Homeಕರ್ನಾಟಕಚಳ್ಳಕೆರೆ: ಪೊಲೀಸ್ ವ್ಯವಸ್ಥೆಯಿಂದ ನೊಂದು ನವ ವಿವಾಹಿತೆ ಸಾವಿಗೆ ಶರಣು

ಚಳ್ಳಕೆರೆ: ಪೊಲೀಸ್ ವ್ಯವಸ್ಥೆಯಿಂದ ನೊಂದು ನವ ವಿವಾಹಿತೆ ಸಾವಿಗೆ ಶರಣು

- Advertisement -
- Advertisement -

ಪೊಲೀಸ್‌ ವ್ಯವಸ್ಥೆಯಿಂದ ನೊಂದು ನವವಿವಾಹಿತೆ ಸಾವಿಗೆ ಶರಣಾಗಿರುವ ಘಟನೆ ಚಳ್ಳಕೆರೆ ತಾಲ್ಲೂಕಿನಲ್ಲಿ ನಡೆದಿದೆ. ತನ್ನ ಮೇಲೆ ದಾಖಲಾಗಿದ್ದ ಪ್ರಕರಣ ಹಿಂಪಡೆಯದ ಕಾರಣ ಯುವತಿ ಮನನೊಂದಿದ್ದರು ಎಂದು ವರದಿಯಾಗಿದೆ.

ತಾಲ್ಲೂಕಿನ ಪರಶುರಾಂಪುರ ಠಾಣಾ ವ್ಯಾಪ್ತಿಯ ಕಾಮಸಮುದ್ರ ಗ್ರಾಮದ ಯಶೋದಮ್ಮನ ಹಿರಿಯ ಮಗಳು ಉಷಾ ನೇಣು ಹಾಕಿಕೊಂಡು ಕೊನೆಯುಸಿರೆಳೆದಿದ್ದಾರೆ.

ಜಮೀನಿನ ಅಕ್ಕಪಕ್ಕದಲ್ಲಿನ ಹುಣಸೆ ಮರದ ಜಗಳ ಠಾಣೆ ಮೆಟ್ಟಿಲೇರಿ ರಾಜೀಸಂಧಾನ ವಿಫಲವಾಗಿತ್ತು. ಈ ಪ್ರಕರಣದಲ್ಲಿ ಉಷಾ ಅವರ ಹೆಸರನ್ನು ಉಲ್ಲೇಖಿಸಲಾಗಿತ್ತು. ತನಗೆ ದೊರಲಿದ್ದ ಸರ್ಕಾರಿ ಕೆಲಸ ಈ ಪ್ರಕರಣದ ಕಾರಣಕ್ಕಾಗಿ ಸಿಗುತ್ತಿಲ್ಲ ಎಂದು ಉಷಾ ಬೇಸತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿ.ಎಸ್ಸಿ ಮುಗಿಸಿ ಬಿ.ಇಡಿ ವ್ಯಾಸಂಗ ಮಾಡುತ್ತಿದ್ದ ಉಷಾ, ಕೊಂಡ್ಲಹಳ್ಳಿ ಗ್ರಾಮದ ಸೋದರ ಮಾವ ಗಣೇಶ ಅವರ ಜೊತೆಗೆ ಕಳೆದ ಏಪ್ರಿಲ್‌ 25ರಂದು ವಿವಾಹವಾಗಿದ್ದರು. ವಿವಾಹನ ನಂತರ ವ್ಯಾಸಂಗ ಮೊಟಕುಗೊಳಿಸಿದ್ದರು. ಹತ್ತನೇ ತರಗತಿ ವ್ಯಾಸಂಗದ ಮೇಲೆ ಕೋರ್ಟ್‌ನಲ್ಲಿ ಪ್ರೋಸೆಸ್‌ ಸರ್ವರ್‌ ಹುದ್ದೆಗೆ ಅರ್ಜಿ ಹಾಕಿದ್ದರು. ಅದು ಪೊಲೀಸ್ ಠಾಣೆಯಲ್ಲಿ ವೆರಿಫಿಕೇಷನ್‌ ಆಗಿತ್ತು.

ಜಮೀನಿನ ಬೇಲಿ ಪಕ್ಕದಲ್ಲಿರುವ ಹುಣಸೇಹಣ್ಣು ಮರದಲ್ಲಿ ಹುಣಸೇಹಣ್ಣು ಬಡಿಯುವ ವಿಚಾರಕ್ಕೆ ಫೆ.13ರಂದು ಗಲಾಟೆಯಾಗಿತ್ತು. ಕಾಮಸಂದ್ರ ನಾಗರಾಜ, ಜಯಮ್ಮ ಹಾಗೂ ಅವರ ಮಕ್ಕಳಾದ ಪುನೀತ್ ನಡುವೆ ಗಲಾಟೆಯಾಗಿತ್ತು. ಎರಡು ಕುಟುಂಬಗಳು ಸಹ ಪರಶುರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದವು. ಅದರಲ್ಲಿ ಮೃತ ಉಷಾಳ ಹೆಸರು ಕೂಡ ಇತ್ತು.

“ತನ್ನ ಮಗಳಿಗೆ ಸರಕಾರಿ ಉದ್ಯೋಗ ದೊರೆಯುತ್ತದೆ. ಏನಾದರೂ ಮಾಡಿ ಅವಳ ಹೆಸರನ್ನು ಪೊಲೀಸ್ ಪ್ರಕರಣದಿಂದ ತೆಗೆಸಿ” ಎಂದು ತಾಯಿ ಅಂಗಲಾಚಿದ್ದರು. “ಸರಕಾರಿ ಕೆಲಸವಲ್ಲ, ಅವಳು ಸತ್ತರೂ ನಾವು ರಾಜೀ ಆಗುವುದಿಲ್ಲ” ಎಂದು ಉಡಾಫೆ ಉತ್ತರ ನೀಡಲಾಗಿತ್ತು. ಇದರಿಂದ ಬೇಸತ್ತ ಉಷಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಭಾನುವಾರ ನೇಣು ಬಿಗಿದುಕೊಂಡಿದ್ದಾರೆ.

“ಜಾಬ್‌ಗೋಸ್ಕರವಾಗಿ ಸಾಯುತ್ತಿದ್ದೇನೆ. ನನ್ನ ಸಾವಿಗೆ ನನ್ನ ಕುಟುಂಬ ಕಾರಣವಲ್ಲ. ಸಮಾಜದ ಅವ್ಯವಸ್ಥೆಯೇ ಕಾರಣ” ಎಂದು ಡೆತ್‌ನೋಟ್‌ ಬರೆದಿಟ್ಟಿದ್ದಾರೆ.

“ಪೊಲೀಸರ ವರ್ತನೆಯಿಂದ ನೊಂದು ಉಷಾ ಜೀವ ಕಳೆದುಕೊಂಡಿದ್ದಾಳೆ” ಎಂದು ಉಷಾ ಅವರ ಭಾವ ಹೇಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

“ಅಮಾಯಕ ವಿದ್ಯಾವಂತ ಹೆಣ್ಣುಮಗಳನ್ನು ಪ್ರಕರಣದಲ್ಲಿ ಸೇರಿಸುವ ಮುನ್ನ ಗ್ರಾಮದಲ್ಲಿ ವಿಚಾರಣೆ ಮಾಡಬೇಕಿತ್ತು. ಪೊಲೀಸರ ಬೇಜವಾಬ್ದಾರಿಯಿಂದ ಈ ಘಟನೆ ಜರುಗಿದೆ. ಪೊಲೀಸ್ ಇಲಾಖೆ ಹಾಗೂ ದೂರು ಕೊಟ್ಟವರು ಸಾವಿಗೆ ಕಾರಣ” ಎಂದು ದೂರಿದ್ದಾರೆ.

May be an image of text
ಉಷಾ ಬರೆದಿಟ್ಟಿರುವ ಡೆತ್‌ನೋಟ್‌

ಪಾಠ ಮಾಡಿದ ಶಿಕ್ಷಕರ ಸಂತಾಪ

ನೆಚ್ಚಿನ ಶಿಷ್ಯೆ ಆತ್ಮಹತ್ಯೆಗೆ ಶರಣಾಗಿರುವ ಕುರಿತು ಫೇಸ್‌ಬುಕ್‌ ಫೋಸ್ಟ್‌ ಹಾಕಿರುವ ಶಿಕ್ಷಕ ಲಕ್ಷ್ಮಿಕಾಂತ ಮಿರಜಕರ, “ಮೊನ್ನೆ ಸಂಜೆ ಈ ಘಟನೆ ಕೇಳಿದಾಗಿನಿಂದ ಮನಸ್ಸು ಬಹಳ ಘಾಸಿಗೊಂಡಿತ್ತು. ಉಷಾ ನಮ್ಮ ಶಾಲೆಯ ಹಳೆಯ ವಿದ್ಯಾರ್ಥಿನಿ. ಪ್ರತಿಭಾವಂತೆ, ಗುಣವಂತೆ. ಎಸ್‌ಎಸ್‌ಎಲ್‌ಸಿಯಲ್ಲಿ ಶಾಲೆಗೆ ಎರಡನೇ ಟಾಪರ್. ಕನಸುಗಾರ್ತಿ” ಎಂದು ಸ್ಮರಿಸಿದ್ದಾರೆ.

“ಬಡತನದಲ್ಲಿ ಬೆಳೆದಿದ್ದ, ಮೂರು ತಂಗಿಯರು ಒಬ್ಬ ತಮ್ಮನನ್ನು ಹೊಂದಿದ್ದ ಮನೆಯ ಹಿರಿಮಗಳು ಉಷಾ. ಮನೆ ತೊರೆದು ನಡುದಾರಿಯಲ್ಲಿ ಕೈಬಿಟ್ಟ ಹೋದ ಗಂಡನ ಅನುಪಸ್ಥಿತಿಯಲ್ಲಿ ಉಷಾ ಅವರ ತಾಯಿ ಎಲ್ಲ ಮಕ್ಕಳಿಗೂ ಶಿಕ್ಷಣ ಕೊಡಿಸಿದ್ದರು. ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಹಂಬಲ ಹೊತ್ತಿದ್ದ ಉಷಾಳನ್ನು ನಮ್ಮ ಭ್ರಷ್ಟ ವ್ಯವಸ್ಥೆ ಬಲಿ ಪಡೆದಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ವ್ಯವಸ್ಥೆ ಇರೋದೆ ಹಾಗೆ. ಅದನ್ನು ಪ್ರತಿರೋಧಿಸಿ ಗೆಲ್ಲಬೇಕು ಎಂದು ಸಾವಿರ ಸಲ ಪಾಠ ಮಾಡುವಾಗ ಮಕ್ಕಳಿಗೆ ಹೇಳಿದ್ದೇನೆ. ಆದರೆ ಈ ಹುಡುಗಿ ವ್ಯವಸ್ಥೆಯ ಎದುರು ಸೋಲು ಒಪ್ಪಿಕೊಂಡು ತನ್ನ ಜೀವನಕ್ಕೆ ಅಂತ್ಯ ಹಾಡಿದ್ದಾಳೆ. ಈ ಘಟನೆಯಿಂದ ಮಕ್ಕಳಿಗೆ ಆದರ್ಶಗಳ ಕುರಿತು ಅತಿಯಾಗಿ ಹೇಳಬಾರದೇನೋ ಅನಿಸಿಬಿಟ್ಟಿದೆ” ಎಂದು ವಿಷಾದಿಸಿದ್ದಾರೆ.

“ಇವತ್ತಲ್ಲ ನಾಳೆ ನೌಕರಿ ಸಿಕ್ಕೇ ಸಿಗುತ್ತಿತ್ತು. ಆ ಅರ್ಹತೆ ಅವಳಿಗೆ ಖಂಡಿತ ಇತ್ತು. ಆದರೆ ಜನರ ಸ್ವಾರ್ಥ, ದುರಾಸೆ, ದ್ವೇಷ, ಭ್ರಷ್ಟ ಮನಸ್ಸನ್ನು ನೋಡಲಾಗದೇ ಉಷಾ ಡೆತ್ ನೋಟ್ ಬರೆದಿಟ್ಟು ಉಸಿರು ಚೆಲ್ಲಿದ್ದಾಳೆ. ಇವಳಿಗೆ ಪಾಠ ಮಾಡಿದ ನಾವೆಲ್ಲ ಶಿಕ್ಷಕರು ಸುದ್ದಿ ಕೇಳಿ ಇಡೀ ದಿನ ಕಂಗಾಲಾದೆವು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...