Homeಕರ್ನಾಟಕಚಳ್ಳಕೆರೆ: ಪೊಲೀಸ್ ವ್ಯವಸ್ಥೆಯಿಂದ ನೊಂದು ನವ ವಿವಾಹಿತೆ ಸಾವಿಗೆ ಶರಣು

ಚಳ್ಳಕೆರೆ: ಪೊಲೀಸ್ ವ್ಯವಸ್ಥೆಯಿಂದ ನೊಂದು ನವ ವಿವಾಹಿತೆ ಸಾವಿಗೆ ಶರಣು

- Advertisement -
- Advertisement -

ಪೊಲೀಸ್‌ ವ್ಯವಸ್ಥೆಯಿಂದ ನೊಂದು ನವವಿವಾಹಿತೆ ಸಾವಿಗೆ ಶರಣಾಗಿರುವ ಘಟನೆ ಚಳ್ಳಕೆರೆ ತಾಲ್ಲೂಕಿನಲ್ಲಿ ನಡೆದಿದೆ. ತನ್ನ ಮೇಲೆ ದಾಖಲಾಗಿದ್ದ ಪ್ರಕರಣ ಹಿಂಪಡೆಯದ ಕಾರಣ ಯುವತಿ ಮನನೊಂದಿದ್ದರು ಎಂದು ವರದಿಯಾಗಿದೆ.

ತಾಲ್ಲೂಕಿನ ಪರಶುರಾಂಪುರ ಠಾಣಾ ವ್ಯಾಪ್ತಿಯ ಕಾಮಸಮುದ್ರ ಗ್ರಾಮದ ಯಶೋದಮ್ಮನ ಹಿರಿಯ ಮಗಳು ಉಷಾ ನೇಣು ಹಾಕಿಕೊಂಡು ಕೊನೆಯುಸಿರೆಳೆದಿದ್ದಾರೆ.

ಜಮೀನಿನ ಅಕ್ಕಪಕ್ಕದಲ್ಲಿನ ಹುಣಸೆ ಮರದ ಜಗಳ ಠಾಣೆ ಮೆಟ್ಟಿಲೇರಿ ರಾಜೀಸಂಧಾನ ವಿಫಲವಾಗಿತ್ತು. ಈ ಪ್ರಕರಣದಲ್ಲಿ ಉಷಾ ಅವರ ಹೆಸರನ್ನು ಉಲ್ಲೇಖಿಸಲಾಗಿತ್ತು. ತನಗೆ ದೊರಲಿದ್ದ ಸರ್ಕಾರಿ ಕೆಲಸ ಈ ಪ್ರಕರಣದ ಕಾರಣಕ್ಕಾಗಿ ಸಿಗುತ್ತಿಲ್ಲ ಎಂದು ಉಷಾ ಬೇಸತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿ.ಎಸ್ಸಿ ಮುಗಿಸಿ ಬಿ.ಇಡಿ ವ್ಯಾಸಂಗ ಮಾಡುತ್ತಿದ್ದ ಉಷಾ, ಕೊಂಡ್ಲಹಳ್ಳಿ ಗ್ರಾಮದ ಸೋದರ ಮಾವ ಗಣೇಶ ಅವರ ಜೊತೆಗೆ ಕಳೆದ ಏಪ್ರಿಲ್‌ 25ರಂದು ವಿವಾಹವಾಗಿದ್ದರು. ವಿವಾಹನ ನಂತರ ವ್ಯಾಸಂಗ ಮೊಟಕುಗೊಳಿಸಿದ್ದರು. ಹತ್ತನೇ ತರಗತಿ ವ್ಯಾಸಂಗದ ಮೇಲೆ ಕೋರ್ಟ್‌ನಲ್ಲಿ ಪ್ರೋಸೆಸ್‌ ಸರ್ವರ್‌ ಹುದ್ದೆಗೆ ಅರ್ಜಿ ಹಾಕಿದ್ದರು. ಅದು ಪೊಲೀಸ್ ಠಾಣೆಯಲ್ಲಿ ವೆರಿಫಿಕೇಷನ್‌ ಆಗಿತ್ತು.

ಜಮೀನಿನ ಬೇಲಿ ಪಕ್ಕದಲ್ಲಿರುವ ಹುಣಸೇಹಣ್ಣು ಮರದಲ್ಲಿ ಹುಣಸೇಹಣ್ಣು ಬಡಿಯುವ ವಿಚಾರಕ್ಕೆ ಫೆ.13ರಂದು ಗಲಾಟೆಯಾಗಿತ್ತು. ಕಾಮಸಂದ್ರ ನಾಗರಾಜ, ಜಯಮ್ಮ ಹಾಗೂ ಅವರ ಮಕ್ಕಳಾದ ಪುನೀತ್ ನಡುವೆ ಗಲಾಟೆಯಾಗಿತ್ತು. ಎರಡು ಕುಟುಂಬಗಳು ಸಹ ಪರಶುರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದವು. ಅದರಲ್ಲಿ ಮೃತ ಉಷಾಳ ಹೆಸರು ಕೂಡ ಇತ್ತು.

“ತನ್ನ ಮಗಳಿಗೆ ಸರಕಾರಿ ಉದ್ಯೋಗ ದೊರೆಯುತ್ತದೆ. ಏನಾದರೂ ಮಾಡಿ ಅವಳ ಹೆಸರನ್ನು ಪೊಲೀಸ್ ಪ್ರಕರಣದಿಂದ ತೆಗೆಸಿ” ಎಂದು ತಾಯಿ ಅಂಗಲಾಚಿದ್ದರು. “ಸರಕಾರಿ ಕೆಲಸವಲ್ಲ, ಅವಳು ಸತ್ತರೂ ನಾವು ರಾಜೀ ಆಗುವುದಿಲ್ಲ” ಎಂದು ಉಡಾಫೆ ಉತ್ತರ ನೀಡಲಾಗಿತ್ತು. ಇದರಿಂದ ಬೇಸತ್ತ ಉಷಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಭಾನುವಾರ ನೇಣು ಬಿಗಿದುಕೊಂಡಿದ್ದಾರೆ.

“ಜಾಬ್‌ಗೋಸ್ಕರವಾಗಿ ಸಾಯುತ್ತಿದ್ದೇನೆ. ನನ್ನ ಸಾವಿಗೆ ನನ್ನ ಕುಟುಂಬ ಕಾರಣವಲ್ಲ. ಸಮಾಜದ ಅವ್ಯವಸ್ಥೆಯೇ ಕಾರಣ” ಎಂದು ಡೆತ್‌ನೋಟ್‌ ಬರೆದಿಟ್ಟಿದ್ದಾರೆ.

“ಪೊಲೀಸರ ವರ್ತನೆಯಿಂದ ನೊಂದು ಉಷಾ ಜೀವ ಕಳೆದುಕೊಂಡಿದ್ದಾಳೆ” ಎಂದು ಉಷಾ ಅವರ ಭಾವ ಹೇಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

“ಅಮಾಯಕ ವಿದ್ಯಾವಂತ ಹೆಣ್ಣುಮಗಳನ್ನು ಪ್ರಕರಣದಲ್ಲಿ ಸೇರಿಸುವ ಮುನ್ನ ಗ್ರಾಮದಲ್ಲಿ ವಿಚಾರಣೆ ಮಾಡಬೇಕಿತ್ತು. ಪೊಲೀಸರ ಬೇಜವಾಬ್ದಾರಿಯಿಂದ ಈ ಘಟನೆ ಜರುಗಿದೆ. ಪೊಲೀಸ್ ಇಲಾಖೆ ಹಾಗೂ ದೂರು ಕೊಟ್ಟವರು ಸಾವಿಗೆ ಕಾರಣ” ಎಂದು ದೂರಿದ್ದಾರೆ.

May be an image of text
ಉಷಾ ಬರೆದಿಟ್ಟಿರುವ ಡೆತ್‌ನೋಟ್‌

ಪಾಠ ಮಾಡಿದ ಶಿಕ್ಷಕರ ಸಂತಾಪ

ನೆಚ್ಚಿನ ಶಿಷ್ಯೆ ಆತ್ಮಹತ್ಯೆಗೆ ಶರಣಾಗಿರುವ ಕುರಿತು ಫೇಸ್‌ಬುಕ್‌ ಫೋಸ್ಟ್‌ ಹಾಕಿರುವ ಶಿಕ್ಷಕ ಲಕ್ಷ್ಮಿಕಾಂತ ಮಿರಜಕರ, “ಮೊನ್ನೆ ಸಂಜೆ ಈ ಘಟನೆ ಕೇಳಿದಾಗಿನಿಂದ ಮನಸ್ಸು ಬಹಳ ಘಾಸಿಗೊಂಡಿತ್ತು. ಉಷಾ ನಮ್ಮ ಶಾಲೆಯ ಹಳೆಯ ವಿದ್ಯಾರ್ಥಿನಿ. ಪ್ರತಿಭಾವಂತೆ, ಗುಣವಂತೆ. ಎಸ್‌ಎಸ್‌ಎಲ್‌ಸಿಯಲ್ಲಿ ಶಾಲೆಗೆ ಎರಡನೇ ಟಾಪರ್. ಕನಸುಗಾರ್ತಿ” ಎಂದು ಸ್ಮರಿಸಿದ್ದಾರೆ.

“ಬಡತನದಲ್ಲಿ ಬೆಳೆದಿದ್ದ, ಮೂರು ತಂಗಿಯರು ಒಬ್ಬ ತಮ್ಮನನ್ನು ಹೊಂದಿದ್ದ ಮನೆಯ ಹಿರಿಮಗಳು ಉಷಾ. ಮನೆ ತೊರೆದು ನಡುದಾರಿಯಲ್ಲಿ ಕೈಬಿಟ್ಟ ಹೋದ ಗಂಡನ ಅನುಪಸ್ಥಿತಿಯಲ್ಲಿ ಉಷಾ ಅವರ ತಾಯಿ ಎಲ್ಲ ಮಕ್ಕಳಿಗೂ ಶಿಕ್ಷಣ ಕೊಡಿಸಿದ್ದರು. ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಹಂಬಲ ಹೊತ್ತಿದ್ದ ಉಷಾಳನ್ನು ನಮ್ಮ ಭ್ರಷ್ಟ ವ್ಯವಸ್ಥೆ ಬಲಿ ಪಡೆದಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ವ್ಯವಸ್ಥೆ ಇರೋದೆ ಹಾಗೆ. ಅದನ್ನು ಪ್ರತಿರೋಧಿಸಿ ಗೆಲ್ಲಬೇಕು ಎಂದು ಸಾವಿರ ಸಲ ಪಾಠ ಮಾಡುವಾಗ ಮಕ್ಕಳಿಗೆ ಹೇಳಿದ್ದೇನೆ. ಆದರೆ ಈ ಹುಡುಗಿ ವ್ಯವಸ್ಥೆಯ ಎದುರು ಸೋಲು ಒಪ್ಪಿಕೊಂಡು ತನ್ನ ಜೀವನಕ್ಕೆ ಅಂತ್ಯ ಹಾಡಿದ್ದಾಳೆ. ಈ ಘಟನೆಯಿಂದ ಮಕ್ಕಳಿಗೆ ಆದರ್ಶಗಳ ಕುರಿತು ಅತಿಯಾಗಿ ಹೇಳಬಾರದೇನೋ ಅನಿಸಿಬಿಟ್ಟಿದೆ” ಎಂದು ವಿಷಾದಿಸಿದ್ದಾರೆ.

“ಇವತ್ತಲ್ಲ ನಾಳೆ ನೌಕರಿ ಸಿಕ್ಕೇ ಸಿಗುತ್ತಿತ್ತು. ಆ ಅರ್ಹತೆ ಅವಳಿಗೆ ಖಂಡಿತ ಇತ್ತು. ಆದರೆ ಜನರ ಸ್ವಾರ್ಥ, ದುರಾಸೆ, ದ್ವೇಷ, ಭ್ರಷ್ಟ ಮನಸ್ಸನ್ನು ನೋಡಲಾಗದೇ ಉಷಾ ಡೆತ್ ನೋಟ್ ಬರೆದಿಟ್ಟು ಉಸಿರು ಚೆಲ್ಲಿದ್ದಾಳೆ. ಇವಳಿಗೆ ಪಾಠ ಮಾಡಿದ ನಾವೆಲ್ಲ ಶಿಕ್ಷಕರು ಸುದ್ದಿ ಕೇಳಿ ಇಡೀ ದಿನ ಕಂಗಾಲಾದೆವು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...