರೆ: ಪೊಲೀಸ್ ವ್ಯವಸ್ಥೆಯಿಂದ ನೊಂದು ನವ ವಿವಾಹಿತೆ ಸಾವಿಗೆ ಶರಣು

- Advertisement -
- Advertisement -

ಪೊಲೀಸ್‌ ವ್ಯವಸ್ಥೆಯಿಂದ ನೊಂದು ನವವಿವಾಹಿತೆ ಸಾವಿಗೆ ಶರಣಾಗಿರುವ ಘಟನೆ ಚಳ್ಳಕೆರೆ ತಾಲ್ಲೂಕಿನಲ್ಲಿ ನಡೆದಿದೆ. ತನ್ನ ಮೇಲೆ ದಾಖಲಾಗಿದ್ದ ಪ್ರಕರಣ ಹಿಂಪಡೆಯದ ಕಾರಣ ಯುವತಿ ಮನನೊಂದಿದ್ದರು ಎಂದು ವರದಿಯಾಗಿದೆ.

ತಾಲ್ಲೂಕಿನ ಪರಶುರಾಂಪುರ ಠಾಣಾ ವ್ಯಾಪ್ತಿಯ ಕಾಮಸಮುದ್ರ ಗ್ರಾಮದ ಯಶೋದಮ್ಮನ ಹಿರಿಯ ಮಗಳು ಉಷಾ ನೇಣು ಹಾಕಿಕೊಂಡು ಕೊನೆಯುಸಿರೆಳೆದಿದ್ದಾರೆ.

ಜಮೀನಿನ ಅಕ್ಕಪಕ್ಕದಲ್ಲಿನ ಹುಣಸೆ ಮರದ ಜಗಳ ಠಾಣೆ ಮೆಟ್ಟಿಲೇರಿ ರಾಜೀಸಂಧಾನ ವಿಫಲವಾಗಿತ್ತು. ಈ ಪ್ರಕರಣದಲ್ಲಿ ಉಷಾ ಅವರ ಹೆಸರನ್ನು ಉಲ್ಲೇಖಿಸಲಾಗಿತ್ತು. ತನಗೆ ದೊರಲಿದ್ದ ಸರ್ಕಾರಿ ಕೆಲಸ ಈ ಪ್ರಕರಣದ ಕಾರಣಕ್ಕಾಗಿ ಸಿಗುತ್ತಿಲ್ಲ ಎಂದು ಉಷಾ ಬೇಸತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿ.ಎಸ್ಸಿ ಮುಗಿಸಿ ಬಿ.ಇಡಿ ವ್ಯಾಸಂಗ ಮಾಡುತ್ತಿದ್ದ ಉಷಾ, ಕೊಂಡ್ಲಹಳ್ಳಿ ಗ್ರಾಮದ ಸೋದರ ಮಾವ ಗಣೇಶ ಅವರ ಜೊತೆಗೆ ಕಳೆದ ಏಪ್ರಿಲ್‌ 25ರಂದು ವಿವಾಹವಾಗಿದ್ದರು. ವಿವಾಹನ ನಂತರ ವ್ಯಾಸಂಗ ಮೊಟಕುಗೊಳಿಸಿದ್ದರು. ಹತ್ತನೇ ತರಗತಿ ವ್ಯಾಸಂಗದ ಮೇಲೆ ಕೋರ್ಟ್‌ನಲ್ಲಿ ಪ್ರೋಸೆಸ್‌ ಸರ್ವರ್‌ ಹುದ್ದೆಗೆ ಅರ್ಜಿ ಹಾಕಿದ್ದರು. ಅದು ಪೊಲೀಸ್ ಠಾಣೆಯಲ್ಲಿ ವೆರಿಫಿಕೇಷನ್‌ ಆಗಿತ್ತು.

ಜಮೀನಿನ ಬೇಲಿ ಪಕ್ಕದಲ್ಲಿರುವ ಹುಣಸೇಹಣ್ಣು ಮರದಲ್ಲಿ ಹುಣಸೇಹಣ್ಣು ಬಡಿಯುವ ವಿಚಾರಕ್ಕೆ ಫೆ.13ರಂದು ಗಲಾಟೆಯಾಗಿತ್ತು. ಕಾಮಸಂದ್ರ ನಾಗರಾಜ, ಜಯಮ್ಮ ಹಾಗೂ ಅವರ ಮಕ್ಕಳಾದ ಪುನೀತ್ ನಡುವೆ ಗಲಾಟೆಯಾಗಿತ್ತು. ಎರಡು ಕುಟುಂಬಗಳು ಸಹ ಪರಶುರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದವು. ಅದರಲ್ಲಿ ಮೃತ ಉಷಾಳ ಹೆಸರು ಕೂಡ ಇತ್ತು.

“ತನ್ನ ಮಗಳಿಗೆ ಸರಕಾರಿ ಉದ್ಯೋಗ ದೊರೆಯುತ್ತದೆ. ಏನಾದರೂ ಮಾಡಿ ಅವಳ ಹೆಸರನ್ನು ಪೊಲೀಸ್ ಪ್ರಕರಣದಿಂದ ತೆಗೆಸಿ” ಎಂದು ತಾಯಿ ಅಂಗಲಾಚಿದ್ದರು. “ಸರಕಾರಿ ಕೆಲಸವಲ್ಲ, ಅವಳು ಸತ್ತರೂ ನಾವು ರಾಜೀ ಆಗುವುದಿಲ್ಲ” ಎಂದು ಉಡಾಫೆ ಉತ್ತರ ನೀಡಲಾಗಿತ್ತು. ಇದರಿಂದ ಬೇಸತ್ತ ಉಷಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಭಾನುವಾರ ನೇಣು ಬಿಗಿದುಕೊಂಡಿದ್ದಾರೆ.

“ಜಾಬ್‌ಗೋಸ್ಕರವಾಗಿ ಸಾಯುತ್ತಿದ್ದೇನೆ. ನನ್ನ ಸಾವಿಗೆ ನನ್ನ ಕುಟುಂಬ ಕಾರಣವಲ್ಲ. ಸಮಾಜದ ಅವ್ಯವಸ್ಥೆಯೇ ಕಾರಣ” ಎಂದು ಡೆತ್‌ನೋಟ್‌ ಬರೆದಿಟ್ಟಿದ್ದಾರೆ.

“ಪೊಲೀಸರ ವರ್ತನೆಯಿಂದ ನೊಂದು ಉಷಾ ಜೀವ ಕಳೆದುಕೊಂಡಿದ್ದಾಳೆ” ಎಂದು ಉಷಾ ಅವರ ಭಾವ ಹೇಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

“ಅಮಾಯಕ ವಿದ್ಯಾವಂತ ಹೆಣ್ಣುಮಗಳನ್ನು ಪ್ರಕರಣದಲ್ಲಿ ಸೇರಿಸುವ ಮುನ್ನ ಗ್ರಾಮದಲ್ಲಿ ವಿಚಾರಣೆ ಮಾಡಬೇಕಿತ್ತು. ಪೊಲೀಸರ ಬೇಜವಾಬ್ದಾರಿಯಿಂದ ಈ ಘಟನೆ ಜರುಗಿದೆ. ಪೊಲೀಸ್ ಇಲಾಖೆ ಹಾಗೂ ದೂರು ಕೊಟ್ಟವರು ಸಾವಿಗೆ ಕಾರಣ” ಎಂದು ದೂರಿದ್ದಾರೆ.

May be an image of text
ಉಷಾ ಬರೆದಿಟ್ಟಿರುವ ಡೆತ್‌ನೋಟ್‌

ಪಾಠ ಮಾಡಿದ ಶಿಕ್ಷಕರ ಸಂತಾಪ

ನೆಚ್ಚಿನ ಶಿಷ್ಯೆ ಆತ್ಮಹತ್ಯೆಗೆ ಶರಣಾಗಿರುವ ಕುರಿತು ಫೇಸ್‌ಬುಕ್‌ ಫೋಸ್ಟ್‌ ಹಾಕಿರುವ ಶಿಕ್ಷಕ ಲಕ್ಷ್ಮಿಕಾಂತ ಮಿರಜಕರ, “ಮೊನ್ನೆ ಸಂಜೆ ಈ ಘಟನೆ ಕೇಳಿದಾಗಿನಿಂದ ಮನಸ್ಸು ಬಹಳ ಘಾಸಿಗೊಂಡಿತ್ತು. ಉಷಾ ನಮ್ಮ ಶಾಲೆಯ ಹಳೆಯ ವಿದ್ಯಾರ್ಥಿನಿ. ಪ್ರತಿಭಾವಂತೆ, ಗುಣವಂತೆ. ಎಸ್‌ಎಸ್‌ಎಲ್‌ಸಿಯಲ್ಲಿ ಶಾಲೆಗೆ ಎರಡನೇ ಟಾಪರ್. ಕನಸುಗಾರ್ತಿ” ಎಂದು ಸ್ಮರಿಸಿದ್ದಾರೆ.

“ಬಡತನದಲ್ಲಿ ಬೆಳೆದಿದ್ದ, ಮೂರು ತಂಗಿಯರು ಒಬ್ಬ ತಮ್ಮನನ್ನು ಹೊಂದಿದ್ದ ಮನೆಯ ಹಿರಿಮಗಳು ಉಷಾ. ಮನೆ ತೊರೆದು ನಡುದಾರಿಯಲ್ಲಿ ಕೈಬಿಟ್ಟ ಹೋದ ಗಂಡನ ಅನುಪಸ್ಥಿತಿಯಲ್ಲಿ ಉಷಾ ಅವರ ತಾಯಿ ಎಲ್ಲ ಮಕ್ಕಳಿಗೂ ಶಿಕ್ಷಣ ಕೊಡಿಸಿದ್ದರು. ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಹಂಬಲ ಹೊತ್ತಿದ್ದ ಉಷಾಳನ್ನು ನಮ್ಮ ಭ್ರಷ್ಟ ವ್ಯವಸ್ಥೆ ಬಲಿ ಪಡೆದಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ವ್ಯವಸ್ಥೆ ಇರೋದೆ ಹಾಗೆ. ಅದನ್ನು ಪ್ರತಿರೋಧಿಸಿ ಗೆಲ್ಲಬೇಕು ಎಂದು ಸಾವಿರ ಸಲ ಪಾಠ ಮಾಡುವಾಗ ಮಕ್ಕಳಿಗೆ ಹೇಳಿದ್ದೇನೆ. ಆದರೆ ಈ ಹುಡುಗಿ ವ್ಯವಸ್ಥೆಯ ಎದುರು ಸೋಲು ಒಪ್ಪಿಕೊಂಡು ತನ್ನ ಜೀವನಕ್ಕೆ ಅಂತ್ಯ ಹಾಡಿದ್ದಾಳೆ. ಈ ಘಟನೆಯಿಂದ ಮಕ್ಕಳಿಗೆ ಆದರ್ಶಗಳ ಕುರಿತು ಅತಿಯಾಗಿ ಹೇಳಬಾರದೇನೋ ಅನಿಸಿಬಿಟ್ಟಿದೆ” ಎಂದು ವಿಷಾದಿಸಿದ್ದಾರೆ.

“ಇವತ್ತಲ್ಲ ನಾಳೆ ನೌಕರಿ ಸಿಕ್ಕೇ ಸಿಗುತ್ತಿತ್ತು. ಆ ಅರ್ಹತೆ ಅವಳಿಗೆ ಖಂಡಿತ ಇತ್ತು. ಆದರೆ ಜನರ ಸ್ವಾರ್ಥ, ದುರಾಸೆ, ದ್ವೇಷ, ಭ್ರಷ್ಟ ಮನಸ್ಸನ್ನು ನೋಡಲಾಗದೇ ಉಷಾ ಡೆತ್ ನೋಟ್ ಬರೆದಿಟ್ಟು ಉಸಿರು ಚೆಲ್ಲಿದ್ದಾಳೆ. ಇವಳಿಗೆ ಪಾಠ ಮಾಡಿದ ನಾವೆಲ್ಲ ಶಿಕ್ಷಕರು ಸುದ್ದಿ ಕೇಳಿ ಇಡೀ ದಿನ ಕಂಗಾಲಾದೆವು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...